ಮಡಿಕೇರಿ ಅ.25 NEWS DESK : ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಮಹಾಸಭೆ ಅ.26 ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಲೇಖಕ: admin
ಮಡಿಕೇರಿ ಅ.24 NEWS DESK : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ದಾಖಲೆಯ 100ನೇ ಪುಸ್ತಕವನ್ನು ನ.24 ರಂದು ಅದ್ದೂರಿಯಾಗಿ ಲೋಕಾರ್ಪಣೆಗೊಳಿಸಲಿದೆ ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟದ 98ನೇ ಪುಸ್ತಕ, ಲೇಖಕಿ ಡಾ.ದೀಪ ನರೇಂದ್ರ ಬಾಬು ಅವರು ರಚಿಸಿರುವ “ಗುಳೆ” ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವ ಮಕ್ಕಡ ಕೂಟದ ದಾಖಲೆಯ 100ನೇ ಪುಸ್ತಕ ಪುತ್ತರಿರ ಕರುಣ್ ಕಾಳಯ್ಯ ಸಂಪಾದಕತ್ವದ “ನೂರನೆ ಮೊಟ್ಟ್” ನಗರದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದ್ದು, ಇದರೊಂದಿಗೆ ಲೇಖಕರಾದ ಐಚಂಡ ರಶ್ಮಿ ಮೇದಪ್ಪ, ಕರವಂಡ ಸೀಮಾ ಗಣಪತಿ, ತೆನ್ನೀರ ಟೀನಾ ಚಂಗಪ್ಪ, ಯಶೋಧ ಪೇರಿಯಂಡ ಅವರು ರಚಿಸಿರುವ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದೆ ತಿಳಿಸಿದರು. ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಪ್ರಥಮ ಪುಸ್ತಕವನ್ನು ಕೊಡವ ಮಕ್ಕಡ ಕೂಟದ ವತಿಯಿಂದ ಹೊರತರಲಾಗಿದೆ. ಸಾಮಾಜಿಕ…
ಮಡಿಕೇರಿ ಅ.24 NEWS DESK : ರಾಜ್ಯದಲ್ಲಿ ಹೋಂಸ್ಟೇ ನಿರ್ವಹಣೆ ಸಂಬಂಧ ನೂತನ ನೀತಿಯನ್ನು ಮುಂದಿನ ಜನವರಿ-ಫೆಬ್ರವರಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯಚಟುವಟಿಕೆಗಳು, ಪ್ರವಾಸೋದ್ಯಮ ನೀತಿ, ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಪ್ರಚಾರಾಂದೋಲನ, ಪ್ರವಾಸಿಗರನ್ನು ಆಕರ್ಷಿಸುವುದು ಹಾಗೂ ಪ್ರವಾಸಿ ಕ್ಷೇತ್ರದಲ್ಲಿ ತೊಡಗಿರುವ ಪಾಲುಗಾರರಿಗೆ ಉತ್ತೇಜನ ನೀಡುವ ಸಲುವಾಗಿ ಪ್ರಸ್ತುತ ರಾಜ್ಯದಲ್ಲಿನ ಪ್ರಮುಖ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸಿ ರಾಜ್ಯದ ಎಲ್ಲಾ ಪ್ರವಾಸಿ ಸಹಭಾಗಿದಾರರನ್ನು ಒಗ್ಗೂಡಿಸುವ ಸಂಬಂಧ ನಗರ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ನಡೆದ ‘ಕನೆಕ್ಟ್ ಕರ್ನಾಟಕ-2024’ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ಒಂದು ನೀತಿ ಬೇಕಿದೆ ಎಂದು ಹಲವು ದಶಕಗಳಿಂದ ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಮುಂದಿನ ಕ್ಯಾಲೆಂಡರ್ ವರ್ಷದ ಆರಂಭದಲ್ಲಿಯೇ ಹೋಂಸ್ಟೇಗಳಿಗೆ ಹೊಸ ನೀತಿಯನ್ನು ಸರ್ಕಾರ ಘೋಷಿಸಲಿದೆ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಮಾಲಿಕರು ವಾಸಿಸುವ ಸ್ಥಳದಲ್ಲಿಯೇ ಹೋಂಸ್ಟೇಗಳು ಇರುವುದರಿಂದ ಅವುಗಳ ನಿರ್ವಹಣೆ,…
ರುಚಿಕರವಾದ ಪೆಪ್ಪರ್ ಚಿಕನ್ ಕಬಾಬ್ ಮಾಡುವ ವಿಧಾನ ಬೇಕಾಗುವ ಪದಾರ್ಥಗಳು :: ಚಿಕನ್- 1 ಕೆಜಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಹಸಿಮೆಣಸಿನ ಕಾಯಿ ಪೇಸ್ಟ್- ಒಂದು ಸಣ್ಣ ಬಟ್ಟಲು (5 ಮೆಣಸಿನಕಾಯಿ), ನಿಂಬೆಹಣ್ಣು- 1, ಉಪ್ಪು-ರುಚಿಗೆ ತಕ್ಕಷ್ಟು, ಮೊಟ್ಟೆ- 1, ಅರಿಶಿಣದ ಪುಡಿ – ಅರ್ಧ ಚಮಚ, ಕಾಳು ಮೆಣಸು- 3 ಚಮಚ (ಕುಟ್ಟಿ ಪುಡಿ ಮಾಡಿದ್ದು), ದನಿಯಾ ಪುಡಿ- 1 ಚಮಚ, ಗರಂ ಮಸಾಲೆ ಪುಡಿ- 1 ಚಮಚ, ಕರಿಬೇವು- ಸ್ವಲ್ಪ, ಕೊತ್ತಂಬರಿ ಹಾಗೂ ಪುದೀನಾ- ಸ್ವಲ್ಪ, ಕಸ್ತೂರಿ ಮೇಥಿ- 1 ಚಮಚ, ಬೆಳ್ಳುಳ್ಳಿ- ಜಜ್ಜಿದ್ದು- 10 ಎಸಳು, ಕಾರ್ನ್ ಫ್ಲೋರ್- 6-7 ಚಮಚ, ಮೈದಾ ಹಿಟ್ಟು- 3 ಚಮಚ, ಸೋಯಾ ಸಾಸ್- 1 ಚಮಚ, ಎಣ್ಣೆ-ಕರಿಯಲು ಮಾಡುವ ವಿಧಾನ :: ಮೊದಲಿಗೆ ಚಿಕನ್ ನ್ನು ಚೆನ್ನಾಗಿ ತೊಳೆದು, ನೀರಿಲ್ಲದೆ ಸೋರಿಸಿಟ್ಟುಕೊಳ್ಳಿ. ಒಂದು ಪಾತ್ರೆಗೆ ಚಿಕನ್, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಹಸಿಮೆಣಸಿನ ಕಾಯಿ ಪೇಸ್ಟ್, ನಿಂಬೆಹಣ್ಣಿನ ರಸ ಹಾಗೂ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದು ಅರ್ಧ ಗಂಟೆಗಳ ನೆನೆಯಲು ಬಿಡಿ. ನಂತರ ಮತ್ತೊಂದು ಪಾತ್ರೆಗೆ ಮೊಟ್ಟೆ, ಅರಿಶಿಣದ ಪುಡಿ,…
ನಾಪೋಕ್ಲು ಅ.24 NEWS DESK : ಕರ್ನಾಟಕ ಮುಸ್ಲಿಂ ಜಮಾಯತ್ ಎಸ್ ಎಸ್ ಎಫ್ ನಾಪೋಕ್ಲು ಶಾಖೆ ವತಿಯಿಂದ ವಿಷನ್ಸ್ಪ್ರಿಂಗ್ ಫೌಂಡೇಶನ್ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ನಾಪೋಕ್ಲು ಪಟ್ಟಣದ ಮಸೀದಿಯ ಮದ್ರಸ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಎಸ್.ವೈ.ಎಸ್ ಮಡಿಕೇರಿ ಶಾಖೆಯ ಮುನಿರ್ ಮಲ್ಲಾರಿ ಉದ್ಘಾಟಿಸಿದರು. ಎಸ್.ವೈ.ಎಸ್ ರಾಜ್ಯ ಅಧ್ಯಕ್ಷ ಅಬ್ದುಲ್ ಅಫಿಲ್ ಸಅದಿ ಮಾತನಾಡಿ, ಮನುಷ್ಯನಿಗೆ ಆರೋಗ್ಯ ಬಹು ಮುಖ್ಯ. ಅದರಲ್ಲೂ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಕಣ್ಣಿನ ತಪಾಸಣಾ ಶಿಬಿರದಿಂದ ಜನಸಾಮಾನ್ಯರಿಗೆ ಪ್ರಯೋಜನವಾಗಲಿದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವುದು ಕಣ್ಣನ್ನು ಸಂರಕ್ಷಿಸುವುದು ಅತಿಅಗತ್ಯ. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ವಿಷನ್ಸ್ಪ್ರಿಂಗ್ ಫೌಂಡೇಶನ್ ನ ಅವಿನಾಶ್ ಮಾತನಾಡಿ, ಸಂಸ್ಥೆಯ ವತಿಯಿಂದ ಸಾಮಾಜಿಕ ಉಪಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರಿಗೆ ಹಾಗೂ ತೋಟದ ಕಾರ್ಮಿಕರಿಗೆ ಉಚಿತವಾಗಿ ಕಣ್ಣಿನ ತಪಾಸಣೆಯನ್ನು ಮಾಡಲಾಗುತ್ತಿದೆ. ಶಸ್ತ್ರಚಿಕಿತ್ಸೆ ಅಗತ್ಯ ಇದ್ದವರಿಗೆ ಮಡಿಕೇರಿಯ ಮೆಡಿಕಲ್ ಕಾಲೇಜಿನಲ್ಲಿ ಅಗತ್ಯ ಚಿಕಿತ್ಸೆಗೆ ಶಿಫಾರಸು ಮಾಡಲಾಗುತ್ತದೆ ಎಂದರು. ಕರ್ನಾಟಕ ಮುಸ್ಲಿಂ ಜಮಾಯತ್…
ಪೊನ್ನಂಪೇಟೆ ಅ.24 NEWS DESK : ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2024ಅನ್ನು ಡಿ.4 ರಿಂದ 8ರವರೆಗೆ ಆಯೋಜಿಸಲಾಗಿದೆ ಎಂದು ಹೈಪ್ಲೈಯರ್ಸ್ ತಂಡದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೌಟುಂಬಿಕ ಹಾಕಿ ಪಂದ್ಯಾವಳಿಯು ವಿ.ಬಾಡಗ ಗ್ರಾಮದಲ್ಲಿ 3ನೇ ಬಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿರುವುದಾಗಿ ರಂಜು ಪೂಣಚ್ಚ ಮಾಹಿತಿ ನೀಡಿದರು. ಕುಟುಂಬ ತಂಡಗಳಲ್ಲಿ ಗರಿಷ್ಠ 4 ಅತಿಥಿ ಆಟಗಾರರು ಭಾಗವಹಿಸಬಹುದಾಗಿದೆ. ಆದರೆ ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ…
ಮಡಿಕೇರಿ NEWS DESK ಅ.24 : ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಗ್ರಾ.ಪಂ ಅಧ್ಯಕ್ಷರ ವಿರುದ್ಧ ಕೆಲವು ಸದಸ್ಯರು ಅವಿಶ್ವಾಸ ಮಂಡಿಸಿದ ಹಿನ್ನೆಲೆ ಇಂದು ಕರೆಯಲಾಗಿದ್ದ ಅವಿಶ್ವಾಸ ನಿರ್ಣಯದ ಸಭೆಗೆ ಕೋರಂ ಕೊರತೆ ಎದುರಾಯಿತು. ಜಿಲ್ಲಾ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ನಾಲ್ವರು ಸದಸ್ಯರು ಮಾತ್ರ ಹಾಜರಾಗಿದ್ದರು. ಒಟ್ಟು ಎಂಟು ಸದಸ್ಯ ಬಲದ ಗ್ರಾ.ಪಂ ನ ನಾಲ್ವರು ಸದಸ್ಯರು ಗೈರು ಹಾಜರಾದ ಕಾರಣ ಕೋರಂ ಕೊರತೆ ಕಂಡು ಬಂತು. ಇದರಿಂದ ಉಪವಿಭಾಗಾಧಿಕಾರಿಗಳು ಸಭೆಯನ್ನು ವಿಸರ್ಜಿಸಿದರು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗೀತಾಂಜಲಿ ಉಪಸ್ಥಿತರಿದ್ದರು.
ಮಡಿಕೇರಿ ಅ.24 NEWS DESK : ಭಾರತದ ಪ್ಯಾರಾ ಒಲಂಪಿಕ್ ಸಮಿತಿ, ಗೋವಾ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ಮತ್ತು ವಿಕಲಾಂಗ ವ್ಯಕ್ತಿಗಳ ರಾಜ್ಯ ಆಯುಕ್ತರ ಕಚೇರಿ, ಗೋವಾ ಪ್ಯಾರಾಒಲಿಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಗೋವಾದ SAG ಈಜುಕೊಳದಲ್ಲಿ ನಡೆದ 24ನೇ ರಾಷ್ಟ್ರೀಯ ಪ್ಯಾರಾಸ್ವಿಮ್ಮಿಂಗ್ ಚಾಂಪಿಯನ್ಶಿಪ್ ನ ಮಹಿಳೆಯರ ವಿಭಾಗದಲ್ಲಿ ಮಡಿಕೇರಿಯ ಡಾ.ದೀಪಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ. ಈ ಪಂದ್ಯಾವಳಿಯಲ್ಲಿ ಭಾರತದಾದ್ಯಂತ 28 ರಾಜ್ಯಗಳನ್ನು ಪ್ರತಿನಿಧಿಸುವ 500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ದೀಪಾ ಬೆಂಗಳೂರಿನ ತರಬೇತುದಾರರಾದ ಸಿಂಧ್ಯಾ, ಮನೋಹರ್ ಹಾಗೂ ಕೊಡಗಿನ ತರಬೇತುದಾರರಾದ ರೋಹಿತ್ ಅವರಿಂದ ತರಬೇತಿ ಪಡೆದಿದ್ದಾರೆ.
ಪುತ್ತೂರು NEWS DESK ಅ.24 : ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1697 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ನಾಪೋಕ್ಲು ಅ.24 NEWS DESK : ಸಮಾಜದಲ್ಲಿ ಉತ್ತಮವಾಗಿ ಬದುಕಬೇಕಾದರೆ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಆಗ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಕಕ್ಕಬ್ಬೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರಜಿನ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಕ್ಕಬ್ಬೆ ಕಾರ್ಯಕ್ಷೇತ್ರದ ಸ್ಫೂರ್ತಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಮೀಪದ ಕಕ್ಕಬೆ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದ ಉತ್ತಮ ಅಂಶಗಳನ್ನು ರೂಪಿಸಿಕೊಂಡು ಮಹಿಳೆಯರು ಸದೃಢ ವನ್ನು ರೂಪಿಸಲು ಮಹಿಳೆಯರು ಮುಂದಾಗಬೇಕು. ಸಮಾಜದಿಂದ ಅನೌಪಚಾರಿಕ ಶಿಕ್ಷಣವನ್ನು ಪಡೆದುಕೊಳ್ಳಲಾಗುತ್ತಿದೆ ಇದರಿಂದ ನಾಲ್ಕು ಜನರ ನಡುವೆ ಉತ್ತಮವಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು ಹೆಣ್ಣುಮಕ್ಕಳು ಶಿಕ್ಷಣವಂತರಾಗಬೇಕು ಸರ್ಕಾರ ಕಡ್ಡಾಯ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ ಮಹಿಳೆಯರು ಉದ್ಯೋಗ ನಿರ್ವಹಿಸುವುದರ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದರು. ಪೂರ್ತಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷರಾದ ಲಲಿತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಉಪಾದ್ಯಕ್ಷೆ ಸೀತಮ್ಮ, ಸೇವಾಪ್ರತಿನಿಧಿ…






