ಮಡಿಕೇರಿ NEWS DESK ಅ.30 : ಸಾಹಿತಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಹಾಗೂ ವಿಶ್ರಾಂತ ಕುಲಪತಿಗಳಾದ ಕೊಡಗಿನ ಮೂಲದ ಪ್ರೊ.ಪದ್ಮಾ ಶೇಖರ್ ಅವರು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಈ ಬಾರಿಯ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುಶಾಲನಗರ ತಾಲ್ಲೂಕಿನ ತೊರೆನೂರಿನವರಾದ ಪ್ರ್ರೊ.ಪದ್ಮಾ ಶೇಖರ್ ಅವರು, ಬೆಂಗಳೂರಿನ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿದ್ದಾರೆ. ಸಾಹಿತ್ಯ, ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಜೈನಶಾಸ್ತç ಮತ್ತು ಪ್ರಾಕೃತ ವಿಭಾಗದ ಪ್ರಾಧ್ಯಾಪಕರು ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು, ಮೈಸೂರು ವಿವಿ ಮಹಿಳಾ ಅಧ್ಯಯನದ ನಿರ್ದೇಶಕರು, ಮೈಸೂರು ವಿವಿ ಕ್ರೈಸ್ತಶಾಸ್ತ್ರ ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ತಮ್ಮ ಶೈಕ್ಷಣಿಕ ಕಾರ್ಯಚಟುವಟಿಕೆಗಳೊಂದಿಗೆ ಇವರು ಜೀವನ ಚರಿತ್ರೆ, ವಿಮರ್ಶೆ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ತಮ್ಮನ್ನು ಗಾಢವಾಗಿ ತೊಡಗಿಸಿಕೊಂಡವರು. ಜೈನಶಾಸ್ತçದ ಕುರಿತು, ಕನ್ನಡ ಮತ್ತು ಪ್ರಾಕೃತ ಸಂಬಂಧಗಳು, ಕನ್ನಡ ಛಂದಸ್ಸುಗಳ ಬಗ್ಗೆ ಆಳವಾದ ಅಧ್ಯಯನ ನಡೆಸಿ ಸಂಶೋಧನಾ ಗ್ರಂಥಗಳನ್ನು ಹೊರ ತಂದವರಾಗಿದ್ದಾರೆ. ಇವುಗಳೊಂದಿಗೆ ‘ಹಕ್ಕಿಯ ಹರಯ’,…
ಲೇಖಕ: admin
ಮಡಿಕೇರಿ NEWS DESK ಅ.30 : ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2 ನೇ ರಾಜ್ಯಗಳ ಮರು-ಸಂಘಟನೆ ಆಯೋಗವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌಲ್ಸಿಲ್ ವತಿಯಿಂದ ನ.1 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30 ಗಂಟೆಯಿAದ 11.30 ಗಂಟೆಯವರೆಗೆ ಧರಣಿ ನಡೆಸಿ ಹಿರಿಯ ಆರ್ಥಿಕ ತಜ್ಞ, ಕೇಂದ್ರದ ಮಾಜಿ ಕಾನೂನು ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರತಿಪಾದಿಸಿರುವ 2ನೇ ರಾಜ್ಯಗಳ ಮರು-ಸಂಘಟನೆಯ ಆಯೋಗ ರಚನೆಗಾಗಿ ಆಗ್ರಹಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸಿಎನ್ಸಿಯಿಂದ ಮಂಡಿಸಲಾದ ನಮ್ಮ ಸಂವಿಧಾನದ ಆರ್ಟಿಕಲ್ 244, 371 R/w 6ನೇ ಮತ್ತು 8ನೇ ಶೆಡ್ಯೂಲ್ನ ಅಡಿಯಲ್ಲಿ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2 ನೇ ರಾಜ್ಯಗಳ ಮರು-ಸಂಘಟನೆ ಆಯೋಗದ ಅಗತ್ಯವಿದೆ. ಈ ಕುರಿತು ಸಿಎನ್ಸಿ ನ್ಯಾಯಾಲಯದಲ್ಲಿ ಕಾನೂನು…
ಮಡಿಕೇರಿ ಅ.30 NEWS DESK : ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮೂರ್ನಾಡು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ “ರಾಷ್ಟ್ರದ ಏಳಿಗೆಗೆ ಸಮಗ್ರತೆಯ ಸಂಸ್ಕೃತಿ” ಎಂಬ ಶೀರ್ಷಿಕೆ ಅಡಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಸಪ್ತಾಹ ಕಾರ್ಯಕ್ರಮ ನಡೆಯಿತು. ಮೂರ್ನಾಡು ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಲೋಕಾಯುಕ್ತ ಉಪ ಅಧೀಕ್ಷಕ ಅಧಿಕಾರಿ ಕೆ.ಸಿ.ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಜಯಕುಮಾರ್ ಹಾಜರಿದ್ದರದು. ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು. ಶಾಸ್ತ್ರಿ ನಗರ ಮತ್ತು ಕಬಡಗಿರಿ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಮತ್ತು ಲೋಕಾಯುಕ್ತರು ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ ಅ.30 NEWS DESK : ಮಡಿಕೇರಿ ಹಿಂದೂ ಮಲಯಾಳಿ ಸಂಘ ವತಿಯಿಂದ ನ.1 ರಂದು ಮಡಿಕೇರಿಯಲ್ಲಿ ಓಣಾಘೋಷಂ, ಓಣಂ ಸಧ್ಯ ಮತ್ತು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಓಣಂ ಆಚರಣಾ ಸಮಿತಿಯ ಅಧ್ಯಕ್ಷ ಟಿ.ಆರ್ ವಾಸುದೇವ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10 ದಿನಗಳ ಕಾಲ ಸಂಭ್ರಮದಿಂದ ಜರುಗುವ ಓಣಂ ಹಬ್ಬವು ಕೇರಳದ ಸಂಪ್ರದಾಯದೊಂದಿಗೆ ಬೆಸೆದುಕೊಂಡಿದೆ. ಕೇರಳದ ವಯನಾಡಿನಲ್ಲಿ ಸಂಭವಸಿದ ಪ್ರಕೃತಿ ವಿಕೋಪದಲ್ಲಿ ಅಪಾರ ಸಾವು ನೋವು ಸಂಭವಿಸಿದ ಹಿನ್ನೆಲೆಯಲ್ಲಿ ಮೃತರಿಗೆ ಸಂತಾಪ ಸೂಚಿಸುವ ಸಲುವಾಗಿ ಓಣಾಘೋಷಂ, ಓಣಂ ಸಧ್ಯ ಕಾರ್ಯಕ್ರಮದ ಮೆರವಣಿಗೆಯನ್ನು ಕೈಬಿಡಲಾಗಿದೆ ಎಂದರು. ಉಳಿದಂತೆ ಎಲ್ಲಾ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು. ಸಂಘದ ಗೌರವಾಧ್ಯಕ್ಷ ಕೆ.ಎಸ್.ರಮೇಶ್ ಮಾತನಾಡಿ, ನ.1 ರಂದು ಬೆಳಿಗ್ಗೆ 9 ಗಂಟೆಗೆ ಶಕ್ತಿ ದಿನಪತ್ರಿಕೆಯ ಸಂಪಾದಕ ಅನಂತಶಯನ ಕನ್ನಡ ಧ್ವಜಾರೋಹಣ ಮಾಡಲಿದ್ದು, ರಾಷ್ಟ್ರಪತಿ ಪದಕ ಪುರಸ್ಕೃತರಾದ ನಿವೃತ್ತ ಪೊಲೀಸ್ ಅಧಿಕಾರಿ…
ಮಡಿಕೇರಿ ಅ.30 NEWS DESK : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಕನ್ನಡ ರಾಜ್ಯೋತ್ಸವ ಪ್ರಯುಕ್ತ 2024 ರ ನವೆಂಬರ್ ಮಾಹೆಯಲ್ಲಿ (ದಿನಾಂಕ: 01-11-2024 ರಿಂದ 30-11-2024 ರವರೆಗೆ) ಶೇ.50 ರ ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಹಾಗೂ ಆನ್ಲೈನ್ ಮೂಲಕವೂ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಓದುಗರು www.kuvempubhashabharathi.karnataka.gov.in ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ರಿಜಿಸ್ಟ್ರಾರ್, ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು ಇವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಲು ಹಾಗೂ ಪುಸ್ತಕವನ್ನು ಖರೀದಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕುಶಾಲನಗರ, ಅ.30 NEWS DESK : ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ’, ನಮ್ಮ ನಡೆ ಹಸಿರೆಡೆಗೆ ಗೋ ಗ್ರೀನ್ ಅಭಿಯಾನದಡಿ ಕುಶಾಲನಗರ ತಾಲ್ಲೂಕಿನ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ “ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ” ಕುರಿತು ಜಾಗೃತಿ ಜಾಥಾ ನಡೆಯಿತು. ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಗುಮ್ಮನಕೊಲ್ಲಿ ಗ್ರಾಮದಲ್ಲಿ ಜಾಥಾ ನಡೆಸಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು. ದೀಪಾವಳಿ ಹಬ್ಬದಲ್ಲಿ ಮಾಲಿನ್ಯಕಾರಿ ಪಟಾಕಿಗಳನ್ನು ತ್ಯಜಿಸಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವ ಮೂಲಕ ಹಸಿರು ದೀಪಾವಳಿ ಆಚರಿಸಬೇಕು ಎಂದು ಮನವಿ ಮಾಡಿದರು. ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ…
ಕುಶಾಲನಗರ ಅ.30 NEWS DESK : ಕನ್ನಡದ ಪ್ರಖ್ಯಾತ ದೇಸಿ ವಾಹಿನಿ ಜನಪದ ಸಿರಿ ಕನ್ನಡ ತಂಡದ ಆಶ್ರಯದಲ್ಲಿ ನ.9 ರಂದು ಕುಶಾಲನಗರದ ಕೂಡ್ಲೂರು ವೀರ ಭೂಮಿ ಜನಪದ ಗ್ರಾಮದಲ್ಲಿ ಹಿ.ಚಿ ಹಬ್ಬ ಮತ್ತು ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ -2024 ಹಮ್ಮಿಕೊಳ್ಳಲಾಗಿದೆ ಎಂದು ಜನಪದ ಸಿರಿ ತಂಡದ ಮುಖ್ಯಸ್ಥ ಜರಗನಹಳ್ಳಿ ಕಾಂತರಾಜು ತಿಳಿಸಿದ್ದಾರೆ. ವೀರ ಭೂಮಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಗಿರಿಜನ ಜಾನಪದ ಸಂಪತ್ತು ಎಂದು ಖ್ಯಾತರಾಗಿರುವ ಹಂಪೆ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರು ಆಗಿರುವ ಡಾ. ಹಿ.ಚಿ ಬೋರ ಲಿಂಗಯ್ಯ ಅವರಿಗೆ 70 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಈ ವಿಶೇಷ ಹಬ್ಬ ಆಚರಣೆ ಮಾಡಲಾಗುತ್ತಿದೆ ಎಂದರು. ಬುಡಕಟ್ಟು ಗಿರಿಜನರ ಪರವಾಗಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿರುವ ಡಾ.ಬೋರಲಿಂಗಯ್ಯ ಅವರನ್ನು ಈ ಸಂದರ್ಭ ಗೌರವ ಪೂರ್ವಕವಾಗಿ ಜನಪದ ಸಿರಿ ಕನ್ನಡದಿಂದ ಮತ್ತು ಜನಪದ ಕಲಾವಿದರ ಮೂಲಕ ಸನ್ಮಾನಿಸಿ ಗೌರವಿಸಲಾಗುವುದು. ಶಾಸ್ತ್ರೀಯ…
ಮಡಿಕೇರಿ ಅ.30 NEWS DESK : ಶಿಕ್ಷಣ ಸಂಸ್ಥೆಗಳು ಭಾರತೀಯತೆಯೊಂದಿಗೆ ಉತ್ತಮ ಸಂಸ್ಕಾರವನ್ನೂ ಮಕ್ಕಳಿಗೆ ಭೋದಿಸುವ ಕೇಂದ್ರಗಳಾಗಬೇಕಾದ ಅನಿವಾಯ೯ತೆ ಇಂದಿನ ದಿನಗಳಲ್ಲಿದ್ದು, ಉತ್ತಮ ಸಂಸ್ಕಾರ ಹೊಂದಿದ ಮಕ್ಕಳೇ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಕೊಡುಗೆ ನೀಡಬಲ್ಲವರಾಗಿದ್ದಾರೆ ಎಂದು ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ, ಪತ್ರಕತ೯ ಅನಿಲ್ ಹೆಚ್.ಟಿ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯ ಶಾಲೆಯ ವೆಬ್ ಸೈಟ್ ಕೊಡಗು ವಿದ್ಯಾಲಯ ಡಾಟ್ ಕಾಮ್ ಗೆ ಚಾಲನೆ ನೀಡಿ ಮಾತನಾಡಿದ ಅನಿಲ್, ಕೊಡಗು ವಿದ್ಯಾಲಯ ಶಾಲೆಯನ್ನು 43 ವಷ೯ಗಳ ಹಿಂದೆ ಪ್ರಾರಂಭಿಸುವಲ್ಲಿ ದೇಶದ ಸೇನಾ ಪಡೆಯ ಪ್ರಥಮ ಮಹಾದಂಡನಾಯಕರಾಗಿದ್ದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಮಹತ್ವದ ಕೊಡುಗೆ ಇದೆ. ಹೀಗಾಗಿ ಈ ಶಾಲೆಗೆ ಕಾಯ೯ಪ್ಪ ಅವರ ಹಾರೈಕೆ ಎಂದೆಂದಿಗೂ ಇರುತ್ತದೆ ಎಂದರಲ್ಲದೇ, ಭಾರತೀಯ ಹಬ್ಬ, ಉತ್ಸವಗಳನ್ನು ಆಚರಿಸುವ ಮೂಲಕ ವಿದ್ಯಾಥಿ೯ಗಳಲ್ಲಿ ಭಾರತೀಯತೆಯನ್ನು ಕಲಿಸುವ ನಿಟ್ಟಿನಲ್ಲಿ ಕೊಡಗು ವಿದ್ಯಾಲಯ ತನ್ನದೇ ಆದ ಮಹತ್ವದ ಕೊಡುಗೆ ನೀಡಿದೆ. ಇಂಥ ಶಿಕ್ಷಣ ಸಂಸ್ಥೆಗಳ ಅಗತ್ಯ ಇಂದಿನ ಕಾಲಘಟ್ಟದಲ್ಲಿ…
ಮಡಿಕೇರಿ ಅ.30 NEWS DESK : ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನವನ್ನು ನ.1 ರಿಂದ 30 ರವರೆಗೆ ಹಮ್ಮಿಕೊಂಡಿದ್ದು, ಪಿಂಚಣಿದಾರರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ಎಸ್.ಪಿ.ರವಿ ಕೋರಿದ್ದಾರೆ. ಮುಖ ಚಹರೆ ಮತ್ತು ಬೆರಳಚ್ಚು ದೃಡೀಕರಣದ ಡಿಜಿಟಲ್ ಪ್ರಕ್ರಿಯೆ ಮೂಲಕ ಈ ಅಭಿಯಾನ ನಡೆಯಲಿದೆ. ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ ಪರಿಶೀಲಿಸಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಮತ್ತು ಕೇಂದ್ರ ಸರ್ಕಾರದ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮೆನ್ ಮೂಲಕ 70 ರೂ. ಶುಲ್ಕ ಪಾವತಿಸಿ, ಈ ಸೌಲಭ್ಯ ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಲ್ಲಾ ಅಂಚೆ ಇಲಾಖೆ ತಿಳಿಸಿದೆ.
ಮಡಿಕೇರಿ ಅ.30 NEWS DESK : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಮಿತಿಯ ಸದಸ್ಯರಾಗಿ ಮಡಿಕೇರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಕೆ.ಸರಸ್ವತಿ ಅವರನ್ನು ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು ನಾಮನಿರ್ದೇಶನ ಮಾಡಿದ್ದಾರೆ.






