ಮಡಿಕೇರಿ ಅ.23 NEWS DESK : 2024-25 ನೇ ಸಾಲಿನಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನಾಂಗದವರ ಆರ್ಥಿಕ ಅಭಿವೃದ್ಧಿ ಸಂಬಂಧ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸ್ಲಲಿಸಲು ಇಚ್ಛಿಸುವ ಪರಿಶಿಷ್ಟ ಪಂಗಡದ ಅರ್ಹ ಫಲಾಪೇಕ್ಷಿಗಳು ಅರ್ಜಿಯನ್ನು ವೆಬ್ಸೈಟ್ ವಿಳಾಸ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದು. ಯೋಜನೆಗಳ ಹೆಚ್ಚಿನ ಮಾಹಿತಿಯನ್ನು ಈ ಕಚೇರಿಯಿಂದ ಅಥವಾ ನಿಗಮದ ವೆಬ್ಸೈಟ್ https://kmvstdel.karnataka.gov.in ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸೇವಾಸಿಂಧು ವೆಬ್ಸೈಟ್ ವಿಳಾಸ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್, 23 ಕೊನೆಯ ದಿನವಾಗಿದೆ. ಆನ್ಲೈನ್ ಅಪ್ಲೋಡ್ ಮಾಡಿ ಅರ್ಜಿಯನ್ನು ನವೆಂಬರ್, 23 ರೊಳಗೆ ಸಲ್ಲಿಸಿ, ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ…
ಲೇಖಕ: admin
ಕುಶಾಲನಗರ ಅ.23 NEWS DESK : ಕಾವೇರಿ ನದಿ ಜಾಗೃತಿ ತಂಡ ಕಳೆದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಸಂಚರಿಸಿ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಬಳಿ ಕಾವೇರಿ ನದಿಗೆ ಆರತಿ ಬೆಳಗುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲೆಯ ಗಡಿ ದಾಟಿ ಹಾಸನ ಜಿಲ್ಲೆಯತ್ತ ಸಾಗಿತು. ಕೂಡಿಗೆ ಸಮೀಪದ ಕಣಿವೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನದಿಗೆ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎನ್.ಸುರೇಶ್ ಮಾತನಾಡಿ, ಕಾವೇರಿ ನದಿ ಸಂರಕ್ಷಣೆ ಬಗ್ಗೆ ಜನರಿಗೆ ನಿರಂತರವಾಗಿ ಅರಿವು ಜಾಗೃತಿ ಮೂಡಿಸುತ್ತಿರುವ ಸಂಘಟನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸ್ವಚ್ಛ ಕಾವೇರಿಗಾಗಿ ಕೈಜೋಡಿಸುವುದಾಗಿ ದೇವಾಲಯ ಆಡಳಿತ ಮಂಡಳಿ ಪರವಾಗಿ ಭರವಸೆ ವ್ಯಕ್ತಪಡಿಸಿದರು. ದೇವಾಲಯ ಬಳಿ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ನದಿ ತಟದಲ್ಲಿ ಪ್ರತಿ ಹುಣ್ಣಿಮೆಯ ಸಂದರ್ಭದಲ್ಲಿ ಈಗಾಗಲೇ ಆರತಿ ಕಾರ್ಯಕ್ರಮ ಹಮ್ಮಿ ಕೊಳ್ಳುವ ಮೂಲಕ ಜನರಿಗೆ ನದಿಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಈ ಮೂಲಕ ಜನರಿಗೆ ನದಿ…
ಮಡಿಕೇರಿ ಅ.23 NEWS DESK : ನಗರದ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಭವ್ಯ ವೇದಿಕೆ ನಿರ್ಮಿಸುವುದಕ್ಕೆ ಹೆಚ್ಚಿನ ಹಣ ವ್ಯಯವಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 2 ಕೋಟಿ ವೆಚ್ಚದಲ್ಲಿ ಶಾಶ್ವತವಾದ ಸುಸಜ್ಜಿತ ಭವ್ಯ ವೇದಿಕೆ ನಿರ್ಮಿಸಲು ನಗರಸಭಾ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ನಗರಸಭೆಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆಯ ಆಡಳಿತಾಧಿಕಾರಿಗಳಾದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗಾಂಧಿ ಮೈದಾನದಲ್ಲಿ ಪ್ರಸ್ತುತ ಇರುವ ರಂಗ ಮಂದಿರವನ್ನು ಕೆಡವಿ ನೂತನ ರಂಗ ಮಂದಿರ ನಿರ್ಮಾಣ, ಕಲಾವಿದರ ಅನುಕೂಲಕ್ಕಾಗಿ ಗ್ರೀನ್ ರೂಂ, ವೇದಿಕೆಯ ಎರಡು ಬದಿಗಳಲ್ಲಿ ಗ್ಯಾಲರಿ, ಹಣ ಪಾವತಿಸಿ ಬಳಸುವ ಶೌಚಾಲಯ ನಿರ್ಮಾಣ, ಹಣ ಪಾವತಿಸಿ ಬಳಸುವ ವಾಹನ ನಿಲುಗಡೆ ಸ್ಥಳ ಮತ್ತು ವೈದ್ಯಕೀಯ ಸಹಾಯ ಕೇಂದ್ರ ನಿರ್ಮಾಣ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಉದ್ದೇಶಿತ ನೂತನ ರಂಗ ಮಂದಿರ, ವಾಹನ ನಿಲುಗಡೆ ಸ್ಥಳಗಳನ್ನು ನಗರಸಭೆ ತನ್ನ ವಿವೇಚನೆಯಂತೆ ವರ್ಷ ಪೂರ್ತಿ ಸಂಘ…
ಮಡಿಕೇರಿ ಅ.22 NEWS DESK : ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಗೋ ಸದನ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಜಾಗವು ಸೋಮವಾರಪೇಟೆ ತಾಲ್ಲೂಕು ಸಾಮಾಜಿಕ ಅರಣ್ಯ ಇಲಾಖೆಯ ಹೆಸರಿಗೆ ನೊಂದಣಿಯಾಗಿರುವ ವಿಷಯವಾಗಿ ಗ್ರಾಮಸ್ಥರ ಸಭೆ ನಡೆಯಿತು. ಕೂಡಿಗೆ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಮತ್ತು ಹುದುಗೂರು ಗ್ರಾಮಸ್ಥರ ಬಹುದಿನಗಳ ಬೇಡಿಕೆಯ ಮನವಿಯ ಮೇರೆಗೆ ಕುಶಾಲನಗರದ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಎರಡೂ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೂಡಿಗೆ ಗ್ರಾ.ಪಂ ಆಡಳಿತ ಮಂಡಳಿ, ಹುದುಗೂರು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಯಿತು. ಪಶುಪಾಲನಾ ಇಲಾಖೆಗೆ ಕಾಯ್ದಿರಿಸಿದ ಜಾಗವು ಸಾಮಾಜಿಕ ಅರಣ್ಯ ಇಲಾಖೆಯ ಹೆಸರಿಗೆ ಕಂದಾಯ ಇಲಾಖೆಯ ಮುಖೇನ ಖಾತೆಯಾಗಿರುವ ವಿಷಯಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಮತ್ತು ಗ್ರಾಮಸ್ಥರು ಶಾಸಕ ಮಂತರ್ ಗೌಡ ಅವರ ಗಮನಕ್ಕೆ ತಂದರು. ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ಬೆಳೆಯುತ್ತಿರುವ ಗಿಡಗಳ…
ಮಡಿಕೇರಿ ಅ.22 NEWS DESK : ಸೋಮವಾರಪೇಟೆ ಉಪವಿಭಾಗದ ಶಾಂತಳ್ಳಿ ಶಾಖಾ ವ್ಯಾಪ್ತಿಗೆ ಒಳಪಡುವ ಎಫ್2-ಶಾಂತಳ್ಳಿ ಫೀಡರ್ನಲ್ಲಿ ಮಾರ್ಗನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಯಡೂರು, ತಲ್ತಾರೆ ಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರು ಶೆಟ್ಟಳ್ಳಿ, ಕೂಲೆಹೊಸಬೀಡು, ಕಲ್ಕಂದೂರು, ಬಸವನಕಟ್ಟೆ ನಗರಳ್ಳಿ, ಹೆಮ್ಮನೆಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಅ.22 NEWS DESK : 66/33/11ಕೆವಿ ವಿದ್ಯುತ್ ವಿತರಣ ಕೇಂದ್ರದಿಂದ ಹೊರಹೊಮ್ಮುವ ಎಫ್2 ಮಾದಾಪುರ ಫೀಡರ್ನ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.24 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಹರ್ದೂರು, ಗರಗಂದೂರು, ಹಳಿಯೂರು, ನಂದಿಮೊಟ್ಟೆ, ಮಾದಾಪುರ, ಕುಂಬೂರು, ಬಿಳಿಗೇರಿ, ಜಂಬೂರುಬಾಣೆ, ಹಟ್ಟಿಹೊಳೆ, ಗರ್ವಾಲೆ, ಸೂರ್ಲಬ್ಬಿ, ಕಾಂಡನಕೊಲ್ಲಿ, ಪನ್ನ, ಬೆಟ್ಟಗೇರಿ, ಸಿಸಿಎಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಅ.22 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಸಂಭ್ರಮ-50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗಾವಾರು ‘ಯುವಕವಿ ಗೋಷ್ಠಿಗಳನ್ನು ಆಯೋಜಿಸುತ್ತಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದಾಗಿದೆ. ಕವಿತೆಗಳನ್ನು ಕಳುಹಿಸಲು ಅ.30 ಕೊನೆಯ ದಿನವಾಗಿದೆ. ಆಸಕ್ತ ಕವಿಗಳು ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ http://karnatakasahithyaacademy.org ನಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.
ಮಡಿಕೇರಿ ಅ.22 NEWS DESK : ಜಿಲ್ಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಮಡಿಕೇರಿ ವಿಭಾಗವನ್ನು ಆರಂಭಿಸುವಂತೆ ಪುತ್ತೂರು ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಸಂಘ ಒತ್ತಾಯಿಸಿದೆ. ಕುಶಾಲನಗರದಲ್ಲಿಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಸಂಘದ ಅಧ್ಯಕ್ಷ ಸಿ.ಎಸ್ ಕುಮಾರ್ ಸ್ವಾಮಿ ಸೇರಿದಂತೆ ಸಮಿತಿ ಪದಾಧಿಕಾರಿಗಳು ಬೇಡಿಕೆಯ ಈಡೇರಿಕೆಗಾಗಿ ಮನವಿ ಮಾಡಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳಾದ ಮ್ಯಾಕ್ ಬ್ರೋನಿ, ಕೆ.ಡಿ.ಪೃಥ್ವಿರಾಜ್, ಬಿ.ಎಂ.ಬಸವರಾಜ್, ಸದಾಶಿವ, ಪ್ರವೀಣ್ ಕುಮಾರ್, ರಾಮಚಂದ್ರ, ಜಿ.ವಿ. ಕಿರಣ್ ಕುಮಾರ್, ಯೋಗೇಶ್, ಹೆಚ್.ಎಸ್.ಪ್ರದೀಪ್, ಆಂಜನೇಯ, ಮಂಜುನಾಥ ರೆಡ್ಡಿ ಹಾಜರಿದ್ದರು.
ಮಡಿಕೇರಿ ಅ.22 NEWS DESK : ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಹಿಂದೂಗಳಿಗೆ ಸುಸಜ್ಜಿತವಾದ ಸ್ಮಶಾನದ ಜಾಗವನ್ನು ಗುರುತಿಸಿ ಮಂಜೂರು ಮಾಡಬೇಕೆಂದು ನೆಲ್ಲಿಹುದಿಕೇರಿ ಸ್ಮಶಾನ ಹೋರಾಟ ಸಮಿತಿ ಒತ್ತಾಯಿಸಿದೆ. ನೆಲ್ಲಿಹುದಿಕೇರಿಯ ಕಟ್ಟಡ ಕಾರ್ಮಿಕರ ಕಚೇರಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಪಿ.ಆರ್.ಭರತ್, ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಆದಿವಾಸಿಗಳು, ದಲಿತರು, ಬಿಲ್ಲವರು, ಮೊಗೇರರು ಸೇರಿದಂತೆ ವಿವಿಧ ಸಮುದಾಯಕ್ಕೆ ಸೇರಿದ 5 ಸಾವಿರಕ್ಕಿಂತಲೂ ಹೆಚ್ಚಿನ ಹಿಂದೂ ಜನಾಂಗದವರಿದ್ದಾರೆ. ಸ್ಮಶಾನದ ಕೊರತೆಯಿಂದಾಗಿ ಶವಗಳನ್ನು ಕಾವೇರಿ ನದಿಯ ದಡದಲ್ಲಿ ಸಂಸ್ಕಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಆರೋಪಿಸಿದರು. ಸುಮಾರು 16 ವರ್ಷಗಳ ಹಿಂದೆ ಸ್ಥಳೀಯ ನಾಗರೀಕರೆ ಬೆಟ್ಟದಕಾಡು ವ್ಯಾಪ್ತಿಯಲ್ಲಿ ಸ್ಮಶಾನಕ್ಕಾಗಿ ಅರ್ಧ ಏಕರೆ ಜಾಗವನ್ನು ಗುರುತಿಸಿದ್ದರು. ಆದರೆ 2018-19 ಸೇರಿದಂತೆ ನಂತರದಲ್ಲಿ ಸುರಿದ ಅಧಿಕ ಮಳೆಯಿಂದಾಗಿ ಸ್ಮಶಾನದ ಜಾಗ ಕಾವೇರಿ ನದಿ ಪಾಲಾಗಿದ್ದು, ಪ್ರಸ್ತುತ ಸಂಸ್ಕಾರ ಮಾಡಲಾದ ಶವದ ಅಸ್ಥಿ ನದಿ ಪಾಲಾಗುತ್ತಿದೆ. ಅಲ್ಲದೆ ಸೂಕ್ತ ಜಾಗವಿಲ್ಲದೆ ಇಕಟ್ಟಿನ ಪ್ರದೇಶದಲ್ಲಿ ಶವ ಸಂಸ್ಕಾರ ಮಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈಗಾಗಲೇ…
ಮಡಿಕೇರಿ ಅ.22 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಂಚು ರೂಪಿಸಿವೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ, ಎರಡೂ ಪಕ್ಷಗಳನ್ನು ಕಾನೂನಿನ ಚೌಕಟ್ಟಿನಡಿ ನಿಯಂತ್ರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ. ಸಮಿತಿಯ ಜಿಲ್ಲಾ ಸಂಯೋಜಕ ಜೆ.ಆರ್.ಪಾಲಾಕ್ಷ ಮಾತನಾಡಿ ಜನಬಲ ಮತ್ತು ಬಹುಮತದಿಂದ ಆಯ್ಕೆಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸಂಚು ರೂಪಿಸಿವೆ. ಅಧಿಕಾರದ ದಾಹದಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕರಣವನ್ನು ಮುಂದಿಟ್ಟುಕೊಂಡು ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿಸುತ್ತಿವೆ ಎಂದು ಆರೋಪಿಸಿದರು. ರೈತ, ಕಾರ್ಮಿಕ, ಕೃಷಿ ಕ್ಷೇತ್ರ, ಬೆಲೆ ಏರಿಕೆ, ನಿರುದ್ಯೋಗ, ಆರೋಗ್ಯ ಸೇರಿದಂತೆ ಅನೇಕ ಮೂಲಭೂತ ಸಮಸ್ಯೆಗಳು ದೇಶವನ್ನು ಕಾಡುತ್ತಿದೆ. ಇದನ್ನು ಬಗೆ ಹರಿಸಲು ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಸಮಸ್ಯೆಗಳನ್ನು ಮರೆ ಮಾಚಲು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಗುರಿ ಮಾಡಿ ಕುತಂತ್ರ ರಾಜಕಾರಣ ಮಾಡಲಾಗುತ್ತಿದೆ ಎಂದು ಟೀಕಿಸಿದರು.…






