ಮಡಿಕೇರಿ ಜ.2 NEWS DESK : ಮಾದಾಪುರದ ಗೌಸಿಯ ಸ್ವಲಾತ್ ಸಮಿತಿ ವತಿಯಿಂದ ಜ.7 ಮತ್ತು 8 ರಂದು ಧಾರ್ಮಿಕ ಪ್ರಭಾಷಣ ಮತ್ತು ಬಡ ಹೆಣ್ಣು ಮಗಳ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಎಂ.ಉಮ್ಮರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಾಪುರದ ಪಂಚಾಯಿತಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ತಾನು ವಹಿಸಿಕೊಂಡಿರುವುದಾಗಿ ತಿಳಿಸಿದರು. ಜ.7 ರಂದು ಸಮೀರ್ ದಾರಿಮಿ ಕೊಲ್ಲಂ ಅವರಿಂದ ಧಾರ್ಮಿಕ ಪ್ರಭಾಷಣ ನಡೆಯಲಿದ್ದು, ಡಿ.8 ರಂದು ಪ್ರವಾದಿಯವರ ಕುಡಿ ಬಾಯಾರ್ ತಂಗಳ್ ನೇತೃತ್ವದಲ್ಲಿ ಬಡ ಹೆಣ್ಣು ಮಗಳ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಅಲ್ಪಸಂಖ್ಯಾ ಅಧ್ಯಕ್ಷ ಹನೀಫ್ ಚೋಕಂಡಳ್ಳಿ, ಮೊಹಿಯ್ಯಿದ್ದೀನ್ ಜುಮಾಮಸೀದಿ ಅಧ್ಯಕ್ಷ ಎ.ಪಿ.ಅಕ್ಬರ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ ಕೊಟ್ಟಮುಡಿ, ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಉಮೇಶ್ ಉತ್ತಪ್ಪ, ಜಿ.ಪಂ ಮಾಜಿ…
ಲೇಖಕ: admin
ಮಡಿಕೇರಿ ಜ.2 NEWS DESK : ವಿಟಮಿನ್ ಬಿ12 (ಕೋಬಾಲಾಮಿನ್) ನಮ್ಮ ದೇಹಕ್ಕೆ ಅತ್ಯಲ್ಪ ಪ್ರಮಾಣದಲ್ಲಿ ಅಂದರೆ ದಿನಕ್ಕೆ 2.4 -2.8 ಮೈಕ್ರೋಗ್ರಾಂ ಬೇಕಾಗಿದ್ದರೂ, ಇದರ ಪಾತ್ರ ಬಹಳ ದೊಡ್ಡದು. ಇದೊಂದು ವಿಶಿಷ್ಟವಾದ ವಿಟಮಿನ್ ಆಗಿದ್ದು, ನಮ್ಮ ದೇಹವು ಇದನ್ನು ಹೆಚ್ಚಿನ ಪ್ರಮಾಣದಲ್ಲಿ, ವಿಶೇಷವಾಗಿ ಯಕೃತ್ತಿನಲ್ಲಿ ( ಲಿವರ್ ) ಸಂಗ್ರಹಿಸಿಟ್ಟುಕೊಳ್ಳುತ್ತದೆ. ಹಾಗಾಗಿ, ಇದರ ಕೊರತೆಯು ತಕ್ಷಣವೇ ಕಾಣಿಸದೆ, ನೀವು ಸೇವಿಸುವುದನ್ನು ನಿಲ್ಲಿಸಿದರೂ ಅನೇಕ ವರ್ಷಗಳ ನಂತರ ಕಾಣಿಸಿ ಕೊಳ್ಳಬಹುದು. ಅಲ್ಲದೆ, ಇದು ಸಸ್ಯ ಮೂಲದ ಆಹಾರಗಳಲ್ಲಿ ಸಿಗದಿರುವ ಏಕೈಕ ವಿಟಮಿನ್ . ಇದರ ಕೊರತೆಯು ನರಮಂಡಲಕ್ಕೆ ಶಾಶ್ವತ ಹಾನಿ ಉಂಟುಮಾಡಬಹುದಾದ ಕೆಲವು ಅಪರೂಪದ ಪೌಷ್ಟಿಕಾಂಶ ಸಮಸ್ಯೆಗಳಲ್ಲಿ ಒಂದಾಗಿದೆ. :: ವಿಟಮಿನ್ ಬಿ12 ಕಾರ್ಯ :: ಬಿ12 ನಮ್ಮ ದೇಹದಲ್ಲಿ ಪರ್ಯಾಯವಿಲ್ಲದ, ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಕೆಂಪು ರಕ್ತ ಕಣಗಳ ರಚನೆ :: ಇದು ರಕ್ತಹೀನತೆ ಯನ್ನು ತಡೆಯುತ್ತದೆ. ಡಿಎನ್ಎ ಸಂಶ್ಲೇಷಣೆ : : ಪ್ರತಿಯೊಂದು ಜೀವಕೋಶದ ವಿಭಜನೆಗೂ ಇದು ಅಗತ್ಯ.…
ಮಡಿಕೇರಿ ಜ.2 NEWS DESK : ಕೆ ಎಸ್ ಸಿ ಎ ವತಿಯಿಂದ ಮಂಗಳೂರು ವಿಭಾಗದ U -14 ವಲಯ ಮಟ್ಟದ ಕ್ರಿಕೆಟ್ ತಂಡಕ್ಕೆ ನಗರದ ಕೊಡಗು ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಕೆ.ಎಂ.ಆದಿತ್ಯ ಆಯ್ಕೆಯಾಗಿದ್ದಾರೆ. ಕೆ ಎಸ್ ಸಿ ಎ ಲೀಗ್ ಪಂದ್ಯಗಳಲ್ಲಿ ಉತ್ತಮ ಆಟ ಪ್ರದರ್ಶಿಸಿ ಅರ್ಧ ಶತಕ ಬಾರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೆ ಎಸ್ ಸಿ ಎ ಅಂತರ್ ಜಿಲ್ಲಾ ಪಂದ್ಯಗಳಲ್ಲಿಯೂ ಆದಿತ್ಯ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಅವರನ್ನು ಮಂಗಳೂರು ವಲಯ ಪ್ರತಿನಿಧಿಯಾಗಿ ಆಯ್ಕೆ ಮಾಡಲಾಗಿದೆ. 2026 ರ ಜ.3 ರಿಂದ 15 ರ ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕೆ ಎಸ್ ಸಿ ಎ U-14 ಅಂತರ್ ವಲಯ(ರಾಜ್ಯಮಟ್ಟದ) ಕ್ರಿಕೆಟ್ ಪಂದ್ಯದಲ್ಲಿ ಮಂಗಳೂರು ವಲಯ ತಂಡವನ್ನು ಪ್ರತಿನಿಧಿಸಲಿರುವ ಆದಿತ್ಯ ಗಾಳಿಬೀಡು ನಿವಾಸಿ, ಪ್ರಸ್ತುತ ಮಡಿಕೇರಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶಿರಸ್ತೇದಾರ್ ಆಗಿರುವ ಕರಕರನ ಮಧುಕರ ಮತ್ತು ಸಬಿತ ದಂಪತಿ ಪುತ್ರ.
ಮೈಸೂರು, ಜ.2 NEWS DESK : ಮೈಸೂರಿನಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೆಲವು ಪರಿಣಾಮಕಾರಿ ಕೈಗೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳ ವಲಯವನ್ನು ಸ್ಥಾಪಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಂಸದ ಯದುವೀರ್, ಬೀದಿಬದಿ ಮಾರಾಟಗಾರರಿಗೆ ಪೂರಕವಾಗಿ ಕೆಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ತೊಂದರೆ ಎದುರಾಗಬಾರದು. ಮೈಸೂರಿನಲ್ಲಿ ಬೀದಿ ಮಾರಾಟ ವಲಯಗಳನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ನಗರದಲ್ಲಿ ಸುರಕ್ಷತೆ, ಭದ್ರತೆ ಮತ್ತು ಸ್ವಚ್ಛತೆಯನ್ನು ಖಚಿತಪಡಿಸಬೇಕಾಗಿದೆ. ಎಲ್ಲಾ ಮಾರಾಟಗಾರರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡಬೇಕು. ವಲಯಗಳನ್ನು ರಚಿಸುವ ಪ್ರಕ್ರಿಯೆಯಲ್ಲಿ ಯಾವುದೇ ವ್ಯಾಪಾರಿಗಳಿಗೆ ತೊಂದರೆಯಾಗಬಾರದು ಎಂದು ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ಮಾರಾಟಗಾರರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಯದುವೀರ್ ಹೇಳಿದರು. ಮೈಸೂರು ಸ್ವಚ್ಛ…
ಕುಶಾಲನಗರ ಜ.2 NEWS DESK : ಸಮಾಜಕ್ಕೆ ಬೇರೆ ಬೇರೆ ಸಂಘ ಸಂಸ್ಥೆಗಳ ಮೂಲಕ ನಿರಂತರ ಸೇವೆ ಸಲ್ಲಿಸಬೇಕೆನ್ನುವ ಅಭಿಲಾಷೆಯನ್ನು ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಮಾಜಿ ಅಧ್ಯಕ್ಷ ಎಸ್.ಕೆ.ಸತೀಶ್ ವ್ಯಕ್ತಪಡಿಸಿದರು. ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಸತೀಶ್ ಅವರ ನಿವಾಸದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕುಶಾಲನಗರ ಚೇಂಬರ್ ಈಗಿನ ಆಡಳಿತ ಮಂಡಳಿ ಕೆ.ಎಸ್.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಗೆ ನಾನು ಗೈರಾಗಿದ್ದರು ಮನೆಗೆ ಬಂದು ಈ ರೀತಿಯಲ್ಲಿ ಗೌರವಿಸುವ ಸಂಪ್ರದಾಯ ಖಂಡಿತ ಉತ್ತಮ ಬೆಳವಣಿಗೆ. ಸಂಸ್ಥೆಯಲ್ಲಿ ದುಡಿದ ಎಲ್ಲರನ್ನೂ ಗುರುತಿಸಿ ಈಗಿನ ಜನಸಮೂಹಕ್ಕೆ ಮತ್ತೊಮ್ಮೆ ನಮ್ಮಗಳ ಸೇವೆಯನ್ನು ನೆನಪಿಸಿದ್ದು ಶ್ಲಾಘನೀಯ. ಇನ್ನು ಹೆಚ್ಚಿನ ಉತ್ತಮ ಕಾರ್ಯಗಳನ್ನು ಹಮ್ಮಿಕೊಳ್ಳಲು ನಾವುಗಳು ಜೊತೆಯಲ್ಲಿ ಇರುತ್ತೇವೆ ಎಂದು ತಿಳಿಸಿದರು. ಕುಶಾಲನಗರ ಚೇಂಬರ್ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಹಿರಿಯರ ಮಾರ್ಗದರ್ಶನ ಸದಾ ಅವಶ್ಯ. ಅವರುಗಳ ಸಲಹೆ, ಸೂಚನೆ ಮೇರೆಗೆ…
ಮಡಿಕೇರಿ ಜ.2 NEWS DESK : ಮುಖ್ಯಮಂತ್ರಿ ಸಿದ್ದರಾಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯ ನೌಕರರ ಸಂಘದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸೇರಿದಂತೆ ಸಚಿವಾಲಯದ ನೌಕರರು ಈ ಸಂದರ್ಭದಲ್ಲಿ ಹಾಜರಿದ್ದರು.
ಮಡಿಕೇರಿ ಜ.2 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಮಡಿಕೇರಿಯಲ್ಲಿ ಬಾಕಿ ಉಳಿದಿರುವ ಪ್ರಥಮ ವರ್ಷದ ಬಿ.ಎಸ್ಸಿ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ-11, ಬಿ.ಎಸ್ಸಿ ಮೆಡಿಕಲ್ ಇಮ್ಯಾಜಿಂಗ್ ಟೆಕ್ನಾಲಜಿ-20, ಬಿಎಸ್ಸಿ ಆಪ್ಟೋಮೆಟ್ರಿ-20, ಬಿಎಸ್ಸಿ ರೆಸ್ಪಿರೆಟರಿ ಕೇರ್ ಟೆಕ್ನಾಲಜಿ-19 ಸೀಟುಗಳನ್ನು ಹಾಗೂ ದ್ವಿತೀಯ ವರ್ಷದ ಬಿಎಸ್ಸಿ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ-15, ಬಿಎಸ್ಸಿ ಅನಸ್ತೇಸಿಯಾ ಮತ್ತು ಆಪರೇಷನ್ ಥಿಯೇಟರ್ ಟೆಕ್ನಾಲಜಿ-11, ಬಿಎಸ್ಸಿ ಮೆಡಿಕಲ್ ಇಮ್ಯಾಜಿಂಗ್ ಟೆಕ್ನಾಲಜಿ-19, ಬಿಎಸ್ಸಿ ರೆಸ್ಪಿರೆಟರಿ ಕೇರ್ ಟೆಕ್ನಾಲಜಿ-20, ಬಿಎಸ್ಸಿ ಆಪ್ಟೋಮೆಟ್ರಿ-18 ಸೀಟುಗಳಿಗೆ ನೇರ ಆಯ್ಕೆ (ವಾಕ್ ಇನ್ ಅಡ್ಮಿಷನ್) ಆಹ್ವಾನಿಸಲಾಗಿದೆ. ಮೆರಿಟ್ ಆಧಾರದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಕೆಇಎ ಹಾಗೂ ಆರ್ಜಿಯುಎಚ್ಎಸ್ ಮಾನದಂಡಗಳ ಪ್ರವೇಶಾತಿಯ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿಗೆ ಜನವರಿ, 08 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 4 ಗಂಟೆ ಒಳಗೆ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ…
ಮಡಿಕೇರಿ ಜ.2 NEWS DESK : ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ,…
ದುಬೈ ಜ.2 NEWS DESK : ಹೆಮ್ಮೆಯ ದುಬೈ ಕನ್ನಡ ಸಂಘದ ವತಿಯಿಂದ ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ನಾಡ ಹಬ್ಬ ಅರಬ್ ನಾಡಿನಲ್ಲಿ ಎಂಬ ದ್ಯೇಯ ವಾಕ್ಯದೊಂದಿಗೆ ಕಳೆದ ಆರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ದುಬೈ ದಸರಾ ಕ್ರೀಡೋತ್ಸವ “ಕರ್ನಾಟಕ ರಾಜ್ಯ ಮಟ್ಟದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿ ನೆಲಸಿರುವ ಅನಿವಾಸಿ ಕೊಡಗಿನ ಯುವಕರು ಜಯ ಸಾಧಿಸಿ ಏಳನೇ ವರ್ಷದ ಚಾಂಪಿಯನ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ದುಬೈಯಲ್ಲಿರುವ ಎಥಿಸಲಾತ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಉಳ್ಳಾಲ ಗಯ್ಸ್ ತಂಡವನ್ನು ಪೆನಾಲ್ಟಿ ಶೂಟಿನಲ್ಲಿ ಕೂರ್ಗ್ ಯುನೈಟೆಡ್ ಎಫ್ಸಿ ದುಬೈ ತಂಡವು ಮಣಿಸಿತ್ತು. ಕೊಡಗಿನ ತಂಡದಲ್ಲಿ ನಾಯಕನಾಗಿ ರಫೀಕಲಿ ಕುಂಜಿಲ ಅವರು ಮುನ್ನೆಡೆಸಿದರೆ, ಆಟಗಾರರಾಗಿ ಅಸಿಫ್ ಕುಂಜಿಲ, ಅಫ್ರೀದ್ ಹೊಸಕೋಟೆ, ಜಾಫರ್ ಕಡಂಗ, ಆರಿಫ್ ಕುಂಜಿಲ, ಅಫ್ರಿದ್ ಸುಂಟಿಕೊಪ್ಪ, ತಬಶೀರ್ ಕುಂಜಿಲ, ರಾಝಿಕ್ ಸುಂಟಿಕೊಪ್ಪ, ಶುಹೈಬ್ ಕೊಟ್ಟಮುಡಿ ಸ್ಪರ್ಧಿಸಿದ್ದರು. ಶಂಸಿ ಚಾಮಿಯಾಲ ಅವರು ಗೋಲ್ ಕೀಪರ್ ಆಗಿ ಕಾರ್ಯನಿರ್ವಹಿಸಿ…
ಮಡಿಕೇರಿ ಜ.2 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ನಿ. ಬೆಂಗಳೂರು ಹಾಗೂ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆಯನ್ನು ಆಚರಿಸಲಾಯಿತು. ಕೊಡವ ಸಮಾಜ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷರು ಹಾಗೂ ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಕಾರ್ಯಾಧ್ಯಕ್ಷರಾದ ಕೇಕಡ ಎ.ದೇವಯ್ಯ ಉದ್ಘಾಟಿಸಿ ಮಾತನಾಡಿ, ಸದಸ್ಯರು ಸಂಘದೊಂದಿಗೆ ನಿರಂತರ ವ್ಯವಹರಿಸಿ ಸಂಘದ ಏಳಿಗೆಗೆ ಸಹಕರಿಸುವಂತೆ ತಿಳಿಸಿದರು. ಸಂಘದ ಬೆಳವಣಿಗೆಗೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಸೇವೆ ಮುಖ್ಯ ಪಾತ್ರವಹಿಸಲಿದೆ ಎಂದರು. ಜಮ್ಮಾಜಾಗ ಸಮಸ್ಯೆ ಬಗ್ಗೆ ಕೊಡಗಿನ ಇಬ್ಬರು ಶಾಸಕರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಡುವಂಡ ಪಿ.ಮುತ್ತಪ್ಪ, 2005ರಲ್ಲಿ ಮಾಜಿ ಕಾನೂನು ಸಚಿವ ಹಾಗೂ ಹಿರಿಯ ಸಹಕಾರಿಗಳಾದ ಎಂ.ಸಿ.ನಾಣಯ್ಯ ಅವರ ಸಲಹೆ ಮೇರೆಗೆ ಮಡಿಕೇರಿ ಕೊಡವ ಸಮಾಜದ ಕಟ್ಟಡದಲ್ಲಿ ಪ್ರಾರಂಭಿಸಲಾಯಿತು. ಪ್ರಸ್ತುತ 1 ಕೋಟಿ 10 ಲಕ್ಷ ಪಾಲು…






