ಬೆಂಗಳೂರು ಅ.21 NEWS DESK : ಭಾರತೀಯ ಫಿಲ್ಟರ್ ಕಾಫಿ, ಅದರ ಶ್ರೀಮಂತ ಪರಿಮಳ ಮತ್ತು ರುಚಿಯೊಂದಿಗೆ, ಅಂತರರಾಷ್ಟ್ರೀಯ ಮನ್ನಣೆಯನ್ನು ಗಳಿಸಿದೆ, ಈ ವಾರ ಬಿಡುಗಡೆಯಾದ ಟೇಸ್ಟ್ ಅಟ್ಲಾಸ್ (Taste Atlas) ನ ವಿಶ್ವದ ಅತ್ಯುತ್ತಮ- ಕಾಫಿ ಪಾನೀಯಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. “ಇವು ವಿಶ್ವದ 10 ಅತ್ಯುತ್ತಮ ಕಾಫಿ ಪಾನೀಯಗಳಾಗಿವೆ!” ಎಂದು ಟೇಸ್ಟ್ ಅಟ್ಲಾಸ್ ಉಲ್ಲೇಖಿಸುತ್ತದೆ. ಮೊದಲ ಸ್ಥಾನ ಪಡೆದ ಮೂರರಲ್ಲಿ ಗ್ರೀಸ್ನ ಎಸ್ಪ್ರೆಸೊ ಫ್ರೆಡ್ಡೊ ಮೂರನೇ ಸ್ಥಾನದಲ್ಲಿದ್ದರೆ, ಕ್ಯೂಬಾದ ಕೆಫೆ ಕ್ಯೂಬಾನೊ ಅಗ್ರ ಸ್ಥಾನವನ್ನು ಪಡೆದಿದೆ. ದಕ್ಷಿಣ ಭಾರತದ ಫಿಲ್ಟರ್ ಕಾಫಿಯ ಶ್ರೇಯಾಂಕವು ಭಾರತದಲ್ಲಿ ಮತ್ತು ಜಾಗತಿಕವಾಗಿ ಅದರ ಸಾಂಸ್ಕೃತಿಕ ಮಹತ್ವ ಮತ್ತು ವ್ಯಾಪಕ ಜನಪ್ರಿಯತೆಯನ್ನು ಪ್ರತಿಬಿಂಬಿಸುತ್ತದೆ. ಪಾನೀಯದ ವಿಶಿಷ್ಟವಾದ ತಯಾರಿಕೆ ಮತ್ತು ಸೇವೆಯ ಶೈಲಿಯು ಅದರ ವಿಶಿಷ್ಟ ಸುವಾಸನೆಯೊಂದಿಗೆ ವಿಶ್ವ ವೇದಿಕೆಯಲ್ಲಿ ಅದರ ಹೆಚ್ಚುತ್ತಿರುವ ಗುರುತಿಸುವಿಕೆಗೆ ಕಾರಣವಾಗಿದೆ. ಟೇಸ್ಟ್ ಅಟ್ಲಾಸ್ ವಿಯೆಟ್ನಾಮೀಸ್ ಐಸ್ಡ್ ಕಾಫಿ, ಗ್ರೀಸ್ನಿಂದ ಫ್ರಾಪ್ಪೆ ಮತ್ತು ಜರ್ಮನಿಯ ಐಸ್ಕಫೀ ಸೇರಿದಂತೆ ಇತರ ಗಮನಾರ್ಹ…
ಲೇಖಕ: admin
ಮಡಿಕೇರಿ NEWS DESK ಅ.20 : ಕೊಡಗು ಜಿಲ್ಲಾ ವ್ಯಾಪಿ ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿಯನ್ನು ದುರುಪಯೋಗಪಡಿಸಿಕೊಂಡು ನಡೆಸುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಅ.23ರಂದು ಬೆಳಿಗ್ಗೆ 10.30 ಗಂಟೆಗೆ ಭಾಗಮಂಡಲದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗಿನಲ್ಲಿ ಕರ್ನಾಟಕ ಭೂಸುಧಾರಣಾ ಕಾಯ್ದೆ ವ್ಯಾಪಕವಾಗಿ ದುರುಪಯೋಗವಾಗುತ್ತಿದೆ. ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲಿ ಬರುವ ಪೇರೂರು ಬಲ್ಲಮಾವಟಿ ಪ್ರದೇಶದಲ್ಲಿ ಕಾವೇರಿಯ ಉಪನದಿ “ಕಪ್ಪೊಳೆಯ” ಜಲಮೂಲವನ್ನು ಧ್ವಂಸಗೊಳಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಕಾವೇರಿಯ ಪುಣ್ಯ ಸ್ಥಳವು ಸುಪ್ರಸಿದ್ಧ ತೀರ್ಥಯಾತ್ರ ಕ್ಷೇತ್ರವಾಗಿದ್ದು, ಇದು ಪ್ರವಾಸಿತಾಣವಾಗುವ ಬದಲು ಆಧ್ಯಾತ್ಮಿಕ, ಪಾರಮಾರ್ಥಿಕ ನೆಲೆಯಾಗಿ ಉಳಿದು ಮುಂದುವರೆಯಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ದುರ್ಬಳಕೆಯಾಗದಂತೆ ಸಾತ್ವಿಕ ಪ್ರತಿರೋಧವನ್ನು ಸಿಎನ್ಸಿ ಒಡ್ಡುತ್ತಾ ಬಂದಿದೆ. ಇದರ ಭಾಗವಾಗಿ ಬುಧವಾರ ಭಾಗಮಂಡಲದಲ್ಲಿ ಸಿಎನ್ಸಿಯಿಂದ ಶಾಂತಿಯುತ ಮಾನವ ಸರಪಳಿ…
ಮಡಿಕೇರಿ ಅ.19 NEWS DESK : ಸಂಪಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿಯ ಮುಖಂಡ ಸಂಪಾಜೆ ನಿವಾಸಿ ಬಾಲಚಂದ್ರ ಕಳಗಿ ಅವರ ಹತ್ಯೆ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಇಬ್ಬರಿಗೆ ದಂಡ ಸಹಿತ ಜೀವಾವಧಿ ಶಿಕ್ಷೆ ವಿಧಿಸಿದೆ. ಕಲ್ಲುಗುಂಡಿ ನಿವಾಸಿ ಹರಿಪ್ರಸಾದ್ ಹಾಗೂ ಲಾರಿ ಚಾಲಕ ಮಡಿಕೇರಿಯ ಜಯನ್ ಶಿಕ್ಷೆಗೆ ಗುರಿಯಾದವರಾಗಿದ್ದಾರೆ. ಕೊಡಗು ಜಿಲ್ಲಾ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅ.16ರಂದು ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣವನ್ನು ಇಂದು ಪ್ರಕಟಿಸಿದೆ. ದಂಡದ ಮೊತ್ತವನ್ನು ಮೃತ ಬಾಲಚಂದ್ರ ಕಳಗಿ ಅವರ ಪತ್ನಿಗೆ ನೀಡುವಂತೆ ಆದೇಶಿಸಿದೆ. ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕ ದೇವೇಂದ್ರಪ್ಪ ವಾದ ಮಂಡಿಸಿದ್ದರು. 2019 ಮಾರ್ಚ್ 19ರಂದು ಓಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಚಂದ್ರ ಕಳಗಿ ಅವರನ್ನು ಮೇಕೇರಿ-ತಾಳತ್ಮನೆ ಬೈಪಾಸ್ ರಸ್ತೆಯಲ್ಲಿ ಲಾರಿಯಿಂದ ಡಿಕ್ಕಿ ಪಡಿಸಿ ಹತ್ಯೆ ಮಾಡಲಾಗಿತ್ತು. ಮೇಲ್ನೋಟಕ್ಕೆ ಅಪಘಾತ ಪ್ರಕರಣ ಎಂದು ಕಂಡು ಬಂದಿತ್ತಾದರೂ, ತನಿಖೆ ನಡೆಸಿದ ಪೊಲೀಸರು ಇದೊಂದು ವ್ಯವಸ್ಥಿತ…
ಮಡಿಕೇರಿ ಅ.19 NEWS DESK : ಜಿಲ್ಲಾಡಳಿತ ಭವನದ ಸ್ಪಂದನಾ ಆಧಾರ್ ನೋಂದಣಿ ಕೇಂದ್ರದಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ತಾತ್ಕಾಲಿಕವಾಗಿ ಎರಡು ದಿನದ (ಅ.21 ಮತ್ತು 22) ಮಟ್ಟಿಗೆ ನೋಂದಣಿ ಕಾರ್ಯ ಸ್ಥಗಿತಗೊಂಡಿರುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ NEWS DESK ಅ.19 : ಎಮ್ಮೆಮಾಡು ಗ್ರಾಮದ ಮನೆಯೊಂದರ ಬಳಿ ಕಾಫಿ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಮ್ಮೆಮಾಡು ಗ್ರಾಮದ ಕನ್ನಡಿಯಂಡ ಮಹಮ್ಮದ್ ಕೆ.ಎಂ.(43) ಎಂಬಾತನೆ ಬಂಧಿತ ಆರೋಪಿಯಾಗಿದ್ದು, ತೋಟದಲ್ಲಿ ಬೆಳೆಯಲಾಗಿದ್ದ 35 ಕೆ.ಜಿ. 675 ಗ್ರಾಂ ಹಸಿ ಗಾಂಜಾ ಮತ್ತು 275 ಗ್ರಾಂ ಒಣ ಗಾಂಜಾವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರ ನಿರ್ದೇಶನದಂತೆ ಡಿವೈಎಸ್ಪಿ ರವಿ, ವೃತ್ತ ನಿರೀಕ್ಷಕ ಐ.ಪಿ.ಮೇದಪ್ಪ ಅವರ ನೇತೃತ್ವದ ವಿಶೇಷ ತಂಡ ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮಡಿಕೇರಿ NEWS DESK ಅ.19 : ಮಾನವ-ಪ್ರಾಣಿ ಸಂಘರ್ಷದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಜೀವವೈವಿಧ್ಯತೆಯನ್ನು ಸಂರಕ್ಷಿಸಲು “ಪ್ರಾಜೆಕ್ಟ್ ಎಲಿಫೆಂಟ್” 1991-92 ರ ಅಡಿಯಲ್ಲಿ ಆನೆಗಳಿಗೆ ವಿಶೇಷ ಅಭಯಾರಣ್ಯ ರಚನೆಗೆ ಮುಂದಾಗಬೇಕೆAದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಮಂತ್ರಾಲಯಕ್ಕೆ ಪತ್ರ ಬರೆದಿರುವ ಅವರು “ಪ್ರಾಜೆಕ್ಟ್ ಎಲಿಫೆಂಟ್” 1991-92 ರ ಅಡಿಯಲ್ಲಿ ಸಂಘರ್ಷ ವಲಯದ ಆನೆಗಳಿಗೆ ವಿಶೇಷ ಅಭಯಾರಣ್ಯ ರಚನೆಗೆ ಸಿದ್ದಾಪುರ ವ್ಯಾಪ್ತಿಯ ಬೃಹತ್ ಕಾಫಿ ತೋಟವೊಂದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಕೊಡವಲ್ಯಾಂಡ್ ಅನ್ನು ಕೂರ್ಗ್ ಅಥವಾ ಕೊಡಗು ಎಂದೂ ಕರೆಯುತ್ತಾರೆ. ಇದು ಆದಿಮ ಸಂಜಾತ ಕೊಡವರ ಸಾಂಪ್ರದಾಯಿಕ ಮತ್ತು ಅವಿಭಾಜ್ಯ ತಾಯ್ನಾಡು. ಅನಾದಿ ಕಾಲದಿಂದಲೂ ನಮ್ಮ ತಾಯ್ನಾಡು ಅಸ್ತಿತ್ವದಲ್ಲಿದೆ ಮತ್ತು ನಾವು ಕೊಡವರು ಪ್ರಕೃತಿ, ಕಾಡು ಪ್ರಾಣಿಗಳು, ಪಕ್ಷಿಗಳು, ದೈವಿಕ ಕಾಡುಗಳು, ನದಿಗಳು ಮತ್ತು ನದಿ, ತೊರೆಗಳೊಂದಿಗೆ ಸಹಬಾಳ್ವೆ ನಡೆಸಿದ್ದೇವೆ. ನಮ್ಮ ಧಾರ್ಮಿಕ ಜೀವನ ಚಕ್ರವು ಜೀವಜಲ ಮಾತೆ…
ಮಡಿಕೇರಿ ಅ.19 NEWS DESK : ನದಿ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುವ ಸಂಬಂಧ ಒಂದು ತಿಂಗಳ ಕಾಲ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವ ಅಖಿಲ ಭಾರತ ಸಾಧು ಸಂತರ ತಂಡ ಇಂದು (ಅ.19) ಜಿಲ್ಲೆಗೆ ಆಗಮಿಸಿದೆ. ಮೈಸೂರು ಮೂಲಕ ಕುಶಾಲನಗರ ಮಾರ್ಗವಾಗಿ ತಲಕಾವೇರಿಗೆ ತೆರಳಿದ ತಂಡವನ್ನು ಕುಶಾಲನಗರ ಗಡಿಭಾಗದ ಕೊಪ್ಪದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಪ್ರಮುಖರು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ತಲಕಾವೇರಿಯಿಂದ ಪೂಂಪ್ ಹಾರ್ ತನಕ ಸಾಗಲಿರುವ ಯಾತ್ರೆಗೆ ಅ.20ರಂದು ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ದೊರೆಯಲಿದೆ. ಬೆಳಗ್ಗೆ 9 ಗಂಟೆಗೆ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ಪವಿತ್ರ ತೀರ್ಥವನ್ನು ಕಳಸಗಳಲ್ಲಿ ಸಂಗ್ರಹಿಸಿ ಒಯ್ಯಲಾಗುವುದು. ನಂತರ ಯಾತ್ರೆಗೆ ಅರಮೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು 14ನೇ ವರ್ಷದ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಅಖಿಲ ಭಾರತ ಸನ್ಯಾಸಿಗಳ ಸಂಘದ ಸಂಸ್ಥಾಪಕರಾದ ಶ್ರೀ ರಮಾನಂದ ಸ್ವಾಮೀಜಿ ನೇತೃತ್ವದಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಸಾಧು-ಸಂತರು ಯಾತ್ರೆಯಲ್ಲಿ ಪಾಲ್ಗೊಂಡಿದ್ದು ಕಾವೇರಿ ಮಾತೆಯ…
ಮಡಿಕೇರಿ ಅ.19 NEWS DESK : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ನ.24 ರಂದು ವಿರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷರಾದ ಕೊಟ್ಟು ಕತ್ತೀರ ಪಿ. ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನ ಕ್ರೀಡಾಕೂಟದಲ್ಲಿ ಮಾಜಿ ಸೈನಿಕರುಗಳಿಗೆ, ವೀರ ನಾರಿಯರಿಗೆ, ವಿಧವೆಯರಿಗೆ, ಅವಲಂಬಿತರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಬಾರಿ ಕ್ರೀಡಾ ಕೂಟದಲ್ಲಿ ಅರೆ ಸೇನಾ ಪಡೆಗಳ ಮಾಜಿ ಯೋಧರು ಮತ್ತು ಅವರ ಕುಟುಂಬಸ್ಥರಿಗೂ ಅವಕಾಶವನ್ನು ಕಲ್ಪಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. ಕ್ರೀಡಾಕೂಟಕ್ಕೆ ಬೆಳಗ್ಗೆ 9 ಗಂಟೆಗೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಕ್ರೀಡಾಜ್ಯೋತಿಯನ್ನು ಬೆಳಗಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನದವರೆಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನದ ಬಳಿಕ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.ಕ್ರೀಡಾಕೂಟ ನಡೆಯುವ ಸಂದರ್ಭದಲ್ಲೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆಯನ್ನು…
ಮಡಿಕೇರಿ ಅ.19 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅ.20 ರಂದು ಕುಶಾಲನಗರದಲ್ಲಿ ನಡೆಯಲಿದೆ. ಕುಶಾಲನಗರದ ಮುಳ್ಳುಸೋಗೆ ತಪೋವನ ಗುರುಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕುಶಾಲನಗರದ ಸಂತ ಸಬಾಸ್ಟಿನ್ ದೇವಾಲಯದ ಧರ್ಮಗುರು ವಂ.ಫಾ.ಎಂ. ಮಾರ್ಟಿನ್ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಕಟಪೂರ್ವ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ ಅಧ್ಯಕ್ಷತೆ ವಹಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೂಡಿಗೆ ಪವಿತ್ರ ತಿರುಕುಟುಂಬ ದೇವಾಲಯದ ಧರ್ಮಗುರು ವಂ.ಫಾ.ಚಾಲ್ರ್ಸ್ ನೊರೋಹ್ನ, ಹಟ್ಟಿಹೊಳೆ ನಿರ್ಮಲಮಾತೆ ದೇವಾಲಯದ ಧರ್ಮಗುರು ವಂ.ಫಾ.ಗಿಲ್ಬರ್ಟ್ ಡಿ’ಸಿಲ್ವಾ, ಸೋಮವಾರಪೇಟೆ ಜಯವೀರಮಾತೆ ದೇವಾಲಯದ ಧರ್ಮಗುರು ವಂ.ಫಾ.ಅವಿನಾಶ್, ಕುಶಾಲನಗರ ತಪೋವನ ಗುರುಂದಿದ ಸುಪೀರಿಯರ್ ವಂ.ಫಾ.ಜೋಸೆಫ್ ಡಿ’ಸೋಜ, ಬೆಂಗಳೂರಿನ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಮೆಟಿಲ್ಡಾ ಡಿ’ಸೋಜಾ, ಕುಶಾಲನಗರದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ವಿ.ಎಸ್.ಸಜಿ, ಸಮಾಜ ಸೇವಕ ಹಾಗೂ ಪ್ರಗತಿಪರ ಕೃಷಿಕ ಜೆರೋಮ್ ಡಿ’ಸೋಜ ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಯೋಜಿತ ಅಧ್ಯಕ್ಷ ಜಾನ್ಸನ್ ಪಿಂಟೋ, ಕುಶಾಲನಗರ…
ಮಡಿಕೇರಿ ಅ.19 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಒಕ್ಕೊರ್ಮೆಯ ಪ್ರಪ್ರಥಮ ಕಾರ್ಯಕ್ರಮವನ್ನು ಪೊನ್ನಂಪೇಟೆ ತಾಲೂಕಿನ ತೂಚಮಕೇರಿ ಪೆಮ್ಮಂಡ ಕುಟುಂಬಸ್ಥರ ಬಲ್ಯಮನೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಇದರ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು. ಅಕಾಡೆಮಿಯ ಮಾಜಿ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ ಉತ್ಸುಕತೆ ಹಾಗೂ ಕುಟುಂಬದ ಅಧ್ಯಕ್ಷರಾದ ಪೆಮ್ಮಂಡ ಪಿ. ಅರುಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರನ್ನು ಪೆಮ್ಮಂಡ ಕುಟುಂಬದ ಬಲ್ಯಮನೆಗೆ ಗೌರವ ಪೂರಕವಾಗಿ ಆಹ್ವಾನಿಸಿದ ಪೆಮ್ಮಂಡ ಕುಟುಂಬಸ್ಥರು ‘ಒಕ್ಕೊರ್ಮೆ’ಗೆ ಸಕಲ ಸಹಮತವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಒಕ್ಕೊರ್ಮೆ ನಡೆಸುವ ಉದ್ದೇಶ, ಪ್ರತಿಯೊಂದು ಕುಟುಂಬದ ಸದಸ್ಯರನ್ನು ಸಾಹಿತ್ಯ-ಸಂಸ್ಕೃತಿಯ ನೆರಳಿಗೆ ತರುವುದು. ಅಲ್ಲಲ್ಲಿ ಚದುರಿ ಹೋಗಿರುವ ಕುಟುಂಬಸ್ಥರನ್ನು ಒಗ್ಗೂಡಿಸುವುದು ಹಾಗೂ ಕುಟುಂಬದ ಹಿರಿಮೆ-ಗರಿಮೆಯನ್ನು ದಾಖಲಿಸಿ ಮುಂದಿನ ಪೀಳಿಗೆಗೆ ಪರಂಪರಾಗತವಾಗುವಂತೆ ನೋಡಿಕೊಳ್ಳುವುದು.…






