ಕುಶಾಲನಗರ ನ.12 NEWS DESK : ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿರುವ ಅಮೃತ ವಿಘ್ನೇಶ್ವರ ದೇವರ ವಾರ್ಷಿಕ ಪೂಜಾ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಕೈಗಾರಿಕಾ ಬಡಾವಣೆಯ ಕಾವೇರಿ ನದಿ ದಂಡೆಯ ಅಮೃತ ಕಾಫಿ ಸಂಸ್ಕರಣಾ ಘಟಕದ ಬಳಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣಪತಿ ದೇಗುಲದಲ್ಲಿ ದೇವರಿಗೆ ಗಣಪತಿ ಹೋಮ, ಧನ್ವಂತ್ರಿ ಹೋಮ, ವಿಷ್ಣು ಸಹಸ್ರ ನಾಮಾರ್ಚನೆ ಮೊದಲಾದ ಮಹಾ ಪೂಜೆಗಳು ನೆರವೇರಿದವು. ಇದಕ್ಕೂ ಮುನ್ನಾ ಬೆಳಗ್ಗೆ ದೇವರಿಗೆ ವಿವಿಧ ಅಭಿಷೇಕಗಳು ನೆರವೇರಿದವು. ತಮಿಳುನಾಡಿನ ತ್ರಿಕೋಟದಲ್ಲಿನ ಸೌಮ್ಯ ನಾರಾಯಣ ಸ್ವಾಮಿ ದೇವಾಲಯದ ಅರ್ಚಕ ಮಾಧವನ್ ಅಯ್ಯಂಗಾರ್ ನೇತೃತ್ವದ ವಟುಗಳಿಂದ ಪೂಜಾ ವಿಧಿಗಳು ನಡೆದವು. ಪೂಜೋತ್ಸವದಲ್ಲಿ ಕೂಡ್ಲೂರು ಕೈಗಾರಿಕಾ ಬಡಾವಣೆಯ ವಿವಿಧ ಕಾಫಿ ಸಂಸ್ಕರಣಾ ಘಟಕಗಳ ಮಾಲೀಕರು ಹಾಗೂ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು. ಮಧ್ಯಾಹ್ನ ದೇವರಿಗೆ ಬಗೆ ಬಗೆಯ ಪುಷ್ಪಗಳಿಂದ ಅಲಂಕಾರ ಗೈದು ಮಹಾಮಂಗಳಾರತಿ ನೆರವೇರಿಸಲಾಯಿತು. ನಂತರ ನೆರೆದ ಭಕ್ತಗಣಕ್ಕೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನೆರವೇರಿತು. ಅಮೃತ ವಿಘ್ನೇಶ್ವರ ದೇಗುಲದ ಧರ್ಮದರ್ಶಿ ಸುಂದರಂ ರಾಮಸ್ವಾಮಿ,…
ಲೇಖಕ: admin
ಮಡಿಕೇರಿ ನ.12 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಭಾಗಿತ್ವದಲ್ಲಿ ತೃತೀಯ ವರ್ಷದ ‘ವಿಪ್ರ ಕ್ರೀಡೋತ್ಸವ’ವನ್ನು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪ್ರ ಕ್ರೀಡೋತ್ಸವದ ಸಂಚಾಲಕರಾದ ಗೋಪಾಲಕೃಷ್ಣ ಅವರು, ಡಿ.1 ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30 ಗಂಟೆಗೆ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಲಿದೆ.ಇದರಲ್ಲಿ ಪ್ರಮುಖವಾಗಿ ಪುರುಷರ ಸಿಂಗಲ್ಸ್ ಮತ್ತು ಡಬಲ್ಸ್, ಮಹಿಳೆಯರ ವಿಭಾಗದ ಸಿಂಗಲ್ಸ್ ಮತ್ತು ಡಬಲ್ಸ್ ಹಾಗೂ ಬಾಲಕ-ಬಾಲಕಿಯರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆಯೆಂದು ತಿಳಿಸಿದರು. ಡಿ.8 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳುವ ತಂಡಗಳು ನ.30ರ ಒಳಗಾಗಿ ಬಿ.ಕೆ. ಜಗದೀಶ್ ಮೊ.9448206688, ಗೋಪಾಲಕೃಷ್ಣ ಮೊ.9448119993 ಇವರನ್ನು ಸಂಪರ್ಕಿಸಬಹು. ಅಂದು ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ನಡೆಯಲಿದೆ…
ಮಡಿಕೇರಿ ನ.12 NEWS DESK : ವಕ್ಫ್ ಆಸ್ತಿ ಎಂದು ಹೇಳಿಕೊಂಡು ಕುಶಾಲನಗರ ಸಮೀಪದ ಮಹಿಳೆಯೊಬ್ಬರಿಗೆ ಬೆದರಿಕೆ ಒಡ್ಡಿದ್ದಾರೆ ಎನ್ನುವ ಪ್ರಕರಣ ಪೊಲೀಸರ ತನಿಖೆಯಿಂದ ಸುಳ್ಳೆಂದು ಸಾಬೀತಾಗಿದೆ. ಈ ಪ್ರಕರಣದ ಹಿಂದಿರುವ ಪ್ರಭಾವಿಗಳನ್ನು ಕೊಡಗು ಪೊಲೀಸರು ಪತ್ತೆಹಚ್ಚಿ ಸತ್ಯಾಂಶವನ್ನು ಬಯಲಿಗೆಳೆಯಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ವ್ಯಾಪ್ತಿಯ ನಿವಾಸಿ ಆರೋಪದ ಹಿನ್ನೆಲೆ ತನಿಖೆ ನಡೆಸಿದಾಗ ಪ್ರಕರಣದಲ್ಲಿ ಸತ್ಯಾಂಶವಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇಂತಹ ಸುಳ್ಳುಗಳ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವನ್ನು ಬಿಜೆಪಿ ಹಾಗೂ ಕೆಲವು ಪ್ರಭಾವಿಗಳು ಮಾಡಿರುವ ಸಾಧ್ಯತೆಗಳಿದೆ ಎಂದು ಆರೋಪಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ನಿಯೋಗ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಪ್ರಕರಣದ ಕುರಿತು ಮನವರಿಕೆ ಮಾಡಿಕೊಡಲಿದೆ ಮತ್ತು ಸಮಗ್ರ ತನಿಖೆಗೆ ಆಗ್ರಹಿಸಲಿದೆ ಎಂದರು. “ವಕ್ಫ್” ಹೆಸರನ್ನು ಬಳಸಿಕೊಂಡು ಬಿಜೆಪಿಯು ಸಮಾಜದ ಕೋಮು ಸಾಮರಸ್ಯವನ್ನು ಹದಗೆಡಿಸುವ ಷಡ್ಯಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ…
ಮಡಿಕೇರಿ ನ.12 NEWS DESK : ಕರ್ನಾಟಕ ಐಕೆಸಿ ಕುಂಗ್ ಫೂ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಕೆನರಾ ಪ್ರೌಢಶಾಲೆಯಲ್ಲಿ ನಡೆದ ಮೊದಲನೇ ರಾಜ್ಯಮಟ್ಟದ ಐಕೆಸಿ ಕುಂಗ್ ಫೂ ಚಾಂಪಿಯನ್ಶಿಪ್ ನ ಸಾಂಡಾ ವಿಭಾಗದಲ್ಲಿ ಐಗೂರು ಕುಂಗ್ ಫೂ ಸಂಸ್ಥೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿವಕ್ರ ಚೋಂದಮ್ಮ, ಸಾದ್ವಿ ಆನಂದ್, ಕೌಶಿಕ್ ಕುಮಾರ್, ಎಬೆನ್ ಚಿನ್ನದ ಪದಕ, ಮನ್ವಿತ್ ಮೋಹನ್ ಬೆಳ್ಳಿ ಹಾಗೂ ಕಲ್ಪಿತ್ ಮೋಹನ್, ಅನರ್ಘ್ಯ ಪೂವಯ್ಯ, ಸಿಂಚನ ಪ್ರಭಾಕರ್, ಶರಣ್ಯ ಎ.ಶೆಟ್ಟಿ, ಜೆ.ಯಶಸ್, ಲವಿನ್, ಬಿ.ಡಿ.ಹರ್ಷಿತ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇವರಿಗೆ ರಾಜ್ಯ ಐಕೆಸಿ ಕುಂಗ್ ಫೂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ತರಬೇತಿದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ. ರಾಷ್ಟ್ರೀಯ ಕ್ರೀಡಾಕೂಟ ನ.30 ಮತ್ತು ಡಿ.1 ರಂದು ಒಡಿಸ್ಸಾದ ಪುರಿಯಲ್ಲಿ ನಡೆಯಲಿದ್ದು, ಕೌಶಿಕ್ ಕುಮಾರ್ ಹಾಗೂ ಮನ್ವಿತ್ ಮೋಹನ್ ಭಾಗವಹಿಸಲಿದ್ದಾರೆ.
ಮಡಿಕೇರಿ ನ.12 NEWS DESK : ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಡವ ಪ್ರೀಮಿಯರ್ ಲೀಗ್ ನ 3ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೂರ್ಗ್ ಟೈಟಾನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಎಂಟಿಬಿ ರಾಯಲ್ಸ್ ತಂಡ ರನ್ನರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಐ.ಪಿ.ಎಲ್ ಲೀಗ್ ಮಾದರಿಯಲ್ಲಿ ಆಯೋಜಿಸಲಾಗಿದ್ದ ಪಂದ್ಯಾಟದಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದವು. ಮೈಸೂರು ಮಕ್ಕ, ಕೊಡವ ಟ್ರೈಬ್ಸ್, ಕೊಡವ ರಾಯಲ್ಸ್, ಬೆಂಗಳೂರು ಬಬ್ಬಂಗಾ, ಕೂರ್ಗ್ ಟೈಟಾನ್ಸ್, ಕೊಡವು ವಾರಿಯರ್ಸ್, ಅಂಜಿಗೇರಿ ನಾಡ್ ಕೂಟ, ನಾಪೋಕ್ಲು ನರಿಯಾ, ಬೆಂಗಳೂರು ಟಸ್ಕರ್ಸ್ಸ್, ಎಂ.ಟಿ.ಬಿ. ರಾಯಲ್ಸ್, ಕೊಡವಾಮೆ ಕಟ್ಸ್ ಮತ್ತು ಕರವಲೆ ಭಗವತಿ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಿದವು. ಮೂರು ದಿನಗಳು ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಕೊನೆಯ ಹಂತಕ್ಕೆ 4 ತಂಡಗಳು ಪದಾರ್ಪಣೆ ಮಾಡಿದವು. ಅಂಜಿಗೇರಿ ನಾಡ್ ಕೂಟ ತಂಡ ಮತ್ತು ಕೊಡವು ವಾರಿಯರ್ಸ್ ತಂಡದ ನಡುವೆ ನಡೆದ ಮೊದಲ ಎಲಿಮಿನೆಟ್ ಪಂದ್ಯಾಟದಲ್ಲಿ ಅಂಜಿಗೇರಿ ನಾಡ್ ಕೂಟ…
ಕುಶಾಲನಗರ, ನ.12 NEWS DESK : ಕೊಡಗು ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಕಲೋತ್ಸವ: 2024 ವು ಗಮನ ಸೆಳೆಯಿತು. ಸ್ಪರ್ಧೆಯಲ್ಲಿ ಮಕ್ಕಳು ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸಳೆಯಿತು. ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸ್ಪರ್ಧೆಯು ಒಂದು ವಿನೂತನ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆಯನ್ನು ಒದಗಿಸುತ್ತದೆ. ಮಕ್ಕಳ ಇಂತಹ ಕಲಾ ಪ್ರತಿಭಾ ಸ್ಪರ್ಧೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು. ವಿದ್ಯಾರ್ಥಿಗಳು ಇಂತಹ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ…
ಮಡಿಕೇರಿ ನ.12 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇದೇ ಪ್ರಥಮ ಬಾರಿಗೆ ಏರ್ಪಡಿಸಲಾಗಿದ್ದ ಕೊಡಗು ಪೊಲೀಸ್ ಕ್ರಿಕೆಟ್ ಲೀಗ್ ಪಂದ್ಯಾವಳಿಯ ಸೌಹಾರ್ದ ಪಂದ್ಯಾವಳಿಯಲ್ಲಿ ಕೊಡಗು ಪೊಲೀಸ್ -11 ಹಾಗೂ ಕೊಡಗು ಪತ್ರಕರ್ತರ ಸಂಘದ ಕೊಡಗು ಪ್ರೆಸ್ ರಾಕರ್ಸ್ ತಂಡಗಳು ಗೆಲುವು ಸಾಧಿಸಿದವು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯ ಪ್ರಥಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಮೀಡಿಯಾ ವಾರಿಯರ್ಸ್ ತಂಡ 5 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 45 ರನ್ ಕಲೆಹಾಕಿತು. ಉತ್ತರವಾಗಿ ಆಡಿದ ಕೊಡಗು ಪೊಲೀಸ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಗೆಲುವು ಸಾಧಿಸಿತು. ಪೊಲೀಸ್ ತಂಡದ ಮನು ಪಂದ್ಯ ಪುರುಷ ಪ್ರಶಸ್ತಿ ಪಡೆದರು. ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಡಗು ಪತ್ರಕರ್ತರ ಸಂಘದ ಕೊಡಗು ಪ್ರೆಸ್ ರಾಕರ್ಸ್ ತಂಡ 5 ಓವರ್ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 67 ರನ್ಗಳನ್ನು ಕಲೆಹಾಕಿತು. ಉತ್ತರವಾಗಿ…
ಸಿದ್ದಾಪುರ ನ.12 NEWS DESK : ಇಕೋ ಫ್ರೆಂಡ್ಸ್ ವತಿಯಿಂದ ಸಿದ್ದಾಪುರದ ಅರೆಕಾಡು ಸರಕಾರಿ ಶಾಲೆ ಮೈದಾನದಲ್ಲಿ ಆಯೋಜಿಸಲಾದ 9ನೇ ವರ್ಷದ ಅರೆಕಾಡು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಸ್ಮಾಯಿಲ್ ಮಾಲೀಕತ್ವದ ಟೀಂ ಎಂ.ಎಸ್.ಡಿ. ತಂಡ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಟೀಮ್ ರೈನ್ಬೋ ವರಿಯರ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎರಡು ದಿನಗಳ ಕಾಲ ನಡೆದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗ್ರಾಮದ ಸುತ್ತಮುತ್ತಲ 9 ತಂಡಗಳು ಭಾಗಿಯಾಗಿದ್ದವು. ಉತ್ತಮ ಹೊಡೆತ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಮುಸ್ತಫ ಪಡೆದುಕೊಂಡರು. ಫೈನಲ್ ಪಂದ್ಯಾದಲ್ಲಿ ಉತ್ತಮ ಆಟಕ್ಕಾಗಿ ಮ್ಯಾನ್ ಆಫ್ ದಿ ಮ್ಯಾಚ್ ಎಂಎಸ್ಡಿ ತಂಡದ ಸಲಾಂ ಪಡೆದುಕೊಂಡರು. ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಜುನೈದ್ ಪಡೆದುಕೊಂಡರು. ಹೊಸ್ಕೇರಿ ಗ್ರಾ.ಪಂ ಮಾಜಿ ಅಧ್ಯಕ್ಷ ಪ್ರಭುಶೇಖರ್ ಮಾತನಾಡಿ, ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರಿಂದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಸಹಕಾರಿಯಾಗಿದ್ದು, ಕ್ರೀಡಾ ಸೌಹಾರ್ದದಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು. ಅರೆಕಾಡು ರಿವರ್ ಹೋಂ ಸ್ಟೇ…
ಮಡಿಕೇರಿ ನ.12 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ನಾಡು- ನುಡಿ, ಪರಂಪರೆ, ಇತಿಹಾಸ ಮತ್ತು ಕನ್ನಡ ಸಾಹಿತಿಗಳ ಕುರಿತು ನ.23 ರಂದು ರಸಪ್ರಶ್ನೆ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಮಹದೇವಪೇಟೆಯಲ್ಲಿರುವ ಕ್ರೆಸೆಂಟ್ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ಮೊಬೈಲ್ ಸಂಖ್ಯೆ 9606184829, 9113208330ಯನ್ನು ಸಂಪರ್ಕಿಸಿ ನೋಂದಾಯಿಸಿ ಕೊಳ್ಳಬೇಕಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ತಿಳಿಸಿದ್ದಾರೆ.
ಮಡಿಕೇರಿ ನ.12 NEWS DESK : ನಗರದ ಮಾಸ್ಟರ್ ಮೈಂಡ್ ಚೆಸ್ ಸ್ಕೂಲ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿರಾಜಪೇಟೆಯ ಕಾವೇರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಬಿ.ಎಸ್.ಶೌರ್ಯ ಪ್ರಥಮ ಸ್ಥಾನ ಹಾಗೂ 9ನೇ ತರಗತಿ ವಿದ್ಯಾರ್ಥಿನಿ ಬಿ.ಎಸ್.ಸೃಷ್ಟಿ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇವರುಗಳು ಬಿ.ಎಸ್.ಸುದೇಶ್ ಹಾಗೂ ಸಹನಾ ದಂಪತಿಗಳ ಮಕ್ಕಳಾಗಿದ್ದು, ಬಿ.ಎಸ್.ಸುದೇಶ್ ಪ್ರಸ್ತುತ ವಿರಾಜಪೇಟೆಯ ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ನ್ಯಾಷನಲ್ ಲೆವೆಲ್ ಚೆಸ್ ಮಾಸ್ಟರಾದ ಮಣಿ ಅವರು ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಪಿ.ಎನ್.ವಿನೋದ್, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.






