ಲೇಖಕ: admin

ಮಡಿಕೇರಿ ನ.15 NEWS DESK : ನಂಜರಾಯಪಟ್ಟಣದ ದುಬಾರೆ ಸಾಕಾನೆ ಶಿಬಿರಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಗ್ರಾಮಸ್ಥರು ಆರತಿ ಬೆಳಗಿ ಸಂಸದರನ್ನು ಬರಮಾಡಿಕೊಂಡರು. ಈ ಸಂದರ್ಭ ಆನೆ ಮಾವುತರ ಆಹವಾಲುಗಳನ್ನು ಆಲಿಸಿದ ಸಂಸದರು, ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿದರು.

Read More

ಸುಂಟಿಕೊಪ್ಪ ನ.15 NEWS DESK : ಕೊಡಗು ಜಿಲ್ಲಾ ಆಶೋದಯ ಸಮಿತಿಯ ವತಿಯಿಂದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಕೆ.ಪ್ರಸಾದ್ ಕುಟ್ಟಪ್ಪ ಮತ್ತು ಕೆ.ಎಂ.ಅಲಿಕುಟ್ಟಿ ಅವರ ನೇತೃತ್ವದಲ್ಲಿ ಬ್ಲೂ ಬಾಯ್ಸ್ ಯುವಕ ಸಂಘದ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಶಿಬಿರವನ್ನು ಉದ್ಯಮಿ ಆನಂದ ಬಸಪ್ಪ ಉದ್ಘಾಟಿಸಿದರು. ಶಿಬಿರದಲ್ಲಿ ಪನ್ಯ ಮತ್ತು ಟಿ.ಸಿ.ಎಲ್ ಸುತ್ತಲಿನ ಸುಮಾರು 200ಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಕಣ್ಣು, ರಕ್ತದೊತ್ತಡ(ಬಿಪಿ) ಹಾಗೂ ಮಧುಮೇಹ (ಸಕ್ಕರೆ ಕಾಯಿಲೆ) ಇತ್ಯಾದಿ ಪರೀಕ್ಷೆಗೆ ಮಾಡಿಸಿಕೊಂಡರು. ಅಲ್ಲದೇ ಅಗತ್ಯವಿದ್ದವರಿಗೆ ಕನ್ನಡಕವನ್ನು ವಿತರಣೆ ಮಾಡಲಾಯಿತು. ನಂತರ ಮಾತನಾಡಿದ ಗ್ರಾ.ಪಂ ಸದಸ್ಯರಾದ ಎಂ.ನಾಗರತ್ನ ಸುರೇಶ್, ತೋಟದ ವ್ಯವಸ್ಥಾಪಕರಾದ ಪೊನ್ನಪ್ಪ, ಮಂಜುನಾಥ್, ಆಶೋದಯ ಸೇವಾ ಸಮಿತಿಯ ಕುಶಾಲನಗರ ಆರೋಗ್ಯ ಕೇಂದ್ರದ ಆಪ್ತಸಮಲೋಚಕರಾದ ಮುತ್ತಮ್ಮ, ಕಣ್ಣಿನ ತಜ್ಞರಾದ ಪುಷ್ಪೆಂದ್ರ ಯಾದವ್, ತಂಡದ ಉಸ್ತುವಾರಿ ಅಸೀಸ್, ಆಶೋದಯ ಸಮಿತಿಯ ವಿದ್ಯಾ, ನಾಗರತ್ನ ಹಾಗೂ ಇನ್ನಿತರರು ಹಾಜರಿದ್ದರು.

Read More

ಸುಂಟಿಕೊಪ್ಪ,ನ.15 NEWS DESK : ಮಾದಾಪುರದ ಎಸ್‍ಜೆಎಂ ಶಾಲಾ ವತಿಯಿಂದ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸಮುದಾಯದ ಸಹಾಯಕರುಗಳಾದ ಆರಕ್ಷಕ ಠಾಣೆ, ಆಸ್ಪತ್ರೆ, ಬ್ಯಾಂಕ್, ಆಟೋ ನಿಲ್ದಾಣ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅಲ್ಲಿನ ಮಹತ್ವವನ್ನು ತಿಳಿದುಕೊಂಡರು. ಅಲ್ಲದೆ ಸಿಹಿ ಹಂಚಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಎಸ್‍ಜೆಎಂ ಶಾಲೆಯ ಮುಖ್ಯ ಶಿಕ್ಷಕಿ ಪ್ರಿಯ, ಸಹ ಶಿಕ್ಷಕರುಗಳಾದ ನಿವೇದಿತಾ, ಲವ್ಯ, ಜೋರ, ದೀಪಿಕಾ, ಧನ್ಯ, ಅಂಕಿತ, ಆದಿರಾ, ಸಂಜಯ್ ಮತ್ತಿತರರು ಇದ್ದರು.

Read More

ಸುಂಟಿಕೊಪ್ಪ ನ.17 NEWS DESK : ಉತ್ತಮವಾದ ನಾಳೆಗಳನ್ನು ಸೃಷ್ಟಿಸುವ ಜವಾಬ್ದಾರಿ ಮಕ್ಕಳ ಕೈಯಲ್ಲಿದ್ದು, ಮಕ್ಕಳನ್ನು ಚೆನ್ನಾಗಿ ಪೋಷಿಸಿದಾಗ, ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಇದು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ, ಕುಶಾಲನಗರ ತಾಲೂಕು ಪತ್ರರ್ತರ ಸಂಘದ ಗೌರವ ಸಲಹೆಗಾರ ಕೆ. ತಿಮ್ಮಪ್ಪ ಅಭಿಪ್ರಾಯಪಟ್ಟರು. ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪತ್ರರ್ತರ ಸಂಘದಿಂದ ಕೊಡಮಾಡಿದ ಬಹುಮಾನಗಳನ್ನು ವಿತರಿಸಿ ಮಾತನಾಡಿದರು. ಮನೆಯೇ ಮಗುವಿನ ಮೊದಲ ಶಾಲೆ. ಅಲ್ಲಿ ಪೋಷಕರು ಶಿಸ್ತು ಮತ್ತು ಪ್ರಾಮಾಣಿಕತೆಯನ್ನು ಮಕ್ಕಳಲ್ಲಿ ಕಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ಮೌಲ್ಯಗಳನ್ನು ಹೊಂದಿರುವ ಮಕ್ಕಳು ಶಾಲೆ ಮತ್ತು ಜೀವನದಲ್ಲಿ ಯಶಸ್ವಿಯಾಗುತ್ತಾರೆ. ಅವರು ಬಲಿಷ್ಠ ರಾಷ್ಟ್ರವನ್ನು ನರ್ಮಿಸಲು ಶಕ್ತರಾಗುತ್ತಾರೆ. ಇಂದಿನ ಮಕ್ಕಳೇ ನಾಳಿನ ನಾಡಿನ ಶಿಲ್ಪಿಗಳಾಗಿದ್ದು, ಇಡೀ ಜಗತ್ತು ನಿಮ್ಮ ಕೈಯಲ್ಲಿದೆ. ಆದ್ದರಿಂದ, ನಗು, ಆಟದ ಜೊತೆಗೆ ಮನವಿಟ್ಟು ಕಲಿತು ದೇಶದ ಉತ್ತಮ ನಾಗರಿಕರಾಗಬೇಕು. ಕಷ್ಟಪಟ್ಟು…

Read More

ಮಡಿಕೇರಿ ನ.14 NEWS DESK : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು 2023ರ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್‍ಗಳನ್ನು 2022-23 ಹಾಗೂ 2023-24 ನೇ ಸಾಲಿನಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೊಗಿ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿದೆ. ಯಾವುದೇ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಎಲ್ಲಾ ಪದವೀಧರರಿಗೆ, ಸ್ನಾತಕೋತ್ತರ ಪದವಿ, ಬಿಎಡ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಗಳು ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ…

Read More

ಮಡಿಕೇರಿ ನ.14 NEWS DESK : ಸಹಕಾರ ಸಂಘಗಳು ಆರ್ಥಿಕ ಪ್ರಗತಿಯನ್ನು ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸುವಂತೆ ಹಿರಿಯ ಸಹಕಾರಿ ಹಾಗೂ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ಸಹಕಾರ ಸಪ್ತಾಹದ ಧ್ವಜಾರೋಹಣ ನಂತರ ಪಂದ್ಯಂಡ ಬೆಳ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸಹಕಾರ ಕ್ಷೇತ್ರದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಇರಬಾರದು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಇದ್ದಲ್ಲಿ ಸಹಕಾರ ಸಂಘಗಳ ಬಲವರ್ಧನೆ ಸಾಧ್ಯ ಎಂದರು.’ ಸಹಕಾರ ಸಂಘಗಳಿಗೆ ದೇಶದಲ್ಲಿ ತಮ್ಮದೇ ಆದ ಸ್ಥಾನವಿದ್ದು, ಸಂಪತ್ತನ್ನು ಎಲ್ಲರೂ ಹಂಚಿಕೊಂಡು ಸಮಾನವಾಗಿ ಬದುಕುವುದು ಸಹಕಾರದ ಧ್ಯೇಯೋದ್ದೇಶವಾಗಿದೆ ಎಂದು ಎಂ.ಸಿ.ನಾಣಯ್ಯ ತಿಳಿಸಿದರು. ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆ ಇದ್ದಲ್ಲಿ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸಬಹುದಾಗಿದೆ. ಆ ನಿಟ್ಟಿನಲ್ಲಿ ಸಹಕಾರ ಸಂಘಗಳು ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಸಹಕಾರ ಸಂಘದಲ್ಲಿ ಲಕ್ಷಾಂತರ ಜನರು…

Read More

ಮಡಿಕೇರಿ ನ.14 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲೂಕು, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ , ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್, ವಿರಾಜಪೇಟೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಡಾ  ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ.ಹೇಮಾವತಿ ವಿ.ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ  ಎಂಬ ವಿಷಯದ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸುವ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಎಂ.ಕೆ.ಪದ್ಮಾ, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದು…

Read More

ಮಡಿಕೇರಿ ನ.14 NEWS DESK : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹತ್ತು-ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳಿಗೆ ಸದುಪಯೋಗವಾಗಲಿ ಎಂಬ ಆಶಾಭಾವನೆಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮುದಾಯ ವಿಭಾಗದಿಂದ ರಾಜ್ಯದ 507 ಶಾಲೆಗಳಿಗೆ 2.74 ಕೋಟಿ ವೆಚ್ಚದಲ್ಲಿ 4044 ಜೊತೆ ಡೆಸ್ಕ್ ಬೆಂಚು ವಿತರಣೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಕೊಡಗು ಜಿಲ್ಲೆಯ 98 ಸರಕಾರಿ ಶಾಲೆಗಳಿಗೆ ರೂ.72.25ಲಕ್ಷ ಮೌಲ್ಯದ 850 ಜೊತೆ ಡೆಸ್ಕ್ ಬೆಂಚು ವಿತರಣೆ ಮಾಡಲು ಸಿದ್ದತೆಯಾಗಿದೆ. ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್.ಅನಿಲ್‌ ಕುಮಾರ್‌ ಮಾತನಾಡಿ ಪ್ರಸಕ್ತ ವರ್ಷ 1030 ಜ್ಷಾನದೀಪ ಅಥಿತಿ ಶಿಕ್ಷಕರನ್ನು ಸರಕಾರಿ ಶಾಲೆಗಳಲ್ಲಿ ನೇಮಿಸಲಾಗಿದೆ. ಕಳೆದ ವರ್ಷ 45 ಸಾವಿರ, ಪ್ರಸಕ್ತ ವರ್ಷ 65 ಸಾವಿರ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಲಾಗಿದೆ ಎಂದು ತಿಳಿಸಿದರು. ಹೇಮಾವತಿ ವಿ.ಹೆಗ್ಗಡೆ ದ.ಕ ಜಿ.ಪಂ ಸಿಇಓ ಕೆ.ಆನಂದ ಉಪಸ್ಥಿತರಿದ್ದರು.  

Read More

ಮಡಿಕೇರಿ ನ.14 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ “ಅವಿನ್ಯಂ” ವಿದ್ಯಾರ್ಥಿ ಒಕ್ಕೂಟದ 2024-25ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಂಭ್ರಮದಿಂದ ನಡೆಯಿತು. ಬೆಂಗಳೂರು ಹೆಚ್‍ಪಿ ಕಂಪನಿಯ ಹಿರಿಯ ತಂತ್ರಜ್ಞ ಡಾ. ಎಂ.ಆರ್.ಚಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಕೃತಕ ಬುದ್ಧಿಮತ್ತೆಯ ಬಳಕೆ ಮತ್ತು ಅದರಿಂದ ತಾಂತ್ರಿಕ ಸಂಸ್ಥೆಗಳು ದೈನಂದಿನ ಚಟುವಟಿಕೆಗಳನ್ನು ಸುಧಾರಿಸುತ್ತಿರುವ ಕುರಿತು ಸಂದೇಶ ನೀಡಿದರು. “ಸ್ಥಿರ ಭವಿಷ್ಯಕ್ಕಾಗಿ ಬದಲಾವಣೆಯ ಒಕ್ಕೂಟ ಮತ್ತು ವಿಕೇಂದ್ರೀಕೃತ ವಿಧಾನಗಳು” ಎಂಬ ವಿಷಯದ ಕುರಿತು ತಾಂತ್ರಿಕ ಉಪನ್ಯಾಸ ನೀಡಿ, ಮುಂದಿನ ಪೀಳಿಗೆಗೆ ಬದಲಾವಣೆಯ ಅವಶ್ಯಕತೆಯ ಬಗ್ಗೆ ವಿವರಿಸಿದರು. ಪ್ರಾಂಶುಪಾಲರಾದ ಡಾ.ಎಂ.ಬಸವರಾಜ್ ಮಾತನಾಡಿ, ವಿದ್ಯಾರ್ಥಿ ಒಕ್ಕೂಟವು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹಾರೈಸಿದರು. ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಕೇಶ್ ಪೂವಯ್ಯ “ಸಂವಿದ್-2.0” ವಾರ್ಷಿಕ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿ, ಕೃತಕ ಬುದ್ಧಿಮತ್ತೆಯು ಹೇಗೆ ನಮ್ಮ ಸಮಾಜದಲ್ಲಿ ಬದಲಾವಣೆಯನ್ನು ತರುತ್ತಿದೆ ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ…

Read More

ಮಡಿಕೇರಿ ನ.14 NEWS DESK : ವಿಶ್ವ ಹಿಂದು ಪರಿಷದ್ ವತಿಯಿಂದ ನ.15 ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ ನಡೆಯಲಿದೆ. ಸಂಜೆ 5 ಗಂಟೆಗೆ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಜನೆ, ವೇದಘೋಷಗಳೊಂದಿಗೆ ಕಾವೇರಿ ತಾಯಿಗೆ ಆರತಿಯಾಗಲಿದೆ. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿಯ ವಿಹೆಚ್‍ಪಿ ಜೇಷ್ಠ ಪ್ರಚಾರಕರಾದ ಸು.ರಾಮಣ್ಣ ಪಾಲ್ಗೊಳ್ಳಲಿದ್ದು, ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‍ವೆಲ್ ಉಪಸ್ಥಿತರಿರುವರು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾತೆ ಕಾವೇರಿಗೆ ಆರತಿ ಬೆಳಗುವಂತೆ ವಿಶ್ವ ಹಿಂದು ಪರಿಷದ್ ನ ಕೊಡಗು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.  

Read More