ಮಡಿಕೇರಿ ಡಿ.25 NEWS DESK : ಏಸು ಕ್ರಿಸ್ತ ಜನನದ ಸಂಕೇತವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಿದರು. ವಿವಿಧ ಚರ್ಚ್ಗಳಲ್ಲಿ ರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಏಸು ಧರೆಗಿಳಿದನೆಂದು ಗೋದಲಿಯಲ್ಲಿ ಬಾಲಯೇಸುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾಭಕ್ತಿಯನ್ನು ಮೆರೆದರು. ಮಡಿಕೇರಿಯ ಸಂತ ಮೈಕಲರ ಚರ್ಚ್ನ ಆವರಣದಲ್ಲಿ ನಿರ್ಮಿಸಲಾಗಿದ್ದ ಗೋದಲಿಯಲ್ಲಿ ಬಾಲ ಏಸುವಿನ ಪ್ರತಿಕೃತಿಯನ್ನಿರಿಸಿ ಪೂಜಿಸಲಾಯಿತು. ಧರ್ಮಗುರು ಜಾರ್ಜ್ ದೀಪಕ್ ಪೂಜೆ ಸಲ್ಲಿಸಿ, ಏಸುವಿನ ಸಂದೇಶವನ್ನು ಸಾರಿದರು. ವಿಶೇಷ ಪ್ರಾರ್ಥನೆಯಲ್ಲಿ ಸಾವಿರಾರು ಕ್ರೈಸ್ತ ಬಾಂಧವರು ಪಾಲ್ಗೊಂಡು ಮೊಂಬತ್ತಿ ಬೆಳಗಿ, ಸಿಹಿ ಹಂಚಿ ಸಂಭ್ರಮಿಸಿದರು. ಗೋದಲಿಯಲ್ಲಿ ಪ್ರತಿಷ್ಠಾಪಿಸಿದ ಬಾಲಯೇಸುವಿಗೆ ಪುಷ್ಪನಮನ ಸಲ್ಲಿಸಿದರು. ಪ್ರವಾಸಿಗರು ಹಾಗೂ ಇತರ ಧರ್ಮೀಯರು ಕೂಡ ಚರ್ಚ್ಗೆ ಭೇಟಿ ನೀಡಿ ಮೊಂಬತ್ತಿ ಬೆಳಗಿ ಕ್ರಿಸ್ಮಸ್ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು.
ಲೇಖಕ: admin
ಗುಂಡ್ಲುಪೇಟೆ NEWS DESK ಡಿ.25 : ಜಾನುವಾರಗಳ ಮೇಲೆ ದಾಳಿ ಮಾಡಿ ಭಕ್ಷಿಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಗುಂಡ್ಲುಪೇಟೆ ವಿಭಾಗದ ಅರಣ್ಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರುಕೇರಿ, ಕೋಡಹಳ್ಳಿ ಮತ್ತಿತರ ಸುತ್ತಮುತ್ತಲ ಪ್ರದೇಶಗಳಲ್ಲಿ ಜಾನುವಾರು ಮತ್ತು ಮೇಕೆಗಳನ್ನು ತಿಂದು ಆತಂಕ ಸೃಷ್ಟಿಸಿದ್ದ ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಅಣ್ಣೂರುಕೇರಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಬೋನ್ ಇರಿಸಿದ್ದರು. ನಿರೀಕ್ಷೆಯಂತೆ ಸುಮಾರು 3 ವರ್ಷದ ಗಂಡು ಚಿರತೆ ಬೋನ್ ನಲ್ಲಿ ಸೆರೆಯಾಗಿದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗೋಣಿಕೊಪ್ಪ ಡಿ.25 NEWS DESK : ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ 47 ಚಿನ್ನ 7 ಬಳ್ಳಿ ಪದಕಗಳನ್ನು ಗಳಿಸುವ ಮೂಲಕ ಗೋಣಿಕೊಪ್ಪಲಿನ ಸೈಕ್ಲೋನ್ ನೃತ್ಯ ಸಂಸ್ಥೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಿರಿಯಾಪಟ್ಟಣದ ಅಭಯ ಸಭಾಂಗಣದಲ್ಲಿ, ಕರ್ನಾಟಕ ಕ್ರೀಡಾ ಸಂಘ, ಸ್ಪೋಟ್ರ್ಸ್ ಡಾನ್ಸ್ ಫೆಡರೇಶನ್ ಆಫ್ ಇಂಡಿಯಾ, ಏಷ್ಯನ್ ಸ್ಪೋಟ್ರ್ಸ್ ಕೌನ್ಸಿಲ್, ಇಂಟನ್ರ್ಯಾಷನಲ್ ಸ್ಪೋಟ್ರ್ಸ್ ಫೆಡರೇಶನ್, ಮತ್ತು ಕರ್ನಾಟಕ ರಾಜ್ಯ ಕ್ರೀಡಾ ಚಾಂಪಿಯನ್ ಶಿಪ್ ಆಯೋಜನೆಯಲ್ಲಿ ನಡೆದ ರಾಜ್ಯ ಮಟ್ಟದ 2024-25ನೇ ಸಾಲಿನ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಮತ್ತು ಬೆಳ್ಳಿ ಪದಕಗಳಿಸುವ ಮೂಲಕ ಸೈಕ್ಲೋನ್ ನೃತ್ಯ ಸಂಸ್ಥೆ ಸಂಭ್ರಮಿಸಿದೆ. 9 ವರ್ಷದೊಳಗಿನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 12 ವರ್ಷದೊಳಗಿನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 15 ವರ್ಷದೊಳಗಿನ ಸ್ಪರ್ಧೆಯಲ್ಲಿ ಪ್ರಥಮ, 17 ವರ್ಷದೊಳಗಿನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಜೊತೆಗೆ 12 ವರ್ಷದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬಳ್ಳಿ ಪದಕವನ್ನು ಪಡೆದುಕೊಳ್ಳುವ ಮೂಲಕ ಫೆಬ್ರವರಿ ತಿಂಗಳಿನಲ್ಲಿ…
ಮಡಿಕೇರಿ NEWS DESK ಡಿ.24 : ಸಂಪಾಜೆ ಮತ್ತು ಚೆಂಬು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 110.66 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಮಂಗಳವಾರ ಚಾಲನೆ ನೀಡಿದ್ದಾರೆ. ಸಂಪಾಜೆ ಬಳಿಯ ದುಗ್ಗಳ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ದುಗ್ಗಳ ಕುಟುಂಬದವರು ಸೇರಿದಂತೆ ಸುಮಾರು 18 ಹೆಚ್ಚು ಕುಟುಂಬಗಳು ವಾಸ ಮಾಡುತ್ತಿದ್ದು, ವಿಕಲಚೇತನರು, ವೃದ್ದರು ಹಾಗೂ ಹಲವರಿಗೆ ಉಪಯುಕ್ತವಾಗುತ್ತದೆ ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ಬಳಿಕ ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಡ್ಕ ಹೈಟೆಕ್ ಶೌಚಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಚೆಂಬು ಊರುಬೈಲು ಬಳಿ ಮಳೆಯಿಂದ ಹಾನಿಯಾದ ಸೇತುವೆಯ ಮರು ನಿರ್ಮಾಣ, ಪನೆಡ್ಕ ದೇವಸ್ಥಾನದ ಬಳಿಯಿಂದ ಬೈನೆಗುಂಡಿ ರಸ್ತೆ ಅಭಿವೃದ್ಧಿ. ಬಾಲಂಬಿ ಚೆಟ್ಟೆಕಲ್ಲು ಜೋಡಿಯಿಂದ ಸಾರ್ವಜನಿಕ ರಸ್ತೆ ಅಭಿವೃದ್ಧಿ. ಎಂ.ಚೆoಬು ಬಳಿಯ ರೆಂಕಿಲ್ ಮೊಟ್ಟೆ ಕಾಲೋನಿ…
ಮಡಿಕೇರಿ NEWS DESK ಡಿ.24 : ಕಳೆದ ವರ್ಷ ಬರೆ ಕುಸಿದು ಹಾನಿಯಾಗಿದ್ದ ಕೊಯನಾಡು ಪ್ರಾಥಮಿಕ ಶಾಲೆಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಅವರು ಕಳೆದ ವರ್ಷ ಹೆಚ್ಚಿನ ಮಳೆಯಿಂದಾಗಿ ಶಾಲಾ ಕಟ್ಟಡದ ಗೋಡೆಗೆ ಹೆಚ್ಚಿನ ಹಾನಿಯಾಗಿತ್ತು, ಮಕ್ಕಳ ಹಿತಿದೃಷ್ಟಿಯಿಂದ ಸಂಪಾಜೆ ಶಾಲೆಗೆ ಸ್ಥಳಾಂತರಿಸಲಾಗಿತ್ತು, ಆ ದಿಸೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಸುಭದ್ರತೆಯ ದೃಷ್ಟಿಯಿಂದ ಎಲ್ಲರೂ ಗಮನಿಸಬೇಕು. ಬೇಸಿಗೆ ಅವಧಿಯಲ್ಲಾದರೂ ತಾತ್ಕಾಲಿಕವಾಗಿ ಕೊಯನಾಡುವಿನಲ್ಲಿ ಪುನರಾರಂಭಿಸುವoತೆ ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡರವರು ಮಾತನಾಡಿ ಮಕ್ಕಳು ಶಾಲೆಯಿಂದ ವಂಚಿತರಾಗಬಾರದು, ಕೊಯನಾಡು ಶಾಲೆಯಲ್ಲಿ ಸುರಕ್ಷಿತ ಇಲ್ಲದಿರುವುದರಿಂದ ಸಂಪಾಜೆ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿತ್ತು ಸದ್ಯ ಮಕ್ಕಳಿಗೆ ಪ್ರಯಾಣಭತ್ಯೆ ಭರಿಸಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ಕೊಯನಾಡು ಶಾಲೆ ಸುರಕ್ಷತೆಯ ಬಗ್ಗೆ ಸಂಬoಧಪಟ್ಟವರು ಜಿಲ್ಲಾಡಳಿತಕ್ಕೆ ವರದಿ ನೀಡಿದ್ದು, ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಮುಂದಿನ…
ಮಡಿಕೇರಿ NEWS DESK ಡಿ.24 : ಕೊಡಗು ಜಿಲ್ಲಾ ಪೊಲೀಸ್ ನ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪ್ರಬಾರ ಜಿಲ್ಲಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಕ್ರೀಡಾ ಚಟುವಟಿಕೆಗಳ ಮೂಲಕ ಮಾನಸಿಕ ದೃಢತೆ, ದೈಹಿಕ ಸಾಮರ್ಥ್ಯ, ಮಾನಸಿಕ ಸಮತೋಲನ ಮತ್ತು ನಾಯಕತ್ವದ ಗುಣ ಬೆಳೆೆಸಿಕೊಳ್ಳಲು ಸಾಧ್ಯವಿದೆ. ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವವರಿಗೆ ಅಗತ್ಯವಾಗಿ ಇರಬೇಕಾದ ಈ ಎಲ್ಲಾ ಅಂಶಗಳನ್ನು ಕ್ರೀಡಾಚಟುವಟಿಕೆಗಳ ಮೂಲಕ ಪಡೆಯಬಹುದಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪ್ರಾಸ್ತಾವಿಕವಾಗಿ ಮಾತನಾಡಿ, ವಾರ್ಷಿಕ ಕ್ರೀಡಾಕೂಟಕ್ಕಾಗಿ ಶ್ರಮಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆ ಮತ್ತು ಕೇವಲ ಆರು ಗಂಟೆಗಳ ಅವಧಿಯಲ್ಲಿ ಡಿಎಆರ್ ಮೈದಾನವನ್ನು ಸಜ್ಜುಗೊಳಿಸಿದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಎಲ್ಲಾ ಠಾಣೆಯ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿದಿನ ಕರ್ತವ್ಯದ ಜಂಜಾಟದಲ್ಲಿ ಇರುವವರು ಒಂದಷ್ಟು…
ಕೂಡಿಗೆ ಡಿ.24 NEWS DESK : ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡಿ.26 ರಂದು 11.00 ಗಂಟೆಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ: 2024 ಯನ್ನು ಏರ್ಪಡಿಸಲಾಗಿದೆ. ಪ್ರಭಾರ ಜಿಲ್ಲಾಧಿಕಾರಿಯೂ ಆದ ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಲಿದ್ದು, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣಿ, ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷ ಎ.ಎ.ಚಂಗಪ್ಪ, ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಮಹತ್ವ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ…
ಮಡಿಕೇರಿ ಡಿ.24 NEWS DESK : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಂಸತ್ನಲ್ಲಿ ಅಗೌರವ ತೋರಿದ ಕೇಂದ್ರ್ರ ಗೃಹ ಸಚಿವ ಅಮಿತ್ ಷಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳು ಹಾಗೂ ಪ್ರಗತಿಪರರು ಪ್ರತಿಭಟನೆ ನಡೆಸಿದರು. “ಅಂಬೇಡ್ಕರ್ ಹೆಸರು ನಮಗೆ ಶೋಕಿಯಲ್ಲ, ಸ್ಮರಣೆ, ಅಸ್ಮಿತೆ, ಬದುಕು” ಎನ್ನುವ ಘೋಷವಾಕ್ಯದಡಿ ದಲಿತ ಸಂಘಟನೆಗಳ ಒಕ್ಕೂಟ, ಸಮಾನ ಮನಸ್ಕರ ವೇದಿಕೆ ಮತ್ತು ಪ್ರಗತಿಪರ ಚಿಂತಕರ ಒಕ್ಕೂಟ ಮಾನವ ಸರಪಳಿ ರಚಿಸಿ ರಸ್ತೆತಡೆ ಪ್ರತಿಭಟನೆ ನಡೆಸಿದವು. ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಇಡೀ ವಿಶ್ವದ ಗೌರವಕ್ಕೆ ಪಾತ್ರರಾಗಿ, ರಾಷ್ಟ್ರಕ್ಕೆ ಅತ್ಯಮೂಲ್ಯವಾದ ಸಂವಿಧಾನವನ್ನು ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರಿರುವುದನ್ನು ಖಂಡಿಸುವುದಲ್ಲದೆ, ಗೃಹ ಸಚಿವ ಅಮಿತ್ ಷಾ ಅವರು ರಾಷ್ಟ್ರದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದರು. ನೊಂದವರ ಧ್ವನಿಯಾಗಿ, ಸಾಮಾಜಿಕ ನ್ಯಾಯದ ಹರಿಕಾರರಾಗಿರುವ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವಾಗ ಎಚ್ಚರದಿಂದಿರಬೇಕೆಂದು. ಅಂಬೇಡ್ಕರ್ ಅವರು…
ಸೋಮವಾರಪೇಟೆ ಡಿ.24 NEWS DESK : ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಜಿಲ್ಲೆಯ ಪತ್ರಕರ್ತರಿಗೆ ಆಯೋಜಿಸಿದ್ದ ಕೆ.ಪಿ.ಎಸ್ ಕ್ರಿಕೆಟ್ ಟ್ರೋಫಿಯನ್ನು ರವಿಕುಮಾರ್ ನಾಯಕತ್ವದ ಕೂರ್ಗ್ ಸ್ಟೈಕರ್ಸ್ ತಂಡ ಮುಡಿಗೇರಿಸಿಕೊಂಡಿತು. ಎಸ್.ಎ.ಮುರುಳೀಧರ್ ನಾಯಕತ್ವದ ಕೂರ್ಗ್ ವಾರಿರ್ಸ್ ತಂಡ ದ್ವಿತೀಯ ಸ್ಥಾನ ಪಡೆಯಿತು. ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಖಲೀಲ್, ಉತ್ತಮ ಬೌಲರ್ ಪ್ರಶಸ್ತಿಯನ್ನು ಕೆ.ಜಿ.ನಾಣಯ್ಯ, ಉತ್ತಮ ಕ್ಯಾಚರ್ ಆಗಿ ವಿನೋದ್ ಮೂಡುಗದ್ದೆ, ಉತ್ತಮ ಬೌಲರ್ ಆಗಿ ಕೆ.ಜಿ.ನಾಣಯ್ಯ, ಉತ್ತಮ ಬ್ಯಾಟ್ಸ್ಮನ್ ಆಗಿ ಕೌಸರ್, ಉತ್ತಮ ವಿಕೆಟ್ ಕೀಪರ್ ಪ್ರಶಸ್ತಿಯನ್ನು ಎಸ್.ಎ.ಮುರುಳೀಧರ್ ಪಡೆದರು. ಕೊವರ್ಕೊಲ್ಲಿ ಬ್ಲಾಸಂ ಸಭಾಂಗಣದಲ್ಲಿ ಭಾನುವಾರ ಸಂಜೆ ಸಮಾರೋಪ ಸಮಾರಂಭ ನಡೆಯಿತು. ಮಡಿಕೇರಿ ಪತ್ರಿಕಾ ಭವನ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್, ಮಾಜಿ ಸೈನಿಕರಾದ ಮಂಜುನಾಥ್, ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಎ.ಮುರುಳೀಧರ್, ತಾಲ್ಲೂಕು ಅಧ್ಯಕ್ಷರುಗಳಾದ ಎಚ್.ಆರ್.ಹರೀಶ್, ಮುಧೋಶ್ ಪೂವಯ್ಯ, ವಿಘ್ನೇಶ್ ಭೂತನಕಾಡು, ರಾಜ್ ಕುಶಾಲಪ್ಪ, ಮಾಜಿ ಸೈನಿಕ ಬಿ.ಬಿ.…
ಮಡಿಕೇರಿ ಡಿ.24 NEWS DESK : ಗ್ರಾಮೀಣ ಕ್ರೀಡಾ ಸಂಸ್ಕೃತಿಯ ಪುನರುಜ್ಜೀವನಕ್ಕಾಗಿ 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ವತಿಯಿಂದ ವೀರನಾಡು ರಕ್ಷಣಾವೇದಿಕೆಯ ಸಹಯೋಗದಲ್ಲಿ ಸಂಭ್ರಮದ `ಗ್ರಾಮೀಣ ಕ್ರೀಡೋತ್ಸವ’ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲಿ, ಬುಗುರಿ, ಲಗೋರಿ, ಚಕ್ರಗಾಡಿ ತಳ್ಳುವುದು, ಕ್ಯಾಟರ್ ಬಿಲ್ಲಿನಿಂದ ಕಲ್ಲು ಹೊಡೆಯುವುದು, ಕುಂಟೆ ಬಿಲ್ಲೆ, ಚಿಣ್ಣಿದಾಂಡ್, ಮಡಿಕೆ ಒಡೆಯುವು ತೆಂಗಿನ ಕಾಯಿಗೆ ಕಲ್ಲು ಹೊಡೆಯುವುದು, ಕಪ್ಪೆ ಓಟ, ಕಾಳು ಹೆಕ್ಕುವುದು ಮೊದಲಾದ ಗ್ರಾಮೀಣ ಆಟಗಳಲ್ಲಿ ಮಕ್ಕಳು, ವಯೋವೃದ್ಧರು, ಯುವಕ, ಯುವತಿಯರು ಪಾಲ್ಗೊಂಡು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮಾತನಾಡಿ, ಮರೆತು ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳಿಗೆ ಮರುಜೀವ ತುಂಬುವ ನಿಟ್ಟಿನಲ್ಲಿ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ ಇಂದಿನ ಯುವ ಸಮೂಹ ಮೊಬೈಲ್ ಪ್ರಭಾವಕ್ಕೆ ಸಿಲುಕಿ ಕ್ರೀಡಾ ಚಟುವಟಿಕೆಗಳಿಂದ ದೂರ ಸರಿದಿರುವುದಲ್ಲದೆ, ಅವರಿಗೆ ಗ್ರಾಮೀಣ ಆಟೋಟಗಳ ಬಗ್ಗೆ ಮಾಹಿತಿಗಳಿಲ್ಲ. ಗ್ರಾಮೀಣ ಕ್ರೀಡೋತ್ಸವದ ಮೂಲಕ ನಮ್ಮ ಹಳೆಯ ಕ್ರೀಡೆಗಳನ್ನು…






