:: NEWS DESK :: ವೇಷ ಇದರ ಉಲೇಖ ನಮಗೆ ಪುರಾಣದಿಂದ ಹಿಡಿದು ಇಂದಿನವರೆಗೂ ಚಾಲನೆಯಲ್ಲಿ ಹಾಗೂ ನಮ್ಮ. ದೈನಂದಿನ ಬದುಕಿನಲ್ಲಿ ಹಾಸು ಹೊಕ್ಕಿದ ಬಹಳ ಅರ್ಥವಿರುವ ಶಬ್ದ. ಇದು ದೇವರಿಂದ ಹಿಡಿದು ರಾಜರವರೆಗೂ ರಾಜನಿಂದ ನಮ್ಮ ಪ್ರಜಾಪ್ರಭುತ್ವದ ನಾಯಕರವರೆಗೆ ಪ್ರಜಾಪ್ರಭುತ್ವದ ನಾಯಕರಿಂದ ಹಿಡಿದು ಇಂದಿನ ಶ್ರೀ ಸಾಮಾನ್ಯನವರೆಗೂ ವೇಷ ಬದಲಾವಣೆ ನಾವು ಕಾಣಬಹುದು. ವೇಷ ಬದಲಾವಣೆ ದೇವರು ಲೋಕ ಕಲ್ಯಾಣಕಾಗಿ ರಾಕ್ಷಸರು ದೇವ ಲೋಕ ನಾಶಕ್ಕಾಗಿ ವೇಷ ಬದಲಾವಣೆ ಮಾಡುತಿದ್ದರು. ಅದರ ಬಗ್ಗೆ ವಿವರಣೆ ಅವಶ್ಯಕತೆ ಇಲ್ಲ. ಅದನ್ನು ನಾವು ಪುರಾಣ ಕಥೆಯಲ್ಲಿ ಓದಿರುತ್ತೇವೆ. ರಾಮಾಯಣ ಮತ್ತು ಮಹಾಭಾರತದಲ್ಲೂ ಇದರ ಉಲೇಖವಿದೆ. ಪುನಃ ಅದನ್ನು ಬರೆದು ನಿಮ್ಮ ಸಮಯದ ವ್ಯಯ ಮಾಡುವುದು ಬೇಡ. ಅದೇ ರೀತಿಯಲ್ಲಿ ರಾಜರ ಆಡಳಿತದಿಂದ ಹಿಡಿದು ಪ್ರಜಾಪ್ರಭುತ್ವ ಆಡಳಿತದವರೆಗೂ ವೇಷ ಬದಲಾವಣೆ ನಾವು ಕಾಣಬಹುದು. ಪತ್ತೆದಾರಿಕೆ ಗೂಢಚಾರ ಕಳ್ಳತನಕ್ಕೆ ಅಪಹರಣ ಹೀಗೆ ಹತ್ತು ಹಲವು ವಿಧಗಳ ರೂಪದಲ್ಲಿ ನಾಗರೀಕತೆ ಮತ್ತು ಆಧುನಿಕ ಜೀವನದಲ್ಲಿ ವೇಷ ಬದಲಾವಣೆ…
ಲೇಖಕ: admin
ಮಡಿಕೇರಿ ಡಿ.9 NEWS DESK : ಶ್ರೀ ರಂಗಪಟ್ಟಣ-ಕುಶಾಲನಗರ ನಡುವಿನ ಉದ್ದೇಶಿತ ಚತುಷ್ಪಥ ಹೆದ್ದಾರಿ ಕಾಮಗಾರಿಯನ್ನು ಮುಂದಿನ 2-3 ತಿಂಗಳಿನಲ್ಲಿ ಆರಂಭಿಸಲಾಗುವುದು ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ನೀಡಿದರು. ನಗರದ ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿ ಸಂಸದರ ನೂತನ ಕಚೇರಿಯನ್ನು ಹಿರಿಯ ವೈದ್ಯ ಡಾ.ಪಾಟ್ಕರ್ ಸೇರಿದಂತೆ ಗಣ್ಯರು ಉದ್ಘಾಟನೆ ಮಾಡಿದರು. ಬೆಳಿಗ್ಗೆ ಕಚೇರಿಯಲ್ಲಿ ವಿವಿಧ ಹೋಮ, ಧಾರ್ಮಿಕ ಕೈಂಕರ್ಯಗಳನ್ನು ನಡೆಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದವೀರ್ ಒಡೆಯರ್, ಕೊಡಗು ಮುಖ್ಯ ಕ್ಷೇತ್ರವಾಗಿದ್ದು, ಇಲ್ಲಿಗೆ ಸಮಯ ನೀಡಬೇಕಾಗಿರುವುದು ಜನಪ್ರತಿನಿಧಿಯಾದ ನನ್ನ ಕರ್ತವ್ಯವಾಗಿದೆ. ಅಭಿವೃದ್ಧಿ ದೃಷ್ಟಿಯಲ್ಲಿ ಜನರಿಗೆ ನನ್ನ ಸಂಪರ್ಕ ಸಿಗುವ ಸಲವಾಗಿ ಕಚೇರಿ ಆರಂಭಿಸಲಾಗಿದ್ದು, ನಮ್ಮ ಸಲಹೆಗಾರರು ವಾರದ ಎಲ್ಲಾ ದಿನಗಳಲ್ಲೂ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾನು ನನ್ನ ಕ್ಷೇತ್ರ ಪ್ರತಿನಿಧಿಸುವ ಮೈಸೂರು, ಕೊಡಗಿನ ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನನ್ನ ಸೇವೆಯನ್ನು ಮುಡಿಪಾಗಿಟ್ಟಿದ್ದೇನೆ ಎಂದು ಹೇಳಿದರು. ವಿಕಸಿತ ಭಾರತದಲ್ಲಿ ಕೊಡಗಿನ ಗ್ರಾಮ ಮಟ್ಟದ…
ಮಡಿಕೇರಿ ಡಿ.9 NEWS DESK : ಮೂರ್ನಾಡು ಮಹಿಳಾ ಮಂಡಳಿಯ ವಾರ್ಷಿಕ ಮಹಾಸಭೆ ಡಿ.11ರಂದು ಮಂಡಳಿಯ ಅಧ್ಯಕ್ಷರಾದ ಮೀನಾಕ್ಷಿ ಕೇಶವ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಮಾಜದ ಕಟ್ಟಡದಲ್ಲಿ ನಡೆಯಲಿದೆ ಎಂದು ಮಹಿಳಾ ಮಂಡಳಿ ಪ್ರಕಟಣೆ ತಿಳಿಸಿದೆ.
ಸಿದ್ದಾಪುರ ಡಿ.9 NEWS DESK : ಮುಂಬೈಯಲ್ಲಿ ನಡೆದ ಏಷಿಯನ್ ಪ್ಯಾರಾ ಪಂಜ ಕುಸ್ತಿ ಕ್ರೀಡಾಕೂಟದಲ್ಲಿ ಏಷ್ಯಕ್ಕೆ ಮೂರನೇ ಸ್ಥಾನ ಪಡೆದ ಅರೆಕಾಡು ಗ್ರಾಮದ ವಿಶೇಷಚೇತನರಾದ ಕೆ.ಎಂ.ಹಸ್ಸನ್ ಅವರನ್ನು ನೆಲ್ಯಹುದಿಕೇರಿ ಪೈಸಾರಿ ಪ್ರೀಮಿಯರ್ ಲೀಗ್ ಕ್ರೀಡಾಕೂಟದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಮಡಿಕೇರಿ ಡಿ.9 NEWS DESK : ಕುಶಾಲನಗರದಲ್ಲಿ ಡಿ.12 ಮತ್ತು 13 ರಂದು ನಡೆಯುವ ಹನುಮ ಜಯಂತಿ ಹಾಗೂ ದಶಮಂಟಪಗಳ ಶೋಭಾಯಾತ್ರೆಗೆ ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ಹಿಂದೂ ವಾಗ್ಮಿ ಸಿ.ಟಿ ರವಿ ಅವರನ್ನು ಕುಶಾಲನಗರ ಹನುಮ ಜಯಂತಿ ಸಮಿತಿ ಸದಸ್ಯರು ಚಿಕ್ಕಮಗಳೂರು ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಿದರು.
ಪೊನ್ನಂಪೇಟೆ, ಡಿ.9 NEWS DESK : ದ. ಕೊಡಗಿನ ವಿ. ಬಾಡಗದ ಹೈ ಪ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಬಿಟ್ಟಂಗಾಲ, ಬಿ. ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆಗಳನ್ನು ಹೊಂದಿರುವ ಕೊಡವ ಮನೆತನಗಳ ನಡುವಿನ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಫ್ಲೈಯರ್ಸ್ ಕಪ್-2024ರ 3ನೇ ದಿನದ ಪಂದ್ಯಾವಳಿಯಲ್ಲಿ ಕಾದಾಡಿದ ತಂಡಗಳ ಪೈಕಿ 4 ಬಲಿಷ್ಠ ಕುಟುಂಬ ತಂಡಗಳು ಸೆಮಿ ಫೈನಲ್ಸ್ ಪ್ರವೇಶಿಸಿದೆ. ಪಂದ್ಯಾವಳಿಯ ಸೆಮಿ ಫೈನಲ್ಸ್ ಇಂದು (ಡಿ.9) ನಡೆಯಲಿದೆ. 3ನೇ ದಿನದ ಪಂದ್ಯದಲ್ಲಿ ,ಚಂದೂರ, ಚೇಂದಂಡ, ಮುರುವಂಡ ಮತ್ತು ತೀತಮಾಡ ತಂಡಗಳು ವಿಜಯ ಸಾಧಿಸಿ ಪಂದ್ಯಾವಳಿಯ ಸೆಮಿ ಫೈನಲ್ಸ್ ಗೆ ಅರ್ಹತೆ ಪಡೆದುಕೊಂಡಿತು. ಈ ನಾಲ್ಕು ತಂಡಗಳು ಇಂದು ನಡೆಯಲಿರುವ ಸೆಮಿ ಫೈನಲ್ಸ್ ಪಂದ್ಯಾವಳಿಯಲ್ಲಿ ಎದುರಾಳಿಗಳನ್ನು ಮಣಿಸಿ ಚಾಂಪಿಯನ್ ಆಗುವ ಹೆಗ್ಗುರಿಯೊಂದಿಗೆ ಫೈನಲ್ ಪ್ರವೇಶಿಸಲು ತೀವ್ರ ಹೋರಾಟ ನಡೆಸಲಿದೆ. ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ…
ಮಡಿಕೇರಿ ಡಿ.9 NEWS DESK : ದಕ್ಷಿಣ ಕನ್ನಡ ಹಾಗೂ ಕೊಡಗು ಗೌಡ ಸಮಾಜ ಬೆಂಗಳೂರು ವತಿಯಿಂದ ಸ್ನೇಹಮಿಲನ ಷಷ್ಟ್ಯಾಬ್ಧಿ ಸಂಭ್ರಮ, ಪ್ರತಿಭಾ ಪುರಸ್ಕಾರ, ಸಮಾಜದ ಮಾಜಿ ಅಧ್ಯಕ್ಷರು, ಮಹಿಳಾ ಹಾಗೂ ಯುವ ಘಟಕದ ಮಾಜಿ ಅಧ್ಯಕ್ಷರು ಗಳಿಗೆ, ಕಾರ್ಯದರ್ಶಿಗಳಿಗೆ ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಲಗ್ಗೆರೆ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮವರು ಸಂಘಟಿತರಾಗಬೇಕು, ಅರೆಭಾಷೆ ಮಾತಾಡುತ್ತಾ ಭಾಷೆಯನ್ನು ಬೆಳೆಸಬೇಕು. ಭಾಷೆ ಬೆಳೆದರೆ ಸಂಸ್ಕೃತಿ ಬೆಳೆದಂತೆ, ಭಾಷೆ ನಶಿಸಿದರೆ ಸಂಸ್ಕೃತಿ ನಶಿಸಿದಂತೆ. ಭಾಷಾ ಸಂಸ್ಕೃತಿ, ಆಚಾರ ವಿಚಾರಗಳಲ್ಲಿ ಎಲ್ಲರೂ ಸಮಾಜದೊಂದಿಗೆ ಕೈಜೋಡಿಸಿ ಉತ್ತಮ ಕಾರ್ಯಗಳನ್ನು ನಡೆಸಲು ಕಾರ್ಯ ಪ್ರವರ್ತ ರಾಗಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಡಾಟ ಪುರುಷೋತ್ತಮ ಬಿಳಿಮಲೆ ಮಾತನಾಡಿ, ನಮ್ಮ ಮಾತೃ ಭಾಷೆಯನ್ನು ಸಮಾಜದಲ್ಲಿ ಬೆಳೆಸಬೇಕು, ಅರೆ ಭಾಷೆ ಅರ್ಧ…
ಮಡಿಕೇರಿ ಡಿ.7 NEWS DESK : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕದ ಆವರಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗ್ರೂಪ್ ಕ್ಯಾಪ್ಟನ್(ನಿವೃತ್ತ) ಬಿ.ಎನ್.ಮನು ಭೀಮಯ್ಯ, ಜಿಲ್ಲಾಧಿಕಾರಿ ಮತ್ತು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಐಪಿಎಸ್ ಪ್ರೊಬೆಷನರಿ ಅಧಿಕಾರಿ ಬೆನಕ ಪ್ರಸಾದ್, ಏರ್ ಮಾರ್ಷಲ್(ನಿ) ನಂದ ಕಾರ್ಯಪ್ಪ, ಏರ್ ಕಮಾಂಡರ್(ನಿ) ದೇವಯ್ಯ, ಕರ್ನಲ್(ನಿ) ಕಾವೇರಪ್ಪ, ಲೆ.ಕರ್ನಲ್(ನಿವೃತ್ತ) ನಾಚಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಬಿ.ಆರ್.ಶೆಟ್ಟಿ ಹಾಗೂ ನಿವೃತ್ತ ಸೈನಿಕರು, ಎನ್ಸಿಸಿ ವಿದ್ಯಾರ್ಥಿಗಳು ಇತರರು ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದರು. ಕರ್ತವ್ಯ ಪಾಲನೆಯಲ್ಲಿ ವೀರ ಮರಣವನ್ನಪ್ಪಿದ ಯೋಧರ ಸ್ಮರಣಾರ್ಥ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿ, ಮೌನಾಚರಿಸಲಾಯಿತು. ಗ್ರೂಪ್ ಕ್ಯಾಪ್ಟನ್ ಬಿ.ಎನ್.ಮನು…
ಮಡಿಕೇರಿ ಡಿ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ನೆಮ್ಮಲೆ ಗ್ರಾಮದ ಕಿತ್ತ್ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ, ಮಹಾಮಂಗಳಾರತಿ ನಡೆಯಿತು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಮಡಿಕೇರಿ ಡಿ.7 NEWS DESK : ಹದಿನೆಂಟು ವರ್ಷದೊಳಗಿನ ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ, ದೈಹಿಕ ಹಾಗೂ ಭಾಷಾ ಬೆಳವಣಿಗೆಗೆ ಹೆಚ್ಚಿನ ಅವಕಾಶವಿದ್ದು, ಈ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕರ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಬಾಲನ್ಯಾಯ ಕಾಯ್ದೆ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ದತ್ತು ಅಧಿನಿಯಮ ಕುರಿತು ‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು. ವಯಸ್ಕ…






