ಮಡಿಕೇರಿ ಅ.25 NEWS DESK : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಚೆನ್ನೈ ನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ನಡೆದ “44ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2024ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 23 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವಿಜೇತರಾಗಿದ್ದು, 14 ಚಾಂಪಿಯನ್ ಟ್ರೋಫಿ, 8 ಚಿನ್ನದ ಪದಕ ಮತ್ತು 1 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬ್ರೈನೋಬ್ರೈನ್ ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಸಿದ್ದರು. ಸ್ಪರ್ಧೆಯಲ್ಲಿ ಒಟ್ಟು 8200 ಮಕ್ಕಳು ಭಾಗವಹಿಸಿದ್ದು, ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ ವಿದ್ಯಾರ್ಥಿಗಳು ಸಾಧನೆ ಮೆರೆದರು. ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಸಾಧನೆಯ ಹೆಗ್ಗಳಿಕೆ ನಮ್ಮ ಕೇಂದ್ರದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಲ್ಲಬೇಕು. ಈ ಅದ್ಭುತ ಯಶಸ್ಸಿಗೆ ಕಾರಣಕರ್ತರಾದ ಮಕ್ಕಳಿಗೆ ಹಾಗೂ ಮುತುವರ್ಜಿ ವಹಿಸಿದ ಪೋಷಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತರಬೇತುದಾರರಾದ ಮಾಪಂಗಡ…
ಲೇಖಕ: admin
ವಿರಾಜಪೇಟೆ ಅ.25 NEWS DESK : ಗ್ರಂಥಾಲಯಗಳ ಡಿಜಿಟಲೀಕರಣದಿಂದ ಜ್ಞಾನದ ಪ್ರಸಾರವಾಗಿ ವಿಸ್ತರಣೆಯಾಗುತ್ತ ಹೋಗುತ್ತದೆ ಎಂದು ಬೆಂಗಳೂರಿನ ಈಸಿಲಿಬ್ ಸಾಫ್ಟ್ ವೇರ್ ಹಾಗೂ ಫೈನ್ ವೆನ್ ಸಿಸ್ಟಮ್ ಟೆಕ್ನಾಲಜಿಯ ಸಿಇಓ ವಾಸು ಎ.ದೇಶಪಾಂಡೆ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಆಯೋಜಿಸಲಾಗಿದ್ದ ಈಸಿಲಿಬ್ ಸಾಫ್ಟ್ ವೇರ್ ಕುರಿತ ಗ್ರಂಥಪಾಲಕರ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ಲಾವುಡ್ ವರ್ಷನ್ ನ ಪರಿಣಾಮಕಾರಿ ಬಳಕೆ ಪ್ರಮುಖವಾಗಿದ್ದು, ಇದು ಆಧುನಿಕ ತಂತ್ರಾಂಶವನ್ನು ಪರಿಚಯಿಸುತ್ತದೆ. ಓದುಗರಿಗೆ ಇದು ಉಪಯುಕ್ತವಾಗಿದ್ದು, ತನ್ನತ್ತ ಸೆಳೆಯುತಿದೆ ಎಂದರು. ಮಾತ್ರವಲ್ಲದೆ ಡಿಜಿಟಲೀಕರಣದ ಬಳಕೆ ಹೆಚ್ಚಿದಂತೆ ಅಧ್ಯಯನ ವ್ಯಾಪ್ತಿ ವಿಸ್ತಾರವಾಗುತ್ತಿದ್ದು ಸಿಬ್ಬಂದಿಗಳಿಗೂ ಸರಳ ವಿಧಾನವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು, ಪುಸ್ತಕವನ್ನು ಓದುವುದರಿಂದ ಜ್ಞಾನದ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ. ಅದರಲ್ಲೂ ವಿದ್ಯಾರ್ಥಿಗಳು…
ಮಡಿಕೇರಿ ಅ.25 NEWS DESK : ವಿದ್ಯಾರ್ಥಿಗಳು ಯಾವುದೇ ಕಾರ್ಯವನ್ನು ದೃಢ ವಿಶ್ವಾಸದಿಂದ ಮಾಡಬೇಕು ಮತ್ತು ಕಂಡ ಕನಸನ್ನು ನನಸು ಮಾಡಿಕೊಳ್ಳಲು ಶ್ರಮವಹಿಸಬೇಕು. ಆಗ ಮಾತ್ರ ಜೀವನದಲ್ಲಿ ಗೆಲುವು ಸಾಧಿಸಲು ಸಾಧ್ಯ ಎಂದು ಕರ್ನಲ್ ಕೆ.ಸಿ.ಸುಬ್ಬಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ನಡೆದ ರೀಬಿಲ್ಡ್ ಕೊಡಗು ಸಂಸ್ಥೆ (ಟೈಮ್ ಟು ಗಿವ್ ಬ್ಯಾಕ್ and ಜಾಯ್ ಆಫ್ ಗಿವಿಂಗ್)ಯ 6ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸತತ ಪರಿಶ್ರಮದ ಮೂಲಕ ಶೈಕ್ಷಣಿಕ ಸಾಧನೆ ಮಾಡಬೇಕು. ಪ್ರತಿಯೊಬ್ಬರು ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು, ಆ ನಿಟ್ಟಿನಲ್ಲಿ ತಮ್ಮ ಸಂಪಾದನೆಯಲ್ಲಿ ಶೇ.10ರಷ್ಟು ಹಣವನ್ನು ಸಮಾಜ ಸೇವೆಗಾಗಿ ಮೀಸಲಿಡಬೇಕು. ಇದು ಸಮಾಜದ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು. ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ರೀಬಿಲ್ಡ್ ಕೊಡಗು ಸಂಸ್ಥೆ ಜನರ ಸಮಸ್ಯೆಗಳನ್ನು ಅರಿತು ಅವರ ಅವಶ್ಯಕತೆಗಳಿಗೆ ಸ್ಪಂದಿಸಿರುವುದು ಶ್ಲಾಘನೀಯ. ಅನೇಕ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ.ಎ.ಕುಶಾಲಪ್ಪ ಅವರು ಕೊಡಗಿನ ಜನತೆಗೆ ಏಕಾಂಗಿಯಾಗಿ ಪರಿಹಾರವನ್ನು ಒದಗಿಸಿದ್ದಾರೆ.…
ಮಡಿಕೇರಿ ಅ.25 NEWS DESK : ಪ್ರವಾಸೋದ್ಯಮಕ್ಕೆ ಪೂರಕವಾಗಿ, ಪ್ರಮುಖ ಪ್ರವಾಸಿತಾಣಗಳನ್ನು ಕೇಂದ್ರವಾಗಿರಿಸಿಕೊಂಡು ರಚಿಸಲಾದ ಚಿತ್ರ ಕಲಾಕೃತಿಗಳ ಪ್ರದರ್ಶನವನ್ನು ಸಧ್ಯದಲ್ಲಿ ನಗರದಲ್ಲಿ ಆಯೋಜಿಸುವುದಾಗಿ ಕಲಾವಿದ ಸಂದೀಪ್ ಕುಮಾರ್ ಆರ್. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಗಳ ಪ್ರಮುಖ ಪ್ರವಾಸಿ ತಾಣಗಳನ್ನು ತಾನು ಕುಂಚದಿಂದ ಸೆರೆಹಿಡಿದಿದ್ದೇನೆ. ಇಂತಹ 237 ಕಲಾಕೃತಿಗಳ ಪ್ರದರ್ಶನ ನನ್ನ ಉದ್ದೇಶವೆಂದರು. ಚಿತ್ರಕಲಾ ಪ್ರದರ್ಶನಕ್ಕೆ ರಾಜಾಸೀಟಿನಲ್ಲಿ ಅವಕಾಶ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ವಿನಂತಿಸಿಕೊಂಡಿದ್ದೆನಾದರು, ಸೂಕ್ತ ಸ್ಪಂದನ ದೊರಕಿಲ್ಲ. ಹೀಗಿದ್ದೂ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ನನ್ನ ಕಲಾ ಸಾಧನೆ ಮತ್ತು ತಾನು ರಚಿಸಿರುವ ಕಲಾಕೃತಿಗಳ ಪ್ರದರ್ಶನಕ್ಕೆ ಬೆಂಬಲವನ್ನು ನೀಡಿದ್ದಾರೆ. ಈ ಹಿನ್ನೆಲೆ ಅವಕಾಶ ದೊರೆತಲ್ಲಿ ಶನಿವಾರದಿಂದಲೆ ರಾಜಾಸೀಟಿನಲ್ಲಿ ಚಿತ್ರಕಲಾ ಪ್ರದರ್ಶನ ಆಯೋಜಿಸುವುದಾಗಿ ಹೇಳಿದರು. ರಾಜಾಸೀಟಿನಲ್ಲಿ ಅವಕಾಶ ದೊರಕದಿದ್ದಲ್ಲಿ ಚೈನ್ ಗೇಟ್ ಬಳಿ ಈ ಹಿಂದೆ ತಾನು ನಡೆಸುತ್ತಿದ್ದ ಆರ್ಟ್ ಗ್ಯಾಲರಿ ಸ್ಥಳದಲ್ಲಿ ಚಿತ್ರಕಲಾ ಪ್ರದರ್ಶನ ನಡೆಸಬೇಕೆನ್ನುವ ಚಿಂತನೆ ತನ್ನದು. ಈ ನನ್ನ ಪ್ರಯತ್ನಗಳಿಗೆ ಪತ್ನಿ ಕವಿತಾ…
ಮಡಿಕೇರಿ ಅ.25 NEWS DESK : ಕೇಲೋ ಇಂಡಿಯಾದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಮಟ್ಟದ ವಾಕೋ ಇಂಡಿಯಾ ಕಿಕ್ ಬಾಕ್ಸಿಂಗ್ ಫೆಡರೇಷನ್ ಸಂಸ್ಥೆಯ ಸಹಕಾರದೊಂದಿಗೆ, ಕರ್ನಾಟಕ ಕಿಕ್ ಬಾಕ್ಸಿಂಗ್ ಲೀಗ್ ವತಿಯಿಂದ ಮಡಿಕೇರಿಯಲ್ಲಿ ನ.5 ರಿಂದ 14ರವರೆಗೆ ಅಂತರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ತರಬೇತಿ ಶಿಬಿರ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಕಿಕ್ ಬಾಕ್ಸಿಂಗ್ ಲೀಗ್ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಕಿಕ್ ಬಾಕ್ಸಿಂಗ್ ತರಬೇತಿ ಕಿಂಬರ್ಲಿ ಕೂರ್ಗ್ ನೆರವಿನೊಂದಿಗೆ ನಡೆಯಲಿದೆ ಎಂದರು. ತರಬೇತಿ ಶಿಬಿರದಲ್ಲಿ ಜಿಲ್ಲೆ ಹಾಗೂ ರಾಷ್ಟ್ರದ ವಿವಿಧೆಡೆಗಳ ಆಸಕ್ತ 200 ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತರಬೇತಿಯಲ್ಲಿ ರಾಷ್ಟ್ರೀಯ ಮಟ್ಟದ 13 ಹಾಗೂ 3 ಮಂದಿ ಅಂತರಾಷ್ಟ್ರೀಯ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ. ತರಬೇತಿಯಲ್ಲಿ ಪಾಲ್ಗೊಳ್ಳುವವರಿಗೆ 14 ಸಾವಿರ ಪ್ರವೇಶ ಶುಲ್ಕ ನಿಗಧಿಯಾಗಿದ್ದು, ಸ್ಥಳೀಯರಿಗೆ ರಿಯಾಯಿತಿ ಇರಲಿದೆ ಎಂದು ತಿಳಿಸಿದರು. ಕಿಕ್ ಬಾಕ್ಸಿಂಗ್ ತರಬೇತಿಯಲ್ಲಿ ಪಾಲ್ಗೊಳ್ಳಲು ಯಾವುದೇ ವಯೋಮಿತಿಯನ್ನು ಕಡ್ಡಾಯಗೊಳಿಸಿಲ್ಲ.…
ನಾಪೋಕ್ಲು ಅ.25 NEWS DESK : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಮಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದ ಎಂ.ರಾಮಚಂದ್ರ ಕೊಡಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.25 NEWS DESK : ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಒತ್ತಾಯಿಸಿ ಭಾರತ ಮಾಕ್ರ್ಸ್ವಾದಿ ಕಮ್ಯುನಿಸ್ಟ್ ಪಕ್ಷ ನಡೆಸುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದ್ದು, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಪಕ್ಷದ ನೆಲ್ಲಿಹುದಿಕೇರಿ ಶಾಖಾ ಕಾರ್ಯದರ್ಶಿ ಪಿ.ಆರ್.ಭರತ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 12 ಸಾವಿರ ಜನಸಂಖ್ಯೆ ಹೊಂದಿರುವ ನೆಲ್ಲಿಹುದಿಕೇರಿಗೆ ಸಾರ್ವಜನಿಕ ಸ್ಮಶಾನದ ಅಗತ್ಯವಿದ್ದು, ಸಿಪಿಐಎಂ ಪಕ್ಷ ಜನಪರವಾಗಿ ಹೋರಾಟ ನಡೆಸುತ್ತಿದೆ. ಆದರೆ ಕೆಲವರು ದೇವಾಲಯದ ಹೆಸರು ಹೇಳಿಕೊಂಡು ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು, ಇದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕಾರ್ಯದಲ್ಲಿ ತೊಡಗಿರುವ ಸಿಪಿಐಎಂ ಪಕ್ಷ ಯಾವುದೇ ದೇವಾಲಯ ಅಥವಾ ಇನ್ನಿತರ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಜನರನ್ನು ಕೆರಳಿಸುವ ಕೆಲಸ ಮಾಡುತ್ತಿಲ್ಲ. ಭೂಮಿಯಿಲ್ಲದ ಬಡವರಿಗೆ ಭೂಮಿ, ಸೂರು, ನಿರುದ್ಯೋಗಿಗಳಿಗೆ ಉದ್ಯೋಗ ಸೇರಿದಂತೆ ನ್ಯಾಯ ಸಮ್ಮತವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹೋರಾಟ ನಡೆಸುತ್ತಿದೆ. ಸ್ಮಶಾನದ ಹೋರಾಟದ ದಿಕ್ಕು ತಪ್ಪಿಸಲು ಕೆಲವರು ದೇವಾಲಯದ…
ಮಡಿಕೇರಿ ಅ.25 NEWS DESK : ಕೊಡಗು ಜಿಲ್ಲೆಯ ನಾಲ್ಕು ಭಾಗಗಳಲ್ಲಿ 66 ಕೆ.ವಿ.ಸಾಮರ್ಥ್ಯ ದ ವಿದ್ಯುತ್ ಉಪಕೇಂದ್ರ ಹಾಗೂ ಎರಡು ಭಾಗಗಳಲ್ಲಿ 33 ಕೆ.ವಿ.ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ಸ್ಥಾಪನೆ ಕಾಮಗಾರಿ ಕೈಗೊಳ್ಳಲು ಹದಿನೈದು ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕೋರಿಕೆ ಮೇರೆಗೆ ಇಂಧನ ಸಚಿವರ ಗೃಹ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಜಾರ್ಜ್ ಹುದಿಕೇರಿ, ಬಾಳಲೆ, ಮೂರ್ನಾಡು, ಸಿದ್ದಾಪುರ ಗಳಲ್ಲಿ 66 ಕೆ.ವಿ.ಸಾಮರ್ಥ್ಯದ ವಿದ್ಯುತ್ ಉಪಕೇಂದ್ರಗಳು ಹಾಗೂ ಸಂಪಾಜೆ, ಭಾಗಮಂಡಲ ಗಳಲ್ಲಿ 33 ಕೆ.ವಿ.ಸಾಮರ್ಥ್ಯದ ವಿದ್ಯುತ್ ಉಪಕೇಂದ್ರಕ್ಕೆ ಸಂಭಂದಿಸಿದ ಕಾಮಗಾರಿಗೆ ಮುಂದಿನ ಹದಿನೈದು ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಚಿವರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಸೇರಿದಂತೆ…
ಮಡಿಕೇರಿ ಅ.25 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅ.27 ರಂದು ಸುಂಟಿಕೊಪ್ಪ ಹೋಬಳಿ ಮಟ್ಟದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಯೋಜಿಸಲಾಗಿದ್ದು, ಸಮಾರಂಭದಲ್ಲಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ “ಕೊಡಗು ಭೂಷಣ” ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದಸಂಸ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಡಾ.ಅಂಬೇಡ್ಕರ್ ಚಿಂತನೆಗಳನನ್ನು, ಸಂವಿಧಾನದ ಮಹತ್ವವನ್ನು ಸಾರುವ ಚಿಂತನೆಗಳಡಿ ಸುಂಟಿಕೊಪ್ಪ ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ವಿರಾಜಪೇಟೆ, ಸೋಮವಾರಪೇಟೆ ವಿಭಾಗಗಳಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಸಮಾವೇಶ ನಡೆಸುವ ಉದ್ದೇಶ ತಮ್ಮದೆಂದು ಹೇಳಿದರು. ::: ಗರಗಂದೂರಿನಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ನಮನ ::: ಸುಂಟಿಕೊಪ್ಪ ಶ್ರೀ ರಾಮ ಮಂದಿರ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ಜಯಂತಿ ನಡೆಯಲಿದೆ. ಇದಕ್ಕೂ ಮುನ್ನ 9.30 ಗಂಟೆಗೆ ಗರಗಂದೂರು ಗ್ರಾಮದ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸುಂಟಿಕೊಪ್ಪದವರೆಗೆ ಬೈಕ್ ಜಾಥ…
ಕೊಚ್ಚಿನ್ ಅ.25 NEWS DESK : ದೇಶೀ ಮಾರುಕಟ್ಟೆಯಲ್ಲಿ ಕಾಳು ಮೆಣಸಿನ ದರವು ಎರಡು ವಾರಗಳಲಿ ಕಿಲೋಗೆ 19 ರೂಪಾಯಿಗಳಷ್ಟು ಕುಸಿತ ಕಂಡಿದೆ. ಕಳೆದ ವಾರದಲ್ಲಿಯೇ ಕಿಲೋಗೆ ₹ 11 ಕುಸಿತವಾಗಿದೆ, ಕಳೆದ ಐದು ವಾರಗಳಲ್ಲಿ ಒಟ್ಟು ಕುಸಿತವು ಕೆಜಿಗೆ ₹ 35ರಷ್ಟು ಕುಸಿದಿದೆ. (South Asian Free Trade Area ) SAFTA ಅಡಿಯಲ್ಲಿ 8 ಶೇಕಡಾ ಸುಂಕದ ಅಡಿಯಲ್ಲಿ ಶ್ರೀಲಂಕಾದಿಂದ ಆಮದು ಮಾಡಿದ ಉತ್ಪನ್ನಗಳ ಬೃಹತ್ ಆಗಮನವು ಬೆಲೆ ಕುಸಿತಕ್ಕೆ ಕಾರಣವೆಂದು ಬೆಳೆಗಾರ ಸಂಘಟನೆಗಳು ಆರೋಪಿಸಿದೆ. ಕೊಚ್ಚಿ ಟರ್ಮಿನಲ್ ಮಾರುಕಟ್ಟೆಯಲ್ಲಿ ಅನ್ಗಾರ್ಬಲ್ಡ್ ಕಿಲೋಗೆ ₹ 627 ಮತ್ತು ಗಾರ್ಬಲ್ಡ್ಗೆ ₹ 647 ರಂತೆ ಬೆಲೆಗಳು ಇವೆ. ಕೊಚ್ಚಿಯ ಕಾಳುಮೆಣಸಿನ ವ್ಯಾಪಾರಿ ಕಿಶೋರ್ ಶಾಮ್ಜಿ, ಮುಂಬೈನಿಂದ ಬಂದಿರುವ ಶ್ರೀಲಂಕಾದ ಕಾಳುಮೆಣಸು ಲಭ್ಯತೆಯೊಂದಿಗೆ ಬಹುತೇಕ ಎಲ್ಲಾ ಮಾರುಕಟ್ಟೆಗಳು ತುಂಬಿವೆ ಮತ್ತು ದಕ್ಷಿಣದ ಮಾರುಕಟ್ಟೆಗಳಲ್ಲಿಯೂ ಮಾರಾಟವಾಗುತ್ತಿದೆ ಎಂದು ಹೇಳಿದರು. ಶ್ರೀಲಂಕಾದ ಆಮದಿನ ಕಾರಣದಿಂದ ಸ್ಥಳೀಯವಾಗಿ ಬೆಳೆದ ಕಾಳುಮೆಣಸಿನ ಬೆಲೆ ಮೇಲೆ ಮತ್ತಷ್ಟು ಒತ್ತಡವನ್ನು…






