ಲೇಖಕ: admin

ನಾಪೋಕ್ಲು ಏ.24 NEWS DESK : ಕೆಪಿಎಸ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೀಯಕಪೂವಂಡ ಕುಟುಂಬ ಆಯೋಜಿತ 5ನೇ ವರ್ಷದ ಕೊಡವ ಕೌಟುಂಬಿಕ ಕೇರ್ ಬಲಿ ನಮ್ಮೆ(ಹಗ್ಗಜಗ್ಗಾಟ) ಯ ಎರಡನೇ ದಿನದ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ 89 ತಂಡಗಳು ಹಾಗೂ ಮಹಿಳಾ ವಿಭಾಗದಲ್ಲಿ 31 ತಂಡಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆದಿದೆ. ಪಂದ್ಯದ ವೀಕ್ಷಕ ವಿವರಣೆಗಾರರಾಗಿ ಬಾಳೆಯಡ ದಿವ್ಯ ಮಂದಪ್ಪ, ತೀರ್ಪುಗಾರರಾಗಿ ಕೊಡವ ಟಗ್ ಆಫ್‌ ವಾರ್ ಅಕಾಡೆಮಿಯ ಸದಸ್ಯರು ಕಾರ್ಯನಿರ್ವಹಿಸಿದರು. ಪಂದ್ಯಾಟ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ನೆರೆದಿದ್ದರು. ಗುಡುಗು ಸಿಡಿಲಿನ ಅಬ್ಬರ ಜೋರಾಗಿದ್ದಿದರಿಂದ ಎಲ್ಲರೂ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ, ಮಳೆ ಬಾರದ ಹಿನ್ನೆಲೆಯಲ್ಲಿ ಎಲ್ಲಾ ಪಂದ್ಯಗಳು ಸುಗಮವಾಗಿ ನಡೆಯುವಂತಾಯಿತು. ಚೀಯಕಪೂವಂಡ ಕೇರ್ ಬಲಿ ನಮ್ಮೆ ಕುಟುಂಬದ ಹಾಡನ್ನು ಹಾಡಿದ ಮಚ್ಚಂಡ ಶರಣ್‌ ಪರವಾಗಿ ಅವರ ಪೋಷಕರನ್ನು ಚೀಯಕಪೂವಂಡ ಸ್ಪೋಟ್ಸ್‌ ಅಧ್ಯಕ್ಷ ಸಿ.ಕೆ ಬೋಪಣ್ಣ ಹಾಗೂ ಸಿ.ಕೆ ಅಪ್ಪಚ್ಚು, ಟಗ್‌ ಆಪ್‌ ವಾರ್‌ ಅಕಾಡೆಮಿ ಅಧ್ಯಕ್ಷ ಪೊನ್ನಾಲ್‌ ತಂಡ ಕಿರಣ್‌ ಪೊನ್ನಪ್ಪ…

Read More

ಸಿದ್ದಾಪುರ ಏ.24 NEWS DESK : ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಶುಕ್ರವಾರ ಯಶಸ್ವಿಯಾಗಿ ಅರಣ್ಯಕ್ಕೆ ಅಟ್ಟಿತು. ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಿಂದ ಹೊರಬಂದು ಕೃಷಿ ಭೂಮಿಗಳಲ್ಲಿ ಸಂಚರಿಸುತ್ತಿದ್ದ 2 ಮರಿಯಾನೆಗಳಿದ್ದ 9 ಕಾಡಾನೆಗಳ ಹಿಂಡು ಗ್ರಾಮಸ್ಥರಲ್ಲಿ ಆತಂಕವನ್ನು ಹುಟ್ಟು ಹಾಕಿತ್ತು. ಪರಿಸ್ಥಿತಿಯನ್ನು ಗಮನಿಸಿದ ಅರಣ್ಯ ಇಲಾಖಾ ಸಿಬ್ಬಂದಿಗಳು ಕಾರ್ಯಾಚರಣೆ ಮೂಲಕ ಕಾಡಾನೆಗಳನ್ನು ಮರಳಿ ಅರಣ್ಯ ಪ್ರದೇಶಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಡಾನೆಗಳ ಹಿಂಡು ಗಾಮೀಣ ಭಾಗದಿಂದ ಅರಣ್ಯಕ್ಕೆ ಮರಳಿರುವುದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ. ಕಾರ್ಯಾಚರಣೆಯನ್ನು ಚೆನ್ನಂಗಿ ಸೆಕ್ಷನ್‍ನ ಉಪವಲಯ ಅರಣ್ಯಾಧಿಕಾರಿ ಪಿ.ಟಿ. ಶಶಿ ನೇತೃತ್ವದಲ್ಲಿ ಆರ್.ಆರ್.ಟಿ.ಸಿಬ್ಬಂದಿಗಳು ಯಶಸ್ವಿಯಾಗಿ ನಡೆಸಿದರು.

Read More

ಸೋಮವಾರಪೇಟೆ ಏ.24 NEWS DESK : ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ದೊಡ್ಡಮನೆಕೊಪ್ಪ, ಊರೊಳಕೊಪ್ಪ, ಸಿಂಗನಳ್ಳಿ, ನಡ್ಲಕೊಪ್ಪ, ಇನಕನಹಳ್ಳಿ, ಹರಪಳ್ಳಿ, ವಣಗೂರುಕೊಪ್ಪ, ಶುಭಾಷ್‌ನಗರ, ಕರಡಿಕೊಪ್ಪ, ದೊಡ್ಡತೋಳೂರು, ಚಿಕ್ಕತೋಳೂರು, ಗ್ರಾಮಗಳ ವ್ಯಾಪ್ತಿಗೆ ಒಳಪಡುವ ನಿವಾಸಿಗಳು ಸುಗ್ಗಿ ಉತ್ಸವದಲ್ಲಿ ದೇವಿಗೆ ಮಡೆ ಅರ್ಪಿಸುವ ಮೂಲಕ ಗ್ರಾಮದ ಸಮೃದ್ಧಿಗಾಗಿ, ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸುಗ್ಗಿ ಕುಣಿತ, ಗ್ರಾಮಸ್ಥರ ವಾದ್ಯ ಕುಣಿತ ಉತ್ಸವದಲ್ಲಿ ಆಕರ್ಷಣಿಯಾವಾಗಿತ್ತು. ಮಕ್ಕಳು, ಪುರುಷರು, ಮಹಿಳೆಯರು ಸಂಪ್ರಾದಾಯದಂತೆ ಸುಗ್ಗಿ ಕುಣಿತದಲ್ಲಿ ಪಾಲ್ಗೊಂಡರು. ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಸುಗ್ಗಿ ಕಟ್ಟೆಯ ಮುಖ್ಯ ರಂಗಕ್ಕೆ ಪ್ರದಕ್ಷಿಣೆ ಹಾಕಲಾಯಿತು. ಹರಕೆ ಮಾಡಿಕೊಂಡ ಭಕ್ತರು ಈಡುಗಾಯಿ ಸೇವೆ ಅರ್ಪಿಸಿದರು. ಮಹಿಳೆಯರು, ಮಕ್ಕಳು, ಹಿರಿಯರು ಉತ್ಸವದಲ್ಲಿ ಭಾಗವಹಿಸಿ ಗ್ರಾಮದೇವತೆಗೆ ಇಷ್ಟಾರ್ಥಗಳ ನೆರವೇರಿಕೆಗೆ ಪ್ರಾರ್ಥಿಸಿದರು. ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವುದು, ಗ್ರಾಮದ ಹೆಣ್ಣುಮಕ್ಕಳಿಗೆ ವಿಶೇಷ ದಿನ. ಈ ಭಾಗದಿಂದ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ತವರಿನ ಸುಗ್ಗಿಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ದೇವತಾ…

Read More

ಮಡಿಕೇರಿ ಏ.24 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.25 ರ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮಂಡುವಂಡ ಮತ್ತು ಕಳಕಂಡ, 10ಕ್ಕೆ ಮಂಡೇಪಂಡ ಮತ್ತು ಮಲ್ಲಜ್ಜಿರ, 11ಕ್ಕೆ ಮಾಚೆಟ್ಟಿರ (ಬಾಳುಗೋಡು) ಮತ್ತು ಬೊಟ್ಟಂಗಡ, ಮಧ್ಯಾಹ್ನ 12ಕ್ಕೆ ಓಡಿಯಂಡ ಮತ್ತು ಚೆಕ್ಕೇರ, 1ಕ್ಕೆ ಬೊಳಕಾರಂಡ (ಕೊಣಂಜಗೇರಿ) ಮತ್ತು ಅಜ್ಜೆಟ್ಟಿರ, 2ಕ್ಕೆ ಮಾಚಮಾಡ ಮತ್ತು ಮೋಟನಾಳಿರ, 3ಕ್ಕೆ ಪಾಂಡ್ಯಂಡ ಮತ್ತು ಚೊಟ್ಟಂಗಡ ಹಾಗೂ 4 ಗಂಟೆಗೆ ಪುದಿಯೊಕ್ಕಡ ಮತ್ತು ಹಂಚೆಟ್ಟಿರ

Read More

ಮಡಿಕೇರಿ ಏ.24 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.24 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಕೋಳೆರ ಮತ್ತು ಗೀಜಿಗಂಡ ತಂಡಗಳ ನಡುವಿನ ಪಂದ್ಯದಲ್ಲಿ ಕೋಳೆರ 7 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗೀಜಿಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 46 ರನ್ ಗಳನ್ನು ಗಳಿಸಿತು. ಕೋಳೆರ 5.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಜಯ ಕಂಡಿತು. ಪಾರುವಂಡ ಮತ್ತು ಮಂದೇಯಂಡ (ಮಾದಾಪುರ) ನಡುವಿನ ಪಂದ್ಯದಲ್ಲಿ ಪಾರುವಂಡ ತಂಡಕ್ಕೆ 8 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂದೇಯಂಡÀ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಸೇರಿಸಿತು. ಪಾರುವಂಡ 2.4…

Read More

ಮಡಿಕೇರಿ ಏ.24 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.24 ರಂದು ಗೆಲುವು ಸಾಧಿಸಿದ ಮಹಿಳಾ ತಂಡಗಳು. *ಮೈದಾನ 3* (ಮಹಿಳಾ ಕ್ರಿಕೆಟ್)ಸರಕಾರಿ ಪ್ರೌಢ ಶಾಲಾ ಮೈದಾನ ಮಾಚಿಮಂಡ ಮತ್ತು ಪಾಸುರ ತಂಡಗಳ ನಡುವಿನ ಪಂದ್ಯದಲ್ಲಿ ಪಾಸುರ 9 ವಿಕೆಟ್ ಗಳಿಂದ ಜಯ ಸಾಧಿಸಿತು. ಮಾಚಿಮಂಡ 5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 35 ರನ್ ಗಳನ್ನು ಗಳಿಸಿತು. ಪಾಸುರ 3.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು. ಮುಕ್ಕಾಟಿರ (ಹರಿಹರ) ಮತ್ತು ಮಾಚಮಾಡ ನಡುವಿನ ಹಣಾಹಣಿಯಲ್ಲಿ ಮುಕ್ಕಾಟಿರ 24 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಮುಕ್ಕಾಟಿರ 5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿತು. ಮಾಚಮಾಡ 5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 23 ರನ್ ಗಳನ್ನು…

Read More

ಮಡಿಕೇರಿ NEWS DESK ಏ.24 : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯ ಹೋಂಸ್ಟೇ, ಹೊಟೇಲ್ ಮತ್ತು ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಪ್ರವಾಸಿಗರ ಸುರಕ್ಷತೆಯ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಹೋಂಸ್ಟೇ, ಹೊಟೇಲ್ ಗಳ ನೋಂದಣಿ, ಪ್ರವಾಸಿಗರ ಸುರಕ್ಷತೆ, ಕಾರ್ಮಿಕರ ಗುಣ ನಡತೆ ಪರಿಶೀಲನೆ, ವಿದೇಶೀ ಪ್ರವಾಸಿಗರ ನೋಂದಣಿ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ವಾರ್ತಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಕುಶಾಲನಗರ NEWS DESK : ಕುಶಾಲನಗರದಲ್ಲಿ ಆಯೋಜನೆ ಯಾಗುತ್ತಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ತೊರೆನೂರು ವಿರಕ್ತ ಮಠದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಕಳೆದ ಅನೇಕ ದಶಕಗಳಿಂದ ಮಠದ ಪೀಠಾಧಿಪತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮಲ್ಲಿಕಾರ್ಜುನ ಶ್ರೀಗಳು ದಕ್ಷಿಣ ಕೊಡಗಿನಲ್ಲಿ ಎಸ್ ಎಂ ಎಸ್ ವಿದ್ಯಾಸಂಸ್ಥೆ ಯನ್ನು ತೆರೆಯುವ ಮೂಲಕ ಶಿಕ್ಷಣ ಸೇವೆಯಲ್ಲಿ, ಹೊಂಬೆಳಕು ಎಂಬ ಮಾಸಿಕ ತತ್ವ ಚಿಂತನಾಗೊಷ್ಠಿಯ ಮೂಲಕ ಶರಣರ ಸಂದೇಶಗಳನ್ನು ಸಾರುತ್ತಾ ಕೊಡಗು ಜಿಲ್ಲೆಯ ಸರ್ವ ಜನ ಸಮುದಾಯದ ಭಕ್ತಿ ಹಾಗೂ ಶ್ರದ್ದೆಯ ಪ್ರತೀಕವಾಗಿದ್ದು ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಶ್ರೀಗಳ ಆಯ್ಕೆ ಸ್ವಾಗತಾರ್ಹ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಿಸಿದರು. ಜೂನ್ 23ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಅಯೋಜಿಸಿರುವ…

Read More

ಮಡಿಕೇರಿ NEWS DESK ಏ.24 : ಅಖಿಲ ಅಮ್ಮ ಕೊಡವ ಸಮಾಜದ ವತಿಯಿಂದ ಬಾನಂಡ ಕುಟುಂಬದ ಸಹಯೋಗದಲ್ಲಿ ಮೇ1 ರಿಂದ 3ರವರೆಗೆ “ಬಾನಂಡ ಕಪ್ ಕ್ರಿಕೆಟ್ ಪಂದ್ಯಾವಳಿ” ದಕ್ಷಿಣ ಕೊಡಗಿನ ಮಾಯಮುಡಿ ಶಾಲಾ ಮೈದಾನದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಅಖಿಲ ಅಮ್ಮಕೊಡವ ಸಮಾಜದ ಅಧ್ಯಕ್ಷ ಬಾನಂಡ ಪ್ರತ್ಯು, ದ್ವಿತೀಯ ಬಾರಿ ನಡೆಯುತ್ತಿರುವ ಅಮ್ಮ ಕೊಡವ ಸಮುದಾಯದ ಪಂದ್ಯಾವಳಿಯಲ್ಲಿ ಸುಮಾರು 24 ಅಮ್ಮಕೊಡವ ಕುಟುಂಬ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಯಲಿರುವುದಾಗಿ ಮಾಹಿತಿಯನ್ನಿತ್ತರು. ಪಂದ್ಯಾವಳಿಯ ಪಂದ್ಯಗಳು ಆರು ಓವರ್‌ಗಳಿಗೆ ಸೀಮಿತವಾಗಿ ನಡೆಯಲಿದೆಯಾದರೆ, ಅಂತಿಮ ಪಂದ್ಯ 8 ಓವರ್‌ಗಳದ್ದಾಗಿರುತ್ತದೆ. ಪಂದ್ಯಾವಳಿ ಉದ್ಘಾಟನೆಗೂ ಮುನ್ನ ಮೇ1 ರಂದು ಬೆಳಿಗ್ಗೆ 8 ಗಂಟೆಗೆ ಮಾಯಮುಡಿಯ ಶ್ರೀರಾಮಂದಿರದಿAದ ಅಮ್ಮ ಕೊಡವರ ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಅಮ್ಮ ಕೊಡವ ಸಮುದಾಯದ 32 ಕುಟುಂಬಗಳಿರುವುದಾಗಿ ಮಾಹಿತಿ ನೀಡಿದ ಅವರು, ಕಳೆದ ಬಾರಿ ಶಾಸಕ ಪೊನ್ನಣ್ಣ ಅವರು ಕ್ರೀಡಾಕೂಟಕ್ಕೆ 5 ಲಕ್ಷ…

Read More

ಮಡಿಕೇರಿ NEWS DESK ಏ.24 : ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ಸೀಸನ್ 4ರ ವತಿಯಿಂದ ಕ್ರಿಕೆಟ್ ಪಂದ್ಯಾಟ ಮತ್ತು ವಿವಿಧ ಕ್ರೀಡಾಕೂಟಗಳನ್ನು ಏ.25 ಹಾಗೂ 26ರಂದು ಆಯೋಜಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷ ಕಪಿಲ್ ಕುಮಾರ್ ದುಗ್ಗಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ದಿನಗಳ ಕಾಲ ನಡೆಯುವ ವಿವಿಧ ಕ್ರೀಡಾ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು. ಆಹ್ವಾನಿತ 6 ತಂಡಗಳಿoದ ಕ್ರಿಕೆಟ್ ಪಂದ್ಯಾಟ, ಪುರುಷ ಹಾಗೂ ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಕ್ರೀಡೆಗಳು ನಡೆಯಲಿದೆ. ಅಲ್ಲದೆ ಪುರುಷರ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿದ್ದು, ಗಾಳಿಬೀಡು ಪ್ರೌಢ ಶಾಲಾ ಮೈದಾನದ ಬಳಿಯಿಂದ ಸ್ಪರ್ಧೆ ಆರಂಭಗೊಳ್ಳಲಿದೆ. ಗಾಳಿಬೀಡು ಗ್ರಾಮಸ್ಥರಿಗೆ ಸೀಮಿತವಾಗಿ ಕಾಳು ಎಕ್ಕುವುದು (4 ವರ್ಷದ ಒಳಗಿನ ಮಕ್ಕಳಿಗೆ), 100 ಮೀಟರ್ ಓಟ ಕಿರಿಯ ಬಾಲಕ /ಬಾಲಕಿಯರಿಗೆ (1ರಿಂದ 4ನೇ ತರಗತಿ), 100 ಮೀಟರ್ ಓಟ ಹಿರಿಯ ಬಾಲಕ /ಬಾಲಕಿಯರಿಗೆ (5 ರಿಂದ 7ನೇ ತರಗತಿ), 100 ಮೀಟರ್ ಓಟ ಪ್ರೌಢಶಾಲಾ…

Read More