ಲೇಖಕ: admin

ವಿರಾಜಪೇಟೆ ಅ.30 NEWS DESK : ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿಗಳಿಗೆ ವೃತ್ತಿಯಾಧರಿತ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲಾಯಿತು. ಮೂಲತಃ ಜಿಲ್ಲೆಯವರಾದ ನ್ಯೂಜಿ ಲ್ಯಾಂಡ್ ನ ಗ್ಯಾರೆಂಟೆಡ್ ಫ್ಲೋ ಸಿಸ್ಟಮ್ಸ್ ನ ಜನರಲ್ ಮ್ಯಾನೇಜರ್ ಕಾರ್ಯಪ್ಪ ಕರಂಬಯ್ಯ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಹಾಗೂ ಮಾರ್ಗದರ್ಶನದ ಕುರಿತು ಮಾಹಿತಿಯನ್ನು ನೀಡಿದರು. ಭವಿಷ್ಯದಲ್ಲಿ ಉತ್ತಮ ಶೈಕ್ಷಣಿಕ ತರಬೇತಿಗೆ ಅಂತಾರಾಷ್ಟ್ರೀಯ ಮಟ್ಟದವರೆಗೂ ಅವಕಾಶವಿದೆ ಎಂದ ಅವರು ಸೂಕ್ತವಾದ ತರಬೇತಿಯನ್ನು ಪಡೆದುಕೊಂಡಾಗ ಮಾತ್ರ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯ ಎಂದು ಹೇಳಿದರು. ಮಾತ್ರವಲ್ಲದೆ ದೇಶದ ಹೊರಗಡೆ ವೃತ್ತಿಗೆ ತೆರಳುವಾಗ ನಕಲಿ ಏಜನ್ಸಿ ಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಹೇಳಿದರು. ಮಾತ್ರವಲ್ಲದೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹಾಗೂ ಮಷೀನ್ ಲರ್ನಿಂಗ್ ನ ವಿನೂತನ ಮಾದರಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ  ಪ್ರಸ್ತುತದಲ್ಲಿ ಉದ್ಯೋಗವನ್ನು ಪಡೆಯಲು ವೃತ್ತಿ ತರಬೇತಿ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು…

Read More

ಮಡಿಕೇರಿ ಅ.30 NEWS DESK : ವಿದ್ಯಾಸಂಸ್ಥೆಯ ಅಭಿವೃದ್ಧಿಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಪಟ್ಟಡ ರೀನಾ ಪ್ರಕಾಶ್ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಜರುಗಿದ ಹಳೆಯ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಲು ಹಳೆಯ ವಿದ್ಯಾರ್ಥಿ ಸಂಘವು ಅಗತ್ಯವಾಗಿದೆ. ಹಳೆಯ ವಿದ್ಯಾರ್ಥಿ ಸಂಘದಿಂದ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಪೂರಕವಾದ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲುಸಾಧ್ಯವಿದೆ. ಹಳೆಯ ವಿದ್ಯಾರ್ಥಿಗಳು ವಿದ್ಯಾ ಸಂಸ್ಥೆಯ ಬೆನ್ನೆಲುಬಿದ್ದಂತೆ ಸಂಸ್ಥೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಅವರ ಮೇಲಿದೆ ಎಂದರು. ನಂತರ ಹಳೆ ವಿದ್ಯಾರ್ಥಿ ಸಂಘ ಇದುವರೆಗೆ ನಡೆದ ಕಾರ್ಯ ಚಟುವಟಿಕೆಗಳ ವರದಿ ವಾಚಿಸಿದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಬೆನಡಿಕ್ಟ್ ಆರ್.ಸಲ್ಡಾನ ಮಾತನಾಡಿ, ಕಾವೇರಿ ಕಾಲೇಜನ್ನು ಜಗತ್ತಿಗೆ ಪರಿಚಯಿಸುವಂತಹ ಕಾರ್ಯವನ್ನು ಹಳೆಯ ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಹಳೆಯ ವಿದ್ಯಾರ್ಥಿಗಳು ನಮ್ಮ ಈ ವಿದ್ಯಾಸಂಸ್ಥೆಯನ್ನು ಹೊರ ಜಗತ್ತಿಗೆ ಪರಿಚಯಿಸುವ ರಾಯಭಾರಿಗಳು. ಕಾಲೇಜಿನ…

Read More

ಕುಶಾಲನಗರ, ಅ.30 NEWS DESK : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಇಕೋ ಕ್ಪಬ್ ವತಿಯಿಂದ ಸ್ವಚ್ಛ ಹಾಗೂ ಸ್ವಸ್ಥ ದೀಪಾವಳಿ ಗೋ ಗ್ರೀನ್ ಅಭಿಯಾನದ ಅಂಗವಾಗಿ ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ‌ ವಿದ್ಯಾರ್ಥಿಗಳು ಹಣತೆ ಬೆಳಗಿಸಿ, ಹಸಿರು ದೀಪಾವಳಿ ಆಚರಿಸುವ ಮೂಲಕ ಸಂಭ್ರಮಿಸಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಮಾಲಿನ್ಯ ತಡೆಯಿರಿ ಎಂಬ‌ ಘೋಷವಾಕ್ಯದೊಂದಿಗೆ ಮಣ್ಣಿನ ಹಣತೆ ( ದೀಪ) ಬೆಳಗಿಸಿ ಹಸಿರು ದೀಪಾವಳಿ ಆಚರಿಸುವ ಕುರಿತ ಪರಿಸರ ಸಂದೇಶ ಸಾರಿದರು. ಹಸಿರು ದೀಪಾವಳಿ ಆಚರಣೆಗೆ ಚಾಲನೆ ನೀಡಿದ ಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿ’ಸಿಲ್ವ, ವಿದ್ಯಾರ್ಥಿಗಳೆಲ್ಲರೂ ಪಟಾಕಿ ತ್ಯಜಿಸಿ ಹಣತೆ ಬೆಳಗಿಸುವ ಮೂಲಕ…

Read More

ಸಿದ್ದಾಪುರ ಅ.29 NEWS DESK : ಇತಿಹಾಸ ಪ್ರಸಿದ್ದ  ಐದ್ರೋಡಮ್ಮ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 16ನೇ ವರ್ಷದ ದೀಪಾವಳಿ ಹಬ್ಬದ ವಾರ್ಷಿಕ ಉತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಂಡಿರುವದಾಗಿ ಸಮಿತಿಯ ಪ್ರಮುಖರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯದ ಅರ್ಚಕ ತಿರುಮಲ ರಾಜನ್, ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೀಪಾವಳಿಯಂದು ಅದ್ದೂರಿಯಾಗಿ ವಾರ್ಷಿಕ ಉತ್ಸವ ಆಚರಿಸಲಾಗುತ್ತಿದ್ದು, ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರುಗಳು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಸಮಿತಿ ಮೂಲಕ ದೇವಸ್ಥಾನದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು ಸುಮಾರು ರೂ.15 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರದ ಮೂಲಕ ಕುಡಿಯುವ ನೀರು, ಸಭಾಂಗಣ, ಆವರಣ ಸೇರಿದಂತೆ ಇತರ ಸೌಕರ್ಯಗಳನ್ನು ಮಾಡಲಾಗಿದೆ.  ಅ.31 ಹಾಗೂ ನ.1 ರಂದು ದೇವಾಲಯದ ವಾರ್ಷಿಕೋತ್ಸವ ನಡೆಯಲಿದೆ ಎಂದು ಹೇಳಿದರು. ದೇವಾಲಯದ ಅಧ್ಯಕ್ಷ ರವಿಕುಮಾರ್ ಮಾತನಾಡಿ ನ.31ರಂದು ಸಂಜೆ ಪುಷ್ಪಾಲಂಕಾರ, ದೀಪಾರಾಧನೆ ನಂತರ ವಿಶೇಷ ಪೂಜೆ ನಡೆಯಲಿದ್ದು, ರಾತ್ರಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದರು. ನ.1 ರಂದು ಬೆಳಿಗ್ಗೆ ಕಳಶ ಪೂಜೆ,…

Read More

ಮಡಿಕೇರಿ ಅ.29 NEWS DESK : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಜಿಲ್ಲಾಡಳಿತ – ಜಿಲ್ಲಾ ಪಂಚಾಯತ್ -ಕೊಡಗು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ – ಕೊಡಗು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸ್ವಸ್ಥ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೈಕೆದಾರರ ದಿನವನ್ನು ಆಚರಿಸಲಾಯಿತು. ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿಶೇಷಚೇತನರು ತಾರತಮ್ಯವಿಲ್ಲದೇ ಬದುಕು ಕಟ್ಟಿಕೊಳ್ಳುವಂತಾಗಬೇಕು. ಅದಕ್ಕೆ ಅವಶ್ಯಕವಾಗಿ ದೊರೆಯುವ ಕಾನೂನಿನ ನೆರವಿನ ಬಗ್ಗೆ ವಿವರಿಸಿ ಕಾನೂನನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೆ.ಜಿ.ವಿಮಲಾ ಮಾತನಾಡಿ ಕಾರ್ಯಕ್ರಮದ ಆಶಯ ಮತ್ತು ಆರೈಕೆದಾರರ ಬಗ್ಗೆ ವಿಶ್ವ ಸಂಸ್ಥೆಯ ನಿಲುವನ್ನು ವ್ಯಕ್ತಪಡಿಸಿದರು. ಸೋಮವಾರಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುದೋಳ ಮಾತನಾಡಿ. ವಿಶೇಷಚೇತನರ ಪಾಲಕರ ಬವಣೆಗಳು ಮತ್ತು…

Read More

ನಾಪೋಕ್ಲು ಅ.30 NEWS DESK : ನಾಲ್ನಾಡ್ ಕಪ್ ಹಾಕಿ ಕ್ರೀಡಾಕೂಟ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. 12 ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಕ್ರೀಡಾಕೂಟಕ್ಕೆ ಅಪ್ಪಚೆಟ್ಟೋಳಂಡ ಕುಟುಂಬ ಸಹಾಯಧನ ನೀಡುವುದರ ಮೂಲಕ ಕ್ರೀಡೆಗೆ ಪುನಃ ಚೇತನ ನೀಡಿದೆ ಎಂದು ನಾಪೋಕ್ಲು ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ ಹೇಳಿದರು. ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ನಾಲ್‍ನಾಡು ಹಾಕಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಅಂತರ ಗ್ರಾಮ ಹಾಕಿ ಪಂದ್ಯಾವಳಿ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಯಲ್ಲಿ ತೊಡಗಿಸಿಕೊಂಡ ಹಲವು ಯುವಕರು ಉತ್ತಮ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಗ್ರಾಮ ಗ್ರಾಮದ ನಡುವೆ ಉತ್ತಮ ಸಂಬಂಧ ಇರಿಸಿಕೊಳ್ಳಬೇಕಾಗಿದೆ ಎಂದರು. ಗ್ರಾ.ಪಂ ಉಪಾಧ್ಯಕ್ಷ ಚೊಕೆರ ಬಾಭಿ ಭೀಮಯ್ಯ ಮಾತನಾಡಿ, ಕ್ರೀಡೆಯಲ್ಲಿ ಶಿಸ್ತು ಮುಖ್ಯ ಶಿಸ್ತಿನಿಂದ ಪಾಲ್ಗೊಂಡರೆ ವಿದ್ಯಾರ್ಥಿಗಳು ಯುವಜನರು ಯಶಸ್ಸು ಗಳಿಸಬಹುದು ಎಂದರು. ಗ್ರಾ.ಪಂ ಮಾಜಿ (ಪ್ರಧಾನ) ಅಧ್ಯಕ್ಷ ಮೂವೆರ ನಾಣಪ್ಪ ಮಾತನಾಡಿ, ಹಾಕಿ ಕ್ರೀಡೆಗೆ ಜಿಲ್ಲೆ ಮಹತ್ವದ…

Read More

ನಾಪೋಕ್ಲು ಅ.29 NEWS DESK : ಅಧಿಕ ಮಳೆಯಿಂದಾಗಿ ಕಾಫಿ, ಕಾಳು ಮೆಣಸು, ಅಡಿಕೆ ಫಸಲು ನಷ್ಟವಾಗಿದ್ದು, ಸಂಬಂಧಿಸಿದ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಕುಂಬಳದಾಳು ಗ್ರಾಮದ ಕೃಷಿಕ ನೆರವಂಡ ಜಯ ಮುತ್ತಪ್ಪ, ಒತ್ತಾಯಿಸಿದರು. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೊದ್ದೂರು-ಕುಂಬಳದಾಳು ಭಾಗದಲ್ಲಿ ಈ ವರ್ಷ ಅತಿ ಹೆಚ್ಚು ಮಳೆಯಾಗಿದೆ. ಇದುವರೆಗೆ 114 ಇಂಚು ಮಳೆಯಾಗಿದೆ. ಈ ಹಿಂದೆ ನೂರು ಇಂಚಿಗೂ ಅಧಿಕ ಮಳೆಯಾದ ಸಂದರ್ಭದಲ್ಲಿ ಸರ್ಕಾರ ಬೆಳೆಗಾರರಿಗೆ ಪರಿಹಾರ ನೀಡಿದ್ದು, ಈ ವರ್ಷ ಯಾವುದೇ ಪರಿಹಾರ ಇದುವರೆಗೆ ರೈತರಿಗೆ ಲಭಿಸಿಲ್ಲ ಎಂದರು. ಪ್ರತಿದಿನ ಮಳೆಯಾಗುತ್ತಿದ್ದು ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾಫಿ ಮಂಡಳಿ ಮೂಲಕ ಉದುರಿರುವ ಕಾಫಿ, ಕಾಳು ಮೆಣಸು ಕೃಷಿ ಬೆಳೆಗಳ ಸರ್ವೆ ನಡೆಸಲು ಮನವಿ ಸಲ್ಲಿಸಲಾಗಿದೆ. ಶಾಸಕರಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಲಾಗಿದೆ. ರೈತರಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕುಂಬಳಗಾಳು ಗ್ರಾಮದ ತೆಕ್ಕಡೆ ಸುಗು ಗಣಪತಿ ಮಾತನಾಡಿ, ಕಾಫಿಗೆ ಕೊಳೆರೋಗ ಕಂಡುಬಂದಿದ್ದು ವಾರ್ಷಿಕ…

Read More

ಸುಂಟಿಕೊಪ್ಪ,ಅ.29 NEWS DESK : ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ ಸುಂಟಿಕೊಪ್ಪ ಪೊಲೀಸರನ್ನು ಸನ್ಮಾನಿಸಿ ಠಾಣೆಗೆ 10 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಸುಂಟಿಕೊಪ್ಪದಲ್ಲಿ ಕಗ್ಗಂಟಾದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಪಾತ್ರರಾದ ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಪೊಲೀಸ್ ಠಾಣೆಗೆ 10 ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದರು. ಸಂಘದ ಪದಾಧಿಕಾರಿಗಳಾದ ಮುನಿರ್, ಅಬ್ದುಲ್ ಅಜೀಜ್, ಅವಲಕುಟ್ಟಿ, ಸುರೇಶ್, ಇನಾಸ್ ಡಿಸೋಜ, ಸಂದೀಪ್, ಅಸ್ಗರ್, ಕೃಷ್ಣಪ್ಪ, ರಿಜ್ವಾನ್, ರಕ್ಷಿತ್ (ರೀನು), ಪವನ್, ಲೋಕೇಶ್(ಲೀಕಿ) ಜೈನುದ್ದೀನ್ ಗೀತಾ ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತಿತರರು ಇದ್ದರು.

Read More

ಕುಶಾಲನಗರ ಅ.30 NEWS DESK : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ಹಾಗೂ ಬೆಂಗಳೂರು ಶೈಕ್ಷಣಿಕ ಜಿಲ್ಲೆ ಮತ್ತು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟ, ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವುಗಳ ಸಹಯೋಗದೊಂದಿಗೆ ಡಿಸೆಂಬರ್ 28 ಮತ್ತು 29ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಿಕಲ್ ನಟರಾಜ್ ಹೇಳಿದರು. ಕುಶಾಲನಗರದ ವೀರಭೂಮಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪರಿಷತ್ತು ಆರಂಭವಾಗಿ ಯಶಸ್ವಿಯಾಗಿ ನಾಲ್ಕು ವರ್ಷಗಳನ್ನು ದಾಟಿದ್ದು ಜಸ್ಟಿಸ್ ನಾಗಮೋಹನ್ ದಾಸ್ ಹಾಗೂ ಇಸ್ರೋದ ಮಾಜಿ ಅಧ್ಯಕ್ಷರು ಖ್ಯಾತ ವಿಜ್ಞಾನಿಗಳಾದ ಎ.ಎಸ್. ಕಿರಣ್ ಕುಮಾರ್ ಮಾರ್ಗದರ್ಶನದಲ್ಲಿ ಹಾಗೂ ಅನೇಕ ಚಿಂತಕರ ಸಲಹೆ ಮೇರೆಗೆ ರಾಜ್ಯಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಪರಿಷತ್ತು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ತನ್ನ ಶಾಖೆಗಳನ್ನು ಹೊಂದಿದ್ದು ಜನಪರವಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.…

Read More

ಮಡಿಕೇರಿ NEWS DESK ಅ.29 : ಮುಂದಿನ ವರ್ಷ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ 25ನೇ ವರ್ಷದ ಪ್ರತಿಷ್ಠಿತ ಮುದ್ದಂಡ ಕಪ್ ಹಾಕಿ ಹಬ್ಬಕ್ಕೆ ಮುದ್ದಂಡ ಕುಟುಂಬಸ್ಥರು ಪೂರ್ವಭಾವಿ ತಯಾರಿಯಲ್ಲಿ ತೊಡಗಿದ್ದಾರೆ. ಜನಪ್ರತಿನಿಧಿಗಳನ್ನು ಭೇಟಿಯಾದ ಕುಟುಂಬದ ಪ್ರಮುಖರು ಹಾಕಿ ಉತ್ಸವದ ಯಶಸ್ಸಿಗಾಗಿ ಸಹಕಾರ ಕೋರಿದರು. ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯ0ಡ ವೀಣಾ ಅಚ್ಚಯ್ಯ ಅವರುಗಳನ್ನು ಭೇಟಿಯಾದ ಮುದ್ದಂಡ ಕುಟುಂಬಸ್ಥರ ನಿಯೋಗ 2025 ರ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು. ಮುದ್ದಂಡ ಕುಟುಂಬದ ಅಧ್ಯಕ್ಷ ಮುದ್ದಂಡ ಡಾಲಿ ತಿಮ್ಮಯ್ಯ, ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಕಾರ್ಯದರ್ಶಿ…

Read More