ಪೊನ್ನಂಪೇಟೆ ಅ.22 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರತಿ ವರ್ಷ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ನೀಡಲಾಗುತ್ತಿರುವ ಕೆಎಂಎ ಪ್ರತಿಭಾ ಪುರಸ್ಕಾರದ ಜೊತೆಗೆ 2023-24ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳಿಸಿ ಇಡೀ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತಲಾ ಓರ್ವ ಸಾಧಕ ವಿದ್ಯಾರ್ಥಿಗೆ ಹಾಗೂ ಕಳೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಡೀ ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ ತಲಾ ಓರ್ವ ಮುಸ್ಲಿಂ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ‘ಕೆ.ಎಂ.ಎ. ವಿಶೇಷ ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲು ಕೆ.ಎಂ.ಎ. ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ, ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳಿಸಿ ಇಡೀ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ…
ಲೇಖಕ: admin
ಮೂರ್ನಾಡು ಅ.22 NEWS DESK : ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಈಜು ತಜ್ಞ ಹಾಗೂ ಸಂಘದ ಸದಸ್ಯ ಬಿ.ಆರ್.ಬಿಪಿನ್ ಅವರನ್ನು ಸನ್ಮಾನಿಸಲಾಯಿತು. ಬಲಮುರಿ ಅಗಸ್ತೆಶ್ವರ ದೇವಾಲಯದ ಜಾತ್ರೆಯ ದಿನ ಬಲಮುರಿ ಕಾವೇರಿ ಹೊಳೆಯಲ್ಲಿ ಮುಳುಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವಾಸು ಎಂಬವರನ್ನು ರಕ್ಷಿಸಿದ ಬಿ.ಆರ್.ಬಿಪಿನ್ ಅವರ ಸಾಹಸ ಕಾರ್ಯಕ್ಕೆ ಸಂಘದ ವತಿಯಿಂದ ಶಾಲು ಹೊದಿಸಿ ಫಲ-ತಾಂಬೂಲ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕರವಂಡ ಸಜನ್ಗಣಪತಿ, ಉಪಾಧ್ಯಕ್ಷ ಅಶ್ವಥ್ರೈ, ಕಾರ್ಯದರ್ಶಿಎನ್.ಎನ್. ಶರಣು, ಖಜಾಂಚಿ ಹೆಚ್.ಹೆಚ್. ಜಯಂತ್ ಕುಮಾರ್, ಸಹ ಕಾರ್ಯದರ್ಶಿ ದಿನೇಶ್ ರೈ ಹಾಗೂ ಸಂಘದ ಸದಸ್ಯರು ಹಾಜರಿದ್ದರು. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು
ಕುಶಾಲನಗರ ಅ.22 NEWS DESK : ಪ್ರಕೃತಿ ಸಂರಕ್ಷಣೆಯೊಂದಿಗೆ ಸ್ವಚ್ಛ ಪರಿಸರದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಕರೆ ನೀಡಿದ್ದಾರೆ. ಕುಶಾಲನಗರದ ಕಾವೇರಿ ಆರತಿ ಕ್ಷೇತ್ರದಲ್ಲಿ ಅಖಿಲ ಭಾರತ ಸನ್ಯಾಸಿಗಳ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಆಶ್ರಯದಲ್ಲಿ ನಡೆದ ಕಾವೇರಿ ನದಿ ಜಾಗೃತಿ ಯಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕಾವೇರಿಯ ಮೂಲದಿಂದ ನದಿ ಸಮುದ್ರ ಸಂಗಮ ತನಕ ಜಲ ಮೂಲಗಳನ್ನು ಸಂರಕ್ಷಣೆ ಮಾಡುವ ಹೊಣೆ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದರು. ಕೆಲವೇ ವರ್ಷಗಳ ಹಿಂದೆ ನದಿಯಿಂದ ಬೊಗಸೆ ಕೈಯಲ್ಲಿ ನೇರ ಬಳಕೆ ಮಾಡುತ್ತಿದ್ದ ನೀರು ಇತ್ತೀಚಿನ ದಿನಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ ಶ್ರೀಗಳು, ಸ್ವಚ್ಛ ಕಾವೇರಿಗಾಗಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿರುವ ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಪ್ರಮುಖರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ನದಿ ಬಗ್ಗೆ ಜನತೆಗೆ ಜಾಗೃತಿ…
ಮಡಿಕೇರಿ ಅ.22 NEWS DESK : ಮತ್ತೊಂದು ದಸರಾ ಮುಗಿದಿದೆ. ವರ್ಷದಿಂದ ವರ್ಷಕ್ಕೆ ದಸರಾ ಬೆಳೆಯುತಿದೆ. ನಾನು ಕಳೆದ ಸರಿ ಸುಮಾರು 30 ವರ್ಷದಿಂದ ಬಹಳ ಸಮೀಪದಿಂದ ನೋಡಿದ್ದೇನೆ. ಹಲವಾರು ಉಪಸಮಿತಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಅಂದು ಸರ್ಕಾರದ ಅನುದಾನವಿಲ್ಲದೆ ಸಂಪನ್ಮೂಲ ಕ್ರೋಡಿಕರಿಸಿ ಕೆಲವೇ ಲಕ್ಷದಿಂದ ನಡೆಯುತ್ತಿದ್ದ ದಸರಾ ಇಂದು ಸರ್ಕಾರದ ಅನುದಾನ ಕೋಟಿ ದಾಟಿದೆ. ಹಳೆ ಖಾಸಗಿ ಬಸ್ ನಿಲ್ದಾಣದಿಂದ ಗಾಂಧಿಮೈದಾನದವರೆಗೆ ಬೆಳವಣಿಗೆ ಕಂಡ ದಸರಾ, ಕಾವೇರಿ ಕಲಾಕ್ಷೇತ್ರದಿಂದ ಇಂದು ಗಾಂಧಿಮೈದಾನದ ಬೃಹತ್ ವೇದಿಕೆಗೆ. ಪಲ್ಲಕಿಯಿಂದ ಆರಂಭವಾದ ಶೋಭಾಯಾತ್ರೆ ದೇವಾಲೋಕ ಬಿಂಬಿಸುವ ರೀತಿಯಲ್ಲಿ ಇಂದು ಬಂದು ನಿಂತಿದೆತೆಂದರೇ ಇದರ ಹಿಂದೆ ಬಹಳಷ್ಟು ಹಿರಿಯರ ಪರಿಶ್ರಮ, ಸಮಯದ ತ್ಯಾಗವಿದೆ. ಜನ ಅವರ ಪರಿಶ್ರಮವನ್ನು ಗುರುತಿಸಿದ್ದಾರೆ. ಆದರೆ ದಸರಾ ಸಮಿತಿಯ ಕಾರ್ಯಕ್ರಮದ ಬಗ್ಗೆ ಮಡಿಕೇರಿಯ ನಾಗರಿಕರಿಗೆ ಅಸಮಾಧಾನವಿದೆ. “ದಸರಾ ಅಂದು ದೇವತಕಾರ್ಯ ಇಂದು ರಾಜಕೀಯ ಮೇಲಾಟ'” ಎಂಬ ಶಿರೋನಾಮೆಯಡಿಯಲ್ಲಿ 5 ವರ್ಷದ ಹಿಂದೆ ಒಂದು ಲೇಖನ ಬರೆದು ಜನರಿಗೆ ಅನುಕೂಲವಾಗುವಂತೆ ಅನೇಕ ಸಲಹೆ…
ಗೋಣಿಕೊಪ್ಪಲು ಅ.22 NEWS DESK : ಜನಪದ ಕಲೆ ಸಂಸ್ಕೃತಿ ತುಂಬಾ ಅನನ್ಯವಾದದ್ದು. ಪ್ರಾಚೀನ ಜನಪದ ಬದುಕಿನ ಆಳಕ್ಕಿಳಿದು ಅಧ್ಯಯನ ಮಾಡಿದರೆ ಅನೇಕ ಮಹತ್ವದ ವಿಚಾರಗಳು ನಮ್ಮ ಅರಿವಿಗೆ ದಕ್ಕುತ್ತದೆ. ವಿವಿಧ ಪ್ರದೇಶಗಳ ಜಾನಪದೀಯ ಅಂಶಗಳನ್ನು ಕಲೆಹಾಕಿ ಪ್ರಸ್ತುತ ಕಾಲಘಟ್ಟಕ್ಕೆ ಇವನ್ನು ಸಮನ್ವಯ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಡಾ. ಕೆ.ಕಮಲಾಕ್ಷ ಅವರ ಕಾರ್ಯ ಅಭಿನಂದನೀಯ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ನುಡಿದರು. ಗೋಣಿಕೊಪ್ಪ ಬಳಿಯ ಅರವತ್ತೊಕ್ಕಲಿನ ಲಕ್ಷ್ಮೇಶ್ವರ ಎಸ್ಟೇಟ್ ನ ಬೆಳದಿಂಗಳು ನಲ್ಲಿ ಸಾಹಿತಿಗಳು, ನಿವೃತ್ತ ಪ್ರಾಂಶುಪಾಲರು ಡಾ.ಕಮಲಾಕ್ಷ .ಕೆ ಅವರ ವಿನೂತನ ಕೃತಿ “ಭೂಮಿಯಿಂದ ಮೊಳೆತು ಬಂದ ಪಾಟ್ ಕಥೆಗಳು” ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಹಿಂದೆ ಬರೆದ “ಕೇರಳದ ಜನಪದ ವೀರ ತಚ್ಚೋಳಿ ಒದೆನನ್” ಹಾಗೂ “ಅಂಕ ಕಲಿಗಳ ವಿರಗಾಥೆ” ಅನುವಾದಿತ ಕಲಾಕೃತಿಗಳು ಸಹ ಸಂಗ್ರಹ ಯೋಗ್ಯ ಪುಸ್ತಕಗಳಾಗಿವೆ. ಸಾಹಿತ್ಯ ಕೃತಿಗಳ ಅನುವಾದ ಸುಲಭ ಸಾಧು…
ಮಡಿಕೇರಿ ಅ.23 NEWS DESK : ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ ಕ್ಲಿನಿಕ್ಗಳಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ. ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ) ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ ರೂ.21000, ಗರಿಷ್ಠ ವಯೋಮಿತಿ: 60 ವರ್ಷ ಅರ್ಹತೆ ಹಾಗೂ ಹೆಚ್ಚಿನ ಮಾಹಿತಿಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಾಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ. ಇಲ್ಲಿ ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಅ.30 ಕೊನೆ ದಿನವಾಗಿದೆ.
ಮಡಿಕೇರಿ ಅ.21 NEWS DESK : ಕುಶಾಲನಗರ ವ್ಯಾಪ್ತಿಯ ಬೆಂಡೆಬೆಟ್ಟ ಗ್ರಾಮದ ಮುಖ್ಯ ರಸ್ತೆಯ ಬದಿಯಲ್ಲಿ ಹಾಡಹಗಲೇ ಕಾಡಾನೆಯೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಮುಂಜಾನೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣವೇ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಸ್ಥಳಕ್ಕೆ ಆಗಮಿಸಿದ ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅತ್ತೂರು ಉಪವಲಯ ಅರಣ್ಯಾಧಿಕಾರಿ ಉಮೇಶ್ ನೇತೃತ್ವದ ಸಿಬ್ಬಂದಿಗಳು ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಲು ಅಗತ್ಯ ಕ್ರಮ ಕೈಗೊಂಡರು. ರಾತ್ರಿ ವೇಳೆ ಹಾರಂಗಿ ನದಿಯನ್ನು ದಾಟಿಕೊಂಡು ಬರುವ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆಯನ್ನು ನಷ್ಟ ಪಡಿಸುತ್ತಿದ್ದು, ಅರಣ್ಯ ಇಲಾಖೆ ಕಾಡಾನೆ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಅ.21 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಂಘದ ಪದಗ್ರಹಣ ಸಮಾರಂಭವು ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ತಪೋವನ ಗುರುಮಂದಿರದ ಸಭಾಂಗಣದಲ್ಲಿ ನಡೆಯಿತು. ಕುಶಾಲನಗರ ಸಂತ ಸಬಾಸ್ಟಿನ್ ದೇವಾಲಯದ ವಂದನೀಯ ಗುರು ಎಂ.ಮಾರ್ಟಿನ್ ಆಶೀರ್ವಚನ ನೀಡಿ, ಸಮಾಜದಲ್ಲಿ ಸಂಘ-ಸಂಸ್ಥೆಗಳು ಬೇಕು. ಆದರೆ ಅದರಿಂದ ಸಮಾಜದಲ್ಲಿ ಕಡು ಬಡವರಿಗೆ ಸಹಾಯ ಮಾಡುವುದು ಮತ್ತು ಇತರರೊಡನೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಬೇಕೆಂದರು. ಗುರು ಗಿಲ್ಬರ್ಟ್ ಡಿಸಿಲ್ವ ಮಾತನಾಡಿ, ಪ್ರೀತಿಯಿಂದ ಎಲ್ಲರೊಡನೆ ಬೆರೆತು ಬಾಳಬೇಕೆಂದು ಕರೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ನ ನಿಕಟ ಪೂರ್ವ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ ನೂತನ ಅಧ್ಯಕ್ಷ ಜಾನ್ಸನ್ ಪಿಂಟೋ ಅವರಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾ ತಮ್ಮಂತೆ ಇತರರನ್ನು ಕಾಣಬೇಕೆಂದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಜಾನ್ಸನ್ ಪಿಂಟೋ, ಪ್ರಮಾಣಿಕತೆಯಿಂದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಬಡವರ ಮತ್ತು ಸಾರ್ವಜನಿಕರ ಒಳಿತಿಗಾಗಿ ಕೈ ಜೋಡಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಂದನೀಯ ಗುರು…
ಮಡಿಕೇರಿ ಅ.21 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನಿಮಾ)ನ ಕೊಡಗು ಜಿಲ್ಲಾ ಘಟಕ ಹಾಗೂ ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ.29 ರಂದು ಮೇಕೇರಿ ಗ್ರಾಮದ ಶ್ರೀ ಸತ್ಯಸಾಯಿ ಮಂದಿರದಲ್ಲಿ ‘ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ನಿಮಾ ಅಧ್ಯಕ್ಷ ಡಾ.ಎ.ಆರ್.ರಾಜಾರಾಂ ಅವರು ಈ ಕುರಿತು ಮಾಹಿತಿ ನೀಡಿ, ‘ಆಧುನಿಕತೆಯಲ್ಲಿ ಆಯುರ್ವೇದ’ ಎನ್ನುವ ಘೋಷವಾಕ್ಯದೊಂದಿಗೆ ನಡೆಯುವ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಂದು ಬೆಳಗ್ಗೆ 9.30 ಕ್ಕೆ ಧನ್ವಂತರಿ ಹವನದ ಬಳಿಕ ನುರಿತ ಆಯುರ್ವೇದ ವೈದ್ಯರೊಂದಿಗೆ ಸಾರ್ವಜನಿಕರ ಸಂವಾದ ಕಾರ್ಯಕ್ರಮ, ಆಯುರ್ವೇದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಹಿರಿಯ ವೈದ್ಯರಿಗೆ ಸನ್ಮಾನ ಮತ್ತು ಉಚಿತ ಆಯುರ್ವೇದ ತಪಾಸಣಾ ಶಿಬಿರ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು, ಮಡಿಕೇರಿ ತಾಲ್ಲೂಕು ಶಾಸಕರಾದ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ರಾಮರಾಜನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳ್ಳಿ ಹಬ್ಬಕ್ಕೆ ಚಾಲನೆ :: ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್…
ಮಡಿಕೇರಿ ಅ.21 NEWS DESK : ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಡಿವೈಎಸ್ಪಿಗಳ ಪರವಾಗಿ ಮೋಹನ್ ಕುಮಾರ್, ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಪೊಲೀಸ್ ನಿರೀಕ್ಷಕರಾದ ಚೆನ್ನನಾಯಕ, ವೈಯರ್ಲೆಸ್ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಆನಂದ್, ಮಾಜಿ ಸೈನಿಕರ ಪರವಾಗಿ ಏರ್ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ನಿವೃತ್ತ ಡಿವೈಎಸ್ಪಿಗಳ ಪರವಾಗಿ ಬಿ.ಎಂ.ಕುಶಾಲಪ್ಪ, ಪೊಲೀಸ್ ನಿರೀಕ್ಷಕರ ಪರವಾಗಿ ಐ.ಪಿ.ಮೇದಪ್ಪ, ಬ್ಯಾಂಡ್ ಮಾಸ್ಟರ್ ಸಿದ್ದೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ವಕೀಲರ ಸಂಘದ ಪರವಾಗಿ ನಿರಂಜನ, ಕೊಡವ ಸಮಾಜಗಳ ಪರವಾಗಿ ಮುತ್ತಪ್ಪ,…






