ಮಡಿಕೇರಿ NEWS DESK ನ.18 : ಕೊಡಗು ಜಿಲ್ಲೆಯ ವಿವಿಧ ದೇವಾಯಗಳಲ್ಲಿ ಕಳ್ಳತನ ಮಾಡಿದ ಆರೋಪದಡಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನ ಶನಿವಾರಸಂತೆ ಪಟ್ಟಣದ ಪೇಟೆ ರಾಮ ಮಂದಿರ ದೇವಸ್ಥಾನ ಮತ್ತು ತ್ಯಾಗರಾಜ ಕಾಲೋನಿಯ ವಿಜಯ ವಿನಾಯಕ ದೇವಸ್ಥಾನಗಳಲ್ಲಿ ಹುಂಡಿಯ ಹಣವನ್ನು ಕಳ್ಳತನ ಮಾಡಿದ ಆರೋಪದಡಿ ಅಂತರ್ ಜಿಲ್ಲಾ ಆರೋಪಿ ಹಾಸನ ನಗರದ ತಣ್ಣಿರುಹಳ್ಳ-ವಿಜಯನಗರ ನಿವಾಸಿ ಮುಬಾರಕ್ ಪಾಷ (34) ಎಂಬಾತನನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆಯ ಶನಿವಾರವಾರಸಂತೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿವಿಧ ದೇವಸ್ಥಾನಗಳ ಹುಂಡಿಯ ಹಣವನ್ನು ಕಳವು ಮಾಡಿದ ಪ್ರಕರಣ ದಾಖಲಾಗಿತ್ತು. ಡಿವೈಎಸ್ಪಿ ಗಂಗಾಧರಪ್ಪ ಆರ್.ವಿ, ಶನಿವಾರಸಂತೆ ಪೊಲೀಸ್ ಠಾಣೆಯ ಅಧಿಕಾರಿಗಳಾದ ರಾಜೇಶ್.ಕೆ, ಹೆಚ್.ಸಿ.ಗೋವಿಂದರಾಜು, ಚಂದ್ರ.ಹೆಚ್.ವೈ ಹಾಗೂ ಠಾಣೆಯ ಅಪರಾಧ ಪತ್ತೆ ದಳದ ಸಿಬ್ಬಂದಿಗಳು, ತಾಂತ್ರಿಕ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ಆರೋಪಿ ಮುಬಾರಕ್ ಪಾಷನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಕೃತ್ಯಕ್ಕೆ ಬಳಸಿದ್ದ…
ಲೇಖಕ: admin
ಮಡಿಕೇರಿ NEWS DESK ನ.18 : ದಾಸಶ್ರೇಷ್ಠ, ಸಂತಕವಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಅಸಮಾನತೆ, ಕಂದಾಚಾರ ಹಾಗೂ ಮೌಢ್ಯವನ್ನು ಕೀರ್ತನೆಗಳ ಮೂಲಕ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಡಾ.ಮಂತರ್ ಗೌಡ ಅವರು ವಿವರಿಸಿದರು. ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಕನಕದಾಸರ ಕೀರ್ತನೆಗಳು ಮತ್ತು ಮಾರ್ಗದರ್ಶನವನ್ನು ಅಳವಡಿಸಿಕೊಳ್ಳು ವಂತಾಗಬೇಕು ಎಂದು ಡಾ.ಮಂತರ್ ಗೌಡ ಅವರು ಪ್ರತಿಪಾದಿಸಿದರು. ಕನಕದಾಸರು ಸಮಾಜದಲ್ಲಿರುವ ತಾರತಮ್ಯ ಹೋಗಲಾಡಿಸಲು ಪ್ರಯತ್ನಿಸಿದ್ದಾರೆ. ಎಲ್ಲರೂ ಸಮಾನವಾಗಿ ಬದುಕಬೇಕು ಎಂಬುದನ್ನು ಒತ್ತಿ ಹೇಳಿದ್ದಾರೆ ಎಂದು ಶಾಸಕರು ನುಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕನಕದಾಸರ ಪ್ರಸಿದ್ಧ ಕೀರ್ತನೆಯಾದ ಕುಲ-ಕುಲವೆಂದು ಹೊಡೆದಾಡದಿರಿ ನಿಮ್ಮ…
ಮಡಿಕೇರಿ NEWS DESK ನ.18 : 1965ರ ಇಂಡೋ-ಪಾಕಿಸ್ತಾನ ಯುದ್ದದಲ್ಲಿ ವೀರಮರಣನಪ್ಪಿದ ನಾಯಕ್ ಕೂಕಂಡ ಎನ್. ಪೊನ್ನಪ್ಪ ಅವರ ಹೆಸರನ್ನು ಸ್ಮರಣೆಗಾಗಿ ಪೊನ್ನಂಪೇಟೆಯ ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ಇಡಲಾಗಿದೆ. ನೂತನ ನಾಮಕರಣದ ರಸ್ತೆ ಉದ್ಘಾಟನೆ ಮಾಡಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ಅದೆಷ್ಟೋ ವೀರಯೋಧರು ದೇಶಕ್ಕಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಹುತಾತ್ಮರಾಗಿದ್ದಾರೆ. ಎಲ್ಲೆಡೆ ವೀರಯೋಧರಿಗೆ ಗೌರವ ಸಲ್ಲಿಸುವ ಕಾರ್ಯವಾಗಬೇಕೆಂದರು. ಕೂಕಂಡ ಪೊನ್ನಪ್ಪ ಅವರು ಯುದ್ದದಲ್ಲಿ ಶತ್ರುಪಡೆಯೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದರು. ಅವರ ದೇಶಪ್ರೇಮ ಶ್ಲಾಘನೀಯವೆಂದರು. ಮಾಜಿ ಸೈನಿಕರ ಸಂಘದ ಪೊನ್ನಂಪೇಟೆ ಅಧ್ಯಕ್ಷ ಐನಂಡ ಸುಬ್ರಮಣಿ ಮಂದಣ್ಣ ಮಾತನಾಡಿ ವೀರಯೋಧ ಕೂಕಂಡ ಪೊನ್ನಪ್ಪ ಸ್ಮಾರಕ ಭವನ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಿದರು. ಊರಿನ ಹಿರಿಯರು, ಸಮಾಜ ಸೇವಕರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮೂಕಳೆರ ಕುಶಾಲಪ್ಪ ಮಾತನಾಡಿ ಕೂಕಂಡ ಪೊನ್ನಪ್ಪ ಅವರ ಸಾಹಸ ಹಾಗೂ ಸೇನಾ ಸೇವೆಯ ಬಗ್ಗೆ ವಿವರಿಸಿದರು. ಹಳ್ಳಿಗಟ್ಟು ದೇವಾಲಯ ಸಮಿತಿ ಅಧ್ಯಕ್ಷ ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ ಮಾತನಾಡಿ…
ವಿರಾಜಪೇಟೆ NEWS DESK ನ.18 : ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು ಲಭಿಸಿದೆ. ಕರ್ನಾಟಕ ಚಲನಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ, ಧಾರವಾಡ ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್, ಚೇತನ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸಹಭಾಗಿತ್ವದೊಂದಿಗೆ ಶಾಲೆಯ ಪ್ರಗತಿಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ನ ಶ್ರೀ ಕೃಷ್ಣರಾಜ ಪರಿಷನ್ ಮಂದಿರದಲ್ಲಿ ಜರುಗಿದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಶಾಲೆಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಅವರು ಪ್ರಶಸ್ತಿಯನ್ನು ಪಡೆದುಕೊಂಡರು. ಗ್ರಾಮಸ್ಥರು, ಪೋಷಕರು, ಇಲಾಖೆ ಹಾಗೂ ದಾನಿಗಳ ಸಹಕಾರದಿಂದ ಶಾಲೆ ಅಭಿವೃದ್ಧಿ ಕಂಡಿದ್ದು, ಶಾಲೆಗೆ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಎಂದು ಕಮಲಮ್ಮ ಪ್ರತಿಕ್ರಿಯೆ ಹರ್ಷ ವ್ಯಕ್ತಪಡಿಸಿದರು.
ಮಡಿಕೇರಿ NEWS DESK ನ.18 : ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ರಾಲಿಯು ನ.19 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಆಗಮಿಸಲಿದೆ. ಈಗಾಗಲೇ ಬೆಳಗಾವಿಯಿಂದ ಹೊರಟು ಧಾರವಾಡ, ಹುಬ್ಬಳ್ಳಿ ಮೂಲಕ ನವೆಂಬರ್ 19 ರಂದು ಬೆಳಿಗ್ಗೆ 9:30 ಗಂಟೆಗೆ ಮಡಿಕೇರಿಗೆ ತಲುಪಲಿದೆ. ನಂತರ ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಮಾಜಿ ಸೈನಿಕ ಸಂಘದ ಅಧ್ಯಕ್ಷ ಪಿ.ಕೆ.ಕುಟ್ಟಪ್ಪ ಅವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
ಮಡಿಕೇರಿ NEWS DESK ನ.18 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರ ಚಿಂತನೆಗಳು ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆಯಾಗಿದೆ ಎಂದರು. ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಬೇಧ, ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿದರು. ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್ ಸಂತ ಕನಕದಾಸರೆಂದು ಶ್ಲಾಘಿಸಿದರು. ಕಾಲೇಜ್ ನ ಸ್ನಾತಕೋತ್ತರ ಅರ್ಥಶಾಸ್ತç ವಿಭಾಗದ ಸಂಚಾಲಕರಾದ ಡಾ.ಹೆಚ್.ಕೆ.ರೇಣುಶ್ರೀ, ಹಿಂದಿ ಉಪನ್ಯಾಸಕಿ ಖುರ್ಷಿದ ಭಾನು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ನ.18 NEWS DESK : ಕೊಡಗು ಬ್ಲಡ್ ಡೋನರ್ಸ್ನ 7ನೇ ವಾರ್ಷಿಕೋತ್ಸವದ ಪ್ರಯುಕ್ತ ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ ನಡೆಯಲಿದೆ ಎಂದು ಬ್ಲಡ್ ಡೋನರ್ಸ್ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ರೋಟರಿ, ನೇತ್ರ ಆಫ್ಟಿಕಲ್ಸ್, ಹೆಚ್.ಡಿ.ಎಫ್.ಸಿ ಬ್ಯಾಂಕ್ ಸಹಭಾಗಿತ್ವದಲ್ಲಿ ನಗರದ ರೋಟರಿ ಹಾಲ್ನಲ್ಲಿ ಬೆಳಿಗ್ಗೆ 9.30 ರಿಂದ 1.30ರ ವರೆಗೆ ಶಿಬಿರ ನಡೆಯಲಿದ್ದು, ಜಿಲ್ಲೆಯ ಜನತೆ ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಕಣ್ಣು ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡ ಅರ್ಹ ಪಲಾನುಭವಿಗಳಿಗೆ 199 ರೂ.ಗಳಿಗೆ ಕನ್ನಡಕ ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯದರ್ಶಿ ಮೈಕಲ್ ವೇಗಸ್ ಮಾತನಾಡಿ, ಅಂದು ಬೆಳಗ್ಗೆ 9.30 ಗಂಟೆಗೆ ನಡೆಯುವ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಡ್ ಡೋನರ್ಸ್ ಅಧ್ಯಕ್ಷ ಪಿ.ಪಿ.ಸುಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಹೆಚ್.ಟಿ.ಅನಿಲ್, ಮಡಿಕೇರಿ ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ, ಹೆಚ್.ಡಿ.ಎಫ್.ಸಿ…
ಮಡಿಕೇರಿ ನ.18 NEWS DESK : ಕ್ರೀಡೆಯಲ್ಲಿ ತೋರಿಸುವ ಸ್ಫೂರ್ತಿ ಜೀವನದಲ್ಲಿಯೂ ಹಾಸುಹೊಕ್ಕಾಗಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮಡಿಕೇರಿ ವಕೀಲರ ಸಂಘದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕರು, ಸಮಾಜಕ್ಕೆ ಒಳಿತುಂಟು ಮಾಡುವ ವಿಚಾರಗಳಿಗೆ ಸಂಬಂಧಿಸಿದಂತೆ ವಕೀಲ ವೃಂದ ಕಾಳಜಿಯುತ ಕತ೯ವ್ಯ ತೋರುವ ಮೂಲಕ ಸಮಾಜಕ್ಕೆ ಮಾಗ೯ದಶ೯ನ ನೀಡುವಂತಾಗಬೇಕೆಂದು ಆಶಿಸಿದರು. ಕ್ರೀಡಾಕೂಟಗಳು ಎಲ್ಲರನ್ನೂ ಒಗ್ಗೂಡಿಸುತ್ತದೆ, ಸ್ಫೂರ್ತಿಯ ಜತೇ ಉತ್ಸಾಹ ಕೂಡ ಎಲ್ಲರಲ್ಲಿಯೂ ಮೂಡುವಂತಾಗುತ್ತದೆ, ಇಂಥ ಕ್ರೀಡಾಕೂಟದ ಮೂಲಕ ವಕೀಲ ವೃಂದ ಒಗ್ಗಟ್ಟು ಪ್ರದಶಿ೯ಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ವಕೀಲರ ಸಂಘದ ಬೇಡಿಕೆಯಾಗಿರುವ ನ್ಯಾಯಾಲಯಕ್ಕೆ ಸೂಕ್ತ ತಡೆಗೋಡೆ ಮತ್ತು ನ್ಯಾಯಾಲಯದ ರಸ್ತೆ ದುರಸ್ಥಿಯನ್ನು ವಿಳಂಭರಹಿತವಾಗಿ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತನ್ನ ಮಾವ ಹೆಚ್.ಎನ್. ]ನಂಜೇಗೌಡ ಮತ್ತು ತಂದೆ ಎ.ಮಂಜು ಕೂಡ ವಕೀಲರಾಗಿದ್ದದ್ದನ್ನು ಸ್ಮರಿಸಿಕೊಂಡ ಶಾಸಕ ಮಂಥರ್ ಗೌಡ, ವಕೀಲ ವೖತ್ತಿ ಸಮಾಜದಲ್ಲಿ ಇಂದಿಗೂ ಗೌರವವನ್ನು ಉಳಿಸಿಕೊಂಡು ಸಮಾಜದ ಆರೋಗ್ಯ ಕಾಪಾಡುವಲ್ಲಿ…
ಮಡಿಕೇರಿ ನ.18 NEWS DESK : ಮಡಿಕೇರಿಯ ಹೊರವಲಯದಲ್ಲಿರುವ ಕ್ಯಾಪಿಟಲ್ ವಿಲೇಜ್ ನಲ್ಲಿ ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ 66ನೇ ಎರಡು ದಿನಗಳ ವಾಷಿ೯ಕ ಸಮ್ಮೇಳನ ನಡೆಯುತ್ತಿದ್ದು, ಕೃಷಿ ಯಂತ್ರೋಪಕರಣಗಳು, ಕಾಫಿಯ ಹೊಸ ಅವಿಷ್ಕಾರಗಳ ಬಗೆಗಿನ ಪ್ರದಶ೯ನ ಮಳಿಗೆಗಳು ಗಮನ ಸೆಳೆಯಿತು. ಈ ಸಂದಭ೯ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ದಕ್ಷಿಣ ಭಾರತ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮ್ಯಾಥ್ಯು ಅಬ್ರಾಹಂ ಕಾಮಿ೯ಕರನ್ನೇ ನಂಬಿರುವ ಕಾಫಿ ಉದ್ಯಮವು ಇಂದು ಕವಲುದಾರಿಯಲ್ಲಿದೆ. ಕಾಫಿ ಬೆಳೆಗೆ ಇನ್ನು 3 ವಷ೯ಗಳ ಕಾಲ ಅತ್ಯುತ್ತಮ ಬೆಲೆ ನಿರೀಕ್ಷಿಸಬಹುದಾಗಿದ್ದರೂ ಕಾಫಿ ತೋಟಗಳಲ್ಲಿ ಅಕಾಲಿಕ ಮಳೆ, ಗಾಳಿಯಂಥ ಹವಾಮಾನ ವೈಪರಿತ್ಯದಿಂದಾಗಿ ಕಾಫಿಯ ಉತ್ಪಾದನೆ ನಿರೀಕ್ಷೆಗೂ ಮೀರಿ ಕಡಮೆಯಾಗುತ್ತಿದೆ, ಅಂತೆಯೇ ಅಕಾಲಿಕ ಮಳೆ ಹಾಗೂ ಕಾಮಿ೯ಕರು ಸರಿಯಾದ ಸಮಯಕ್ಕೆ ದೊರಕದ ಹಿನ್ನಲೆಯಲ್ಲಿಯೂ ಕಾಫಿ ಬೆಳೆಯ ಗುಣಮಟ್ಟ ಕೂಡ ಕುಂಠಿತವಾಗಿದೆ, ಈ ಸವಾಲುಗಳನ್ನು ಎದುರಿಸುವುದೇ ಇಂದಿನ ತುತು೯ ಅಗತ್ಯವಾಗಿದೆ ಎಂದು ಹೇಳಿದರು. ಬ್ರೆಜಿಲ್, ಕೊಲಂಬಿಯಾ, ಮೆಕ್ಸಿಕೋದಂಥ ಜಗತ್ತಿನ ಪ್ರಮುಖ ಕಾಫಿ ಬೆಳೆಗಾರ ದೇಶಗಳಲ್ಲಿಯೂ ಈಗ ಕಾಫಿ…
ಮಡಿಕೇರಿ ನ.18 NEWS DESK : ಹರಿವು ಬುಕ್ಸ್ ಪ್ರಕಾಶನದ ವತಿಯಿಂದ ಬೆಂಗಳೂರಿನ ಶಾಲಿನಿ ಮೈದಾನದ ಪುಸ್ತಕ ಸಂತೆಯಲ್ಲಿ ಕೊಡಗಿನ ಖ್ಯಾತ ವೈದ್ಯ ಡಾ. ಕೆ.ಬಿ.ಸೂರ್ಯ ಕುಮಾರ್ ಬರೆದಿರುವ “ಮಂಗಳಿ” ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಕರ್ನಾಟಕದ ಪ್ರಥಮ ನ್ಯೂಕ್ಲಿಯರ್ ಮೆಡಿಸಿನ್ ತಜ್ಞೆ, ಬರಹಗಾರ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಡಾ.ಆರ್.ಕೆ.ಸರೋಜಾ ಪುಸ್ತಕವನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು ಸಾಮಾಜಿಕ ಜೀವನದಿಂದ ದೂರವಿರುವ ಮಂಗಳಮುಖಿಯರ ಬಗ್ಗೆ ಕನ್ನಡದಲ್ಲಿ ಕೆಲವೇ ಪುಸ್ತಕಗಳು ಬಂದಿರುವುದಾಗಿ ತಿಳಿಸಿದರು. ಡಾ.ಸೂರ್ಯಕುಮಾರ್ ಅವರು ಬರೆದ ಇತರ ಪುಸ್ತಕಗಳ ಬಗ್ಗೆ ಮೆಲುಕು ಹಾಕಿ ಅಪರಾಧ ಲೋಕದ ವಿವರಗಳನ್ನು ವೈದ್ಯರ ದೃಷ್ಟಿಯಿಂದ ಜನ ಮಾನಸಕ್ಕೆ ಮನದಟ್ಟಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಿವೃತ್ತ ಐಎಎಸ್ ಅಧಿಕಾರಿ ಡಾ.ನಾಗಾಂಬಿಕಾ ದೇವಿ ಅವರು ಡಾ.ಸೂರ್ಯ ಕುಮಾರ್ ರನ್ನು ಸನ್ಮಾನಿಸಿದರು.






