ಲೇಖಕ: admin

ಮಡಿಕೇರಿ ಅ.22 NEWS DESK : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಣೇಶ್ ಕುಲಾಲ್ ಅವರ ಚಿಕಿತ್ಸೆಗಾಗಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.  ಸೋಮವಾರಪೇಟೆ ತಾಲೂಕಿನ ಹಾನಗಲ್ ಗ್ರಾಮದ ನಿವಾಸಿ, ಆಟೋ ಚಾಲಕ ಗಣೇಶ್ ಕುಲಾಲ್ ಅವರ ಮನೆಗೆ ತೆರಳಿದ ಸಂಘದ ಪದಾಧಿಕಾರಿಗಳು ದಾನಿಗಳಿಂದ ಸಂಗ್ರಹಿಸಲಾದ  ಮೊತ್ತವನ್ನು ಗಣೇಶ್ ಅವರ ಚಿಕಿತ್ಸೆಗೆ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ, ಕಾರ್ಯದರ್ಶಿ ಅರುಣ್ ಕುಮಾರ್ ಕೂಡಿಗೆ, ಪದಾಧಿಕಾರಿಗಳಾದ ಸುರೇಶ್ ಕುಲಾಲ್ , ಎ.ಎ.ಚೇತನ ಕುಲಾಲ್,  ತೇಜಸ್ ಕುಲಾಲ, ಚಂದ್ರಶೇಖರ್ ಕುಲಾಲ್, ರವಿಕುಲಾಲ್, ವಿಶ್ವನಾಥ ಕುಲಾಲ್, ಮಾಸ್ಟರ್ ತನ್ಮಯ್ ಕುಲಾಲ, ಮಾಸ್ಟರ್ ಧ್ಯಾನಿಕ್ ಕುಲಾಲ್, ಗಣೇಶ ಅವರ ಪತ್ನಿ ಹರಿಣಾಕ್ಷಿ  ಮತ್ತು ತಾಯಿ ಸೇರಿದಂತೆ ಇನ್ನಿತರು ಹಾಜರಿದ್ದರು.

Read More

ಮಡಿಕೇರಿ ಅ.22 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಸಂದರ್ಭ ರಾತ್ರಿ ಹಗಲೆನ್ನದೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ನಗರಸಭೆಯ ಪೌರ ಕಾರ್ಮಿಕರಿಗೆ ವಿಶೇಷ ವೇತನ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಸಂಘಟನೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ ಸಂಘಟನೆಯ ಪ್ರಮುಖರು ಪೌರ ಕಾರ್ಮಿಕರಿಗೆ ದಸರಾ ವಿಶೇಷ ವೇತನ ನೀಡುವ ಅವಶ್ಯಕತೆ ಇದೆ ಎಂದು ಮನವರಿಕೆ ಮಾಡಿದರು. ದಸರಾ ವೀಕ್ಷಣೆಗೆಂದು ಪ್ರವಾಸಿಗರು ಸೇರಿದಂತೆ ಸಾವಿರಾರು ಮಂದಿ ಮಡಿಕೇರಿ ನಗರಕ್ಕೆ ಆಗಮಿಸಿದ ಸಂದರ್ಭ ಟನ್ ಗಟ್ಟಲೆ ಕಸದ ರಾಶಿ ಬಿದ್ದಿದೆ. ಇದನ್ನು ತೆರವುಗೊಳಿಸಿ ನಗರವನ್ನು ಸ್ವಚ್ಛಗೊಳಿಸಲು ಪೌರ ಕಾರ್ಮಿಕರು ಸಾಕಷ್ಟು ಶ್ರಮಿಸಿದ್ದಾರೆ. ಆರೋಗ್ಯದ ಮೇಲಿನ ದುಷ್ಪರಿಣಾಮವನ್ನು ಕೂಡ ಲೆಕ್ಕಿಸದೆ ಮಳೆಯ ನಡುವೆ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಇವರ ಶ್ರಮಕ್ಕೆ ತಕ್ಕ ಫಲವಾಗಿ ವಿಶೇಷ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಯೂನಿಯನ್ ನ ಪ್ರಧಾನ ಕಾರ್ಯದರ್ಶಿ ಎಂ.ಎ.ಅಬ್ದುಲ್…

Read More

ಚೆಟ್ಟಳ್ಳಿ ಅ.22 NEWS DESK : ಚೆಟ್ಟಳ್ಳಿಯ ಹಿಂದೂ ಮಲೆಯಾಳಿ ಸಮಾಜದ ವತಿಯಿಂದ 16ನೇ ವರ್ಷದ ಓಣಂ ಅನ್ನು ಮಲಯಾಳಿ ಸಮುದಾಯದವರು ಸಂಭ್ರಮದಿಂದ ಆಚರಿಸಿದರು. ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ನಡೆದ ಶೋಭಾಯಾತ್ರೆಯನ್ನು ಚೆಟ್ಟಳ್ಳಿ ಗ್ರಾ.ಪಂ ಅಧ್ಯಕ್ಷರಾದ ಸಿಂಧೂರಾಜನ್, ಗೌರವ ಅಧ್ಯಕ್ಷರಾದ ಸಿ.ಎಸ್.ಕುಟ್ಟನ್, ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್ ಉದ್ಘಾಟಿಸಿದರು. ನಂತರ ಚಂಡೆವಾದ್ಯ ಮಾವೇಲಿ ಯೊಂದಿಗೆ ಮಲೆಯಾಳಿ ಜನಾಂಗದ ಸಾಂಪ್ರದಾಯಿಕ ಶೋಭಾಯಾತ್ರೆ ಮಂಗಳ ಸಭಾಂಗಣದಿಂದ ಹೊರಟು ಚೆಟ್ಟಳ್ಳಿ ಪಟ್ಟಣಕ್ಕೆ ತೆರಳಿ ಪ್ರೌಢಶಾಲಾ ಮೈದಾನದಲ್ಲಿ ಅಂತ್ಯಗೊಂಡಿತು. ಸಮಾಜ ಭಾಂದವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನೆರವೇರಿತು. ನಂತರ ಓಣಂ ಸದ್ಯ( ವಿಶೇಷ ಭೋಜನ) ಸವಿದರು. ಕಾರ್ಯದ ಅಂಗವಾಗಿ ಸಮಾಜದ ಸದಸ್ಯರಾದ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗೆ ವಿವಿಧ ಪ್ರಶಸ್ತಿಗೆ ಭಾಜನರಾದ ಸುನಿಲ್ ಕುಮಾರ್, 25 ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ‌ ದರ್ಜೆಯಲ್ಲಿ ಉತ್ತೀರ್ಣರಾದ ಬೇಬಿರಾಣಿ, ಆದಿಲ್ ಪ್ರದೀಪ್, ಪಿಯುಸಿಯಲ್ಲಿ ಅತ್ಯುತ್ತಮ‌ ಅಂಕಪಡೆದ ಸಾನಿಧ್ಯ ಉಮೇಶ್, ರಿನಿಶಾ ಸುರೇಂದ್ರನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾಜದ…

Read More

ಮಡಿಕೇರಿ ಅ.22 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರಿಗೆ ಮಾಹೆಯಾನ ರೂ.1 ಸಾವಿರಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯನ್ನು 2024-25ನೇ ಸಾಲಿನಲ್ಲಿ ಜಾರಿಗೊಳಿಸಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು…

Read More

ಮಡಿಕೇರಿ ಅ.21 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯು ಅ.23 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಅ.22 NEWS DESK : 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಮೂರ್ನಾಡು ಸಮುದಾಯ ಭವನದಲ್ಲಿ 22 ರಿಂದ 45 ವಯಸ್ಸಿನ ಮಹಿಳೆಯರ ಯೋಗ ಕ್ಷೇಮದಲ್ಲಿ ಆಯುರ್ವೇದ ಪಾತ್ರ ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಲಿತು. ವೈದ್ಯರಾದ ಹೆಚ್.ಆರ್.ಸರಸ್ವತಿ, ಎಸ್.ಎನ್.ಬೃಂದಾ ಗರ್ಭಿಣಿಯರಲ್ಲಿನ ಸಮಸ್ಯೆಗಳು, ರಕ್ತಹೀನತೆ, ರಕ್ತದೊತ್ತಡ, ಮಧುಮೇಹ, ಗ್ಯಾಸ್ಟ್ರಿಕ್, ಸಂತಾನೋತ್ಪತ್ತಿ ಸಮಸ್ಯೆಗಳು, ಥೈರಾಯ್ಡ್, ಆಯುರ್ವೇದ ಪಂಚಕರ್ಮ ಚಿಕಿತ್ಸೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಮನೆ ಮದ್ದಿನ ಬಗ್ಗೆ ಗಿಡಮೂಲಿಕೆಗಳ ಬಗ್ಗೆ ಅರಿವು ಮೂಡಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಮಾತನಾಡಿ, ಆಯುರ್ವೇದದ ಸದುಪಯೋಗವನ್ನು ಪಡೆದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕಿದೆ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಮಹಿಳೆಯರಿಗೆ ಆಯುಷ್ ಆರೋಗ್ಯ ಕೈಪಿಡಿ ಬಿಡುಗಡೆ ಮಾಡಲಾಯಿತು.

Read More

ಪೊನ್ನಂಪೇಟೆ ಅ.22 NEWS DESK : ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಅಂಬಟ್ಟಿ ಗ್ರಾಮದ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶೇಕ್ ವಲಿಯುಲ್ಲಾಹಿರವರ ವಾರ್ಷಿಕ ಉರೂಸ್ (ಮಕ್ಕಾನಿ ನೇರ್ಚೆ) ಫೆಬ್ರವರಿ 7 ರಿಂದ 11ರವರೆಗೆ ನಡೆಸಲು ಅಂಬಟ್ಟಿ ಜುಮಾ ಮಸೀದಿ ಆಡಳಿತ ಮಂಡಳಿ ನಿರ್ಧರಿಸಿದೆ. ಫೆ.7ರಂದು ಅಂಬಟ್ಟಿ ಮಖಾಂ ಉರೂಸ್ ಗೆ ಚಾಲನೆ ದೊರೆಯಲಿದೆ. ನಂತರ ಪ್ರತಿ ದಿನ ಸಂಜೆ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಫೆ. 10 ರಂದು ಉರೂಸ್ ಪ್ರಧಾನ ಭಾಗವಾಗಿ ಸಾರ್ವಜನಿಕ ಸಮ್ಮೇಳನ ಮತ್ತು ಸಾಮೂಹಿಕ ಅನ್ನಸಂತರ್ಪಣೆ ಜರುಗಲಿದೆ ಎಂದು ಅಂಬಟ್ಟಿ ಜುಮಾ ಮಸೀದಿ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಪುತ್ತೂರು ಅ.22 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ಭರದಿಂದ ನಡೆಯುತ್ತಿದೆ. ಕಂಪೆನಿಗಳು ಬಯಸುವ ರೀತಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ ಅವರನ್ನು ನೇಮಕಾತಿಗಾಗಿ ಸಜ್ಜುಗೊಳಿಸಲಾಗುತ್ತಿದೆ. ಎರಡು ತಿಂಗಳ ಹಿಂದಷ್ಟೇ ಪ್ರಾರಂಭವಾದ ನೇಮಕಾತಿ ಪ್ರಕ್ರಿಯೆಯಲ್ಲಿ ಸೆಪ್ಟಂಬರ್ ತಿಂಗಳಿನಲ್ಲಿ 5, ಹಾಗೂ ಅಕ್ಟೋಬರ್ ತಿಂಗಳಿನಲ್ಲಿ 8 ಕಂಪೆನಿಗಳು ಸೇರಿದಂತೆ ಇದುವರೆಗೆ ಹೆಸರಾಂತ 13 ಕಂಪೆನಿಗಳು ಪಾಲ್ಗೊಂಡಿವೆ. ಸಾಪ್ ಲ್ಯಾಬ್, ಕಾಂಟ್ರಾಕ್ಟಿಂಗ್ ಅಸೋಸಿಯೇಟ್ಸ್ ಮಿಡಲ್ ಈಸ್ಟ್ ಲಿಮಿಟೆಡ್, ಡೆಲ್ಟಾಕ್ಸ್, ಸೆಲ್ಕೋ ಸೋಲಾರ್ ಪವರ್, ಯುನಿಕೋರ್ಟ್, ಸೈನ್‍ಡೆಸ್ಕ್, ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್, ಸಾಸ್ಕೆನ್, ಇಜಿಡಿಕೆ ಮುಂತಾದ ಕಂಪೆನಿಗಳು ಕಾಲೇಜಿಗೆ ಆಗಮಿಸಿ ಪ್ರಕ್ರಿಯೆಯನ್ನು ನಡೆಸಿವೆ. ವಾರ್ಷಿಕ 5 ಲಕ್ಷದಿಂದ ಪ್ರಾರಂಭಿಸಿ 15 ಲಕ್ಷದವರೆಗಿನ ಸಂಬಳವನ್ನು ಗಳಿಸುವ ಹುದ್ದೆಗೆ ನೇಮಕಾತಿ ನಡೆದಿದೆ. 21 ವಿದ್ಯಾರ್ಥಿಗಳು ಈಗಾಗಲೇ ನೇಮಕಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ಕೆಲವು ಕಂಪೆನಿಗಳ ಅಂತಿಮ ಸುತ್ತಿನ ಪ್ರಕ್ರಿಯೆ ನಡೆಯಬೇಕಿದ್ದು, ಇನ್ನು ಕೆಲವು ಕಂಪೆನಿಗಳ ಫಲಿತಾಂಶ ಇನ್ನಷ್ಟೇ ಹೊರ…

Read More

ಮಡಿಕೇರಿ ಅ.22 NEWS DESK : ಉತ್ತರಖಂಡ ರಾಜ್ಯದ ರಾಣಿಭಾಗ್‍ನಲ್ಲಿ ನಡೆದ ರಾಷ್ಟ್ರ ಮಟ್ಟದ ‘ಏಕ್ ಭಾರತ್, ಶ್ರೇಷ್ಠ್ ಭಾರತ್’ ಶಿಬಿರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 7 ಎನ್‍ಸಿಸಿ ಕೆಡೆಟ್‍ಗಳು ಭಾಗವಹಿಸಿ, ಅಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. ಕಾಲೇಜಿನ ಎನ್‍ಸಿಸಿ ಕೆಡೆಟ್‍ಗಳಾದ ಲಾಲ್ ಪ್ರಸಾದ್, ಸುಭಾಷ್ ರಾಥೋಡ್, ಅಕ್ಷತಾ ಬಿ.ಎಂ.ಶಮಂತ್, ಲತೇಶ್, ವಂಶಿಕ್ ಸೋಮಣ್ಣ, ಅಶ್ವಿತಾ ಕೆ.ಎನ್., ರೀತಾ ಗೌಡ ಇತರರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಅ.22 NEWS DESK : ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು 2024ರ ನ.5 ರಿಂದ 2025 ರ ಫೆಬ್ರವರಿ 4 ರವರೆಗೆ (ಪುರುಷ ಅಭ್ಯರ್ಥಿಗಳು ಮಾತ್ರ) ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕೊಡಗು ಜಿಲ್ಲೆಯಿಂದ 18 ರಿಂದ 35 ವರ್ಷ ವಯಸ್ಸಿನೊಳಗಿನ ಒಂದು ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು (ಇತರೆ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕ್ಟೋಬರ್, 25 ರವರೆಗೆ ಕಚೇರಿಯಲ್ಲಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿ/ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ/ಇಲಾಖಾ ವೆಚ್‍ಸೈಟ್: https://horticulturedir.karnataka.gov.in ನಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಅ.28 ಕೊನೆಯ ದಿನವಾಗಿದೆ. ಮೂಲ ಅಗತ್ಯ ದಾಖಲಾತಿಗಳೊಡನೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ತಂದೆ, ತಾಯಿ, ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ತಂದೆ/ತಾಯಿಯವರ ಒಪ್ಪಿಗೆ ಪತ್ರ. ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ/ ಹಿರಿಯ…

Read More