ಚೆಟ್ಟಳ್ಳಿ ನ.1 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ದೀಪಾವಳಿಯ ಪ್ರಯುಕ್ತ ಲಕ್ಷ್ಮಿ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಸಂಘದಲ್ಲಿ ಹಲವು ವರ್ಷಗಳಿಂದ ದೀಪಾವಳಿ ಅಂಗವಾಗಿ ಲಕ್ಷ್ಮಿಪೂಜೆ ಯನ್ನು ನಡೆಸಿಕೊಂಡು ಬರುತಿದ್ದು ಈ ಬಾರಿಯೂ ಪೂಜಾ ಕಾರ್ಯವನ್ನು ನಡೆಸಲಾಗಿದೆ ಎಂದರು. ಸಂಘವು ಇನ್ನಷ್ಟು ಅಭಿವೃದ್ಧಿಯತ್ತ ಸಾಗಲೆಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು ಹಾಗು ಸಿಬ್ಬಂದಿವರ್ಗ ಭಾಗವಹಿಸಿದರು.
ಲೇಖಕ: admin
ಮಡಿಕೇರಿ ನ.1 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ಕೋಶಾಧಿಕಾರಿ ಕೆ.ತಿಮ್ಮಪ್ಪ, ಟ್ರಸ್ಟಿ ಶ್ರೀಧರ್ ಹೂವಲ್ಲಿ , ಬಿ.ಎಂ.ಲಲಿತಾ ಸಿಬ್ಬಂದಿಗಳಾದ ಯಮುನಾ, ಸವಿತಾ, ರಾಜೇಶ್, ಉದ್ಯಮಿಗಳಾದ ಅಬ್ದುಲ್ ರೆಹಮಾನ್, ಆಟೋ ಚಾಲಕರಾದ ಚೇತನ್, ಪುಟಾಣಿಗಳಾದ ತರುಣ್ ಬಜೆಕೋಡಿ, ಅಹನ್ ಪೂಜಾರಿ, ದಿವಿನ್ ಡಿ’ಕುನ್ಹ, ಆರ್ವಿ ಮುಂತಾದವರು ಭಾಗವಹಿಸಿದ್ದರು.
ಮಡಿಕೇರಿ ನ.1 NEWS DESK : ಕರಿಕೆ ಗ್ರಾ.ಪಂಚಾಯತ್ ಮತ್ತು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ಹಾಗೂ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಪಂಚಾಯತ್ ಸದಸ್ಯರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಡಿ.ದೇವರಾಜ್, ಉಪಾಧ್ಯಕ್ಷರಾದ ಎಮ್.ಎಮ್ ರೆಲ್ಸನ್, ನಿರ್ದೇಶಕರುಗಳು, ಎಸ್.ಡಿ.ಎಂಸಿ ಅಧ್ಯಕ್ಷರು, ಸದಸ್ಯರುಗಳು, ಬಿ.ಎಸ್ ರಮಾನಾಥ್, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಪಂಚಾಯತ್ ಸಿಬ್ಬಂದಿ ವರ್ಗ ಪಾಲ್ಗೊಂಡರು. ಗ್ರಂಥಾಲಯ ಮೇಲ್ವಿಚಾರಕಾರದ ಸಾವಿತ್ರಿ ಸ್ವಾಗತಿಸಿದರು. ಪ್ರೌಢ ಶಾಲೆಯಿಂದ ಆರಂಭಗೊಂಡ ಮೆರವಣಿಗೆ ಎಳ್ಳುಕೊಚ್ಚಿ ಪೇಟೆಯಲ್ಲಿ ಸಮಾಪ್ತಿಯಾಯಿತು.
ಕುಶಾಲನಗರ, ನ.1 NEWS DESK : ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ’: ನಮ್ಮ ನಡೆ ಹಸಿರೆಡೆಗೆ ಗೋ ಗ್ರೀನ್ ಅಭಿಯಾನ : 2024 ದಡಿ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಂಬಂಧ ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ ಶಾಲೆಯಲ್ಲಿ *”ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಸಮಾಜ ವಿಜ್ಞಾನ ಶಿಕ್ಷಕ ಹೆಚ್.ಆರ್.ಶೇಖರ್ ಮಾತನಾಡಿ, ದೀಪಾವಳಿ ಹಬ್ಬದಲ್ಲಿ ನಾವು ಸ್ವಚ್ಛ ಮತ್ತು ಸ್ವಸ್ಥ ಪರಿಸರಕ್ಕಾಗಿ ಹಾಗೂ ಮಾಲಿನ್ಯಕಾರಿ ಪಟಾಕಿಗಳನ್ನು ತ್ಯಜಿಸಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವ ಮೂಲಕ ಹಸಿರು ದೀಪಾವಳಿ…
ವಿರಾಜಪೇಟೆ ನ.1 NEWS DESK : ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ ದ್ವಜಾರೋಹಣವನ್ನು ನೆರವೇರಿಸಿ ಕನ್ನಡ ನಾಡು, ನುಡಿ, ಭಾಷೆಯ ಮಹತ್ವದ ಬಗ್ಗೆ ತಿಳಿಸಿದರು. ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಮಕ್ಕಳಿಗೆ ಕರೆಯನ್ನು ನೀಡಿದರು. ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಶಾಲಾ ಮಕ್ಕಳು ನಾಡಗೀತೆ ಹಾಗೂ ಕನ್ನಡ ನಾಡು ನುಡಿಯ ಇತರ ಗೀತೆಗಳನ್ನು ಹಾಡಿದರು. ಈ ಸಂದರ್ಭ ಸಹ ಶಿಕ್ಷಕಿ ಕಮರುನ್ನಿಸ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಲತಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಗೋಣಿಕೊಪ್ಪ NEWS DESK ನ.1 : ಪರಿಸರ ಮತ್ತು ವನ್ಯಜೀವಿಗಳನ್ನು ಪ್ರೀತಿಸುವ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದಲ್ಲಿ ಏಕಾಗ್ರತೆಯನ್ನು ಸಂಪಾದಿಸಬೇಕು ಎಂದು ಪತ್ರಕರ್ತ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಸಲಹೆ ನೀಡಿದ್ದಾರೆ. 69ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪ್ರಯುಕ್ತ ಗೋಣಿಕೊಪ್ಪ ಲಯನ್ಸ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವನ್ಯಜೀವಿಗಳ ಕುರಿತು ಅವರು ವಿವರಿಸಿದರು. ಕಾಡುಪ್ರಾಣಿಗಳು ತಮ್ಮ ಬದುಕನ್ನು ವಿಶೇಷ ರೀತಿಯಲ್ಲಿ ನಡೆಸುತ್ತವೆ. ಮೂಕ ಪ್ರಾಣಿಗಳು ವಿಶೇಷ ಜ್ಞಾನವನ್ನು ಹೊಂದಿರುತ್ತವೆ. ಮಾನವನ ಕಲಹಕ್ಕೆ ಮಾತನಾಡುವ ಶಕ್ತಿಯೇ ಕಾರಣವಾಗಿದೆ. ಮೌನದಿಂದ ಏಕಾಗ್ರತೆ ಹೆಚ್ಚಾಗುತ್ತದೆ, ಏಕಾಗ್ರತೆಯಿಂದ ಓದುವ ಆಸಕ್ತಿ ಹೆಚ್ಚಾಗಿ ಜ್ಞಾನ ವೃದ್ಧಿಸುತ್ತದೆ ಎಂದರು. ಮೌಲ್ಯಾಧಾರಿತ ಬದುಕು ಸಾಗಿಸಲು ನಾವು ಉತ್ತಮ ಗೆಳೆಯರನ್ನು ಸಂಪಾದಿಸಬೇಕು. ಗೆಳೆಯರ ಸಹಕಾರದಿಂದ ನಾವು ಬಹುದೊಡ್ಡ ಸಾಧನೆಯನ್ನೇ ಮಾಡಬಹುದು, ಈ ಸತ್ಯವನ್ನು ನಾವು ಅರಿತಿರಬೇಕು ಎಂದು ರಮೇಶ್ ಉತ್ತಪ್ಪ ಕಿವಿಮಾತು ಹೇಳಿದರು. ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಬೋಸ್ ಪೆಮ್ಮಯ್ಯ, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಸಿ.ಟಿ.ಅಪ್ಪಣ್ಣ, ಉಪಾಧ್ಯಕ್ಷ ಧನು ಉತ್ತಯ್ಯ, ಕಾರ್ಯದರ್ಶಿ ಶ್ರೀಮಂತ್…
ಮಡಿಕೇರಿ ನ.1 NEWS DESK : ಕೊಡಗು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಪ್ರೊ.ಎಂ.ಪಿ. ಕೃಷ್ಣ ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾರ ಪ್ರಾಂಶುಪಾಲ ಪ್ರೊ. ಎಂ.ಪಿ.ಕೃಷ್ಣ ಅವರು ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಇಂತಹ ಕನ್ನಡಾಭಿಮಾನ ಮೂಡಿಸುವ ಚಟುವಟಿಕೆಗಳು ನಡೆಯುವಂತೆ ವಿಶೇಷ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು. ಗಣಕ ವಿಜ್ಞಾನ ವಿಭಾಗದ ಎಂ.ಎನ್.ರವಿಶಂಕರ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ರಾಜ್ಯ ಭಾಷೆಯಾಗಿರಬೇಕಾದದ್ದು ಸಹಜ. ಆದರೆ ಈಗ ಕನ್ನಡದ ಅವಶ್ಯಕತೆಯ ಬಗ್ಗೆ ಮಾತಾಡಬೇಕಾಗಿ ಬಂದದ್ದು ದುರದೃಷ್ಟಕರ. ಅಧ್ಯಯನ ವಿಷಯಗಳು ಯಾವುದೇ ಆಗಿರಲಿ ಮಾತೃಭಾಷೆಯ ಕುರಿತ ಅಭಿಮಾನಕ್ಕೆ ಎಂದೂ ಚ್ಯುತಿ ಬರಬಾರದು ಎಂದರು. ಇಡೀ ಕನ್ನಡ ಸಂಸ್ಕೃತಿಯ ಅಸ್ಥಿತ್ವ ಇರುವುದು ಆ ಭಾಷೆಯಲ್ಲಿ. ಹೀಗಾಗಿ ಪ್ರತಿಯೊಬ್ಬರು ಕನ್ನಡ ಭಾಷೆಯ ಕುರಿತು ಆಸಕ್ತಿಯನ್ನು, ಗೌರವವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕನ್ನಡ ವಿಭಾಗದ ಡಾ.ಕರುಣಾಕರ ಮಾತನಾಡಿ, ಕಾಲೇಜುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕನ್ನಡ…
ಕುಶಾಲನಗರ ನ.1 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡಿದ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಕೆ.ಎಸ್.ಹರೀಶ್, ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಇತಿಹಾಸ,ಪರಂಪರೆಯ ಮಹತ್ವವನ್ನೂ ತಿಳಿದುಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಕರ್ನಾಟಕ ನಮ್ಮ ಹೆಮ್ಮೆಯ ರಾಜ್ಯ, ಕನ್ನಡ ನಮ್ಮ ಮಾತೃಭಾಷೆ. ವಿದ್ಯಾರ್ಥಿಗಳು ಭಾಷಾಭಿಮಾನ ಬೆಳೆಸಿಕೊಂಡು ಕನ್ನಡ ನಾಡು- ನುಡಿ, ಕಲೆ- ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯಬೇಕು ಹೇಳಿದರು. ಕನ್ನಡ ರಾಜ್ಯೋತ್ಸವದ ಮಹತ್ವ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ, ಕನ್ನಡದ ಕಂಪು ಪಸರಿಸುವ ಈ ವಿಶೇಷ ದಿನದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕರ್ನಾಟಕ, ಕನ್ನಡ ಹಬ್ಬದ ಇತಿಹಾಸ, ಮಹತ್ವ ತಿಳಿದುಕೊಳ್ಳಬೇಕು ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್ ಮಾತನಾಡಿ,ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮರೆಯಬೇಕು ಎಂದರು. ಶಿಕ್ಷಕರಾದ ಬಿ.ಎನ್.ಸುಜಾತ, ಬಿ.ಡಿ.ರಮ್ಯ,…
ಪೊನ್ನಂಪೇಟೆ ನ.1 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಾಯೋಜಕರ ನೆರವಿನಿಂದ ನೀಡಲಾಗುವ ಈ ಸಾಲಿನ ಕೆ.ಎಂ.ಎ ವಿಶೇಷ ಪ್ರತಿಭಾ ಪುರಸ್ಕಾರ-2024ಕ್ಕೆ ಜಿಲ್ಲೆಯ ಒಟ್ಟು ಆರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಎನ್.ಸಿ.ಟಿ ಗ್ರೂಪ್ ಮಾಲೀಕರಾದ ಕೆ.ಎಂ.ಎ ಉಪಾಧ್ಯಕ್ಷ ಅಕ್ಕಳತಂಡ ಎಸ್.ಮೊಯ್ದು ಅವರು ತಮ್ಮ ಸಹೋದರ ದಿ.ಅಕ್ಕಳತಂಡ ಎಸ್. ಹಂಸ ಅವರ ಸ್ಮರಣಾರ್ಥವಾಗಿ ಪ್ರಾಯೋಜಿಸುತ್ತಿರುವ ಕೆ.ಎಂ.ಎ ವಿಶೇಷ ಪ್ರತಿಭಾ ಪುರಸ್ಕಾರಕ್ಕೆ 2023-24 ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಇಡೀ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಗೋಣಿಕೊಪ್ಪಲಿನ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಡಿ. ಭಾಷಿತ (ರಾಜ್ಯಮಟ್ಟದಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿ) ಮತ್ತು ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಡಿಯಾನ ನವೀನ್ ಕ್ರಮವಾಗಿ ಆಯ್ಕೆಗೊಂಡಿದ್ದಾರೆ. ಈ ಪುರಸ್ಕಾರವು ತಲಾ ರೂ. ಹತ್ತು ಸಾವಿರ ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಂಸನಾ…
ಗೋಣಿಕೊಪ್ಪ NEWS DESK ನ.1 : ಪೊನ್ನಂಪೇಟೆ ತಾಲ್ಲೂಕಿನ ಬ್ರಹ್ಮಗಿರಿ ವನ್ಯಜೀವಿ ವ್ಯಾಪ್ತಿಗೆ ಒಳಪಟ್ಟ ಹನುಮಂತ ಬೆಟ್ಟದಲ್ಲಿ ಪರಿಸರಕ್ಕೆ ಮಾರಕವಾಗಬಲ್ಲ ರೆಸಾರ್ಟ್ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಸ್ಥಳೀಯ ಗ್ರಾಮಸ್ಥರು, ತಕ್ಷಣ ಇದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ. ಶ್ರೀಮಂಗಲದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಸ್ಥ ಕುಪ್ಪಂಡ ಬೋಪಣ್ಣ, ಶ್ರೀಮಂಗಲ ಗ್ರಾ.ಪಂ ವ್ಯಾಪ್ತಿಯ ಕುರ್ಚಿ ಗ್ರಾಮದ ಬ್ರಹ್ಮಗಿರಿ ಅರಣ್ಯ ವಿಭಾಗದ ಕೇವಲ 50 ಮೀಟರ್ ಅಂತರದಲ್ಲಿ ರೆಸಾರ್ಟ್ ಚಟುವಟಿಕೆ ನಡೆಯುತ್ತಿದೆ. ಎರಡು ತಿಂಗಳ ಹಿಂದೆ ಅರಣ್ಯ, ಕಂದಾಯ, ಪ್ರವಾಸೋದ್ಯಮ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಕೆ.ಎನ್.ಬೋಸ್ ಮಾದಪ್ಪ ಮಾತನಾಡಿ, ಬ್ರಹ್ಮಗಿರಿ ಬೆಟ್ಟ ಪ್ರದೇಶ ವನ್ಯಜೀವಿ ಧಾಮ ಮತ್ತು ಪಶ್ಚಿಮಘಟ್ಟದ ಬೆಟ್ಟ ಸಾಲುಗಳ ಅತೀ ಸೂಕ್ಷ್ಮ ಪ್ರದೇಶವಾಗಿದೆ. ಮುಂದೆ ಅನಾಹುತ ಸಂಭವಿಸಿದರೆ ನಿರಾಪೇಕ್ಷಣಾ ಪತ್ರ ನೀಡಿದ ಅಧಿಕಾರಿಗಳು ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು ರೆಸಾರ್ಟ್ ಚಟುವಟಿಕೆಯನ್ನು ಸ್ಥಗಿತಗೊಳಿಸದಿದ್ದಲ್ಲಿ ಗ್ರಾಮಸ್ಥರು…






