ಲೇಖಕ: admin

ನಾಪೋಕ್ಲು ಡಿ.16 NEWS DESK : ನಾಪೋಕ್ಲು ಕೊಡವ ಸಮಾಜದಲ್ಲಿ ಪುತ್ತರಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಲಾಯಿತು. ಮೊದಲು ಕೊಡವ ಸಮಾಜದಲ್ಲಿ ನೆರೆಕಟ್ಟಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಸಮಾಜದ ಪ್ರಮುಖರು, ಹಿರಿಯರು ಹಾಗೂ ಪದಾಧಿಕಾರಿಗಳು ಬೊಟ್ಟೋಳಂಡ ರಾಜ ಬೋಜಪ್ಪ ಗದ್ದೆಗೆ ತೆರಳಿ ಶಸ್ತ್ರೋತ್ರವಾಗಿ ಭತ್ತದ ಕದಿರನ್ನು ತೆಗೆದು ಪುತ್ತರಿ ಕುತ್ತಿಯಲ್ಲಿ ಇರಿಸಿ ಸುಡುಮದ್ದುಗಳು ಹಾಗೂ ಪೊಲಿ ಪೊಲಿಯೇ ಬಾ ಉದ್ಘೋಷಗಳೊಂದಿಗೆ ಸಮಾಜಕ್ಕೆ ಹಿಂತಿರುಗಿದರು. ನಂತರ ಸಾಂಪ್ರದಾಯದಂತೆ ಆಚರಣೆ ಮಾಡಿ ಆಗಮಿಸಿದವರಿಗೆ ಕದಿರಲು ವಿತರಿಸಿದರು. ಈ ಸಂದರ್ಭ ಬೊಟ್ಟೋಳಂಡ ಗಣೇಶ, ಕನ್ನಂಬೀರ ಸುದೀಪ್ ತಿಮ್ಮಯ್ಯ, ಮಣವಟ್ಟಿರ ಡಿಕ್ಕ, ಕರ್ತಮಾಡ ವಿಜು, ಬೊಟ್ಟೋಳಂಡ ಚೇತನ್ ಸೇರಿದಂತೆ ಇತರರು ಇದ್ದರು. ವರದಿ : ದುಗ್ಗಳ ಸದಾನಂದ.

Read More

ಸುಂಟಿಕೊಪ್ಪ,ಡಿ.16 NEWS DESK : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶಾ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಎ.ಎಸ್.ಶ್ರೀಶಾ ಕಲಬುರ್ಗಿಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಯುವ ವಿಜ್ಞಾನಿಯಾಗಿ ಆಯ್ಕೆಯಾಗಿದ್ದು, ಜನವರಿಯಲ್ಲಿ ಮಧ್ಯ ಪ್ರದೇಶದ ಭೂಪಾಲ್‍ನಲ್ಲಿ ನಡೆಯುವ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾಳೆ.

Read More

ಸುಂಟಿಕೊಪ್ಪ ಡಿ.16 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ದುರ್ಗಾಲಕ್ಷ್ಮಿ ದೇವಿಯ ಪ್ರತಿಷ್ಠಾಪನಾ ಅಷ್ಠಬಂಧ ಬ್ರಹ್ಮಕಲಶೋತ್ಸವು ಡಿ.21 ರಿಂದ 25ರವರೆಗೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ. ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು 1992 ಮೇ 8 ರಂದು ಸ್ಥಾಪನೆಗೊಂಡ ನಂತರದ ದಿನಗಳಲ್ಲಿ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪಸ್ವಾಮಿ, ಶ್ರೀ ಕನ್ನಿಮೂಲ ಗಣಪತಿ, ಹಾಗೂ ನೈವೇದ್ಯ ಕೊಠಡಿ ಮತ್ತು ದೇವಸ್ಥಾನದ ಕಚೇರಿ ನಿರ್ಮಿಸಲಾಗಿತ್ತು. ಅದರಂತೆ ದುರ್ಗಾ ದೇವಿಯ ದೇವಸ್ಥಾನವನ್ನು ಶ್ರೀ ಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಶ್ರೀ ದುರ್ಗಾಲಕ್ಷ್ಮಿ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ಕಳೆದ 8 ತಿಂಗಳ ಹಿಂದೆ ಪುತ್ತೂರಿನ ಜಗನಿವಾಸ್ ರಾವ್ ಭೂಮಿ ಪೂಜೆ ನೇರವೇರಿಸಿದರು. ಪುತ್ತೂರಿನ ಶಿಲ್ಪಿಗಳಾದ ಕೃಷ್ಣಪ್ರಸಾದ್ ರವರು ಶಿಲ್ಪಿ ಕಾರ್ಯವನ್ನು ನಿರ್ವಹಿಸುವ ಮೂಲಕ ದೇವಸ್ಥಾನವು ಜೀರ್ಣೋದ್ಧಾರಕ್ಕೆ ಸನ್ನದ್ಧವಾಗಿದೆ. ಊರಿನ ಭಕ್ತಾಧಿಗಳು ಮತ್ತು ಸುತ್ತ ಮುತ್ತಲಿನ ದಾನಿಗಳ ಸಹಾಯದಿಂದ ಸರಿಸುಮಾರು 18 ರಿಂದ 20…

Read More

ನವದೆಹಲಿ NEWS DESK ಡಿ.15 : ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ (73) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಮೊದಲಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಜಾಕೀರ್ ಹುಸೇನ್  ಅವರು ತಬಲಾ ವಾದನದ ಮೂಲಕ ಕಲಾಭಿಮಾನಿಗಳ ಮನಸೂರೆಗೊಂಡಿದ್ದರು.

Read More

ಸುಂಟಿಕೊಪ್ಪ NEWS DESK ಡಿ15 : ಸುಂಟಿಕೊಪ್ಪದ ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ ಸಮಿತಿ ವತಿಯಿಂದ ಭಾನುವಾರ ರಾತ್ರಿ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ಹೋಬಳಿ ವ್ಯಾಪ್ತಿಯ ಕೆದಕಲ್, ಏಳನೇ ಹೊಸಕೋಟೆ, ಕೊಡಗರಹಳ್ಳಿ, ಅತ್ತೂರು, ಬಾಳೆಕಾಡು, ಶ್ರೀದೇವಿಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಭಕ್ತರು ಹರಕೆ ಸಲ್ಲಿಸಿದರು. ರಾತ್ರಿ ಕುಂದನ್ ನೃತ್ಯಾಲಯ ತಂಡದಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯ ಸಮಿತಿಯ ಪಟ್ಟೆಮನೆ ಉದಯಕುಮಾರ್, ರಮೇಶ್ ಪಿಳ್ಳೈಜಿ.ಪಿ.ಅನಿಲ್ ಕುಮಾರ್, ಯಂಕನ ಕೌಶಿಕ್, ಮುತ್ತಪ್ಪ ದೇವಾಲಯದ ಪೂಜಾರಿ ಶಿವರಾಮು, ಚಾಮುಂಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಮಂಜುನಾಥ್ ಉಡುಪ‌ ಸೇರಿದಂತೆ ಸಮಿತಿ ಸದಸ್ಯರು ಇದ್ದರು.

Read More

ಕುಶಾಲನಗರ NEWS DESK ಡಿ.15 : ಸ್ವಚ್ಛ ಶೌಚಾಲಯ ಸ್ವಚ್ಛ ಪರಿಸರ’ ಧ್ಯೇಯದಡಿ ಪ್ರತಿಯೊಬ್ಬರೂ ಶೌಚಾಲಯವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೂ ಆದ  ಕೊಡಗು ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕ ಟಿ.ಜಿ. ಪ್ರೇಮ್‍ಕುಮಾರ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ, ಕುಶಾಲನಗರ ತಾಲ್ಲೂಕು ಪಂಚಾಯಿತಿ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಸ್ವಚ್ಛ ಭಾರತ ಅಭಿಯಾನದಡಿ ಕೂಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಆಶ್ರಯದಲ್ಲಿ ಕೂಡಿಗೆ ಕ್ಲಸ್ಟರ್ ಮಟ್ಟದಲ್ಲಿ *ನಮ್ಮ ಶೌಚಾಲಯ: ನಮ್ಮ ಗೌರವ* ಎಂಬ ಧ್ಯೇಯದೊಂದಿಗೆ ಪ್ರಾಥಮಿಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಸಂದರ್ಭದಲ್ಲಿ ವಿಶ್ವ ಶೌಚಾಲಯ ದಿನ -2024 ರ ಪರಿಸರ…

Read More