ಲೇಖಕ: admin

ಮಡಿಕೇರಿ ನ.19 NEWS DESK : ಸೋಮವಾರಪೇಟೆ ಉಪವಿಭಾಗದ ಶಾಂತಳ್ಳಿ 11ಕೆ.ವಿ ಫೀಡರ್‍ನಲ್ಲಿ ನವೆಂಬರ್, 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಮಾರ್ಗಗಳ ಹಾಗೂ ಪರಿವರ್ತಕಗಳ ನಿರ್ವಹಣೆ ಹಮ್ಮಿಕೊಂಡಿದ್ದು, ಶಾಂತಳ್ಳಿ 11 ಕೆ.ವಿ ಫೀಡರ್ ಹಾದುಹೋಗುವ ಸ್ಥಳಗಳಾದ ಶಾಂತಳ್ಳಿ, ಯಡೂರು, ತೋಳೂರು, ಶೆಟ್ಟಳ್ಳಿ, ಕೂತಿ, ತಾಕೇರಿ, ಕಿರಗಂದೂರು, ಬೆಟ್ಟದಹಳ್ಳಿ, ಕುಮಾರಳ್ಳಿ, ಕುಂಬಾರಗಡಿಗೆ, ಕಿಕ್ಕರಳ್ಳಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ನ.19 NEWS DESK : ನಗರದ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ಛದ್ಮವೇಶ, ಸೀಮಂತ ಕಾರ್ಯಕ್ರಮ ಮತ್ತು ಸಮವಸ್ತ್ರ ವಿತರಣಾ ಕಾರ್ಯಕ್ರಮ ನೆರವೇರಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ಚೈತ್ರ, ಸಹಾಯಕಿ ಜ್ಯೋತಿ ಸಮುದಾಯದ ಸಹಕಾರ ಪಡೆದು ಸಮವಸ್ತ್ರ ವಿತರಣೆಗೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಇದು ಮಕ್ಕಳಲ್ಲಿ ಸಮಾನತೆ ಮೂಡಿಸಲು ಇದು ಸಹಕಾರವಾಗುತ್ತದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಮತ್ತು ಸಮುದಾಯದ ಸಹಕಾರ ಪಡೆದು ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾರ್ಗದರ್ಶನ ನೀಡಿದರು. ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರಲ್ಲಿ ಅಂಗನವಾಡಿ ಕೇಂದ್ರಕ್ಕಾಗಿ ಹಲವಾರು ಬೇಡಿಕೆಗಳನ್ನು ಸಲ್ಲಿಸಲಾಯಿತು. ಛದ್ಮವೇಶದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ, ವಿತರಿಸಲಾಯಿತು. ಪೋಷಣ್ ಅಭಿಯಾನ ಯೋಜನೆಯಡಿ ಮೂರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಮಕ್ಕಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದಲ್ಲಿ ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ…

Read More

ಮಡಿಕೇರಿ ನ.19 NEWS DESK : ರಾಷ್ಟ್ರೀಯ ಐಕ್ಯತಾ ಪ್ರತಿಜ್ಞಾ ವಿಧಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಬೋಧಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ, ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆ ಎಂದು ಶ್ರದ್ಧಾ ಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ ಎಂದು ಬೋಧಿಸಿದರು. ಅಲ್ಲದೆ ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲ, ಮತ, ಭಾಷೆ, ಪ್ರದೇಶ, ಅಥವಾ ಇತರ ರಾಜಕೀಯ, ಆರ್ಥಿಕ ಕುಂದುಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಪ್ರಯತ್ನ ಮುಂದುವರೆಸುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಿದರು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು.

Read More

ಮಡಿಕೇರಿ ನ.19 NEWS DESK : ವಿಶ್ವ ಪ್ರತಿಜೀವಕ ನಿರೋಧಕ ಜಾಗೃತಿ ಸಪ್ತಾಹ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ಸಂಸ್ಥೆಯ ವಿದ್ಯಾರ್ಥಿಗಳು ರಾಜಾಸೀಟ್ ಮಾರ್ಗವಾಗಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ವರೆಗೆ ಜಾಥಾ ನಡೆಸಿದರು. ಪ್ರತಿ ಜೀವಕಗಳನ್ನು ಸಾಮಾನ್ಯವಾಗಿ ಸೋಂಕು ನಿವಾರಣೆಗೆ ಬಳಸುತ್ತಾರೆ. ಆದರೆ ಇದರ ದುರ್ಬಳಕೆಯಿಂದ ಸೋಂಕು ಉಂಟುಮಾಡುವ ಸೂಕ್ಷ್ಮಜೀವಾಣುಗಳಿಗೆ ಈ ಔಷಧಿಗಳ ಮೇಲೆ ನಿರೋಧಕಶಕ್ತಿ ಬರುತ್ತದೆ. ಇದರಿಂದ ಔಷಧಿಯು ರೋಗ ನಿವಾರಣೆಯಲ್ಲಿ ವಿಫಲವಾಗುತ್ತದೆ. ನಮ್ಮ ದೇಶದಲ್ಲಿ ಪ್ರತಿಜೀವಕಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೆಯೂ ಉಪಯೋಗಿಸುವುದರಿಂದ ಈ ಸಮಸ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗೆ ಅಸಮರ್ಪಕವಾಗಿ ಅಪೂರ್ಣವಾಗಿ ಈ ಔಷಧಿಗಳನ್ನು ತೆಗೆದುಕೊಳ್ಳುವುದು ಹಾಗೂ ಅನಗತ್ಯವಾಗಿ ಉಪಯೋಗಿಸುವುದರ ವಿರುದ್ಧ ಜಾಗೃತಿ ಮೂಡಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಇಎನ್‍ಟಿ ವಿಭಾಗದ ಮುಖ್ಯಸ್ಥರಾದ ಡಾ.ಶ್ವೇತಾ, ಡಾ.ಶಾಮಲ, ಡಾ.ಶ್ರೀದೇವಿ, ರವಿಕಿರಣ್, ಶ್ರುಶ್ರೂಷಕ ವಿಭಾಗದ ವಸಂತ, ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಜಾಥಾದಲ್ಲಿ…

Read More

ಮಡಿಕೇರಿ ನ.19 NEWS DESK : ವಿ.ಬಾಡಗ ಹೈ ಪ್ಲೆಯರ್ಸ್ ವತಿಯಿಂದ ಡಿ.4 ರಿಂದ 8ರವೆಗೆ ಮೂರನೇ ವರ್ಷದ ಕೊಡವ ಕುಟುಂಬಗಳ ಹಾಕಿ ಪಂದ್ಯಾವಳಿ ಹೈ ಪ್ಲೆಯರ್ಸ್ ಕಪ್-2024 ನಡೆಯಲಿದೆ ಎಂದು ಹೈ ಪ್ಲೆಯರ್ಸ್‍ನ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿ.ಬಾಡಗ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಆಸಕ್ತ ತಂಡಗಳು ನ.22ರ ಒಳಗೆ ಹೆಸರು ನೊಂದಾಯಿಸಿಕೊಳ್ಳುವಂತೆ ತಿಳಿಸಿದರು. ಕಳೆದ ಎರಡು ವರ್ಷದಲ್ಲಿ ನಡೆದ ಪಂದ್ಯಾವಳಿಯಲ್ಲಿ ಬೇರಳೆನಾಡು ಮತ್ತು  ಕುತ್ತುನಾಡಿನಲ್ಲಿ ಐನ್‍ಮನೆ ಹೊಂದಿರುವ ಕೊಡವ ಕುಟುಂಬಗಳಿಗೆ ಭಾಗವಹಿಸಲು ಅವಕಾಶಕಲ್ಪಿಸಿದ್ದು, ಈ ಬಾರಿ ಬಿಟ್ಟಂಗಾಲ-ಬಿ.ಶೆಟ್ಟಿಗೇರಿ-ಹಾತೂರು ಗ್ರಾ.ಪಂ ವ್ಯಾಪ್ತಿಯ ಐನ್‍ಮನೆ ಹೊಂದಿರುವ ಕೊಡವ ಕುಟುಂಬಗಳಿಗಳಿಗೆ ಪಂದ್ಯಾವಳಿ ನಡೆಯಲಿದ್ದು, ಪ್ರತಿ ಕುಟುಂಬದ ತಂಡಗಳಿಗೆ 4 ಕೊಡವ ಅತಿಥಿ ಆಟಗಾರರನ್ನು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ರಂಜು ಪೂಣಚ್ಚ ಮಾಹಿತಿ ನೀಡಿದರು. ಕಾರ್ಯದರ್ಶಿ ಪ್ರವೀಣ್ ತಿಮ್ಮಯ್ಯ ಮಾತನಾಡಿ, ಈ ಪಂದ್ಯಾವಳಿಗೆ ಒಟ್ಟು 30 ತಂಡಗಳು ನೊಂದಾಯಿಸಿಕೊಳ್ಳುವ ನಿರೀಕ್ಷೆ ಇದ್ದು, ವಿಜೇತ…

Read More

ಮಡಿಕೇರಿ ನ.19 NEWS DESK : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ಕೊಡಗು ಮತ್ತು ಸೇವಾ ಭಾರತಿ ಕೊಡಗು ಸಂಯುಕ್ತ ಆಶ್ರಯದಲ್ಲಿ ಉಡೋತ್ ಮೊಟ್ಟೆ ಸೇರಿದಂತೆ ಒಂದೇ ದಿನ ಏಕಕಾಲದಲ್ಲಿ ಜಿಲ್ಲೆಯ 43 ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಉಡೋತ್ ಮೊಟ್ಟೆಯಲ್ಲಿ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಸಹಕಾರದೊಂದಿಗೆ ನಡೆದ ಶಿಬಿರವನ್ನು ಶ್ರೀ ಆದಿಶಕ್ತಿ ದೇವಸ್ಥಾನ ಧರ್ಮದರ್ಶಿ ಎಲ್ಯಣ್ಣ ಉದ್ಘಾಟಿಸಿದರು. ಕಾವೇರಿ ಸ್ವಾಸ್ಥ್ಯ ಯಾತ್ರೆ ಆರೋಗ್ಯ ಶಿಬಿರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಚಂದ್ರ ಉಡೋತ್ ಮಾಹಿತಿ ನೀಡಿದರು. ವೇದಿಕೆಯಲ್ಲಿ ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ಮತ್ತು ಕೊಡಗು ಮೆಡಿಕಲ್ ಕಾಲೇಜಿನ ವೈದ್ಯರುಗಳಾದ ಡಾ.ಮೋನಿಶ್, ಡಾ.ಲಾವಣ್ಯ ಉಪಸ್ಥಿತರಿದ್ದರು. ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಕಾರ್ಯದರ್ಶಿ ಕೇಶಿನಿ ಸ್ವಾಗತಿಸಿ, ವಂದಿಸಿದರು. ಸಮಿತಿ ಪದಾಧಿಕಾರಿಗಳಾದ ದಿವ್ಯ ಮಂಜುನಾಥ್, ಸುಮಿತ ತಿರುಮಲ, ದಿನೇಶ್, ಗ್ರಾ ಪಂ ಸದಸ್ಯ ಗೋಪಾಲ್ ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು…

Read More

ಮಡಿಕೇರಿ ನ.19 NEWS DESK : ಕೊಡಗು ವಿಶ್ವವಿದ್ಯಾಲಯ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ದೈಹಿಕ ವಿಭಾಗದ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಅಂತರ್ ಕಾಲೇಜು ಗುಡ್ಡ-ಗಾಡು ಓಟ ಸ್ಪರ್ಧೆ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬೆಟಾಲಿಯನ್ ಕಮಾಂಡಿಂಗ್ ಆಫೀಸರ್ 19 ಕರ್ನಲ್ ರೆಜಿತ್ ಮುಕುಂದನ್, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ ಮತ್ತು ಮಾನಸಿಕವಾಗಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಗುಡ್ಡ ಗಾಡು ಓಟ ಬಹಳ ಕಷ್ಟಕರವಾದ ಕ್ರೀಡೆ. ವಿದ್ಯಾರ್ಥಿಗಳು ದೈಹಿಕ ದೃಢತೆಯನ್ನು ಹೆಚ್ಚಿಸಕೊಳ್ಳಬೇಕು ಎಂದರು. ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ವಿಭಾಗದ ಪರಿವೀಕ್ಷಕ, ಅಂತರ್ ಕಾಲೇಜು ಗುಡ್ಡ-ಗಾಡು ನಿರ್ದೇಶಕ  ರೋಡ್ರಿಗಸ್ ಮಾತನಾಡಿ, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾಸ್ಪೂರ್ತಿ ಮೆರೆಯುವುದು ದೊಡ್ಡ ಸಾಧನೆ. ಕ್ರೀಡಾಪಟುಗಳು ಮುಖ್ಯವಾಗಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿದ್ದು, ಗುರಿ ಸಾಧನೆಗೆ ಪಣ ತೊಡಬೇಕು ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್…

Read More

ಮಡಿಕೇರಿ ನ.19 NEWS DESK : ಸಾಮಾಜಿಕ ಕಳಕಳಿಯೊಂದಿಗೆ ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ ನ.24ರಂದು ದಾಖಲೆಯ 100ನೇ ಪುಸ್ತಕವನ್ನು ಲೋಕಾರ್ಪಣೆ ಮಾಡುತ್ತಿದೆ ಎಂದು ಕೂಟದ ಪ್ರಧಾನ ಕಾರ್ಯದರ್ಶಿ ಹಾಗೂ “100ನೇ ಮೊಟ್ಟ್” ಪುಸ್ತಕದ ಸಂಪಾದಕ ಪುತ್ತರಿರ ಕರುಣ್ ಕಾಳಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು “100ನೇ ಮೊಟ್ಟ್” ಪುಸ್ತಕದೊಂದಿಗೆ ಕೊಡವ ಮಕ್ಕಡ ಕೂಟದ 101ನೇ ಪುಸ್ತಕ ಬರಹಗಾರ್ತಿ ತೆನ್ನೀರ ಟೀನಾ ಚಂಗಪ್ಪ ಬರದಿರುವ “ಮನಸ್‍ರ ಮರೆಲ್”, 102ನೇ ಪುಸ್ತಕ ಪೇರಿಯಂಡ ಯಶೋಧ ರಚಿಸಿರುವ “ಮನಸ್‍ರ ಜರಿ” 103ನೇ ಕರವಂಡ ಸೀಮಾ ಗಣಪತಿ ಬರೆದಿರುವ “ಮನಸ್‍ರ ತಕ್ಕ್” ಹಾಗೂ 104ನೇ ಪುಸ್ತಕವಾಗಿ ಐಚಂಡ ರಶ್ಮಿ ಮೇದಪ್ಪ ರಚಿಸಿರುವ ಕೊಡವಡ ನಮ್ಮೆನಾಳ್ (ನಾಟಕ ರೂಪತ್‍ಲ್) ಕೂಡ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. “100ನೇ ಮೊಟ್ಟ್” ಕೊಡವ ಮಕ್ಕಡ ಕೂಟದ ಮಹತ್ವಾಕಾಂಕ್ಷೆಯ ಪುಸ್ತಕವಾಗಿದ್ದು, ಕೊಡವ, ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ 45 ಕ್ಕೂ ಹೆಚ್ಚು ಲೇಖನಗಳಿವೆ.…

Read More

ಮಡಿಕೇರಿ ನ.19 NEWS DESK : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಐ ಕ್ಯೂ ಎಸಿ ವತಿಯಿಂದ ಡಿಜಿಟಲ್ ಲೈಬ್ರರಿ ಪೋರ್ಟಲ್ ಉದ್ಘಾಟಿಸಲಾಯಿತು. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಡಿಜಿಟಲ್ ಲೈಬ್ರರಿ ಪೋರ್ಟಲ್ ಅನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಸಮಯವನ್ನು ಹೆಚ್ಚಾಗಿ ಕಳೆಯುತ್ತಿದ್ದರು. ಆದರೆ ಪ್ರಸ್ತುತದಿನಗಳಲ್ಲಿ ಗ್ರಂಥಾಲಯಕ್ಕೆ ಬಂದು ಓದುವ ಹಾವ್ಯಸ ಕಡಿಮೆಯಾಗಿದ್ದು, ವಿದ್ಯಾರ್ಥಿಗಳು ಡಿಜಿಟಲ್ ಲೈಬ್ರರಿ ಪೋರ್ಟಲ್ ನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಹೆಚ್ಚು ಸಮಯವನ್ನು ಕಳೆದಷ್ಟು  ಜೀವನದಲ್ಲಿ ಜ್ಞಾನದ ಅಭಿವೃದ್ಧಿಯನ್ನು ಹೊಂದಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಲೈಬ್ರೆರಿಯನ್ ಪ್ರೊಫೆಸರ್ ವಿಜಯಲತಾ ಡಿಜಿಟಲ್ ಲೈಬ್ರರಿಯ ಮಹತ್ವವನ್ನು ತಿಳಿಸಿದರು. E Edwise…

Read More

ಕುಶಾಲನಗರ NEWS DESK ನ.19 : ಕುಶಾಲನಗರ ಐತಿಹಾಸಿಕ ದೇವಾಲಯ  ಶ್ರೀ ಗಣಪತಿ ದೇವರ ರಥೋತ್ಸವ  ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು. ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ ಪುಷ್ಪಾಲಂಕಾರ ರಥ ಪೂಜೆ ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥ ಬೀದಿಯ ಮೂಲಕ ಆಂಜನೇಯ ದೇವಾಲಯ ತನಕ ಘೋಷಣೆಗಳೊಂದಿಗೆ ಭಕ್ತಿಭಾವದಿಂದ ಎಳೆದರು.  ದೇವಾಲಯದ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು, ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿಂದ ಪೂಜಾ ವಿಧಿ ವಿಧಾನಗಳು ಜರಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೋತ್ಸವ ಅಂಗವಾಗಿ ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಹೂಗಳಿಂದ ಸಿಂಗರಿಸಲಾಗಿತ್ತು.  ಅಯ್ಯಪ್ಪ ಸ್ವಾಮಿ ದೇವರ ಮಾಲಾಧಾರಿಗಳು ರಥದ ಮುಂದೆ ಕರ್ಪೂರ ಆರತಿ ಬೆಳಗಿ ಅಯ್ಯಪ್ಪ ಸ್ವಾಮಿ ಘೋಷಣೆ ಕೂಗಿದರು. …

Read More