ಮಡಿಕೇರಿ NEWS DESK ಫೆ.2 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಮಿಕ ಮಾಹಿತಿ ಶಿಬಿರ ಫೆ.4ರಂದು ಮಧ್ಯಾಹ್ನ 3 ಗಂಟೆಗೆ ಕುಶಾಲನಗರದಲ್ಲಿ ನಡೆಯಲಿದೆ. ಇಂದಿರಾ ಬಡಾವಣೆಯ ಮಲಯಾಳಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಜಿಲ್ಲಾಧ್ಯಕ್ಷ ಅಣ್ಣ ಶರೀಫ್ ವಹಿಸಲಿದ್ದಾರೆ. ಮುಖ್ಯ ಮಾಹಿತಿದಾರರಾಗಿ ಸೋಮವಾರಪೇಟೆ ಉಪ ವಿಭಾಗದ ಕಾರ್ಮಿಕ ಉಪನಿರೀಕ್ಷಕ ಶಶಿಧರ್ ಎಸ್., ಟ್ರೇಡ್ ಯೂನಿಯನ್ ನ ರಾಜ್ಯ ಸಮಿತಿ ಸಂಚಾಲಕ ಖಾದರ್ ಪರಂಗಿಪೇಟೆ, ರಾಜ್ಯ ಸದಸ್ಯ ಅಬೂಬಕ್ಕರ್ ಮದ್ದ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಲೀಂ ಜಿ.ಕೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ, ಮಾಜಿ ಸೈನಿಕ ಮೊಹಮ್ಮದ್ ನೆಬಿ ಪಿ.ಎ, ಎಸ್ಡಿಪಿಐ ಕುಶಾಲನಗರ ವಲಯಾಧ್ಯಕ್ಷ ಜಕ್ರಿಯ ಸಾಮಾಜಿಕ ಕಾರ್ಯಕರ್ತರಾದ ಆಯಿಷ, ಭೀಮ ಘರ್ಜನೆ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ಎಲ್.ಎಂ.ನಾಗರಾಜು, ಕಾರ್ಮಿಕರ ಮತ್ತು…
ಲೇಖಕ: admin
ಮಡಿಕೇರಿ NEWS DESK ಜ.31 : ನಾಪೋಕ್ಲುವಿನಲ್ಲಿ ಗೊಂದಲ ಸೃಷ್ಟಿಸಿರುವ ಶಾದಿಮಹಲ್ ಸೇರಿದಂತೆ ಜಿಲ್ಲೆಯ ವಿವಿಧ ವಿಚಾರಗಳ ಕುರಿತು ಜಿಲ್ಲಾ ಕಾಂಗ್ರೆಸ್ ವಕ್ತಾರರೊಬ್ಬರು ವಿನಾಕಾರಣ ಮಾಜಿ ಶಾಸಕರುಗಳನ್ನು ಗುರಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆಯಲ್ಲಿ ತೊಡಗಿದ್ದಾರೆ. ಇದನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲವೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಒಲೈಸಿಕೊಳ್ಳುವ ಏಕೈಕ ಉದ್ದೇಶದಿಂದ ಮಾಜಿ ಶಾಸಕರುಗಳ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ವ್ಯಕ್ತಿ ಕೀಳು ಮಟ್ಟದ ಭಾಷೆಗಳನ್ನು ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿಮಹಲ್ ನಿರ್ಮಾಣಗೊಳ್ಳುತ್ತಿರುವ ಬಗ್ಗೆ ಬಿಜೆಪಿ ನಿಯಮಾನುಸಾರ ಆಕ್ಷೇಪ ವ್ಯಕ್ತಪಡಿಸಿತ್ತು. ಜಿಲ್ಲಾಧಿಕಾರಿಗಳು ಕೂಡ ಕಾನೂನಿನಂತೆ ಕಾಮಗಾರಿ ಸ್ಥಗಿತಕ್ಕೆ ಆದೇಶ ನೀಡಿದ್ದಾರೆ. ಸರ್ವೆಯ ಮೂಲಕ ಸತ್ಯಾಂಶ ಹೊರ ಬೀಳುವವರೆಗೆ ಕಾಯುವಷ್ಟು ತಾಳ್ಮೆ ಇಲ್ಲದ ಕಾಂಗ್ರೆಸ್ ವಕ್ತಾರರು ಈ ವಿಚಾರದಲ್ಲಿ ಮಾಜಿ…
ಮಡಿಕೇರಿ ಜ.31 NEWS DESK : ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಜಾಲ ಎಲ್ಲಡೆ ಕೇಳಿ ಬರುತ್ತಿದ್ದು, ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಾದಕ ವಸ್ತು ದ್ರವ್ಯ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗಿ, ಇಡೀ ಜೀವನವನ್ನೇ ಹಾಳುಮಾಡಿ ಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಅರಿವು ಮೂಡಿಸಬೇಕು. ಈ ಬಗ್ಗೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಯುವ ಸಬಲೀಕರಣ, ಕಾರ್ಮಿಕ, ಹೀಗೆ ವಿವಿಧ…
ಸುಂಟಿಕೊಪ್ಪ ಜ.31 NEWS DESK : ಸುಂಟಿಕೊಪ್ಪದ ಮಿಡ್ಸಿಟಿ ವತಿಯಿಂದ 3ನೇ ವರ್ಷದ ರಾಷ್ಟ್ರ ಮಟ್ಟದ 5 ಮಂದಿ ಆಟಗಾರರ ಫುಟ್ಬಾಲ್ ಪಂದ್ಯಾವಳಿಗೆ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎ.ಲೋಕೇಶ್ಕುಮಾರ್ ಅವರು ಚಾಲನೆ ನೀಡಿದರು. ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿತಗೊಂಡಿರುವ 3 ದಿನಗಳ ಕಾಲದ ಹೊನಲು ಬೆಳಕಿನ ರಾಷ್ಟ್ರಮಟ್ಟದ ಫುಟ್ಬಾಲ್ ಒದೆಯುವ ಮೂಲಕ ಚಾಲನೆ ನೀಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್ಕುಮಾರ್, ಕಡಗಾದಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯಣ್ಣ, ಬ್ಲೂಬಾಯ್ಸ್ ಯುವಕ ಸಂಘದ ವ್ಯವಸ್ಥಾಪಕ ಟಿ.ಯು.ಪ್ರಸನ್ನ ಮಿಡ್ಸಿಟಿ ಸಂಘದ ಹಮೀದ್ ಸೇರಿದಂತೆ ಹಾಜರಿದ್ದರು. ಈ ಪಂದ್ಯಾವಳಿಯಲ್ಲಿ 32 ತಂಡಗಳು ನೋಂದಾವಣಿಗೊಂಡಿದೆ. ಉದ್ಘಾಟನಾ ಪಂದ್ಯಾವಳಿಯು ಗೋವಾ ಮತ್ತು ಮಿಡ್ಸಿಟಿ ಜೂನಿಯರ್ ತಂಡಗಳ ನಡುವೆ ನಡೆಯಿತು.
ಸುಂಟಿಕೊಪ್ಪ ಜ.31 NEWS DESK : ಕೊಡಗು ಜಿಲ್ಲಾ ಮರ ಕೆಲಸ ಹಾಗೂ ತಲೆ ಹೊರೆ ಸಂಘದ 2026-27ನೇ ಸಾಲಿನ ಅಧ್ಯಕ್ಷರಾಗಿ ಆರ್.ಕೆ.ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ.ಕುಟ್ಟಪ್ಪ ಅವರುಗಳನ್ನು ಪುನರಾಯ್ಕೆ ಮಾಡಲಾಯಿತು. ಸಂಘದ ಕಚೇರಿ ಆವರಣದಲ್ಲಿ ನಡೆಸಲಾದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ರಮೇಶ್, ಸಹಕಾರ್ಯದರ್ಶಿಯಾಗಿ ಕೆ.ವಿಜಯ್, ಖಜಾಂಚಿಯಾಗಿ ಅಜೀತ್ಕುಮಾರ್, ಗೌರವ ಅಧ್ಯಕ್ಷರಾಗಿ ಟಿ.ಪಿ.ಮುತ್ತಯ್ಯ, ಸಮಿತಿ ಸದಸ್ಯರುಗಳಾಗಿ ಸತೀಶ, ಕುಂಞಕುಟ್ಟಿ, ರಾಧಕೃಷ್ಣ, ಬಾಪ್ಪುಟಿ, ಮುಸ್ತಾಫ, ಹಾಗೂ ಅಮನ್ ಅವರುಗಳನ್ನು ಆಯ್ಕೆಗೊಳಿಸಲಾಯಿತು.
ವಿರಾಜಪೇಟೆ ಜ.31 NEWS DESK : ಪಯ್ಯವೂರು ಕಿರಾಥಮೂರ್ತಿಯ ಪ್ರತಿನಿಧಿ ಎಂದು ಪರಿಗಣಿಸಲಾದ ಕೊಮರಥಚ್ಚನ್, ಕೊಡಗು ಮತ್ತು ಕೇರಳೀಯರು ಜಂಟಿಯಾಗಿ ಆಯೋಜಿಸುವ ಪಯ್ಯಾವೂರು ಶಿವ ಕ್ಷೇತ್ರದ ಊಟು ಉತ್ಸವಕ್ಕಾಗಿ ಕೊಡಗಿನ ಪ್ರಮುಖ ಪೂರ್ವಜರ ಮನೆಗಳಿಗೆ ಕೇರಳದ ಪಯ್ಯಾವೂರು ದೇವಾಲಯದಿಂದ ಕಾಲ್ನಡಿಗೆಯಲ್ಲಿ ಹೊರಟು ಕೊಡಗಿಗೆ ತಲುಪಿದ್ದಾರೆ. ಪಯ್ಯವೂರಪ್ಪನ ಊಟು ಉತ್ಸವದ ಉದ್ಘಾಟನಾ ಸಮಾರಂಭ “ಊಟುರೈಚ್ ಪೋಕಲ್” ಮಕರ ಮಾಸದ 15 ರಂದು ಪ್ರಾರಂಭವಾಯಿತು. ಕೋಮರಥಚ್ಚನ್ ಮಕರಂ 15 ರಂದು ಅವರು “ಕಚಿಲ” ಎಂಬ ವಿಶೇಷ ಆಚರಣೆಗಳನ್ನು ಮಾಡಿದ ನಂತರ, “ಕಡುತಿಲ” ಎಂಬ ವಿಶೇಷ ಪವಿತ್ರ ಆಯುಧವನ್ನು ಸ್ವೀಕರಿಸಿ, ದೇವಾಲಯದಲ್ಲಿ ಬೆಳಗ್ಗಿನ ಜಾವ ಪೂಜೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದ ಬಳಿಕ ವಿಶೇಷ ಛತ್ರಿಯನ್ನು ತೆಗೆದುಕೊಂಡು ಪೂರ್ವಕ್ಕೆ ಇರುವ ಕೊಡಗಿನ ಅರಣ್ಯದ ಕಡೆಗೆ ಹೆಜ್ಜೆ ಹಾಕಿದರು. ಕೋಮರಥಚ್ಚನ್ ಕೇರಳದ ಗಡಿಯಲ್ಲಿರುವ ಕಾಂಜಿರಕೊಲ್ಲಿಯಲ್ಲಿರುವ ಉಡುಂಬಾ ನದಿಯನ್ನು ದಾಟಿ, ಕಾಡಿನ ಮೂಲಕ ಕಾಲ್ನಡಿಗೆಯಲ್ಲಿ ಕಡಿದಾದ ಪರ್ವತವನ್ನು ಹತ್ತಿ ಕೊಡಗಿಗೆ ಆಗಮಿಸಿದರು. ಮೊದಲ ದಿನ, ಅವರು ಸಂಜೆ…
ವಿರಾಜಪೇಟೆ ಜ.31 NEWS DESK : ಹೆಗ್ಗಳ ಗ್ರಾಮದಲ್ಲಿರುವ ಎಡಮಕ್ಕಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಬ್ರಹ್ಮಕಲಶಾಭಿಷೇಕ ಹಾಗೂ ವಾರ್ಷಿಕ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ಜರುಗಿತು. ಮೂರು ದಿವಸಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಮಹೋತ್ಸವವು ತೆರೆ ಕಂಡಿತು. ಮೊದಲ ದಿವಸ ಮಹಾಪೂಜೆ, ಪ್ರಸಾದ ಶುದ್ದಿ ಕ್ರಿಯೆಗಳು, ಆಚಾರ್ಯವರಣಂ ಸೇವೆಗಳು ನಡೆದವು. ಎರಡನೆಯ ದಿನದಂದು ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಬೆಳಿಗ್ಗೆ ಮಹಾ ಗಣಪತಿ ಹೋಮ, ಉಷಾ ಪೂಜೆ, ಕಲಶಾಭಿಷೇಕ, ಉಷಾ ಪೂಜೆ, ಬ್ರಹ್ಮ ಕಳಸ ಪೂಜೆ, ಪರಿಕಳಸ ಸೇವೆಗಳನ್ನು ನೆರವೇರಿಸಿ ಧ್ವಜಾರೋಹಣವನ್ನು ಮಾಡಲಾಯಿತು. ಮಧ್ಯಾಹ್ನ ಮಹಾಪೂಜೆ ಜರುಗಿತು. ಸಂಜೆ ಆದಿವಾಸ ಹೋಮ, ದೀಪಾರಾಧನೆ, ಕಲಶಾದಿವಸಂ ಸೇವೆಯು ನಡೆಯಿತು. ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಸಂಪ್ರದಾಯದಂತೆ ಆಡಳಿತ ಮಂಡಳಿಯವರು ತೆರಳಿ ಮಹಾಗಣಪತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಎಡಮಕ್ಕಿ ಸಾರ್ವಜನಿಕ ಮೈದಾನದಿಂದ ತಾಲಪೊಲಿ ಮೆರವಣಿಗೆಯು ನಡೆಯಿತು. ಭಕ್ತಾದಿಗಳು ಹೂವುಗಳನ್ನು ತಟ್ಟೆಗಳಲ್ಲಿ ಹಿಡಿದುಕೊಂಡು ದೀಪಗಳನ್ನು ಬೆಳಗಿಸಿ ಮೆರವಣಿಗೆಯಲ್ಲಿ ಸಾಗಿದರು.…
ಮಡಿಕೇರಿ ಜ.31 NEWS DESK : ಮೈಸೂರು- ಕುಶಾಲನಗರ ನಡುವಿನ ಸುಮಾರು 87 ಕಿ.ಮೀ ಉದ್ದದ ರೈಲು ಮಾರ್ಗದ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರಕಾರ ಪೂರ್ಣಗೊಳಿಸಿದೆ. ಆದರೆ ಸಂಸದ ಯದುವೀರ್ ಒಡೆಯರ್ ಅವರು ಈ ವಿಚಾರದಲ್ಲಿ ರಾಜ್ಯ ಸರಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು- ಕುಶಾಲನಗರ ರೈಲು ಮಾರ್ಗದ ಯೋಜನೆ ಆರ್ಥಿಕವಾಗಿ ಲಾಭದಾಯಕವಲ್ಲ ಎನ್ನುವ ಕಾರಣಕ್ಕೆ ರೈಲ್ವೆ ಇಲಾಖೆ ಈ ಯೋಜನೆಯನ್ನು ಕೈಬಿಟ್ಟಿದೆ. ಆದರೆ ಸಂಸದರು ರಾಜ್ಯ ಸರಕಾರ ಭೂಸ್ವಾಧೀನ ಪಡಿಸಿಕೊಳ್ಳುವಲ್ಲಿ ವಿಳಂಬ ಮಾಡಿರುವುದು ಕಾರಣವೆಂದು ಸುಳ್ಳು ಹೇಳಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಯದುವೀರ್ ಒಡೆಯರ್ ಅವರು ಸಂಸದರಾದ ನಂತರ ಅನೇಕ ಯೋಜನೆಗಳು ಸ್ಥಗಿತಗೊಂಡಿವೆ. ರಾಜ್ಯದ ಒಟ್ಟು 236 ತಾಲ್ಲೂಕುಗಳಲ್ಲಿ ಕೊಡಗು ಜಿಲ್ಲೆಯ 5 ತಾಲ್ಲೂಕುಗಳು ಸೇರಿದಂತೆ 80 ತಾಲ್ಲೂಕುಗಳಿಗೆ ಇಂದಿಗೂ ರೈಲ್ವೆ ಮಾರ್ಗವಿಲ್ಲ ಎಂದರು. ಕರಕುಶಲ ಕರ್ಮಿಗಳಿಗೆ ಉತ್ತೇಜನ ನೀಡಲು ‘ಒಂದು…
ಕುಶಾಲನಗರ, ಜ.31 NEWS DESK : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡ ತೋಳೂರು ಶೆಟ್ಟಳ್ಳಿ ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಕೆ.ಎನ್.ಪುಣ್ಯ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕೊಪ್ಪಳದಲ್ಲಿ ಫೆ.7 ಮತ್ತು 8 ರಂದು ನಡೆಯಲಿರುವ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಕೊಡಗು ಜಿಲ್ಲೆಯಿಂದ ಆಯ್ಕೆಗೊಂಡಿರುವ ವಿದ್ಯಾರ್ಥಿನಿ ಪುಣ್ಯಳನ್ನು ಶಾಲೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಅಭಿನಂದಿಸಿ ಗೌರವಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರು ಇದ್ದರು. ವಿದ್ಯಾರ್ಥಿನಿ ಪುಣ್ಯ, ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ಕೆ.ಎನ್.ನಾಗರಾಜ ಮತ್ತು ರಜನಿ ದಂಪತಿಯ ಪುತ್ರಿ.
ನಾಪೋಕ್ಲು ಜ.31 : NEWS DESK : ಸಂಪಾಜೆ ಗ್ರಾಮದ ಪೆಲ್ತಡ್ಕ, ಗೂನಡ್ಕದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ರಾತ್ರಿ ವೇಳೆ ಕೃಷಿ ತೋಟಕ್ಕೆ ನುಗ್ಗಿ ಬೆಳೆಗಳನ್ನು ನಾಶ ಪಡಿಸಿದ ಘಟನೆ ಸಂಭವಿಸಿದೆ. ಗೂನಡ್ಕದ ಪ್ರಮೀಳ ಅವರ ಮನೆಯ ಮುಂಭಾಗದಲ್ಲಿ ಕಾಡಾನೆ ಹಿಂಡು ಕಾಣಿಸಿಕೊಂಡಿದೆ. ಭಯಗೊಂಡ ಮನೆಯವರು ಸಿಡಿಮದ್ದು ಸಿಡಿಸಿ(ಹೊಡಿಸಿ) ಆನೆಗಳನ್ನು ಓಡಿಸಿದ್ದಾರೆ. ನಂತರ ಕಾಡಾನೆ ಹಿಂಡು ತೋಟಕ್ಕೆ ನುಗ್ಗಿ, ತೆಂಗು, ಅಡಿಕೆ, ಬಾಳೆ ಗಿಡಗಳನ್ನು ಹಾನಿಮಾಡಿದೆ. ಅಲ್ಲದೆ ಅಕ್ಕ ಪಕ್ಕದ ನಿವಾಸಿಗಳಾದ ಗಣೇಶ, ಜಗನ್ನಾಥ, ವಸಂತ, ಮನಮೋಹನ ಅವರ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ ಮಾಡಿದೆ. ಕಾಡಾನೆ ದಾಂಧಲೆಯಿಂದ ಈ ವ್ಯಾಪ್ತಿಯ ಕೃಷಿಕರು ಆತಂಕಕ್ಕೆ ಒಳಗಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆನೆ ಹಾವಳಿಯನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕು ಮತ್ತು ಹಾನಿಗೊಳಗಾದವರಿಗೆ ನಷ್ಟ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ.






