ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ ನಾಪೋಕ್ಲು ಪಟ್ಟಣದ ವ್ಯಾಪ್ತಿಯಲ್ಲಿ ನಾಪೋಕ್ಲು ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು.
ಲೇಖಕ: admin
ಮಡಿಕೇರಿ ಮಾ.27 NEWS DESK : ಪಂಚ ಗ್ಯಾರಂಟಿ ಯೋಜನೆಯ ಎಲ್ಲಾ ಪ್ರಯೋಜನಗಳು ಫಲಾನುಭವಿಗಳಿಗೆ ದೊರಕಬೇಕಾದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಹೇಳಿದ್ದಾರೆ. ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,271 ಪಡಿತರ ಚೀಟಿದಾರರು ಇದ್ದು, ಇವರಿಗೆ ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮತ್ತು ಹೆಸರು ತೆಗೆದು ಹಾಕುವುದಕ್ಕೆ ಅರ್ಜಿ ಸಲ್ಲಿಸಲು ಮಾ.31 ರ ವರೆಗೆ ಅವವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಿರೀಕ್ಷಕರಾದ ವೀಣಾ ಅವರು ಸಭೆಗೆ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ ಅವರು ಮಾತನಾಡಿ, ಮಡಿಕೇರಿ ತಾಲ್ಲೂಕಿನಲ್ಲಿ ಶೇಕಡವಾರು ಸಾಧನೆ ಮಾಡಲಾಗಿದೆ ಎಂದು…
ಮಡಿಕೇರಿ ಮಾ.27 NEWS DESK : ಪ್ರವಾಸಿಗರ ಕೇಂದ್ರ ಬಿಂದು ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ ವೀಕ್ಷಿಸಿದರು. ಹಾಗೆಯೇ ಗ್ರೇಟರ್ ರಾಜಾಸೀಟು, ಪುಟಾಣಿ ರೈಲು ಮಾರ್ಗ ಮತ್ತು ಕೂರ್ಗ್ ವಿಲೇಜ್ಗೆ ತೆರಳಿ ಅಭಿವೃದ್ಧಿ ಸಂಬಂಧ ಮಾಹಿತಿ ಪಡೆದರು. ರಾಜಸೀಟು ಉದ್ಯಾನವನ ಬಳಿಯ ಟಿಕೇಟ್ ಕೌಂಟರ್, ಮಾಹಿತಿ ಕೇಂದ್ರ ಹಾಗೂ ಉದ್ಯಾನವನದೊಳಗೆ ಸಿಸಿಟಿವಿ ಹಾಗೂ ಗೇಟ್ ಅನ್ನು ಪರಿಶೀಲಿಸಿದರು. ಉದ್ಯಾನವನ ಸುತ್ತಲೂ ಸಿಸಿಟಿವಿ ವೈರ್ ಹಾಗೂ ವಿದ್ಯುತ್ ತಂತಿಗಳಿಂದ ಕೂಡಿದ್ದು, ಉದ್ಯಾನವನದ ಸೌಂದರ್ಯ ಹಾಳಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ದುರಸ್ತಿ ಕಾರ್ಯ ಹಾಗೂ ಭೂಮಿಯ ಒಳಭಾಗದಲ್ಲಿ ತಂತಿ ಅಳವಡಿಸುವುದು ಹಾಗೂ ದೀಪಗಳನ್ನು ದುರಸ್ತಿಪಡಿಸಿ ಅಲಂಕಾರಿಕಾ ದೀಪಗಳನ್ನು ಅಳವಡಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಪ್ರವಾಸಿಗರ ಆಕರ್ಷಣೀಯ ಕೇಂದ್ರವಾದ ರಾಜಾಸೀಟು ಬಳಿಯಲ್ಲಿ ಪುಟಾಣಿ ರೈಲು ಆರಂಭಕ್ಕೆ ಅಗತ್ಯ ಕ್ರಮವಹಿಸುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಕೂರ್ಗ್ ವಿಲೇಜ್ ನಲ್ಲಿರುವ…
ಚಿಕ್ಕ ಅಳುವಾರ ಮಾ.27 NEWS DESK : ಯೂರೋಪಿನ ಎಲ್ಲ ರಂಗಭೂಮಿ ಕಲೆಗೂ ಸಹ ಸಣ್ಣ ಪುಟ್ಟ ಆಚರಣೆಗಳಿಂದ ಆರಂಭವಾಗಿವೆ. ಭಾರತದಲ್ಲಿ 3ನೇ ಶತಮಾನದಲ್ಲಿ ರಂಗಭೂಮಿಯ ಪರಿಚಯವಾಯಿತು. ಅಂದಿನಿಂದ ಇಂದಿನವರೆಗೂ ಭಾರತದಲ್ಲಿ ರಂಗಭೂಮಿ ಕ್ಷೇತ್ರವು ವಿಶ್ವದೆಲ್ಲೆಡೆ ತನ್ನ ಬಾಹುಗಳನ್ನು ಚಾಚಿದೆ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೆಗ್ಗೋಡಿನ ರಂಗನಿರ್ದೇಶಕರು ಮತ್ತು ನೀನಾಸಂ ಶಿಕ್ಷಕರಾದ ಪಿ.ಎ ಮಂಜಪ್ಪ ಮಾಲ್ದಾರೆ ಅವರು ‘ರಂಗಭೂಮಿ ಎಂಬ ಚಿಕಿತ್ಸಕ ಮಾದರಿ’ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಚಿಕ್ಕ ಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿ ಕೊಡಗು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ- 20026 ರ ಅಂಗವಾಗಿ ನಡೆದ ವಿಶೇಷ ಉಪನ್ಯಾಸ, ರಂಗಗೌರವ ಮತ್ತು ರಂಗಸಂಗೀತ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಇಂದಿನ ಪರಿಸ್ಥಿತಿ ಮತ್ತು ಮನಸ್ಥಿತಿಯಲ್ಲಿ ಮನುಷ್ಯ ತನ್ನ ಸಂಬಂಧಗಳ ಜೊತೆಗೆ ಮುಕ್ತ ಮನಸ್ಸಿನಿಂದ ಮಾತನಾಡಲು, ಭಾವನೆಗಳನ್ನು ಅರ್ಥೈಸಿಕೊಳ್ಳಲು, ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲ ಒಂದು…
ಮಡಿಕೇರಿ ಮಾ.27 NEWS DESK : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಮಡಿಕೇರಿಯಲ್ಲಿ ನಡೆದ ರೆಗ್ಯೂಲರ್ ಡಿಸಿಎಂ ಅಧಿವೇಶನದ ಅಂತಿಮ ಪರೀಕ್ಷೆಯಲ್ಲಿ ಬಿ.ಎನ್.ಚರಿಷ್ಮಾ “5ನೇ” ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭಕೋರಿದ್ದಾರೆ.
ಕುಶಾಲನಗರ ಮಾ.27 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ( ಡಿ.ಎಸ್.ಇ.ಆರ್.ಟಿ.) ಯ ವತಿಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನು ಸ್ಥಾಪಿಸಲಾಗಿದೆ ಎಂದು ಡಯಟ್ ಸಂಸ್ಥೆಯ ಪ್ರಾಂಶುಪಾಲರು ಆದ ಪದನಿಮಿತ್ತ ಉಪನಿರ್ದೇಶಕ(ಅಭಿವೃದ್ದಿ)ರಾದ ರಾಮಚಂದ್ರ ರಾಜೇ ಅರಸ್ ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನುಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 34 ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಗಳಲ್ಲಿ ಇಂತಹ ವೃತ್ತಿಪರ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು. ಡಯಟ್ ಸಂಸ್ಥೆಯಲ್ಲಿ ಆರಂಭಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ಮೂಲಕ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ…
ಚಿಕ್ಕ ಅಳುವಾರ ಮಾ.27 NEWS DESK : ನಾಟಕ ಎಂಬುದು ಕೇವಲ ಮನರಂಜನೆಯ ಭಾಗ ಅಲ್ಲ; ಅದು ಸಮಾಜದ ಚಿಂತನೆ, ನೈತಿಕ ಬೋಧನೆಗಳನ್ನು, ಅಗತ್ಯ ವಿಚಾರಗಳನ್ನು ನಮ್ಮ ಮನಸ್ಸಿನ ಆಳಕ್ಕೆ ಇಳಿಸುವ, ಹೃದಯಸ್ಪರ್ಶಿ ಪ್ರದರ್ಶನವನ್ನು ತೆರೆಯ ಮೇಲೆ ತರುವ ಕಲೆ. ಅಲ್ಲದೇ ರಂಗಭೂಮಿಯು ಸಮಾಜದ ಒಂದು ಜೀವಂತ ದರ್ಪಣ ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು. ಚಿಕ್ಕ ಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿ ಕೊಡಗು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ- 20026 ರ ಅಂಗವಾಗಿ ನಡೆದ ವಿಶೇಷ ಉಪನ್ಯಾಸ, ರಂಗಗೌರವ ಮತ್ತು ರಂಗಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಿನಿಮಾ ಮತ್ತು ರಂಗಭೂಮಿಗೂ ಬಹಳಷ್ಟು ವ್ಯತ್ಯಾಸವಿದೆ. ಅಂತಾರಾಷ್ಟಿಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಟರು ರಂಗಭೂಮಿ ಕಲಾವಿದರೇ ಆಗಿದ್ದಾರೆ. ಅವರ ನಟನೆಯಲ್ಲಿ ಒಂದು ಜೀವಂತಿಕೆ ಇತ್ತು. ಆದರೆ ಇಂದು ಈ ಜೀವಂತಿಕೆಯ ನಟನೆಯನ್ನು ಕಾಣುವುದು ವಿರಳವಾಗಿದೆ ಎಂದು…
ಮಡಿಕೇರಿ ಮಾ.27 NEWS DESK : ಶ್ರೀ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀರಾಮನವಮಿ, ದುರ್ಗಾಪೂಜೆ ಹಾಗೂ ಟ್ರಸ್ಟ್ನ ವಾರ್ಷಿಕ ಮಹಾಸಭೆ ಸಂಭ್ರಮದಿಂದ ಜರುಗಿತು. ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ ತಂತ್ರಿಯವರ ನೇತೃತ್ವದಲ್ಲಿ ಗುರುವಾರ ಪೂಜಾ ಕಾರ್ಯಗಳು ನೆರವೇರಿದವು. ಟ್ರಸ್ಟ್ನ ನೂತನ ಜಾಗದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಸಭಾಭವನಕ್ಕೆ ದೇವರ ಚಿತ್ರಪಟವನ್ನು ಮೆರವಣಿಗೆಯಲ್ಲಿ ತಂದು ಇರಿಸಲಾಯಿತು. ನೂತನ ಭಜನಾ ಮಂದಿರ ನಿರ್ಮಾಣ ಸಂಬಂಧ ಟ್ರಸ್ಟ್ ವತಿಯಿಂದ ಸಾಮೂಹಿಕ ದುರ್ಗಾ ಹೋಮ ಏರ್ಪಡಿಸಲಾಗಿತ್ತು. ಬಳಿಕ ಶ್ರೀ ರಾಮಚಂದ್ರನ ಚಿತ್ರಪಟಕ್ಕೆ ಆರತಿ ಬೆಳಗಿ ಪ್ರಾರ್ಥಿಸಲಾಯಿತು. ದಿನದ ಪ್ರಯುಕ್ತ ಪುಟಾಣಿ ಮಕ್ಕಳು ಶ್ರೀರಾಮಚಂದ್ರ ಹಾಗೂ ಸೀತಾ ಮಾತೆಯ ವೇಷ ಧರಿಸಿ ಪಾಲ್ಗೊಂಡು ವಿಶೇಷ ಮೆರುಗು ನೀಡಿದರು. ಗಿರೀಶ್ ತಂತ್ರಿ ಮಾತನಾಡಿ, ನಮ್ಮ ಧರ್ಮದ ಪಾಲನೆ ಮತ್ತು ರಕ್ಷಣೆಯನ್ನು ನಾವೇ ಮಾಡಬೇಕು. ಧರ್ಮ ಕಾರ್ಯದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಾಗಿ ನಮ್ಮಲ್ಲಿ ಜಾಗೃತಿ ನಿರಂತರವಾಗಿರಲು ಸಾಧ್ಯವಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ನಮ್ಮವರೇ ನಮ್ಮ ಧರ್ಮವನ್ನು ಬೇರೆ ಬೇರೆ ರೀತಿಯಲ್ಲಿ ಅವಹೇಳನ ಮಾಡುತ್ತಿದ್ದಾರೆಂದು ಬೇಸರ…
ಗೋಣಿಕೊಪ್ಪ ಮಾ.27 NEWS DESK : ರಾಮನವಮಿ ಪ್ರಯುಕ್ತ ಗೋಣಿಕೊಪ್ಪ ನಗರ ಹಿಂದೂ ಪರ ಸಂಘಟನೆಗಳು ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು. ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ನಂತರ ರಾಮ ಸ್ತೋತ್ರವನ್ನು ಪಠಿಸಿ ಸಮಾಜದ ಸುಭೀಕ್ಷೆಗೆ ಪ್ರಾರ್ಥಿಸಿದರು. ಇದೇ ಸಂದರ್ಭ ನೆರದವರಿಗೆ ಸಿಹಿ ಹಂಚಲಾಯಿತು. ವಿಶ್ವ ಹಿಂದೂ ಪರಿಷತ್ ಪೊನ್ನಂಪೇಟೆ ತಾಲೂಕು ಪ್ರಖಂಡ ಅಧ್ಯಕ್ಷ ಅಮೃತ್ರಾಜ್, ಉಪಾಧ್ಯಕ್ಷ ಎಂ.ಎಸ್.ಸುಬ್ರಮಣಿ, ಕಾರ್ಯದರ್ಶಿ ಉಮೇಶ್, ಮಾಜಿ ಕಾರ್ಯದರ್ಶಿ ಅಮ್ಮತ್ತೀರ ಸುರೇಶ್, ಗೋಣಿಕೊಪ್ಪ ನಗರಘಟಕ ಕಾರ್ಯದರ್ಶಿ ಕೆ.ವಿ. ಸುರೇಶ್, ಗೋ ರಕ್ಷಕ್ ಅರುಣ್ ಗೋಪಾಲಕೃಷ್ಣ, ಪ್ರಚಾರಕ್ ಪುಷ್ಪಾರಾಜ್, ಸಂಘ ಪರಿವಾರದ ಪ್ರಮುಖರಾದ ನೆಲ್ಲೀರ ಚಲನ್, ಸುರೇಶ್ ರೈ, ರಾಜೇಶ್, ಕೊಣಿಯಂಡ ಬೋಜಮ್ಮ, ಕೆ.ಜಿ.ರಾಮಕೃಷ್ಣ, ದೀಪಕ್, ಕುಮಾರ, ಬೆಂಜಂಡ ರಶ್ಮಿ ದೇವಯ್ಯ, ಎಂ.ಎನ್. ಗಣೇಶ್, ಅಣ್ಣಪ್ಪ, ಚೇತನ್, ಸುಬ್ರಮಣಿ, ಜ್ಯೊತಿ, ವಿನು, ಲಕ್ಷ್ಮಿರೆಡ್ಡಿ, ಮಂಜು, ವಿನೋದ್, ಧನಲಕ್ಷ್ಮಿ, ಮಣಿಕಂಠ, ಶಿವು ಇದ್ದರು.
ಕುಶಾಲನಗರ ಮಾ.27 NEWS DESK : ಉತ್ತರ ಕೊಡಗಿನ ಪ್ರಮುಖ ಪುಣ್ಯ ಕ್ಷೇತ್ರವಾಗಿರುವ ಕುಶಾಲನಗರ ತಾಲೂಕಿನ ಕಣಿವೆಯ ಶ್ರೀರಾಮಲಿಂಗೇಶ್ವರ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಶುಕ್ರವಾರ ಶದ್ಧಾ ಭಕ್ತಿಯಿಂದ ನೆರವೇರಿತು. ರಾಮಲಿಂಗೇಶ್ವರ, ಅಗಸ್ತೇಶ್ವರ, ಗುಹೇಶ್ವರ, ಹರಿಹರೇಶ್ವರ ಲಕ್ಷ್ಮಣೇಶ್ವರ ಹಾಗು ಬಸವೇಶ್ವರ ಪಂಚ ಲಿಂಗಗಳ ಸನ್ನಿಧಿಯಲ್ಲಿ ಪೂರ್ವಾಭಿಮುಖವಾಗಿ ಹರಿದಿರುವ ಕಾವೇರಿ ನದಿಯ ದಂಡೆಯಲ್ಲಿ ಅಪಾರ ಭಕ್ತ ಸಮೂಹ ರಥೋತ್ಸವಕ್ಕೆ ಸಾಕ್ಷಿಯಾಯಿತು. ಶ್ರೀ ರಾಮನು ಮರಳಿನಿಂದ ಪ್ರತಿಷ್ಠಾಪಿಸಿದನೆಂಬ ಇತಿಹಾಸ ಹಾಗೂ ಪ್ರತೀತಿ ಇರುವ ಸನ್ನಿಧಿಯಲ್ಲಿ ಬೆಂಗಳೂರಿನ ವೇದಬ್ರಹ್ಮ ನರಹರಿ ಶರ್ಮಾ ಹಾಗೂ ಕಣಿವೆ ರಾಮಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಆಚಾರ್ ನೇತೃತ್ವದ ಪುರೋಹಿತರ ತಂಡ ಧಾರ್ಮಿಕ ವಿಧಿಗಳನ್ನು ಪೂರೈಸಿದರು. ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಪದ್ಧತಿಯಂತೆ ನೆರೆಯ ಹೆಬ್ಬಾಲೆ ಗ್ರಾಮಸ್ಥರು ಅಂಚೆಯ ಮೂಲಕ ಕಾಶಿಯಿಂದ ತರಿಸಿದ್ದ ಪವಿತ್ರ ಗಂಗಾ ಜಲವನ್ನು ಅಲಂಕೃತ ಮಂಟಪದಲ್ಲಿಟ್ಟು ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಕಣಿವೆಯ ಶ್ರೀಕ್ಷೇತ್ರಕ್ಕೆ ತಂದು ದೇವರಿಗೆ ಪ್ರೋಕ್ಷಣೆ ಗೈದ ಬಳಿಕ ರಾಮಲಿಂಗೇಶ್ವರ…






