ಕುಶಾಲನಗರ ಅ.28 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ ಕುರಿತು ಜಾಗೃತಿ ಅಭಿಯಾನ ನಡೆಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಛೇರಿ, ಮಡಿಕೇರಿ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ( National Green Corps) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ಶಾಲೆಯ ಇಕೋ ಕ್ಲಬ್ ಮತ್ತು ಎನ್.ಎಸ್.ಎಸ್, ಎಸ್.ಡಿ.ಎಂ.ಸಿ. ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ “ನಮ್ಮ ನಡೆ ಹಸಿರೆಡೆಗೆ”: ‘ಗೋ ಗ್ರೀನ್ ಅಭಿಯಾನ’ದಡಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ದೀಪಾವಳಿ ಕುರಿತು ಜನಜಾಗೃತಿ ಮೂಡಿಸಿದರು. ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲೆಯ ಮುಖ್ಯ ಶಿಕ್ಷಕ ಹಾಗೂ ರಾಷ್ಟ್ರೀಯ…
ಲೇಖಕ: admin
ಸೋಮವಾರಪೇಟೆ ಅ.28 NEWS DESK : ಎಸ್ವೈಎಸ್ ಸೋಮವಾರಪೇಟೆ ಸರ್ಕಲ್ ಮತ್ತು ಬೆಂಗಳೂರಿನ ವಿಷನ್ ಸ್ಪ್ರಿಂಗ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಎಸ್ವೈಎಸ್ ಸೋಮವಾರಪೇಟೆ ಸರ್ಕಲ್ ಅಧ್ಯಕ್ಷ ಶಾಫಿ ಸಅದಿ ಉದ್ಘಾಟಿಸಿದರು. ನಂತರ ಮಾತನಾಡಿ, ಮನಷ್ಯನ ದೇಹದ ಎಲ್ಲ ಅಂಗಗಳು ಮುಖ್ಯವಾಗಿದ್ದರೂ, ಕಣ್ಣು ಪ್ರಮುಖದ್ದಾಗಿದೆ. ಎಲ್ಲರೂ ನಮ್ಮ ಕಣ್ಣಿನ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕಿದೆ. ಕಾಲ ಕಾಲಕ್ಕೆ ವೈದ್ಯರಿಂದ ತಪಾಸಣೆ ಮಾಡಿಸಿ, ಅವರ ಸಲಹೆ ಸೂಚನೆಗಳನ್ನು ಪಾಲಿಸಬೇಕೆಂದರು. ಅದರಲ್ಲೂ ಕಲಿಯುವ ಮಕ್ಕಳು ಕಣ್ಣಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹಿರಿಯ ನಾಗರಿಕರು ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿಷನ್ ಸ್ಪ್ರಿಂಗ್ನ ಅವಿನಾಶ್, ಸುರಕ್ಷ, ಅಶ್ರಿತ, ಅಮಿತ್ ನೇತ್ರಪರೀಕ್ಷೆ ಮಾಡಿದರು. 130ಕ್ಕೂ ಹೆಚ್ಚಿನ ಜನರು ನೇತ್ರ ತಪಾಸಣೆ ಮಾಡಿಸಿಕೊಂಡರು. ಅವಶ್ಯಕತೆ ಇದ್ದವರಿಗೆ ಸ್ಥಳದಲ್ಲೆ ಕನ್ನಡಕ ವಿತರಿಸಲಾಯಿತು.
ಮಡಿಕೇರಿ NEWS DESK ಅ.27 : ಕವಿತೆಗಳಿಗೆ ಸ್ಪಂದಿಸುವ ಪ್ರತಿಯೊಬ್ಬರಲ್ಲೂ ಒಬ್ಬ ‘ಕವಿ ಇರುತ್ತಾನೆಂದು ನಾಡಿನ ಹೆಮ್ಮೆಯ ಸಾಹಿತಿ ಬಿ.ಆರ್. ಲಕ್ಷ್ಮಣರಾವ್ ಅಭಿಪ್ರಾಯಪಟ್ಟಿದ್ದಾರೆ. ಕೊಡಗಿನ ಹಿರಿಯ ಚುಟುಕು ಕವಿ ಹಾ.ತಿ.ಜಯಪ್ರಕಾಶ್ ಅವರು ರಚಿಸಿದ ಚುಟುಕುಗಳ ಸಂಕಲನ ‘ಹನಿ’ಯನ್ನು ಲೇಖಕರ ಕುಶಾಲನಗರ ಗುಮ್ಮನಕೊಲ್ಲಿಯಲ್ಲಿನ ವರವರದ ಮನೆಯಲ್ಲಿ ಅನಾವರಣಗೊಳಿಸಿ ಮಾತನಾಡಿದ ಅವರು, ಯಾವುದೇ ಒಬ್ಬ ವ್ಯಕ್ತಿ ಇನ್ನಿಲ್ಲವೆಂದಾದರೆ, ಕವಿಮನಸೊಂದು ಇಲ್ಲವಾಯಿತೆಂದೇ ಅರ್ಥ. ಯಾವುದೇ ಕಾವ್ಯ, ಕವನಗಳನ್ನು ಕೇಳಿ ಸಂತೋಷಿಸುವವರಲ್ಲಿ ಕವಿ ಮನಸು ಇದ್ದೇ ಇರುತ್ತದೆ. ಇಂತಹ ಕವಿ ಮನಸುಗಳು ಕವಿತೆ ರಚನೆಗೆಗಷ್ಟೆ ಮುಂದಾಗಿರುವುದಿಲ್ಲವೆಂದು ಅನಿಸಿಕೆ ವ್ಯಕ್ತಪಡಿಸಿದರು. ಹನಿಗವನವೆಂಬುದು ಹುರಿಗಾಳು ಇದ್ದಂತೆ!- ಚುಟುಕು ಇಲ್ಲವೆ ಹನಿಗವನವೆಂಬುದು ಹುರಿ ಗಾಳು ಇದ್ದಂತೆ. ಆಗೊಮ್ಮೆ ಈಗೊಮ್ಮೆ ಮೆಲ್ಲಲ್ಲಷ್ಟೆ ಇರುವ ಹುರಿಗಾಳನ್ನು ಊಟದಂತೆ ಮಾಡಲಾಗದು. ಇದೇ ತೆರದಲ್ಲಿ ಹನಿಗವನಗಳನ್ನು ರಚಿಸುವವರು ‘ಇಡಿಗವಿತೆ’ಗಳ ರಚನೆಗೆ ಮನಮಾಡಬೇಕು. ಬಿಂದು ಸಿಂಧುವೆನಿಸಿಕೊಂಡು ಸಮುದ್ರದ ವಿಸ್ತಾರಕ್ಕೆ ಸೇರುವಂತೆ ಹನಿಗವಿತೆಗಳೊಂದಿಗೆ ಇಡಿಗವಿತೆಗಳ ರಚನೆಯ ಮೂಲಕ ತಮ್ಮ ಸಾಹಿತ್ಯದ ಪರಿಧಿಯನ್ನು ಪ್ರತಿಯೊಬ್ಬರು ವಿಸ್ತರಿಸಿಕೊಳ್ಳಬೇಕೆಂದು ಸೂಕ್ಷ್ಮವಾಗಿ ನುಡಿದರು. ಧಾವಂತದ ಹಾದಿಯಲ್ಲಿ…
ಮಡಿಕೇರಿ NEWS DESK ಅ.27 : ಅರೆಭಾಷೆಯು ಒಂದು ಸಮುದಾಯ ಅಥವಾ ಸಮಾಜಕ್ಕೆ ಸೀಮಿತವಾಗದೆ, ಎಲ್ಲರ ಸ್ಥಳೀಯ ಭಾಷೆಯಾಗಿ ವಿಶಾಲವಾಗಿ ಬೆಳೆದಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕಾಸರಗೋಡು ಜಿಲ್ಲೆಯ ಬಂದಡ್ಕ ಗ್ರಾಮದವರ ಸಹಕಾರದಲ್ಲಿ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ಭಾನುವಾರ ನಡೆದ ‘ಅರೆಭಾಷೆ ಗಡಿನಾಡ ಉತ್ಸವ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಂದಡ್ಕದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವದಲ್ಲಿ ಇಲ್ಲಿನ ಸ್ಥಳೀಯರು ಹಬ್ಬದ ರೀತಿ ಸಂತಸದಿಂದ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗದಲ್ಲಿ ಅರೆಭಾಷೆ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಸುಳ್ಯ ತಾಲೂಕಿನ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ ಅವರು ಕಾರ್ಯಕ್ರಮದಲ್ಲಿ…
ಮಡಿಕೇರಿ NEWS DESK ಅ.27 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಮಡಿಕೇರಿಯಲ್ಲಿ ಪಥಸಂಚಲನ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಿಂದ ಗಾಂಧಿ ಮೈದಾನದವರೆಗೆ ಸಾಗಿದ ಪಥಸಂಚಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯರು, ಯುವಕರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು. ಮಾರ್ಗದುದ್ದಕ್ಕೂ ಭಾರತಾಂಬೆಯ ಭಾವಚಿತ್ರಕ್ಕೆ ಸ್ಥಳೀಯರು ಹೂಮಳೆಗರೆದರು.
ವಿರಾಜಪೇಟೆ NEWS DESK ಅ.27 : ವಿರಾಜಪೇಟೆ ಸಮೀಪದ ಪೆರುಂಬಾಡಿ ಶಂಸುಲ್ ಉಲಮಾ ಮಹಿಳಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟದಲ್ಲಿ ಪಾಲ್ಗೊಂಡ ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ. ಪೆರುಂಬಾಡಿ ಶಂಸುಲ್ ಉಲಮಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಾಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳಾದ ಆಸಿಫಾ ಎಂ.ಎಚ್, ಫಾತಿಮತ್ ರಹಿಯಾನಾ ಹಾಗೂ ಶಂಶೀರ ವಿದ್ಯಾರ್ಥಿನಿಯರು ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ,ಡಿಸ್ಕಸ್ ಎಸೆತದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧನೆ ಮಾಡುವ ಮೂಲಕ ಇದೀಗ ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿ ವಿಜಯಪುರ ಜಿಲ್ಲೆ ಮತ್ತು ತುಮಕೂರಿನಲ್ಲಿ ನಡೆಯುತ್ತಿರುವ ವಾಲಿಬಾಲ್, ಡಿಸ್ಕಸ್ ಎಸೆತ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.
ಮಡಿಕೇರಿ NEWS DESK ಅ.27 : ಭಾರತದ ಗಾಲ್ಫ್ ಕ್ಲಬ್ ಗಳಲ್ಲಿಯೇ ಪ್ರಥಮ ಎಂಬ ಹಿರಿಮೆಗೆ ಕಾರಣವಾಗಿರುವ ಮಡಿಕೇರಿ ಹೊರವಲಯದಲ್ಲಿರುವ ಮರ್ಕರ ಡೌನ್ಸ್ ಗಾಲ್ಫ್ ಕ್ಲಬ್ ನಲ್ಲಿ ಅಂದಾಜು 7 ಕೋಟಿ ರೂ. ವೆಚ್ಚದಲ್ಲಿ ನಿಮಿ೯ಸಲಾಗಿರುವ ಸಭಾಭವನ, ಒಳಾಂಗಣ ಗಾಲ್ಫ್ ಕ್ರೀಡಾ ಸೌಲಭ್ಯ, ನೂತನ ಬಿಲಿಯಡ್ಸ್೯ ಕ್ರೀಡಾಂಗಣವನ್ನು ದಾನಿಗಳೂ ಆದ, ಎಕ್ಸೆಲ್ ಸಂಸ್ಥೆಯ ಪಾಲುದಾರ ಮಹೀಂದ್ರನ್ ಬಾಲಚಂದ್ರನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಿಸಗ೯ದ ಮಡಿಲಲ್ಲಿರುವ ಮರ್ಕರ ಡೌನ್ಸ್ ಗಾಲ್ಫ್ ಕ್ಲಬ್ ನಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಳಾಂಗಣ ಗಾಲ್ಫ್ ಮೈದಾನ ನಿಮಾ೯ಣವಾಗಿರುವುದು ಕೊಡಗಿನಲ್ಲಿ ಗಾಲ್ಫ್ ಕ್ರೀಡಾ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಿದಂತಾಗಿದೆ, ನನ್ನ ಸಂಸ್ಥೆ ಟುವಡ್ಸ್ ಈಕ್ವಲ್ ಫೌಂಡೇಷನ್ ಮೂಲಕ ಈಗಾಗಲೇ ಮರ್ಕರ ಡೌನ್ಸ್ ಗಾಲ್ಫ್ ಕ್ಲಬ್ ನ ಸಿಬ್ಬಂದಿಗಳ ಮಕ್ಕಳಿಗೆ ಸೂಕ್ತ ಶಿಕ್ಷಣ ಸೌಲಭ್ಯ ಕಲ್ಪಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅಗತ್ಯ ನೆರವು ನೀಡುವುದಾಗಿ ಘೋಷಿಸಿದರು. ಮರ್ಕರ ಡೌನ್ಸ್ ಗಾಲ್ಪ್ ಕ್ಲಬ್ ಅಧ್ಯಕ್ಷ ಐ.ಕೆ.ಅನಿಲ್ ಮಾತನಾಡಿ, 1914 ರಲ್ಲಿ ಸ್ಥಾಪನೆಯಾದ ಮರ್ಕರ…
ಮಡಿಕೇರಿ NEWS DESK ಅ.26 : ಲೇಖಕರಿಗೆ ತಾಳ್ಮೆ ಮುಖ್ಯ, ಓದುಗರ ಮನಸ್ಸನ್ನು ಗ್ರಹಿಸುವ ಶಕ್ತಿ ಇರಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದ ಸಭಾಂಗಣದಲ್ಲಿ ಕೊಡವ ಮಕ್ಕಡ ಕೂಟದ 99ನೇ ಪುಸ್ತಕ, ಲೇಖಕಿ ತೆನ್ನೀರ ಟೀನಾ ಚಂಗಪ್ಪ ರಚಿಸಿರುವ “ಮಣ್ಣ್ರ ಋಣ” ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಯಾರೂ ಮರೆಯಬಾರದು. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ನಾವು ಅನುಸರಿಸುವ ಸಂಸ್ಕೃತಿ, ಆಚಾರ, ವಿಚಾರ, ಭಾಷೆ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಲೇಖಕರಿಗೆ ಸಾಮಾಜಿಕ ಬದ್ಧತೆ ಇರಬೇಕು. ಬರಹಗಳು ಸಮಾಜಕ್ಕೆ ಮಾರ್ಗದರ್ಶನ ನೀಡುವಂತಿರಬೇಕು ಎಂದರು. “ಮಣ್ಣ್ರ ಋಣ” ಕೃತಿಯು ಸಮಾಜಕ್ಕೆ ಬೇಕಾದ ಉತ್ತಮ ಸಂದೇಶವನ್ನು ಒಳಗೊಂಡಿದೆ. ತಾಯಿ ಮತ್ತು ತಾಯಿ ನಾಡು ಸ್ವರ್ಗಕ್ಕಿಂತ ಹೆಚ್ಚು, ನಾಡು ಬಿಟ್ಟು ಹೋದರೆ ಹೇಗೆಲ್ಲ ಕಷ್ಟಪಡಬೇಕು ಮತ್ತು ಅವಿಭಕ್ತ ಕುಟುಂಬ ಹೇಗೆ ವಿಭಕ್ತ ಕುಟುಂಬವಾಗುತ್ತದೆ ಎಂಬುದರ ಬಗ್ಗೆ ಲೇಖಕಿ ತೆನ್ನೀರ…
ವಿರಾಜಪೇಟೆ NEWS DESK ಅ.26 : ಕೊಡಗು ಜಿಲ್ಲಾ ಬಂಟರ ಸಂಘದ ಮಾಧ್ಯಮ ಸಲಹೆಗಾರರಾಗಿ ವಿರಾಜಪೇಟೆಯ ಡಾ ಹೇಮಂತ್ ಕುಮಾರ್ ಶೆಟ್ಟಿ ಎಂ.ಎನ್. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ವಿ ರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿರಾಜಪೇಟೆ NEWS DESK ಅ.26 : ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಅವರು ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ಶುಕ್ರವಾರ ನಡೆದ ಟ್ರಸ್ಟ್ ನ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದು, ಟ್ರಸ್ಟ್ ನ ಹಾಲಿ ಮ್ಯಾನೇಜಿಂಗ್ ಟ್ರಸ್ಟಿ ಬಿ.ಕೆ.ರವೀಂದ್ರ ರೈ ಅವರು ಟ್ರಸ್ಟ್ ನ ಅಧಿಕಾರ ಮತ್ತು ದಾಖಲೆಗಳನ್ನು ಟ್ರಸ್ಟಿ ಗಳ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಟ್ರಸ್ಟ್ ನ ನೂತನ ಕಾರ್ಯದರ್ಶಿಯಾಗಿ ಬಿ.ಕೆ.ಸತೀಶ್ ರೈ ಹಾಗೂ ಖಜಾಂಚಿಯಾಗಿ ಅಪ್ಪು ಬಾಲಕೃಷ್ಣ ರೈ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಜಿಲ್ಲಾ ಬಂಟರ ಭವನದ ಟ್ರಸ್ಟಿಗಳು ಉಪಸ್ಥಿತರಿದ್ದರು.






