ಲೇಖಕ: admin

ಮಡಿಕೇರಿ ನ.20 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಸಂಸ್ಥಾಪಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಸಂಸ್ಥಾಪಕರುಗಳಾದ ದಿವಂಗತ ನಂದಾ ಗಣಪತಿ ಹಾಗೂ ಕಾಂತಿ ಗಣಪತಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಸ್.ಸುದೇಶ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಧನಲಕ್ಷ್ಮಿ ಕಾವೇರಿ ಶಾಲೆಯ ಸಂಸ್ಥಾಪಕರುಗಳೊಂದಿಗೆ ಸೇವೆ ಸಲ್ಲಿಸಿದ ಸುದೀರ್ಘ 25 ವರ್ಷಗಳನ್ನು ನೆನೆದು ಭಾವುಕರಾದರು. ಕಾವೇರಿ ಶಾಲೆಯ ಕಾರ್ಯದರ್ಶಿ ಪಿ.ಎನ್.ವಿನೋದ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲೆಯ ಗುರಿ ಹಾಗೂ ಪ್ರಸಿದ್ಧ ವ್ಯಕ್ತಿಯಾಗಲು ಇರಬೇಕಾದ ಚಾಣಾಕ್ಷತೆಯನ್ನು ಬೆಳೆಸಿಕೊಳ್ಳುವ ರೀತಿಯನ್ನು ಸಣ್ಣ ಕಥೆಯ ಮೂಲಕ ತಿಳಿಸಿದರು. ಕಾರ್ಯಕ್ರಮದಲ್ಲಿ 2024-25ನೇ ಶೈಕ್ಷಣಿಕ ವರ್ಷದ ಚುನಾಯಿತ ಪದಾಧಿಕಾರಿಗಳಿಗೆ ಪೋಷಕರ ಉಪಸ್ಥಿತಿಯಲ್ಲಿ ಅತಿಥಿಗಳು ಪದವಿ ಪ್ರದಾನ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ಶಾಲೆಯ ಬಗ್ಗೆ ಸಾಮೂಹಿಕ ಗೀತೆ ಹಾಡಲಾಯಿತು. 2024 -25ರ ಸಾಲಿನ ಕಾವೇರಿ ಶಾಲೆಯ ಆಯೋಜಕತ್ವದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟಕ್ಕೆ ಸಹಾಯ ಹಸ್ತ ನೀಡಿದ…

Read More

ಮಡಿಕೇರಿ ನ.20 NEWS DESK : ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-2 ಬಿ.ಶೆಟ್ಟಿಗೇರಿ ಫೀಡರ್‍ನ ಎಚ್‍ಟಿ/ ಎಲ್‍ಟಿ ಮಾರ್ಗದ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.21 ರಂದು ರಂದು ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಬಿ.ಶೆಟ್ಟಿಗೇರಿ, ವಿ.ಬಾಡಗ, ಬಿಟ್ಟಂಗಾಲ ಕುಟ್ಟಂದಿ, ನಾಂಗಾಲ, ರುದ್ರಗುಪ್ಪೆ, ಬಾಳುಗೋಡು, ಕೊಂಗಾಣ ಹಾಗೂ ವಿರಾಜಪೇಟೆ ಪಟ್ಟಣದ ವಿದ್ಯಾನಗರ, ಸಿಲ್ವನಗರ, ಸುಭಾಶ್‍ನಗರ, ವಿಜಯನಗರ, ನಿಸರ್ಗ ಬಡಾವಣೆ, ಕಿರುಮಕ್ಕಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ನ.20 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ನವೆಂಬರ್, 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವ ಹಿನ್ನೆಲೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆಕಟ್ಟೆ, ಕನ್ನಂಡಬಾಣೆ, ಎ.ವಿ.ಶಾಲೆ, ಗದ್ದಿಗೆ, ಉಕ್ಕುಡ, ಆಜಾದ್‍ನಗರ, ತ್ಯಾಗರಾಜಕಾಲೋನಿ, ಅಬ್ಬಿಫಾಲ್ಸ್‍ರಸ್ತೆ, ಭಗವತಿನಗರ, ಮಲ್ಲಿಕಾರ್ಜನನಗರ, ರಾಣಿಪೇಟೆ, ಮಾರ್ಕೆಟ್ ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್‍ಇಂಟರ್ ನ್ಯಾಷನಲ್, ಐಟಿಐ ಹಿಂಭಾಗ, ಕಾವೇರಿ ಬಡಾವಣೆ, ಟೀ ಜಾನ್ ಲೇಔಟ್, ಅಬ್ದುಲ್ ಕಲಾಂ ಬಡಾವಣೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ನ.20 NEWS DESK : ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದನ್ವಯ ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ರಾಜೀ ಸಂಧಾನದಲ್ಲಿ ಪಾಲ್ಗೊಂಡು, ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ  ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂಸ್ವಾಧೀನ, ಬ್ಯಾಂಕ್ ವಸೂಲಾತಿ, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಂಎಂಆರ್‍ಡಿ, ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ. ಪ್ರತಿದಿನ…

Read More

ಸೋಮವಾರಪೇಟೆ NEWS DESK ನ.19 : ಕ್ಲಾಸ್ ಆಫ್ 99 ಗ್ರೂಪ್ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಆಶ್ರಯದಲ್ಲಿ ಮಹಿಳಾ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ ನಡೆಯಿತು. ದಂತ ವೈದ್ಯ ರಾಕೇಶ್ ಪಟೇಲ್ ಶಿಬಿರಕ್ಕೆ ಚಾಲನೆ ನೀಡಿದರು. ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಡಾ. ದುರ್ಗಾಪ್ರಸಾದ್ ಹೃದಯ ಆರೋಗ್ಯ ತಪಾಸಣೆ ಮಾಡಿದರು. ರೋಗಿಗಳಿಗೆ ಇಸಿಜಿ, ಇಕೊ ತಪಾಸಣೆ ನಡೆಸಲಾಯಿತು. ಸಾಮಾನ್ಯ ವೈದ್ಯಕೀಯ ತಪಾಸಣೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಡಾ. ಧನುಂಜಯ ಮೇದಪ್ಪ ಮತ್ತು ಡಾ. ಎನ್.ಅಮೂಲ್ಯ ನಡೆಸಿದರು. ನೇತ್ರ ತಜ್ಞ ಕಿರಣ್ ಭಟ್, ಮೂಳೆತಜ್ಞ ಜೀವನ್ ರವಿ ತಪಾಸಣೆ ನಡೆಸಿ, ಔಷಧಿ ಮಾತ್ರೆಗಳನ್ನು ವಿತರಿಸಿದರು. ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಕರುಂಬಯ್ಯ ರಕ್ತದಾನದ ಪ್ರಾಮುಖ್ಯತೆಯನ್ನು ತಿಳಿಸಿದರು. ಮಡಿಕೇರಿಯ ಪಶು ವೈದ್ಯರಾದ ವಿಭಾ ರಘುರಾಮ್ ಅವರು ಸಾಕುಪ್ರಾಣಿಗಳಿಗೆ ಚಿಕಿತ್ಸೆ ಮತ್ತು ನಾಯಿ ಬೆಕ್ಕುಗಳಿಗೆ ಉಚಿತ ರೇಬಿಸ್ ನಿಯಂತ್ರಣ ಲಸಿಕೆ ನೀಡಲಾಯಿತು. 346 ಮಂದಿ…

Read More

ಸೋಮವಾರಪೇಟೆ NEWS DESK ನ.19 : ಸೋಮವಾರಪೇಟೆ ಪಟ್ಟಣದಲ್ಲಿ ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಇಂದಿರಾಗಾಂಧಿ ಅಭಿಮಾನಿಗಳ ಸಂಘದಿಂದ ಶಾಸಕರ ಕಚೇರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದೀಗ ಮತ್ತೆ ನೆನೆಗುದಿಗೆ ಬಿದ್ದಿದ್ದು, ತಕ್ಷಣ ಕೆಲಸ ಆರಂಭಿಸಬೇಕೆಂದು ಸಂಘದ ಅಧ್ಯಕ್ಷ ಎಚ್.ಎ. ನಾಗರಾಜ್ ಒತ್ತಾಯಿಸಿದರು. ಈ ಸಂದರ್ಭ ಉಪಾಧ್ಯಕ್ಷ ಅಜಯ್, ಕಾರ್ಯದರ್ಶಿ ಎಚ್.ಬಿ. ರಾಜಪ್ಪ, ಸಲಹೆಗಾರ ಪಳನಿಸ್ವಾಮಿ, ಮಂಜು, ಮೊಹಿದ್ದೀನ್, ಮೋಹನ್, ನಾಗರಾಜು, ರಾಜೇಶ್, ಸಂಗಮೇಶ್, ಕಂಬಳ್ಳಿ ಲೋಕೇಶ್, ಶಿವ ಸೇರಿದಂತೆ ಇತರರು ಇದ್ದರು.

Read More

ಸೋಮವಾರಪೇಟೆ NEWS DESK ನ.19 : ಕೊಡಗು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಶಿಕ್ಷಣ ಫೌಂಡೇಶನ್ ಗ್ರಾಮ ಡಿಜಿ ವಿಕಸನ ಸಂಸ್ಥೆ ವತಿಯಿಂದ ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಗ್ರಂಥಾಲಯ ಮೇಲ್ವಿಚಾರಕರಿಗೆ ‘ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ’ ತರಬೇತಿ ಕಾರ್ಯಾಗಾರ ಮಡಿಕೇರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ ಫೌಂಡೇಶನ್ ತರಬೇತುದಾರ ರಕ್ಷಿತ್ ಮಾತನಾಡಿ, ಅರಿವು ಕೇಂದ್ರದ ಗ್ರಂಥಾಲಯದಲ್ಲಿರುವ ಲಾಪ್‌ಟಾಪ್‌ಗಳಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಆ್ಯಪ್ ಗಳನ್ನು ಅಳವಡಿಸಿದ್ದು, 8, 9, 10, 12ನೇ ತರಗತಿಗಳ ಪಠ್ಯ ಹಾಗೂ ಹಿಂದಿನ ಪ್ರಶ್ನೆ ಪತ್ರಿಕೆಗಳು ಸಿಗಲಿದ್ದು, ವಿದ್ಯಾರ್ಥಿಗಳಿಗೆ ಮೇಲ್ವಿಚಾರಕರು ಮನವರಿಗೆ ಮಾಡಿಕೊಡಬೇಕು ಎಂದು ಹೇಳಿದರು. ಡಿಜಿಟಲ್ ಸಾಕ್ಷರತೆ ಮಹಿಳೆಯರ ಬದುಕಿಗೆ ಸಹಕಾರಿಯಾಗಲಿದೆ. ವಾಟ್ಸ್ಆಪ್ ಬಿಸಿನೆಸ್ ಮಾಡಬಹುದು. ಆರ್‌ಡಿಪಿಆರ್ ಸೌಲಭ್ಯಗಳು ಹಾಗು ಡಿಜಿಟಲ್ ಡಿವೈಸ್ ಮೂಲಕ ಹಣದ ವ್ಯವಹಾರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಪಕಾರ್ಯದರ್ಶಿ ಧನರಾಜು, ಸಹಾಯಕ ಯೋಜನಾಧಿಕಾರಿ ಜೀವನ್‌ಕುಮಾರ್, ಗ್ರಂಥಾಲಯ…

Read More

ಸೋಮವಾರಪೇಟೆ NEWS DESK ನ.19 : ಸೋಮವಾರಪೇಟೆಯ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನವನ್ನು ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಪುಟ್ಟಪ್ಪ ವೃತ್ತದಲ್ಲಿ ಆಚರಿಸಲಾಯಿತು. ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಎಚ್.ಬಿ.ರಾಜಪ್ಪ ಹಾಗೂ ಪದಾಧಿಕಾರಿಗಳು ಇದ್ದರು.

Read More

ಸುಂಟಿಕೊಪ್ಪ NEWS DESK ನ.19 : ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದರೆ ಪೋಷಕರಿಗೆ ದಂಡ ಮತ್ತು ಜೈಲುಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಕಾನ್‌ಬೈಲ್, ತಲಕಾವೇರಿ ಜ್ಞಾನ ವಿಕಾಸ ಸಮಿತಿ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಮಂಜಿಕೆರೆ ಸಮುದಾಯ ಭವನದಲ್ಲಿ ವಾಹನ ಚಾಲಕರಿಗಾಗಿ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತಾ ಕಾರ್ಯಾಗಾರ ನಡೆಯಿತು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯ ಸಿಬ್ಬಂದಿ ವಿವೇಕ್ ಮಾತನಾಡಿ ಪೋಷಕರು ಅಪ್ರಾಪ್ತರಿಗೆ ವಾಹನಗಳನ್ನು ಚಾಲನೆ ಮಾಡಲು ಅವಕಾಶ ನೀಡಬಾರದು. ಅಪ್ರಾಪ್ತರು ವಾಹನ ಚಾಲನೆ ಮಾಡಿದರೆ ಪೋಷಕರಿಗೆ ರೂ.25 ಸಾವಿರ ದಂಡ ಮತ್ತು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಬೇಕು. ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಹೊಂದಿ ವಾಹನವನ್ನು ಸುರಕ್ಷಿತವಾಗಿ ಚಾಲನೆ ಮಾಡಬೇಕು. ಎಲ್ಲಾ ವಾಹನ ಚಾಲಕರು ವಾಹನಕ್ಕೆ ಸಂಬAಧಿಸಿದ ದಾಖಲೆಗಳು ಮತ್ತು ಪರವಾನಗಿಯನ್ನು…

Read More

ಮಡಿಕೇರಿ ನ.19 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ ‘’ಉದ್ಯೋಗಮೇಳ’’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ರಾಣಿ ಮದ್ರಾಸ್, ಮೈಸೂರು, ಅಟೋಮೇಟೇಕ್ಸಿಲ್ ಮೈಸೂರು, ಇಬ್ಬನಿ ರೆಸಾರ್ಟ್ಸ್, ಮಡಿಕೇರಿ, ಅಪೋಲೋ ಫಾರ್ಮಸಿ, ಬೆಂಗಳೂರು, ಈಕ್ವಲೈಸರ್ ಆರ್.ಸಿ. ಮೈಸೂರು, ಯುವ ಸ್ಪಂದನ, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ ಕ್ಕಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ…

Read More