ಲೇಖಕ: admin

ಸೋಮವಾರಪೇಟೆ ನ.18 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪ್ರದೀಪ್ ಪುನರಾಯ್ಕೆಯಾದರು. ಸೋಮವಾರಪೇಟೆ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಸಮಿತಿ ನಿರ್ದೇಶಕರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಖಜಾಂಚಿಯಾಗಿ ಮಹೇಶ್, ರಾಜ್ಯ ಪರಿಷತ್ ಸದಸ್ಯರಾಗಿ ತನುಜ ಆಯ್ಕೆಯಾದರು.

Read More

ಸೋಮವಾರಪೇಟೆ ನ.18 NEWS DESK : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಕಾರ್ತಿಕ ಪೌರ್ಣಿಮೆ ಅಂಗವಾಗಿ ಹೊನ್ನಮ್ಮನ ಕೆರೆ ದೇವಾಲಯದಲ್ಲಿ ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ ಕಾರ್ಯಕ್ರಮ ನಡೆಯಿತು. ಸಮಿತಿ ಪದಾಧಿಕಾರಿ ಪ್ರದೀಪ್ ಕುಮಾರ್ ಮಾತನಾಡಿ, ಈ ಕಾರ್ಯಕ್ರಮದ ಪ್ರಯುಕ್ತ ದೇವಸ್ಥಾನ ಮತ್ತು ಮನೆಗಳಲ್ಲಿ ದೀಪವನ್ನು ಬೆಳಗಿಸಲಾಗುತ್ತದೆ. ದೇಶಾದ್ಯಂತ ದೇವಸ್ಥಾನಗಳಲ್ಲಿ ಸಾಲು ದೀಪಗಳನ್ನು ಬೆಳಗಿಸಲಾಯಿತು. ಹಿಂದೂ ರಾಷ್ಟ್ರದ ಸಂಕಲ್ಪವನ್ನು ಹಿಂದುಗಳು ಹೊಂದಬೇಕು ಎಂದು ಹೇಳಿದರು. ಸಮಿತಿಯ ಸದಸ್ಯರಾದ ಸತೀಶ್, ಪಿ.ಮಧು, ಮಂಜುನಾಥ ಆಚಾರ್ಯ, ವೀರಯ್ಯ ಹಿರೇಮಠ್, ಬಿ.ಹೆಚ್.ಹರೀಶ್, ಉದಯ ಇದ್ದರು.

Read More

ಮಡಿಕೇರಿ ನ.18 NEWS DESK : ಅಜಿಲ ಯಾನೆ ನಲಿಕೆ ಸಮಾಜ ಸೇವಾ ಸಮಿತಿಯ 9ನೇ ವಾರ್ಷಿಕೋತ್ಸವವು ಆನ್ಯಾಳದ ದ್ವಾಕ್ರ ಭವನದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಹಿರಿಯರಾದ ಚಂದಪ್ಪ ಕಾಂತುಬೈಲು ಉದ್ಘಾಟಿಸಿದರು. ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷ ದೇವಪ್ಪ ಕೊಯನಾಡು, ಉಪಾಧ್ಯಕ್ಷ ಚಂದಪ್ಪ ಆನ್ಯಾಳ, ಅತಿಥಿಗಳಾಗಿ ಕೆನರಾ ಬ್ಯಾಂಕ್ ಉದ್ಯೋಗಿ ಕುಮಾರ ಕಲ್ಲುಗುಂಡಿ, ಹಿರಿಯರಾದ ಬಾಬು ಚಟ್ಟೆಕಲ್ಲು ಹಾಜರಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ಮಕ್ಕಳಿಗೆ ಗಾಯನ ಮತ್ತು ಲಕ್ಕಿಗೇಮ್, ಮಹಿಳೆಯರಿಗೆ ಗಾಯನ ಮತ್ತು ಹಗ್ಗಜಗ್ಗಾಟ, ಪುರುಷರಿಗೆ ಲಕ್ಕಿಗೇಮ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಿತು. ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪಾಣರ, ಅಜಿಲ ಯಾನೆ ನಲಿಕೆ ಸೇವಾ ಸಮಿತಿಯ ಮಾಜಿ ಅಧ್ಯಕ್ಷರಾದ ಸುಬ್ರಾಯ ಕಲ್ಮಂಜ, ಪುತ್ತೂರು ತಾಲೂಕು ನಲಿಕೆ ಸೇವಾ ಸಮಿತಿಯ ಅಧ್ಯಕ್ಷರಾದ ರವಿ ಎಂಡೆಸಾಗು ಇವರು ಅತಿಥಿಗಳಾಗಿ ಭಾಗವಹಿಸಿದ್ದರು. ಸಾಧಕರಿಗೆ ಗೌರವಾರ್ಪಣೆ: ಚಾಪೆ ಹೆಣೆದು ಜೀವನ ಕಂಡುಕೊಂಡ ಹಿರಿಯರಾದ ದೇವಕಿ ಆನ್ಯಾಳ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಸಾಧನೆ ಮಾಡಿದ…

Read More

ಮಡಿಕೇರಿ ನ.18 NEWS DESK : ರಾಜ್ಯ ಒಲಿಂಪಿಕ್ ಸಂಸ್ಥೆ, ರಾಜ್ಯ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಂಡರ್ 14 ಬಾಲಕರ ತಂಡವು ಇದೇ ಮೊದಲ ಬಾರಿಗೆ ಫೈನಲ್ ಗೆ ಲಗ್ಗೆಯಿಟ್ಟು, ಹೊಸ ಇತಿಹಾಸ ಸೃಷ್ಟಿಸಿದೆ. ಬೆಂಗಳೂರಿನ ರಾಜ್ಯ ಫುಟ್ಬಾಲ್ ಸಂಸ್ಥೆಯ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಬಾಲಕರ ತಂಡವು ಮೊದಲ ಪಂದ್ಯವನ್ನು 3-1 ಗೋಲುಗಳ ಅಂತರದಿಂದ ಮೈಸೂರು ತಂಡವನ್ನು ಮಣಿಸಿತು. ದ್ವಿತೀಯ ಪಂದ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು 3-1 ಗೋಲುಗಳ ಅಂತರದಿಂದ ಸೋಲಿಸಿತು. ಮೂರನೇ ಪಂದ್ಯದಲ್ಲಿ ದಾವಣಗೆರೆ ಜಿಲ್ಲಾ ತಂಡವನ್ನು 4-1 ಗೋಲುಗಳ ಅಂತರದಿಂದ ಮಣಿಸಿ ಬಾಲಕರ ಎ ಗುಂಪಿನಲ್ಲಿ ಪ್ರಥಮ ಸ್ಥಾನಗಳಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಫೈನಲ್ ಪಂದ್ಯದಲ್ಲಿ ಕೊಡಗು ತಂಡವು ಹಾಸನ ತಂಡವನ್ನು ಎದುರಿಸಲಿದೆ.ಕೊಡಗು ಬಾಲಕರ ತಂಡದ ತರಬೇತುದಾರರಾಗಿ ಮಡಿಕೇರಿಯ…

Read More

ಮಡಿಕೇರಿ ನ.18 NEWS DESK : ಎಸ್.ಕೆ.ಎಸ್.ಎಸ್.ಎಫ್ ಸಿದ್ದಾಪುರ ವಲಯ ಮಟ್ಟದ ಇಸ್ಲಾಮಿಕ್ ಕಲೋತ್ಸವದಲ್ಲಿ ಸಿದ್ದಾಪುರ ಯೂನಿಟ್ ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದೆ.  ನೆಲ್ಲಿಹುದಿಕೇರಿಯಲ್ಲಿ ನಡೆದ ಸಿದ್ದಾಪುರ ವಲಯ ಮಟ್ಟದ ಇಸ್ಲಾಮಿಕ್ ಕಲೋತ್ಸವದಲ್ಲಿ ಸಿದ್ದಾಪುರ ಯೂನಿಟ್ 337 ಅಂಕಗಳೊಂದಿಗೆ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡರು. ದ್ವಿತೀಯ ಸ್ಥಾನವನ್ನು 319 ಅಂಕಗಳೊಂದಿಗೆ ನೆಲ್ಲಿಹುದಿಕೇರಿ ಯೂನಿಟ್ ಪಡೆದುಕೊಂಡಿತ್ತು. ಕೇವಲ ಏಳು ಪ್ರತಿಭೆಗಳು ಭಾಗವಹಿಸಿ ಕಂಡಕರೆ ಯೂನಿಟ್ 151 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆಯಿತು. ಒಟ್ಟು ಆರು ಯೂನಿಟ್ ಗಳು ಭಾಗವಹಿಸಿದ್ದ ಇಸ್ಲಾಮಿಕ್ ಕಲೋತ್ಸವದಲ್ಲಿ ಸಬ್ ಜೂನಿಯರ್,ಜನರಲ್ ಜೂನಿಯರ್, ಜನರಲ್ ಸೀನಿಯರ್ ,ಜನರಲ್ ಸೂಪರ್ ಸೀನಿಯರ್ ಹಾಗೂ ಜನರಲ್ ವಿಭಾಗಗಳಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ಒಟ್ಟು 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿದ್ದಾಪುರ ವಲಯ ಮಟ್ಟದ ಇಸ್ಲಾಮಿಕ್ ಕಲೋತ್ಸವದಲ್ಲಿ ಭಾಗವಹಿಸಿದ್ದರು. ಸಬ್ ಜೂನಿಯರ್ ವಿಭಾಗದಲ್ಲಿ ನೆಲ್ಲಿಹುದಿಕೇರಿ ಯೂನಿಟ್,ಜನರಲ್ ಜೂನಿಯರ್ ವಿಭಾಗದಲ್ಲಿ ಸಿದ್ದಾಪುರ, ಜನರಲ್ ಸೀನಿಯರ್ ವಿಭಾಗದಲ್ಲಿ ನೆಲ್ಲಿಹುದಿಕೇರಿ, ಜನರಲ್ ಸೂಪರ್ ಸೀನಿಯರ್ ವಿಭಾಗದಲ್ಲಿ ಸಿದ್ದಾಪುರ ಹಾಗೂ ಜನರಲ್ ಗ್ರೂಪ್…

Read More

ಮಡಿಕೇರಿ ನ.18 NEWS DESK : ಪೊನ್ನಂಪೇಟೆಯಲ್ಲಿ ನಡೆದ ಮಹಿಳೆಯರ ಸಬ್ ಜ್ಯೂನಿಯರ್ ರಾಜ್ಯ ಹಾಕಿ ತಂಡದ ತರಬೇತಿ ಶಿಬಿರದಲ್ಲಿ ಕೊಡಗು ವಿದ್ಯಾಲಯದ 10ನೇ ತರಗತಿ ವಿದ್ಯಾಥಿ೯ನಿ ಪರ್ಲಿನ್ ಪೊನ್ನಮ್ಮ ಭಾಗವಹಿಸಿ ಕರ್ನಾಟಕ ಹಾಕಿ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ನ.22 ರಿಂದ ಡಿ.2 ರವರೆಗೆ ಹೈದರಾಬಾದ್ ನಲ್ಲಿ ನಡೆಯಲಿರುವ 14ನೇ ಹಾಕಿ ತಂಡ ಸಬ್ ಜ್ಯೂನಿಯರ್ ಮಹಿಳೆಯರು ರಾಷ್ಟ್ರೀಯ ಚಾಂಪಿಯನ್ ಶಿಪ್ 2024 ರಲ್ಲಿ ತಂಡದ ನಾಯಕಿಯಾಗಿ ಪಲಿ೯ನ್ ಭಾಗವಹಿಸಲಿದ್ದಾರೆ. ಈಕೆ  ಮಡಿಕೇರಿ ವಕೀಲರಾದ ಅಚ್ಚಪಂಡ ಗಿರಿ ಹಾಗೂ ಪದ್ಮ ದಂಪತಿ ಪುತ್ರಿ.

Read More

ಮಡಿಕೇರಿ ನ.18 NEWS DESK : ನದಿ ತಟಗಳ ಸಂರಕ್ಷಣೆಯೊಂದಿಗೆ ಸ್ವಚ್ಛತೆಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಕರೆ ನೀಡಿದ್ದಾರೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಮಹಾ ಆರತಿ ಬಳಗ ಆಶಯದಲ್ಲಿ ಸ್ಥಳೀಯ ಮಹಿಳಾ ಭಜನಾ ಮಂಡಳಿ ಸಹಯೋಗದೊಂದಿಗೆ ನಡೆದ 166ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಸಕ್ತ ಶುದ್ಧ ನೀರಿಗಾಗಿ ಹಣ ನೀಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಪ್ರಕೃತಿದತ್ತ ಜಲಮೂಲಗಳನ್ನು ಸಂರಕ್ಷಿಸಿ ಕಾಪಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದರು. ಕಳೆದ ಹಲವು ವರ್ಷಗಳಿಂದ ನದಿ ಮೂಲಗಳ ಸಂರಕ್ಷಣೆಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೋರಾಟ ನಡೆಸುತ್ತಿರುವ ಬಳಗದ ಕಾರ್ಯಕ್ರಮಗಳ ಬಗ್ಗೆ ನಾಗೇಂದ್ರ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಅರ್ಚನೆ ಅಷ್ಟೋತ್ತರ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಸಿ ನದಿಗೆ ಸಾಮೂಹಿಕವಾಗಿ ಆರತಿ ಕಾರ್ಯಕ್ರಮ ನೆರವೇರಿಸಿದರು. ಕಾರ್ತಿಕ ಹುಣ್ಣಿಮೆ ಅಂಗವಾಗಿ ನದಿ…

Read More

ಮಡಿಕೇರಿ NEWS DESK ನ.17 : ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಸಾಗಾಟ ಸಾಗಾಟ ಮಾಡುತ್ತಿದ್ದ ಆರೋಪದಡಿ ಕೇರಳದ ಮೂವರು ಸೇರಿ ಐವರನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಿರುವಂಗಾಡು ಗ್ರಾಮದ ಸುಜೇಶ್ ಎಂ.ಕೆ (44), ವಿರಾಜಪೇಟೆಯ ಮರೂರು ಗ್ರಾಮದ ಜಬ್ಬರ್.ಯು.ವೈ (38), ವರ್ಷ, ಮೊಹಮ್ಮದ್ ಕುಂಞ (48) ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಿಣರಾಯಿಯ ಜಂಶೀರ್ (37) ಹಾಗೂ ತಲಚೇರಿ ಜಿಲ್ಲೆಯ ಎರನ್ನೋಳಿ ಗ್ರಾಮದ ಶಮ್ಯಾಸ್.ಸಿ.ವಿ (32) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ 84 ಎಂಡಿಎಂಎ, 7 ಗ್ರಾಂ ಗಾಂಜಾ, ಒಂದು ಕಾರು, ಡಿಜಿಟಲ್ ತೂಕದ ಯಂತ್ರ ಮತ್ತು ಮಾದಕ ವಸ್ತು ಸೇವನೆಗೆ ಬಳಸುವ ಉಪಕರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಜಿ ಗ್ರಾಮದ ಕಿರುಮಕ್ಕಿ-ಕಂಡಿಮಕ್ಕಿ ಜಂಕ್ಷನ್‌ನಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಮೋಹನ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್…

Read More

ಮಡಿಕೇರಿ NEWS DESK ನ.17 : ರಾಷ್ಟ್ರೀಕೃತ ಬ್ಯಾಂಕಿನ ಮಾದರಿಯ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಗ್ರಾಹಕ ಸ್ನೇಹಿ ಸೌಲಭ್ಯಗಳನ್ನು ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಶೀಘ್ರಗತಿಯಲ್ಲಿ ಅಭಿವೃದ್ಧಿಪಡಿಸಿಕೊಳ್ಳಬೇಕೆಂದು ಮೂಡಬಿದಿರೆಯ ಕೆಐಸಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ಯಾಮಲಾ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಸಹಕಾರ ನಿಯಮಿತ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ ಕೊಡುಗು ಜಿಲ್ಲೆ ಹಾಗೂ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಗುಡ್ಡೆ ಹೊಸೂರಿನಲ್ಲಿ ಸಮುದಾಯ ಭವನದಲ್ಲಿ ಜರುಗಿದ ಸಹಕಾರಿ ಉದ್ಯಮಗಳ ಪರಿವರ್ತನಾ ಸಮಾರಂಭದಲ್ಲಿ ಭಾಗವಹಿಸಿದ್ದರು.  2047 ರಲ್ಲಿ ಜಗತ್ತಿನ ಮೂರನೇ ಅತಿ ದೊಡ್ಡ  ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸಹಕಾರಿ ಕ್ಷೇತ್ರದ ಪಾಲು ಅತ್ಯಗತ್ಯ ಎಂದು ಅವರು ತಿಳಿಸಿದರು. ಸಮಾರಂಭ ಉದ್ಘಾಟಿಸಿ ಹಾಲು ಉತ್ಪಾದಕ  ಕುರಿತು ವಿವರ ನೀಡಿದ ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಮನು ಮುತ್ತಪ್ಪನವರು ಮಾತನಾಡಿ, ದೇಶದಲ್ಲಿ ಸುಮಾರು 8.5 ಲಕ್ಷ ಹಾಲು ಶೇಖರಣ ಕೇಂದ್ರಗಳು  31 ಕೋಟಿಗೊ…

Read More

ಮಡಿಕೇರಿ NEWS DESK ನ 17 :  14ನೇ ಹಾಕಿ ಇಂಡಿಯಾ ಸಬ್ ಜೂನಿಯರ್ ಮಹಿಳಾ ನ್ಯಾಷನಲ್ ಚಾಂಪಿಯನ್ ಶಿಪ್-2024 ನ.26ರಿಂದ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ನಡೆಯಲಿದ್ದು, ನ್ಯಾಷನಲ್ ಸಬ್ ಜೂನಿಯರ್ ಮಹಿಳಾ ಹಾಕಿ ತಂಡದ ಸೆಂಟರ್ ಫಾರ್ವರ್ಡ್ ಆಟಗಾರ್ತಿ ಆಗಿ ಮಡಿಕೇರಿಯ ಅಕ್ಷರ ತಿಮ್ಮಯ್ಯ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಸಾಯಿ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿಯಾಗಿರುವ ಅಕ್ಷರ ತಿಮ್ಮಯ್ಯ, ಮಡಿಕೇರಿಯ ಸರ್ಕಾರಿ ಪದವಿಪೂರ್ವ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿ. ಅಕ್ಷರ , ಮಡಿಕೇರಿ ನಗರ ಸಭೆ ಸದಸ್ಯೆ ಕುಟ್ಟನ ಶ್ವೇತ ಮತ್ತು ಪ್ರಶಾಂತ್ ಕೆ ಟಿ ದಂಪತಿ ಅವರ ಪುತ್ರಿಯಾಗಿದ್ದಾಳೆ.

Read More