ಮಡಿಕೇರಿ NEWS DESK ಅ.28 : ಮಡಿಕೇರಿಯಲ್ಲಿ ವಕೀಲರಾಗಿರುವ ಕೊಟ್ಟಕೇರಿಯನ ಶ್ರೀಜಾ ದಯಾನಂದ ಅವರು ಕಾನೂನು ಪದವಿಯಲ್ಲಿ ಕರ್ನಾಟಕ ಸ್ಟೇಟ್ ಲಾ ಯೂನಿವರ್ಸಿಟಿಗೆ 2018-23 ನೇ ಸಾಲಿನ B.Com.LLB ಯಲ್ಲಿ 5ನೇ RANK ಪಡೆದಿದ್ದಾರೆ. ಇವರು ಮಡಿಕೇರಿಯ ಹಿರಿಯ ವಕೀಲ ಕೆ.ಡಿ.ದಯಾನಂದ ಹಾಗೂ ಬಿಎಸ್ಎನ್ಎಲ್ ಅಧಿಕಾರಿ ಲೀಲಾ ದಯಾನಂದ ಅವರ ಪುತ್ರಿ.
ಲೇಖಕ: admin
ಮಡಿಕೇರಿ ಅ.28 NEWS DESK : ಬದುಕಿನ ಕೊನೆಯ ಘಟ್ಟದಲ್ಲಿ ನೋವಿನ ಭಾರದೊಂದಿಗೆ ಆಶ್ರಮದಲ್ಲಿ ಆಶ್ರಯ ಪಡೆದಿರುವ ಸಂಧ್ಯಾಕಾಲದ ಬಂಧುಗಳಿಗಾಗಿ ಮಿಡಿಯುತ್ತಿರುವ ಮಡಿಕೇರಿಯ ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗ ಪ್ರತಿ ತಿಂಗಳ ಕೊನೆಯ ಭಾನುವಾರದಂದು ನಡೆಸಿಕೊಂಡು ಬರುತ್ತಿರುವ ಮಾದರಿ ಕಾರ್ಯಕ್ರಮವನ್ನು ಮುಂದುವರೆಸಿದೆ. ಅ.27 ರಂದು ವಿರಾಜಪೇಟೆಯ ಹೆಗ್ಗಳ ಸ್ನೇಹ ನಿಲಯ ಆಶ್ರಮದಲ್ಲಿ ಹಿರಿಯರೊಂದಿಗೆ ಬೆರೆತ ಬಳಗದ ಪ್ರಮುಖರು ಹಾಗೂ ಸದಸ್ಯರು ನೊಂದವರ ಮನಸ್ಸಿನಲ್ಲಿ ಉಲ್ಲಾಸ ತುಂಬುವ ಪ್ರಯತ್ನ ಮಾಡಿದರು. ರಸಮಂಜರಿ ಕಾರ್ಯಕ್ರಮದ ಮೂಲಕ ಮನೋರಂಜನೆ ನೀಡಿದ ಬಳಗದ ಗಾಯಕರು ಆಶ್ರಮವಾಸಿಗಳು ನೃತ್ಯ ಮಾಡಿ ಸಂಭ್ರಮಿಸುವ ಕ್ಷಣವನ್ನು ಸೃಷ್ಟಿಸಿದರು, ವಿವಿಧ ಭಕ್ಷ್ಯ ಭೋಜನವನ್ನೂ ನೀಡಿದರು. ಇದೇ ಸಂದರ್ಭ ಸ್ಥಳೀಯ ವಿದ್ಯಾರ್ಥಿನಿ ಬಿಂದು ಬೋಪಯ್ಯ ಅವರು ಆಶ್ರಮವಾಸಿ ಹಿರಿಯರೊಂದಿಗೆ ಜನ್ಮ ದಿನವನ್ನು ಆಚರಿಸಿ ಕೇಕ್ ಮತ್ತು ಸಿಹಿ ಹಂಚಿ ಮಾದರಿಯಾದರು. ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗ ಹಾಗೂ ಫೈವ್ ಸ್ಟಾರ್ ಸಿಂಗರ್ಸ್ನ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಮೊಹಮ್ಮದ್ ಅಲಿ,…
ಪುತ್ತೂರು NEWS DESK ಅ.28 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು ಎಸ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಅಂತಿಮ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಅIಖಿ ಗುಬ್ಬಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ಅಕ್ಟೋಬರ್ 30 ರಿಂದ ಚೆನ್ನೈನ ಎಸ್ಆರ್ಎಮ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಸತತ ಮೂರನೇ ಬಾರಿ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ವಿರಾಜಪೇಟೆ ಅ.28 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2024 ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ನ.2 ರಂದು ವಿರಾಜಪೇಟೆಯಲ್ಲಿ ಆಯೋಜಿಸಲಾಗಿದ್ದು, ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿವೃತ್ತ ಐ.ಪಿ.ಎಸ್.ಅಧಿಕಾರಿ ಯು.ನಿಸಾರ್ ಅಹಮದ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಸ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ನಡೆಯುವ ಸಮಾರಂಭವನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ನ ಸ್ಥಾಪಕಾಧ್ಯಕ್ಷ ಕುವೇಂಡ ವೈ.ಹಂಝತುಲ್ಲಾ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ., ಎಸ್.ಎಸ್.ಎಲ್.ಸಿ ಹಾಗೂ ಮದರಸಾ ವಿಭಾಗದ…
ಮೂರ್ನಾಡು ಅ.28 NEWS DESK : ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 16ನೇ ವರ್ಷದ ಓಣಂ ಆಚರಣೆಯು ಸಂಭ್ರಮದಿಂದ ನಡೆಯಿತು. ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ಓಣಂ ಆಚರಣೆಯ ಸಮಾರಂಭವನ್ನು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿ ಮಾತನಾಡಿ, ನಮ್ಮ ಆಚಾರ-ವಿಚಾರ, ಸಂಸ್ಕೃತಿಯನ್ನು ಉಳಿಸಿಬೆಳೆಸಬೇಕು. ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು. ಆಗಷ್ಟೆ ದೇಶ ದೇಶವಾಗಿ ಉಳಿಯಲು ಸಾಧ್ಯ ಎಂದರು. ಇಡೀ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನ ಸಂಘಟನೆಗಳಿಂದ ಆಗುತ್ತಿದೆ. ಸಮಾಜ ಒಳ್ಳೆಯದಾದರೆ ನಾಡು ಸುಭದ್ರವಾಗುತ್ತದೆ. ಆ ಮೂಲಕ ದೇಶದ ಏಕತೆ ಅಖಂಡತೆಗೆ ಕಾರಣವಾಗುತ್ತದೆ ಎಂದು ಹೇಳಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ನ್ಮಾತನಾಡಿ ಮಾತನಾಡಿ, ಹಿಂದೂ ಸಮಾಜದವರು ತಮ್ಮ ಸಂಸ್ಕೃತಿಗಳನ್ನು ಚಾಚೂತಪ್ಪದೆ ಪಾಲಿಸಿದಾಗ ಮಾತ್ರ ಹಿಂದೂ ಸಮಾಜಗಟ್ಟಿಗೊಳ್ಳುತ್ತದೆ. ತಮ್ಮ ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊಂಡಾಗ ದೇಶವುಸಹ ಅಭಿವೃದ್ಧಿ ಹೊಂದುತ್ತದೆ. ಸಮಾಜವನ್ನು ಕಟ್ಟುವುದರೊಂದಿಗೆ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಒಗ್ಗಟ್ಟನ್ನು ಪ್ರದರ್ಶಿಸಿ ಆರ್ಥಿಕವಾಗಿ ಸಬಲರಾಗುವಂತೆ ಪ್ರಯತ್ನ ಶೀಲರಾಗಬೇಕು ಎಂದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ…
ಮಡಿಕೇರಿ ಅ.28 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆಯು ಕಾಲೇಜಿನ ನ್ಯಾಕ್ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಸಂಘದ ಹಳೆಯ ಕಾರ್ಯಚಟುವಟಿಕೆಗಳನ್ನು ಪ್ರಸ್ತಾಪಿ, ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಅರಿವು, ಮೆಡಿಕಲ್ ಕ್ಯಾಂಪ್, ವೃತ್ತಿ ಮಾರ್ಗದರ್ಶಿ ಕಾರ್ಯಕ್ರಮ, ಗಾಂಜಾ ವ್ಯಸನ ಆರೋಗ್ಯಕ್ಕೆ ಮಾರಕ ಕಾರ್ಯಾಗಾರ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಹಾಗೂ ಇನ್ನು ಕೆಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಇ ಲರ್ನಿಂಗ್ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಉಪಯೋಗಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವರೂ ಸಹಮತ ವ್ಯಕ್ತಪಡಿಸಿ ಕಾರ್ಯರೂಪಕ್ಕೆ ತರುವಂತೆ ತೀರ್ಮಾನಿಸಲಾಯಿತು ಹಾಗು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಹೆಚ್ಚಿನ ಸದಸ್ಯರನ್ನು ಸಂಘಕ್ಕೆ ಸೇರ್ಪಡೆಗೊಳಿಸಿಕೊಳ್ಳುವಂತೆ ತೀರ್ಮಾನಿಸಲಾಯಿತು. ನೂತನ ಪದಾಧಿಕಾರಿಗಳನ್ನು ಆಯ್ಕೆ :: ಸಂಘದ ನೂತನ ನಿರ್ದೇಶಕರಾಗಿ ಬಿ.ಜಿ.ಹರ್ಷಿತ್, ಕರವಂಡ ಸೀಮಾ…
ನಾಪೋಕ್ಲು ಅ.28 NEWS DESK : ಹಲವು ವರ್ಷಗಳಿಂದ ಪರದಂಡ ಕುಟುಂಬಸ್ಥರಿಂದ ಕಾವೇರಿ ತೀರ್ಥೋದ್ಭವ ಕಳೆದು ಪವಿತ್ರ ತುಲಾ ಮಾಸದ ಹತ್ತನೇ ದಿನ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಆಚರಿಸುವ ಪತ್ತಾಲೋಧಿ ಉತ್ಸವ ಈ ಬಾರಿಯು ಶ್ರದ್ಧಾಭಕ್ತಿಯಿಂದ ನಡೆಯಿತು. ವಿವಿಧೆಡೆಯಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಸತ್ಯನಾರಾಯಣ ಪೂಜೆ ಮಹಾಪೂಜೆ, ತುಲಾಭಾರ ಸೇವೆ ಸಲ್ಲಿಸಿದರು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯ ಸೇರಿದಂತೆ ಪೇರೂರು, ನೆಲಜಿ ಗ್ರಾಮಗಳ ಇಗ್ಗುತ್ತಪ್ಪ ದೇವಾಲಯಗಳಲ್ಲೂ ಪತ್ತಲೋದಿ ಉತ್ಸವ ಸಂಭ್ರಮದಿಂದ ನಡೆಯಿತು. ದೇವತಕ್ಕರಾದ ಪರದಂಡ ಸುಬ್ರಮಣಿ ಕಾವೇರಪ್ಪ ವಿಶೇಷ ಪ್ರಾರ್ಥನೆ ಸಲ್ಲಿಸಿ ಪತ್ತಲೋಧಿ ದಿನ ಇಗ್ಗುತ್ತಪ್ಪನ ಆರಾಧನೆಗಾಗಿ ಆಯ್ಕೆ ಮಾಡಿದ ದಿನವಾಗಿದೆ. ನಾಡಿನ ಎಲ್ಲ ಸಮುದಾಯದ ಭಕ್ತವೃಂದಕ್ಕೆ ಕ್ಷೇಮಾಭಿವೃದ್ಧಿ ನೀಡಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಾಲಯದ ಭಕ್ತ ಜನ ಸಂಘದ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಚುನಾಯಿತ ಪ್ರತಿನಿಧಿಗಳು ಭಕ್ತಾದಿಗಳು ಹೆಚ್ಚಿನ ಸಂಖ್ಯೆಗಳು…
ವಿರಾಜಪೇಟೆ ಅ.28 NEWS DESK : ಶಿಕ್ಷಣವನ್ನು ಪ್ರತಿಯೊಬ್ಬರು ಯಾವುದೇ ಅಡೆತಡೆಯಿಲ್ಲದೆ ಪಡೆಯುವಂತಾಗಬೇಕು ಎಂದು ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರು ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅಭಿಪ್ರಾಯಪಟ್ಟರು. ವಿರಾಜಪೇಟೆ -ಕಲ್ತೋಡು ಕ್ಲಸ್ಟರ್ ನ ಮುಖ್ಯ ಶಿಕ್ಷಕರ ಸಭೆ ಹಾಗೂ ವಿವಿಧ ಶಾಲೆಗಳ ಮುನ್ನೂರು ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಟ್ರ್ಯಾಕ್ ಶೂಟ್ ವಿತರಿಸಿ ಮಾತನಾಡಿದರು. ನಮ್ಮ ರಾಜ್ಯದಲ್ಲಿಯೂ ಇತರ ರಾಜ್ಯಗಳಂತೆ ಶಾಲೆಗಳು ಅಭಿವೃದ್ಧಿ ಹೊಂದಬೇಕು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಎಂಬ ತಾರತಮ್ಯ ನಿವಾರಣೆ ಆಗಬೇಕು. ನಲಿ-ಕಲಿ ಯು ಶಾಲಾ ಮಕ್ಕಳಿಗೆ ಉತ್ತಮ ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ಮಕ್ಕಳು ಅದರ ಪ್ರಯೋಜನವನ್ನು ಪಡೆಯಬೇಕೆಂದರು. ಮಹಿಳಾ ಸಬಲೀಕರಣ ಹಾಗೂ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದ ಅವರು ಮಹಿಳೆಯರಿಗೆ ಪ್ರೋತ್ಸಾಹವನ್ನು ನೀಡಬೇಕೆಂದರು. ವಿರಾಜಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರವಿ ಮಾತನಾಡಿ, ಶಾಲಾ ಮಕ್ಕಳಿಗೆ ಟ್ರ್ಯಾಕ್ ಶೂಟ್ ವಿತರಣೆ ಕಾರ್ಯಕ್ರಮ ನಡೆಯುತ್ತಿರುವುದು ಗಮನಾರ್ಹವಾಗಿದೆ ಎಂದರು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ಸಜೇಶ್ ಅವರ ಸಾಮಾಜಿಕ…
ಮಡಿಕೇರಿ ಅ.28 NEWS DESK : ಚೆಟ್ಟಳ್ಳಿ ಹಿಂದೂ ಮಲೆಯಾಳಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಚೆಟ್ಟಳ್ಳಿಯ ಅಯ್ಯಪ್ಪ ದೇವಾಲಯದ ಸಭಾಂಗಣದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಮುಂದಿನ ನೂತನ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಪಿ.ಕೆ.ಲೀಲಾ, ಗೌರವ ಅಧ್ಯಕ್ಷರಾಗಿ ದಿವಾಕರನ್, ಉಪಾಧ್ಯಕ್ಷರಾಗಿ ಕೆ.ಕೆ.ಉಮೇಶ, ಕಾರ್ಯದರ್ಶಿಯಾಗಿ ಉಷಾ ವಿಜಯನ್, ಜಂಟಿ ಕಾರ್ಯದರ್ಶಿ ಶಿಭು, ಖಜಾಂಚಿಯಾಗಿ ಧನಲಕ್ಷ್ಮಿ ಆಯ್ಕೆಯಾದರು. ನಿರ್ದೇಶಕರಾಗಿ ಹರಿಶ್ಚಂದ್ರನ್ ಮನೋಜ್, ಸಿ.ಕೆ.ಶಂಭು, ಎಂ.ಕೆ. ರಾಜನ್, ಕೆ.ಕೆ.ಸುಬ್ರಮಣಿ, ವೈಷ್ಣವ್, ಮಹಿಳಾ ನಿರ್ದೇಶಕರಾಗಿ ಮಹಿಜಾ ಬಾಬು, ಸುಮಿ ವಾಸು, ಶೈನಿ ವಿಜಯನ್, ಕುಮಾರಿ, ಸುನಿತ ಮಂಜುನಾಥ್, ಸುಮಿ(ಕುಟ್ಟಪನ್) ಪ್ರದೀಪ್ ಆಯ್ಕೆಯಾದರು.
ನಾಪೋಕ್ಲು ಅ.28 NEWS DESK : ಬೇತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಟೈ, ಬೆಲ್ಟ್ ಹಾಗೂ ಐಡಿ ಕಾರ್ಡ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಗ್ರಾಮದ ಆರ್.ರಾಧಾ ಗ್ರಾಮದ ಅವರು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಶಿಕ್ಷಕ ವೃಂದದವರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.






