ಲೇಖಕ: admin

ಮಡಿಕೇರಿ ನ.16 NEWS DESK : ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾನೂನು ಸಲಹೆಗಾರರಾಗಿ ಹಾಗೂ ಕೊಡಗು ಜಿಲ್ಲಾಧ್ಯಕ್ಷರಾಗಿ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆಯಾಗಿದ್ದಾರೆ. ನಗರದಲ್ಲಿ ವೇದಿಕೆಯ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯಾಧ್ಯಕ್ಷರಾಗಿ ರಜಿತ್ ಪಾಲ್ತಾಡು ದೇವಪ್ಪ, ಉಪಾಧ್ಯಕ್ಷರಾಗಿ ಕಿಶನ್ ತಿಮ್ಮಯ್ಯ ಹಾಗೂ ಇಬ್ರಾಹಿಂ ನೇಮಕಗೊಂಡರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ಎಂ.ಎ.ಶಹಬಾಜ್ ಅಲಿ, ಎಂ.ಟಿ.ಕಿಶನ್ ತಿಮ್ಮಯ್ಯ, ವಸಂತ್ ಸಿದ್ದಾಪುರ, ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಪಿ.ಎಸ್.ಭರತ್ ಕುಮಾರ್ ಹಾಗೂ ಜೀವನ್ ನಾರ್ಕೋಡು ಅವರನ್ನು ಆಯ್ಕೆ ಮಾಡಲಾಯಿತು.ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಕೀಲ ಬಿ.ಪಿ.ರಾಘವೇಂದ್ರ ಹಾಗೂ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಕೀಲ ಮಹಮ್ಮದ್ ರಾಫಿ ಎಮ್ಮೆಮಾಡು ಅವರನ್ನು ನೇಮಕ ಮಾಡಲಾಯಿತು.ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭ ವೇದಿಕೆಯ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮೇಷ ರಾಶಿ : ಈ ವಾರ ದೂರ ಪ್ರಯಾಣ ಮಾಡುವಿರಿ. ಹಿರಿಯರ ಆರೋಗ್ಯಕ್ಕೆ ತುಂಬಾ ಖರ್ಚಾಗಲಿದೆ. ಹಳೇ ಸಾಲ ವಸೂಲಿ ಆಗಿ ನಿಮ್ಮ ಹಣ ನಿಮ್ಮ ಕೈಗೆ ಬರಲಿದೆ. :: ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ. ವೃಷಭ ರಾಶಿ : ಈ ವಾರ ತುಂಬಾ ಶುಭಯೋಗ. ಹಳೇ ಸಾಲವನ್ನು ತೀರಿಸುವಿರಿ. ದೂರದ ನೆಂಟರ ಭೇಟಿಯಾಗುವಿರಿ. ಹಣ ತುಂಬಾ ಖರ್ಚಾಗಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ : ಈ ವಾರ ನಿಮ್ಮ ರಾಶಿಯಲ್ಲಿ ನೀಚ ಗ್ರಹ ಪ್ರವೇಶದಿಂದ ಅನಾರೋಗ್ಯ, ಸುತ್ತಾಟಗಳು, ಕಲಹ, ಹಣ ವ್ಯಯ. :: ಪರಿಹಾರ :: ಗುರುವಾರ ಶ್ರೀ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ. :: ಶುಭ ಸಂಖ್ಯೆ :: 3, 5, 6 :: ಶುಭ ಬಣ್ಣ…

Read More

ಮಡಿಕೇರಿ ನ.16 NEWS DESK : 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ, “ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ದಿನಾಚರಣೆ ಮತ್ತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನ.20 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಇಲಾಖೆ, ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮಡಿಕೇರಿ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ ಎಂದರು. ::: ಸಹಕಾರ ರತ್ನ…

Read More

ಮಡಿಕೇರಿ ನ.16 NEWS DESK : ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಜನೆ, ವೇದಘೋಷಗಳೊಂದಿಗೆ ಕಾವೇರಿ ತಾಯಿಗೆ ಆರತಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಹುಬ್ಬಳ್ಳಿಯ ಜೇಷ್ಠ ಪ್ರಚಾರಕ ಸು.ರಾಮಣ್ಣ, ಪವಿತ್ರ ದೀಪೋತ್ಸವದ ಸಂದರ್ಭದಲ್ಲಿ ಕಾವೇರಿ ಮಾತೆ ನಮ್ಮೆಲ್ಲರ ಅಂತರಂಗದಲ್ಲಿ ಭಾರತೀಯತೆಯನ್ನು ಬೆಳೆಗಿಸಲಿ. ಹಿಂದುತ್ವದ ಬೆಳಕು ಎಂದು ಆರದಿರಲಿ ಎಂದು ಹೇಳಿದರು. ಈ ಸಂದರ್ಭ ದಕ್ಷಿಣ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‍ವೆಲ್, ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ನ.16 : ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕರಾದ ಬೊಳ್ಳಮ್ಮ ಪಿ.ಕೆ ಅವರು ಮಂಡಿಸಿದ “Status of news consumption with the advent of mobile based news distribution a study in Kodagu District” (ಮೊಬೈಲ್ ಆಧಾರಿತ ಸುದ್ದಿ ವಿತರಣೆಯ ಆರಂಭದೊ0ದಿಗೆ ಸುದ್ದಿ ಬಳಕೆಯ ಸ್ಥಿತಿಗತಿ : ಕೊಡಗು ಜಿಲ್ಲೆಯಲ್ಲೊಂದು ಅಧ್ಯಯನ) ಎಂಬ ಪ್ರೌಢಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್ ಡಿ ನೀಡಿದೆ. ಬೊಳ್ಳಮ್ಮ ಅವರಿಗೆ ವಿದ್ಯುನ್ಮಾನ ಮಾಧ್ಯಮ ವಿಭಾಗದ ಸಹ ಪ್ರಾಧ್ಯಾಪಕರಾದ, ಡಾ.ಶ್ರೀಪತಿ ಟಿ. ಅವರು ಮಾರ್ಗದರ್ಶನ ಮಾಡಿದರು.

Read More

ಮಡಿಕೇರಿ ನ.16 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ರೂಢಿ ಸಂಪ್ರದಾಯದಂತೆ ದೇವಾಲಯ ಮುಂಭಾಗದ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಪುಷ್ಪಾಲಂಕೃತ ತೆಪ್ಪದ ಮೇಲೆ ಬೆಳ್ಳಿ ಮೂರ್ತಿಯನ್ನು ಕೂರಿಸಿ ತೆಪ್ಪೋತ್ಸವ ಮಾಡಲಾಯಿತು. ಇದಕ್ಕೂ ಮೊದಲು ದೇವಾಲಯದಲ್ಲಿ ವಿವಿಧ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು. ಪಲ್ಲಕ್ಕಿಯಲ್ಲಿ ಕೂರಿಸಿ ದೇವಾಲಯದ ಆವರಣದಲ್ಲೇ ಪಲ್ಲಕ್ಕಿ ಉತ್ಸವ ಮಾಡಲಾಯಿತು. ನಂತರ ಅದೇ ಪಲ್ಲಕ್ಕಿಯಲ್ಲಿ ಈಶ್ವರನ್ನು ಕರೆತಂದು ತೆಪ್ಪದಲ್ಲಿ ಕೂರಿಸಿ ಕಲ್ಯಾಣಿಯಲ್ಲಿ ಉತ್ಸವ ಮಾಡಲಾಯಿತು. ಬೃಹತ್ ಕಲ್ಯಾಣಿಯಲ್ಲಿ ಮೂರು ಸುತ್ತು ತೆಪ್ಪೋತ್ಸವ ಮಾಡಲಾಯಿತು. ವರ್ಷಕ್ಕೊಮ್ಮೆ ನಡೆಯುವ ಈ ತೆಪ್ಪೋತ್ಸವಕ್ಕೆ ನೂರಾರು ಭಕ್ತರು ಆಗಮಿಸಿ ತೆಪ್ಪೋತ್ಸವವನ್ನು ಕಣ್ತುಂಬಿಕೊಂಡರು.

Read More

ಮಡಿಕೇರಿ ನ.16 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಕ್ಕಳು ಕೃಷ್ಣ, ರಾಧೆ, ಆಂಜನೇಯ, ಪೆÇಲೀಸ್, ಸೈನಿಕ, ಭಾರತಾಂಬೆ, ಮಹಾತ್ಮ ಗಾಂಧೀಜಿ, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಟೊಮೊಟೊ, ಸ್ಟ್ರಾಬೆರಿ, ಸೇಬು, ವಿವೇಕಾನಂದ, ರೈತ, ಪೂಜಾರಿ, ಏಂಜಲ್, ಛದ್ಮ ವೇಷ ರೂಪಧಾರಿಗಳಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿ ಕೊಟ್ಟರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶುಭ ಮಾತನಾಡಿ ಮಕ್ಕಳ ವೇಷಭೂಷಣಗಳು ಸಂಸ್ಕೃತಿ, ಇತಿಹಾಸ, ಪುರಾಣ ನೆನಪಿಸುತ್ತದೆ. ಇದರಿಂದ ಮಕ್ಕಳ ಮನಸ್ಸಿನಲ್ಲಿ ಹಿರಿಯರ ತತ್ವ, ಆದರ್ಶಗಳು, ಉಳಿದು ಮುಂದಿನ ಪ್ರಜೆಗಳಾದ ಮಕ್ಕಳು ಉತ್ತಮ ಪ್ರಜೆಗಳಾಗಬಲ್ಲರು. ಎಲ್ಲ ಮಕ್ಕಳು ವಿಶ್ವಮಾನವರಾಗಿರುತ್ತಾರೆ, ಆದರೆ ಆ ಮಕ್ಕಳಿಗೆ ಧೈರ್ಯ ತುಂಬಿ ಸರಿಯಾದ ಮಾರ್ಗದರ್ಶನ ನೀಡಬೇಕಾಗುತ್ತದೆ ಎಂದರು. ಚಿಕ್ಕಂದಿನಿಂದ ತೇನ್‍ಸಿಂಗ್ ಕಂಡ ಕನಸನ್ನು ಜೀವನದಲ್ಲಿ ಸಾಧಿಸಿದ್ದನ್ನು ಉದಾರಣೆ ನೀಡಿದರು.…

Read More

ಮಡಿಕೇರಿ ನ.16 NEWS DESK : ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿರುವ ಕಲ್ಲುಮೊಟ್ಟೆ ಕ್ರಿಶ್ಚಿಯನ್‌ ಕಾಲೋನಿಯ ಅಂಗನವಾಡಿಯಲ್ಲಿ ಮಕ್ಕಳ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೆದಮುಳ್ಳೂರು ಗ್ರಾ.ಪಂ ಸದಸ್ಯ ಸಾಬಾ ಮುತ್ತಪ್ಪ, ಅಂಗನವಾಡಿ ಕಾರ್ಯಕರ್ತೆ ಕೆ.ಎಂ.ಉಷಾ ಕುಮಾರಿ, ಸಹಾಯಕಿ ರೊಶಿನಿ ವಿಲ್ಮಾ, ಮಕ್ಕಳು ಹಾಗೂ ಪೋಷಕರು ಹಾಜರಿದ್ದರು.

Read More

ಮಡಿಕೇರಿ ನ.16 NEWS DESK : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಪುಸ್ತಕ ಪ್ರದರ್ಶನ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಕೊಡಗು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರು, ನ್ಯಾಯಾವಾದಿ ಹಾಗೂ ಸಾಹಿತಿ ಕೆ.ಪಿ.ಬಾಲಸುಬ್ರಮಣ್ಯ ಕಂಜರ್ಪಣೆ ಚಾಲನೆ ನೀಡಿದರು. ನಗರದ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಅವರು ನವೆಂಬರ್, 20 ರವರೆಗೆ ಪುಸ್ತಕ ಪ್ರದರ್ಶನ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ನಡೆಯಲಿದ್ದು, ಆಸಕ್ತರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಕರೆ ನೀಡಿದರು. ‘ಪುಸ್ತಕಗಳ ಅಧ್ಯಯನದಿಂದ ಸಮಾಜದ ವಿಚಾರಗಳು ತಿಳಿಯಲಿದೆ. ಇದರಿಂದ ಪ್ರತಿಯೊಬ್ಬರ ಜ್ಞಾನ ಸಂಪತ್ತು ಹೆಚ್ಚಾಗಲಿದೆ. ಜೊತೆಗೆ ಭಾಷೆಯನ್ನು ಅಭಿವೃದ್ಧಿ ಪಡಿಸಲು ಸಹಕಾರಿಯಾಗಲಿದೆ. ಆದ್ದರಿಂದ ಪ್ರತಿಯೊಬ್ಬರು ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು. ಗ್ರಂಥಾಲಯದ ಸೌಲಭ್ಯಗಳನ್ನು ಸಹ ಪಡೆದುಕೊಳ್ಳುವಂತಾಗಬೇಕು ಸಲಹೆ ನೀಡಿದರು. ಒಳ್ಳೆಯ ಪುಸ್ತಕಗಳ ಅಧ್ಯಯನಕ್ಕೆ ಮುಂದಾಗಬೇಕು. ಪುಸ್ತಕ ಬರೆಯುವವರ ಸಂಖ್ಯೆ ಹೆಚ್ಚಾಗಿದ್ದರೂ ಸಹ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲಿ ಎಂದರು. ‘ಇಂದಿನ ಮೊಬೈಲ್ ಯುಗದಲ್ಲಿ ಹಲವು ವಿಚಾರಗಳನ್ನು…

Read More

ಮಡಿಕೇರಿ ನ.16 NEWS DESK : ವಿರಾಜಪೇಟೆ ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಮಡಿಕೇರಿಯಲ್ಲಿ ನೆಲೆಸಿದ್ದ ಜಿ.ವೆಂಕಟರಮಣ ಅವರ ಪತ್ನಿ ಜಿ.ವಿ.ಪೇಚಮ್ಮ (91)ಇಂದು ಮಡಿಕೇರಿಯ ಗೌಳಿಬೀದಿಯ ನಿವಾಸದಲ್ಲಿ ನಿಧನರಾದರು. ಇವರ ಅಂತ್ಯಕ್ರಿಯೆ ಇಂದು (ನ.16) ಸಂಜೆ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಮೃತರ ಪುತ್ರ ಕೊಡಗು ಚಾನಲ್ ಸಂಸ್ಥೆಯ ಮುಖ್ಯಸ್ಥರಾದ ಜಿ.ವಿ.ರವಿಕುಮಾರ್. ತಿಳಿಸಿದ್ದಾರೆ.  

Read More