ಲೇಖಕ: admin

ಬೆಂಗಳೂರು NEWS DESK ಅ.24 : ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

Read More

ಬೆಂಗಳೂರು ಅ.24 NEWS DESK : ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟ 8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ಘೋಷಣೆ ಮಾಡಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನಿನ್ನೆ ವೈಯಾನಡ್‌ಗೆ ಹೋಗಿದ್ದೆ. ಹಾಗಾಗಿ ಇಲ್ಲಿಗೆ ಬರುವುದು ತಡವಾಗಿದೆ. ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಳಾಗಿವೆ ಅವರ ಆಸ್ಪತ್ರೆ ಖರ್ಚು ಸರ್ಕಾರ ಭರಿಸುತ್ತದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ 5 ಲಕ್ಷ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ನೀಡಲಾಗುತ್ತದೆ. ಬಿಬಿಎಂಪಿಯಿಂದ ಮೂರು ಲಕ್ಷ…

Read More

ಮಡಿಕೇರಿ ಅ.24 NEWS DESK : ಕರ್ನಾಟಕ ರಾಜ್ಯ ಬರಹಗಾರರ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ನ.3 ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಲಿದೆ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ.ವೆಂಕಟೇಶ ಪ್ರಸನ್ನ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಮೂಕಳೇರ ಟೈನಿ ಪೂಣಚ್ಚ ವಹಿಸಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಗಿ ಕಾನಡ್ಕ ಡೀನಾ ದೇವಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಕವಿಗೋಷ್ಠಿಯಲ್ಲಿ ಕೆ.ಯಶಿಕ ದೇವಯ್ಯ, ಬಿ.ತಪಾಷ ಲೋಕೇಶ್, ಪ್ರಥಮ್ ಚಿನ್ನಪ್ಪ, ಹೇಮಂತ್ ಪಾರೇರ, ಪಾರ್ವತಿ ಮೂರ್ನಾಡು, ಎನ್.ಎಂ.ಗೀತಾಂಜಲಿ, ರಾಧಿಕಾ ವಿಶ್ವನಾಥ್, ದೀಕ್ಷಿ ಪಟ್ಟಡ, ಡಿ.ಹೆಚ್.ಪುಷ್ಪ, ಯಶೋಧ ಪೇರಿಯಂಡ, ಎಂ.ಬಿ.ಜಯಲಕ್ಷ್ಮಿ, ಮನೆಯಪಂಡ ಶೀಲಾ ಬೋಪಣ್ಣ, ಎಸ್.ಪಿ.ಜನ್ಮಿತಾ, ಹೇಮಲತಾ ಪೂರ್ಣಪ್ರಕಾಶ, ಹೆಚ್.ಕೆ.ಜೀವನ್, ಬಿ.ವಿ.ಶಿಲ್ಪ, ಎಸ್.ಸೈಮನ್, ಎ.ಶಬೀರ್, ಪುಗ್ಗೇರ ಸುಮಿ ಸನ್ನು, ವತ್ಸಲ ಶ್ರೀಶ, ಅಬ್ದುಲ್ಲಾ, ಮುಕ್ಕಾಟಿರ ಹರಿಣಿ ಗಿರೀಶ್, ಎಸ್.ಕೆ.ಈಶ್ವರಿ, ಕೆ.ಎಂ.ಖುಷಿಕ, ಕಡ್ಲೇರ ಜಯಲಕ್ಷ್ಮಿ ಪಾಲ್ಗೊಳ್ಳಲಿದ್ದಾರೆ.

Read More

ಬೆಂಗಳೂರು ಅ.24 NEWS DESK : 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಬೆಳಗಾವಿಯಲ್ಲಿ ಬರುವ ಡಿಸೆಂಬರ್‍ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು. ವಿಧಾನಸೌಧದಲ್ಲಿ ಇಂದು (ಅ.23) ನಡೆದ ಶತಮಾನೋತ್ಸವ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರುವ ಡಿಸೆಂಬರ್‍ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಂಟಿ ಅಧಿವೇಶನಕ್ಕೆ ಮಹಾತ್ಮಾ ಗಾಂಧೀಜಿಯವರನ್ನು ಜಗತ್ತಿನ ನಾಯಕ ಎಂದು ಕರೆದ ಅಮೇರಿಕಾದ ಮಾಜಿ ಅಧ್ಯಕ್ಷರಾಗಿರುವ ಬರಾಕ್ ಓಬಾಮಾ ಅವರನ್ನು ಆಹ್ವಾನಿಸಲು ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಬರಾಕ್…

Read More

ಮಡಿಕೇರಿ ಅ.24 NEWS DESK : ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆಯುತ್ತಿರುವ 17 ವರ್ಷದೊಳಗಿನ ಬಾಲಕಿಯರ ಸಿ.ಬಿ.ಎಸ್.ಇ. ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸುತ್ತಿರುವ ಮಡಿಕೇರಿಯ ಕೊಡಗು ವಿದ್ಯಾಲಯ ಬಾಲಕಿಯರ ತಂಡವು ಫೈನಲ್ ಹಂತಕ್ಕೆ ಪ್ರವೇಶಿಸಿದೆ. ಸೆಮಿ ಫೈನಲ್ ಪಂದ್ಯದಲ್ಲಿ ಕೊಡಗು ವಿದ್ಯಾಲಯ ತಂಡವು ತಮಿಳುನಾಡಿನ ಸಚ್ಚಿದಾನಂದ ಜ್ಯೋತಿ ನಿಕೇತನ್ ಶಾಲಾ ತಂಡವನ್ನು 2-0 ಗೋಲುಗಳಿಂದ ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿತು. ಕೊಡಗು ವಿದ್ಯಾಲಯ ತಂಡದ ನಾಯಕಿ ಪರ್ಲಿನ್ ಪೊನ್ನಮ್ಮ ಫೀಲ್ಡ್ ಗೋಲು ಬಾರಿಸಿದರೆ ಮುನ್ನಡೆ ಆಟಗಾರ್ತಿ ನೀತು ಚೌದ್ರಿ ಪೆನಾಲ್ಟಿ ಕಾರ್ನರ್ ನಲ್ಲಿ ಗೋಲು ಬಾರಿಸುವ ಮೂಲಕ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದರು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೊಡಗು ವಿದ್ಯಾಲಯ ತಂಡವು ಉತ್ತರ ಪ್ರದೇಶದ ಶ್ರೀ ಠಾಕೂರ್ ದ್ವಾರಾ ಬಾಲಿಕ ವಿದ್ಯಾಲಯ ತಂಡವನ್ನು 1-0 ಗೋಲುಗಳಿಂದ ಸೋಲಿಸಿತ್ತು. ಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸುತ್ತಿರುವ ಮಡಿಕೇರಿಯ ಕೊಡಗು ವಿದ್ಯಾಲಯ ತಂಡವು ಹರಿಯಾಣದ ಬಲಿಷ್ಠ ತಂಡವಾದ ಲಿಟ್ಲ್ ಏಂಜಲ್ ಸ್ಕೂಲ್ ಸೋನಿಪತ್…

Read More

ಮಡಿಕೇರಿ ಅ.24 NEWS DESK : ಬಾಳೆಯಡ ಚರ್ಮಣ ರಾಜು ಹಾಗೂ ಮಾಚಮ್ಮ ಪಾಚಿ (ತಾಮನೆ ಮಾಚೆಟ್ಟಿರ) ದಂಪತಿಯರ ಪುತ್ರನಾಗಿ ಕರುಣ್ ಕಾಳಪ್ಪನವರು ಸೋಮವಾರಪೇಟೆಯಲ್ಲಿ ಜನಿಸಿದರು. ಶಿಕ್ಷಣ ::  ಕರುಣ್ ಅವರ ಪ್ರಾಥಮಿಕ ಶಿಕ್ಷಣ ಮಾದಪುರ ಹಾಗೂ ಕೊಡ್ಲಿಪೇಟೆ ಸರ್ಕಾರಿ ಶಾಲೆ ಹಾಗೂ ಮಡಿಕೇರಿಯ ಸೈಂಟ್ ಮೈಕಲ್ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ವಿರಾಜಪೇಟೆ ಸೈಂಟ್ ಅನ್ಸ್ ಶಾಲೆಯಲ್ಲಿ, ಸರ್ಕಾರಿ ಸೀನಿಯರ್ ಕಾಲೇಜು ಮಡಿಕೇರಿಯಲ್ಲಿ ಪಿ.ಯು.ಸಿ ಯ ಜೊತೆಗೆ ವಾಂಡರರ್ಸ್ ಗೆ ಸೇರಿ ಶಂಕರ್ ಸ್ವಾಮಿ ಅವರ ಶಿಷ್ಯರಾಗಿ ಮುಂದುವರಿಯುತ್ತಾರೆ. ಸೈಂಟ್ ಜೋಸೆಫ್ ಕಾಲೇಜು ಬೆಂಗಳೂರಿನಲ್ಲಿ ಬಿ.ಎ ಪದವಿಯನ್ನು ಪಡೆಯುತ್ತಾರೆ. ತದನಂತರ ಮಾರ್ಕೆಟಿಂಗ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆಯುತ್ತಾರೆ. ಎಂ.ಬಿ.ಎ ಯನ್ನು ಮಣಿಪಾಲ್ ವಿಶ್ವವಿದ್ಯಾನಿಲಯದಲ್ಲಿ ಮಾಡುತ್ತಾರೆ. ಇವರು ಕಾಲೇಜು ದಿನಗಳಲ್ಲಿ ಉತ್ತಮ ಓಟಗಾರರಾಗಿದ್ದರು. 1982 ರಲ್ಲಿ ಕ್ರೀಡಾ ಶಾಲೆ ::  ಪದ್ಮಶ್ರೀ ಪುರಸ್ಕೃತ ಎಂ.ಪಿ.ಗಣೇಶ್ ಅವರ ಕನಸಿನಂತೆ ಲಕ್ನೋದಲ್ಲಿ ಕೆ.ಡಿ.ಸಿಂಗ್ ಬಾಬು ಅವರು ಸ್ಥಾಪಿಸಿದ ಕ್ರೀಡಾ ಶಾಲೆಯಂತೆಯೇ ಕರ್ನಾಟಕದಲ್ಲಿ ಸ್ಥಾಪಿಸಬೇಕು…

Read More

ಮಡಿಕೇರಿ ಅ.23 NEWS DESK : ಕೊಡಗು ಜಿಲ್ಲೆಯಲ್ಲಿ ಅ.26 ರಂದು ನಡೆಯುವ ಕಂದಾಯ ಇಲಾಖೆಯ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ(ಸ್ಥಳೀಯ) ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರವಾದ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಡಿಕೇರಿ ಸೇರಿದಂತೆ ಈ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ…

Read More

ಮಡಿಕೇರಿ ಅ.23 NEWS DESK : ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಎಲ್ಲರೂ ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 1824 ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಈಗ 200 ವರ್ಷ ಆಗಿದೆ. ಚೆನ್ನಮ್ಮ ಜೊತೆ ಸಂಗೊಳ್ಳಿರಾಯಣ್ಣ ಸಹ ಹೋರಾಡಿದ್ದರು. ನಂತರ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಹೋರಾಡಿದ್ದರು. ಪ್ರತಿ ದಿನ ಪ್ರತಿ ಕ್ಷಣ ಅವರ ನೆನಪು ಇರಬೇಕು. ನೆನಪಷ್ಟೇ ಅಲ್ಲದೆ ಅವರ ಜೀವನ ಸಂದೇಶವನ್ನು ಪಾಲಿಸಬೇಕು. ಅವರ ಕನಸು ನನಸಾಗುತ್ತದೆ ಎಂದು ಹೇಳಿದರು. ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ.…

Read More

ಮಡಿಕೇರಿ ಅ.23 NEWS DESK : ಕೊಡಗು ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆಯು ಅ.25 ರಿಂದ ನ.3 ರವರೆಗೆ ನಡೆಯಲಿದ್ದು, ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ನಡೆಸಿ ಕಾಲಮಿತಿಯಲ್ಲಿ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ನಗರಾಭಿವೃದ್ಧಿ ಕೋಶ ಜೊತೆಗೆ ಪಂಚಾಯತ್ ರಾಜ್ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸರಿಯಾಗಿ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾಹಿತಿ ನೀಡಿ ಸರ್ವೋಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ…

Read More

ಮಡಿಕೇರಿ ಅ.23 NEWS DESK : ಹೋಬಳಿ ಘಟಕಗಳು ಕನ್ನಡ ಸಾಹಿತ್ಯ ಪರಿಷತ್ತಿನ ಬೇರುಗಳಂತೆ ಅದು ಗಟ್ಟಿಗೊಂಡರೆ ಪರಿಷತ್ತು ಸದೃಢಗೊಳ್ಳುತ್ತದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ನುಡಿದರು. ಗಡಿಭಾಗ ಕುಟ್ಟ ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಶ್ರೀಮಂಗಲ ಹೋಬಳಿಯ ನೂತನ ಕಾರ್ಯಕಾರಿ ಮಂಡಳಿಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗಡಿಭಾಗದ ಕನ್ನಡೇತರರಿಗೆ ಕನ್ನಡ ಕಲಿಸುವ ಕೆಲಸ ಆಗಬೇಕಿದೆ. ಅಲ್ಲದೆ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು. ಪರಿಷತ್ತಿನ ಸದಸ್ಯತ್ವ ಮತ್ತು ದತ್ತಿ ಸ್ಥಾಪನೆಗೆ ಹೋಬಳಿ ಸದಸ್ಯರು ಮುಂದಾಗಬೇಕು ಎಂದು ಕರೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಮಂಗಲ ಹೋಬಳಿಯ ಅಧ್ಯಕ್ಷೆ ಉಳುವಂಗಡ ಕಾವೇರಿ ಉದಯ್, ಮುಂದಿನ ತಿಂಗಳಿನಲ್ಲಿ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಎರಡು ದತ್ತಿ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದು, ಅದರ ಸಂಕ್ಷಿಪ್ತ ರೂಪುರೇಷೆ ವಿವರಿಸಿದರು. ಶ್ರೀಮಂಗಲ ಹೋಬಳಿಯ ಇನ್ನಿತರ ಸಂಘ ಸಂಸ್ಥೆಗಳ ಒಡಗೂಡಿ ಕಾರ್ಯಕ್ರಮ ನಡೆಸಲು ಆಡಳಿತ ಮಂಡಳಿಯ…

Read More