ಸೋಮವಾರಪೇಟೆ NEWS DESK ನ.17 : ಅಪ್ಪು ಅಭಿಮಾನಿಗಳ ಬಳಗದಿಂದ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ ಪ್ರೇಕ್ಷಾ, ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಆಟೋ ಚಾಲಕ ಮುನೀರ್, 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಾದ ಧೃವ, ಲಿಸ್ಮಾ, ಮೋಹನ್ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪ್ಪು ಅಭಿಮಾನಿಗಳ ಬಳಗದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ್, ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ವಿನೋದ್ಕುಮಾರ್, ಸದಸ್ಯ ಶಿವದಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಜೇಸಿ ಮಾಜಿ ಅಧ್ಯಕ್ಷೆ ಎಂ.ಎ. ರುಬೀನಾ, ಮಾಜಿ ಸೈನಿಕ ಗಣೇಶ್ ಮತ್ತಿತರರು ಇದ್ದರು.
ಲೇಖಕ: admin
ಸೋಮವಾರಪೇಟೆ NEWS DESK ನ.17 : ಸೋಮವಾರಪೇಟೆ ಪಟ್ಟಣದ ಕಕ್ಕೆಹೊಳೆ ಜಂಕ್ಷನ್ನ ಬಿ.ಎಸ್. ಮಂಜುನಾಥ್(45) ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಹಾನಗಲ್ಲು ಬಾಣೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.
ಮಡಿಕೇರಿ NEWS DESK ನ.17 : ಮಡಿಕೇರಿ ಕಾಲೇಜು ಬಳಿಯ ಅಂಗನವಾಡಿ ಕೇಂದ್ರದಲ್ಲಿ ನಡೆದ “ಬಾಲಮೇಳ”ದಲ್ಲಿ ವಿವಿಧ ವೇಷಧಾರಿಗಳಾಗಿ ಪುಟಾಣಿಗಳು ಮಿಂಚಿದರು. ರಾಧೆ, ಕೃಷ್ಣ, ಕೊಡವತಿ, ಆಂಜನೇಯ, ಶಕುಂತಲೆ, ಜೇನುನೊಣ, ಸೈನಿಕ, ಹುಲಿ, ಒನಕೆ ಓಬವ್ವ, ಪ್ರಿನ್ಸೆಸ್, ಗಾಂಧೀಜಿ, ನೆಹರು ವೇಷತೊಟ್ಟು ಗಮನ ಸೆಳೆದರು. ಹಳೆಯ ವಿದ್ಯಾರ್ಥಿಗಳಾದ ಚರಿಷ್ಮಾ ಹಾಗೂ ಚಶ್ಮಿತಾ ಅವರಿಂದ ನಡೆದ ನೃತ್ಯ ಕಾರ್ಯಕ್ರಮ ಆಕರ್ಷಿಸಿತು. ಅಂಗನವಾಡಿ ಕಾರ್ಯಕರ್ತೆ ನೀತು ಹಾಗೂ ಸಹಾಯಕಿ ದಿವ್ಯ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದರು. ಅಂಗನವಾಡಿ ಕೇಂದ್ರವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜು ಈ ರೀತಿಯ ಕಾರ್ಯಕ್ರಮಗಳು ಮಕ್ಕಳ ಕೌಶಲ್ಯವನ್ನು ಹೆಚ್ಚಿಸುತ್ತದೆ, ಮಕ್ಕಳ ಮಾನಸಿಕ ಬೆಳವಣಿಗೆಗೆ ಸಹಕರಿಸುತ್ತದೆ, ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ ಎಂದು ತಿಳಿಸಿದರು. ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಪೊಲೀಸ್ ಇಲಾಖೆಯ ಚಕ್ರಶಾಲಿ, ಮಾನ್ಯತ್, ಅಲಂಕಾರಕ್ಕೆ ಸಹಕರಿಸಿದ ಭರತ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಮೀನಾ…
ಮಡಿಕೇರಿ NEWS DESK ನ.17 : ಮಕ್ಕಳ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಮಹದೇವಪೇಟೆಯ ಎಸ್ಎಸ್ ಆಸ್ಪತ್ರೆ ವತಿಯಿಂದ ಎಲ್ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಿತು. ಆಸ್ಪತ್ರೆಯ ಸಮೀಪದಲ್ಲಿರುವ ಕ್ರೆಸೆಂಟ್ ಸ್ಕೂಲ್ ಆವರಣದಲ್ಲಿ ನಡೆದ ಸ್ಪರ್ಧೆಯಲ್ಲಿ ಪಾಲ್ಗೊಂಡ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ತಮ್ಮ ಕಲ್ಪನೆಯ ಚಿತ್ರಕಲಾ ಪ್ರತಿಭೆಗೆ ಸಾಕ್ಷಿಯಾದರು. ಮೂರು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಬಹುಮಾನಕ್ಕಾಗಿ ಸ್ಪರ್ಧಿಗಳು ತೀವ್ರ ಪೈಪೋಟಿ ನೀಡಿದರು. ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಶಿಲ್ಪ ಸತೀಶ್, ಮಕ್ಕಳು ಆರೋಗ್ಯವಂತರಾಗಿ ಲವಲವಿಕೆಯಿಂದಿರಲು ಈ ರೀತಿಯ ಕ್ರಿಯಾಶೀಲತೆಯ ಸ್ಪರ್ಧೆಗಳ ಅಗತ್ಯವಿದೆ. ಇದೇ ಕಾರಣದಿಂದ ಆಸ್ಪತ್ರೆಯ ವತಿಯಿಂದ ಪ್ರತಿವರ್ಷ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಇದನ್ನು ಮುಂದಿನ ವರ್ಷಗಳಲ್ಲಿ ಮತ್ತಷ್ಟು ಅರ್ಥಪೂರ್ಣಗೊಳಿಸಲಾಗುವುದು ಎಂದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ.ದೇವದಾಸ್, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ಹಾಕಲು ಚಿತ್ರಕಲಾ ಸ್ಪರ್ಧೆ ಸೂಕ್ತವಾಗಿದ್ದು, ರಾಜ್ಯ ಮತ್ತು…
ಮಡಿಕೇರಿ NEWS DESK ನ.17 : ಪುಟ್ಟ ಮಕ್ಕಳಲ್ಲಿ ಭಾರತ ದೇಶದ ಭವಿಷ್ಯವನ್ನು ಕಂಡ ಮಹಾನ್ ನೇತಾರ, ಮುತ್ಸದಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಬಣ್ಣಿಸಿದ್ದಾರೆ. ಮಡಿಕೇರಿಯ ಹಿಂದೂಸ್ತಾನಿ ಶಾಲೆಯ ಅಂಗನವಾಡಿಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನೆಹರೂ ಅವರು ದೂರದೃಷ್ಟಿಯುಳ್ಳ ನಾಯಕರಾಗಿದ್ದು, ಸ್ವಾತಂತ್ರ್ಯ ಪಡೆದ ಸಮಯದಲ್ಲಿ ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದರು. ಮಕ್ಕಳ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಮಹತ್ವ ನೀಡಿ ಹಲವು ಯೋಜನೆಗಳನ್ನು ರೂಪಿಸಿದ ಪರಿಣಾಮ ದೇಶದ ಅಭಿವೃದ್ಧಿ ಸಾಧ್ಯವಾಯಿತು ಎಂದರು. ಮಕ್ಕಳ ಬಗ್ಗೆ ನೆಹರು ಅವರಿಗೆ ಇದ್ದ ಅತೀ ಕಾಳಜಿಯನ್ನು ಗಮನಿಸಿ ದೇಶ ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆ ಎಂದು ಆಚರಿಸುವ ಮೂಲಕ ಗೌರವಿಸುತ್ತಿದೆ. ಇಂತಹ ಗೌರವ ಜಗತ್ತಿನ ಯಾವ ನಾಯಕರಿಗೂ ಲಭಿಸಿಲ್ಲ. ನೆಹರು ಅವರ ಆದರ್ಶಗಳನ್ನು ಮಕ್ಕಳಿಗೆ ಮನದಟ್ಟು…
ಮಡಿಕೇರಿ NEWS DESK ನ.16 : ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂ. ವಿನಿಯೋಗ ಮಾಡಲಾಗುತ್ತದೆ ಎಂದು ಹೇಳಿದರು. ಸೋಮವಾರಪೇಟೆ, ಮಾದಾಪುರ, ಮೂರ್ನಾಡು, ಹುದಿಕೇರಿ, ಬಾಳೆಲೆ, ಸಿದ್ದಾಪುರ, ಕೂಡಿಗೆ, ಕೋಪಟ್ಟಿ, ಸಂಪಾಜೆ, ಕೊಡ್ಲಿಪೇಟೆ, ಕಾಟಕೇರಿ, ಕಳತ್ಮಾಡು, ಮರುಗೋಡು ಕೇಂದ್ರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಮುಂದಾಗಲಾಗಿದೆ. ಆ ನಿಟ್ಟಿಲ್ಲಿ ಈಗಾಗಲೇ ಹಲವು ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಟೆಂಡರ್ ಆಹ್ವಾನಿಸಲಾಗಿದೆ ಎಂದರು. ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದರು. ಸರ್ಕಾರ ವಿವಿಧ ಕಡೆಗಳಲ್ಲಿ 6…
ಮಡಿಕೇರಿ NEWS DESK ನ.16 : ಕೊಡಗು ಚೆಸ್ಕಾಂನಲ್ಲಿ ಖಾಲಿ ಇರುವ ಅಧಿಕಾರಿಗಳು ಹಾಗೂ ಲೈನ್ ಮೆನ್ಗಳ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನಲ್ಲಿ ಖಾಲಿ ಇರುವ ಲೈನ್ ಮೆನ್ಗಳ ಹುದ್ದೆ ಭರ್ತಿ ಮಾಡುವ ಸಂದರ್ಭ ರಾಜ್ಯದ ವಿವಿಧ ಭಾಗಗಳಿಂದ ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ. ಆ ಬಳಿಕ ಕೆಲವೇ ವರ್ಷಗಳಲ್ಲಿ ಅಧಿಕಾರಿಗಳ ಸಹಿತ ಲೈನ್ಮೆನ್ಗಳು ವರ್ಗಾವಣೆ ಪಡೆದು ಬೇರೆಡೆಗಳಿಗೆ ತೆರಳುತ್ತಾರೆ. ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಗ್ರಾಮೀಣ ಭಾಗದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕೂಡ ಕ್ರಮ ವಹಿಸಲಾಗುತ್ತದೆ. ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಮನೆಗಳಿಗೆ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಕಾಫಿ ಬೆಳೆಗಾರರಿಗೆ 10 ಹೆಚ್.ಪಿ. ಮೋಟಾರ್ ಪಂಪ್ ಸೆಟ್ಗಳಿಗೆ ಉಚಿತ ವಿದ್ಯುತ್ ನೀಡುವ ಸಂಬಂಧ ಮುಂದಿನ ದಿನಗಳಲ್ಲಿ…
ಕುಶಾಲನಗರ NEWS DESK ನ.16 : ಕುಶಾಲನಗರದ ಮಹಾ ಗಣಪತಿ ದೇವಾಲಯಕ್ಕೆ ದಾನಿಗಳು ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿಗಳನ್ನು ನೀಡಿದರು. ಉದ್ಯಮಿ ವೇಣು ಬಿಳಿಮಗ್ಗ ಹಾಗೂ ಕುಟುಂಬದ ಸದಸ್ಯರು ಗಣಪತಿಯ ಬೆಳ್ಳಿಯ ಅವತಾರ, ರಥ ಬೀದಿಯ ಉದ್ಯಮಿ ವಿ.ವಿ.ತಿಲಕ್ ಹಾಗೂ ಕುಟುಂಬ ಸದಸ್ಯರು ನಾಗದೇವರ ಬೆಳ್ಳಿ ಕವಚ ಮತ್ತು ಟಿಬೆಟಿಯನ್ ಮಹಿಳೆ ನಾಮಗೆಲ್ ಹಾಗೂ ಕುಟುಂಬ ಸದಸ್ಯರು ಬೆಳ್ಳಿಯ ಪೂಜಾ ಸಾಮಾಗ್ರಿಗಳನ್ನು ದೇವಸ್ಥಾನದ ಆಡಳಿತ ಆಡಳಿತ ಮಂಡಳಿ ಪ್ರಮುಖರಿಗೆ ಹಸ್ತಾಂತರ ಮಾಡಿದರು. ದೇವಾಲಯದ ಅರ್ಚಕ ರಾಘವೇಂದ್ರ ಭಟ್ ಹಾಗೂ ತಂಡದಿಂದ ವಿಶೇಷ ಪೂಜೆ ಮತ್ತು ಹೋಮ ನಡೆಯಿತು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎಂ.ಕೆ.ದಿನೇಶ್, ಪ್ರಧಾನ ಅರ್ಚಕ ಆರ್.ಕೆ.ನಾಗೇಂದ್ರ ಬಾಬು, ಸಹ ಕಾರ್ಯದರ್ಶಿ ಕೆ.ಎನ್.ದೇವರಾಜ್, ನಿರ್ದೇಶಕ ಚಂದ್ರು, ವ್ಯವಸ್ಥಾಪಕ ಶ್ರೀನಿವಾಸ್ ರಾವ್ ಹಾಗೂ ಕುರುಹಿನ ಶೆಟ್ಟಿ ಸಂಘದ ಪ್ರಮುಖರು, ಕುಟುಂಬ ಸದಸ್ಯರು ಇದ್ದರು.
ಮಡಿಕೇರಿ ನ.16 NEWS DESK : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ IQAC ಮತ್ತು ಗ್ರಂಥಾಲಯ ವಿಭಾಗದ ವತಿಯಿಂದ “ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಎಡೈಸ್ ಸಂಸ್ಥೆಯ ವ್ಯವಸ್ಥಾಪಕ ಎಸ್. ದೀರಜ್ ಡಿಜಿಟಲ್ ಗ್ರಂಥಾಲಯಗಳ ಮಹತ್ವವನ್ನು ಪ್ರಸ್ತಾಪಿಸಿ, ಜ್ಞಾನವನ್ನು ಸವಲಾಗಿ ಬಳಕೆ ಮಾಡಲು ಮತ್ತು ಪ್ರಸ್ತುತ ಡಿಜಿಟಲ್ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಮಹತ್ವದ ಬದಲಾವಣೆಯ ಹಾಗೂ ಬೆಳವಣಿಗೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ. ಕೆ.ಬಸವರಾಜು ಉದ್ಘಾಟಿಸಿದರು. ಅತಿಥಿ ಗ್ರಂಥಪಾಲಕರಾದ ಡಾ. ಇ.ರೂಪ ದಿನದ ಮಹತ್ವದ ಕುರಿತು ಮಾತನಾಡಿದರು. ಗ್ರಂಥಾಲಯ ಮೇಲ್ವಿಚಾರಕರೂ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಂ.ಬಿ. ದಿವ್ಯ ಹಾಜರಿದ್ದರು. ದ್ವಿತೀಯ ಬಿ.ಎ.ವಿದ್ಯಾರ್ಥಿನಿ ಸುಹೈರ ಸ್ವಾಗತಿಸಿದರೆ, ದ್ವಿತೀಯ ಬಿ.ಎ ವಿದ್ಯಾರ್ಥಿನಿ ವಂದನಾರ್ಪಣೆಯನ್ನು ನೆರವೇರಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ಕೀರ್ತನ ನಿರೂಪಿಸಿದರು.
ಮಡಿಕೇರಿ ನ.16 NEWS DESK : ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಿದವರು ತಾವು ವಿದ್ಯೆ ಕಲಿತ ಶಾಲೆಯ ಅಭ್ಯುದಯಕ್ಕಾಗಿ ತಮ್ಮ ಆದಾಯದ ಶೇ.1 ಭಾಗವನ್ನಾದರೂ ಮೀಸಲಿಡಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಕರೆ ನೀಡಿದ್ದಾರೆ. 2023-24ನೇ ಸಾಲಿನ ಪರೀಕ್ಷೆಯಲ್ಲಿ ಮಡಿಕೇರಿ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಪ್ರತಿಭಾನ್ವಿತರಾಗಿರುತ್ತಾರೆ. ಶೈಕ್ಷಣಿಕ ಸಾಧನೆಯ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಸರ್ಕಾರಿ ಶಾಲೆಯಲ್ಲಿ ಓದಿದವರು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ತಮಗೆ ವಿದ್ಯೆ ನೀಡಿದ ಶಾಲೆಯನ್ನು ಹಾಗೂ ಶಿಕ್ಷಕರನ್ನು ಮರೆಯದೆ ಗೌರವಿಸಬೇಕು. ತಾವು ಸಂಪಾದಿಸಿದ ಆದಾಯದ ಒಂದು ಭಾಗವನ್ನು ಶಾಲೆಗಾಗಿ ಮೀಸಲಿಟ್ಟರೆ ಶಾಲೆ ಅಭಿವೃದ್ಧಿಯಾಗುವುದಲ್ಲದೆ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ…






