ಮಡಿಕೇರಿ ಅ.12 NEWS DESK : ಕೂಡಿಗೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆಯಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಕೂಡಿಗೆ ವಿಭಾಗದ ಸಹಾಯಕ ಲೈನ್ ಮ್ಯಾನ್ ಇಸ್ಮಾಯಿಲ್ ಅತ್ತಾರ ವಿದ್ಯುತ್ ಸುರಕ್ಷತೆಯ ಬಗ್ಗೆ, ವಿದ್ಯುತ್ ನಿಂದ ಆಗುವ ಅನಾಹುತಗಳು ಮತ್ತು ಅವಘಡಗಳ ಬಗ್ಗೆ ಶಾಲಾ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಆಕಸ್ಮಿಕವಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಟ್ಟದೆ ಗ್ರಾಮದ ಹಿರಿಯರಿಗೆ, ಶಾಲಾ ಶಿಕ್ಷಕರಿಗೆ ತಿಳಿಸುವ ತಿಳಿಸಬೇಕು ಎಂದರು. ವಿದ್ಯಾರ್ಥಿಗಳು ಮನೆ ಹತ್ತಿರ, ಶಾಲೆ ಆವರಣದಲ್ಲಿ ಅಳವಡಿಸಲಾಗಿರುವ ಟ್ರಾನ್ಸ್ ಫಾರ್ಮರ್ಗಳ ಹತ್ತಿರಕ್ಕೆ ಹೋಗದಂತೆ ಸಲಹೆ ನೀಡಿದರು. ಟ್ರಾನ್ಸ್ ಪಾರ್ಮ ನ ಹತ್ತಿರ ಹಸುಗಳನ್ನು ಕಟ್ಟುವುದು, ವಿದ್ಯುತ್ ತಂತಿಗಳ ಸಮೀಪದಲ್ಲಿ ಬಟ್ಟೆಗಳನ್ನು ಒಣಗಿಸಲು ಹಾಕುವುದು ಸೇರಿದಂತೆ ಸಾಮಾನ್ಯ ಜ್ಞಾನದ ಮೂಲಕ ಸಮಗ್ರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು, ಕಣಿವೆ, ಜೇನುಕಲ್ಲು ಬೆಟ್ಟದ ಶಾಲೆ, ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಗಳಿಗೆ ಭೇಟಿ…
ಲೇಖಕ: admin
ಪೊನ್ನಂಪೇಟೆ ನ.12 NEWS DESK : ಮುಂದಿನ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಜರುಗಲಿರುವ 14 ವರ್ಷದೊಳಗಿನ ಬಾಲಕರ ಮತ್ತು ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ರಾಜ್ಯ ತಂಡಕ್ಕೆ ಕೊಡಗಿನಿಂದ ತಲಾ 10 ವಿದ್ಯಾರ್ಥಿಗಳಂತೆ ಒಟ್ಟು 20 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಕಳೆದ ಅ. 27ರಿಂದ 30ರವರೆಗೆ ಪೊನ್ನಂಪೇಟೆಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಆಯ್ಕೆಗೊಂಡ ರಾಜ್ಯ ತಂಡದಲ್ಲಿರುವ ವಿದ್ಯಾರ್ಥಿಗಳ ಪೈಕಿ ಬಹುಪಾಲು ಗೋಣಿಕೊಪ್ಪಳಿನ ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ರಾಜ್ಯ ಬಾಲಕರ ಹಾಕಿ ತಂಡದಲ್ಲಿ ಗೋಣಿಕೊಪ್ಪಲುವಿನ ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ಬಿ.ಪಿ. ಪೂಣಚ್ಚ, ವಿ. ಎಸ್. ಸೋಹನ್, ಎಂ. ಯು. ಶ್ರುಹಾಲ್ ಸೋಮಣ್ಣ, ಎಂ.ಪಿ. ಚೇತನ್, ಸಿ.ಪಿ. ನಾಚಪ್ಪ, ಕೆ.ಬಿ. ರಿಶಾನ್, ಪೊನ್ನಂಪೇಟೆ ಅಪ್ಪಚ್ಚ ಕವಿ ವಿದ್ಯಾಲಯದ ಆತ್ಮಿಕ್ ದೀಪ್, ಧವನ್ ದೇವಯ್ಯ, ಪೊನ್ನಂಪೇಟೆ ಸಂತ ಅಂತೋಣಿ ಶಾಲೆಯ ತರುಣ್…
ಪುತ್ತೂರು ನ.12 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ಪಿಜಿಸಿಇಟಿ ಅಥವಾ ಕೆಎಂಎಟಿ ಪ್ರವೇಶ ಪರೀಕ್ಷೆಯನ್ನು ಬರೆದು ಎಂಸಿಎ ಸ್ನಾತಕೋತ್ತರ ಪದವಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಎರಡು ವಾರಗಳ ಸೇತುಬಂಧ ತರಗತಿಗಳನ್ನು ಆಯೋಜಿಸಲಾಗಿದೆ. ಪರಿಣಾಮಕಾರಿ ಸಂವಹನ, ಸಮಸ್ಯೆ ಪರಿಹರಿಸುವ ಕೌಶಲ್ಯಗಳು ಮತ್ತು ಪ್ರೋಗ್ರಾಮಿಂಗ್ ಭಾಷೆಗಳಂತಹ ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ನಡೆಸಲಾಗುವ ಈ ತರಗತಿಯ ಮೂಲಕ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ನಡುವಿನ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಲಾಗಿದೆ. ಪ್ರಾಯೋಗಿಕ ಪರಿಣತಿಗಾಗಿ ಹ್ಯಾಂಡ್ಸ್ ಆನ್ ಸೆಷನ್ಗಳನ್ನೂ ನಡೆಸಲಾಗುತ್ತದೆ. ಈ ತರಗತಿಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಶುಭ ಉದ್ಘಾಟಿಸಿ ಶುಭ ಹಾರೈಸಿದರು. ತರಬೇತಿ ಮತ್ತು ನೇಮಕಾತಿ ವಿಭಾಗ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್, ಎಂಸಿಎ ವಿಭಾಗದ ನಿರ್ದೇಶಕಿ ಡಾ. ಕೆ.ಜ್ಯೋತಿಮಣಿ ಉಪಸ್ಥಿತರಿದ್ದರು. ಒಟ್ಟು 33 ಎಂಸಿಎ ಪ್ರವೇಶಾಕಾಂಕ್ಷಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.
ಮಡಿಕೇರಿ ಅ.12 NEWS DESK : ನಾಪೋಕ್ಲು ಬ್ಲಾಕ್ ನ ಕಕ್ಕಬ್ಬೆಯ ಅಂಬೇಡ್ಕರ್ ವಸತಿ ಶಾಲೆಗೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು, ವಿದ್ಯಾರ್ಥಿಗಳ ಉಚಿತ ವಿದ್ಯಾಭ್ಯಾಸ ಹಾಗೂ ವಸತಿಗಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಅಂಬೇಡ್ಕರ್ ವಸತಿ ಶಾಲೆಗಳನ್ನು ತೆರೆಯುತ್ತಿರುವುದಾಗಿ ಹೇಳಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ , ಲವ ಚಿಣ್ಣಪ್ಪ, ಸಂಪನ್ ಅಯ್ಯಪ್ಪ ಮತ್ತಿತರರು ಪ್ರಮುಖರು ಹಾಜರಿದ್ದರು.
ಮಡಿಕೇರಿ ನ.12 NEWS DESK : ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಪ್ರಯುಕ್ತ ಜನಜಾತಿಯ ಗೌರವ ದಿವಸ ಕಾರ್ಯಕ್ರಮವು ನ.15 ರಂದು ಜಮುಯಿ, ಬಿಹಾರ್ನಲ್ಲಿ ಆಯೋಜಿಸಿದ್ದು, ಈ ದಿನದಂದು ಕೊಡಗು ಜಿಲ್ಲೆಯ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಮರೂರು ತಿತಿಮತಿ ಇಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿತ್ತು. ಆದರೆ ಈ ಗ್ರಾ.ಪಂ.ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಜಾತಿಯ ಗೌರವ ದಿವಸ ಕಾರ್ಯಕ್ರಮವು ನವೆಂಬರ್, 15 ರಂದು ಬೆಳಗ್ಗೆ 10.30 ಗಂಟೆಗೆ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಟ್ಟೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನಡೆಯಲಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.
ಮಡಿಕೇರಿ ನ.12 NEWS DESK : 220/66/11ಕೆವಿ, 66/11ಕೆವಿ ಮತ್ತು 33/11ಕೆ.ವಿ ಸ್ವೀಕರಣಾ ಕೇಂದ್ರದಿಂದ ನ.13 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನ.13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಮಾರ್ಗಗಳ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಕುಶಾಲನಗರ ಪಟ್ಟಣ, ಗೊಂದಿಬಸವನಹಳ್ಳಿ, ಮುಳ್ಳುಸೋಗೆ, ನಂಜರಾಯಪಟ್ಟಣ, ಗುಡ್ಡೆಹೊಸೂರು, ಕೆದಕಲ್, ನಾಕೂರು, ಹೊಸಕೋಟೆ, ಮತ್ತಿಕಾಡು, ಗರ್ಗಂದೂರು, ಮಾದಾಪುರ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಕೂಡಿಗೆ, ಕೂಡುಮಂಗಳೂರು, ದೊಡ್ಡತ್ತೂರು, ಚಿಕ್ಕತ್ತೂರು, ಹೆಬ್ಬಾಲೆ, ತೊರೆನೂರು, ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ದೊಡ್ಡಮಳ್ತೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೇಳೂರು, ಯಡವಾರೆ, ಕುಂಬೂರು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ನ.12 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ದೇವಾಲಯದ ರೂಢಿ ಸಂಪ್ರದಾಯದಂತೆ ನ.13 ರಂದು ‘ಉತ್ಥಾನ ದ್ವಾದಶಿ’ ಪ್ರಯುಕ್ತ ‘ತುಳಸಿ ಪೂಜೆಯು ನ.13 ರಂದು ಸಂಜೆ 6.30 ರಿಂದ 7.30 ಗಂಟೆಗೆ ನಡೆಯಲಿದೆ. ನ.15 ರಂದು ಸಂಜೆ 6.30 ಗಂಟೆಯಿಂದ ತೆಪ್ಪೋತ್ಸವ, ಪಲ್ಲಕಿ ಉತ್ಸವ, ದಟ್ಟೋತ್ಸವ ಪೂಜಾ ಕಾರ್ಯಕ್ರಮ ನಡೆಯಲಿದೆ. ಸೇವಾಕರ್ತರು ತಮ್ಮ ಹೆಸರನ್ನು ದೇವಾಲಯದಲ್ಲಿ ನೋಂದಾಯಿಸುವ ಮೂಲಕ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ಜರುಗುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಅಣ್ಣಪ್ಪ ಜೆ.ಆರ್.ಮೊ.ಸಂ. 9902290302 ಹಾಗೂ ಕುಶಕುಮಾರ್ ಜೆ.ಎನ್. ಮೊ,ಸಂ. 9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ನ.12 NEWS DESK : ಭಾರತ ಸರ್ಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು (ಎಂಎಸ್ಎಂಇ) ಕ್ಯಾಟಲಿಸ್ಟ್ ವಿಮೆನ್ ಎಂಟ್ರೆಫ್ರೆನ್ಸ್ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಕೊಡಗು ಜಿಲ್ಲೆ ಹೋಂ-ಸ್ಟೇ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ನೋಂದಾಯಿತ ಹೋಂಸ್ಟೇಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರವು ನಗರದ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ನಡೆಯಿತು. ಆರ್ಥಿಕವಾಗಿ ಲಾಭದಾಯಕ ಹಾಗೂ ಜವಾಬ್ದಾರಿಯಾಗಿ ಹೋಂಸ್ಟೇ ನಡೆಸುವ ಬಗ್ಗೆ ಹಾಗೂ ಸ್ಥಳೀಯವಾಗಿ ದೊರೆಯುವ ಉತ್ಪನ್ನಗಳಿಗೆ ಬಾರ್ಕೋಡ್ ಅಳವಡಿಸುವ ಬಗ್ಗೆ ಇತರೆ ವಿಷಯದ ಬಗ್ಗೆ ಸಮಗ್ರವಾಗಿ ಎಂಎಸ್ಎಂಇ ಸಂಸ್ಥೆಯ ವಿಷಯ ತಜ್ಞರು ಮಾಹಿತಿ ನೀಡಿದರು. ಜಿಲ್ಲೆಯಲ್ಲಿರುವ ನೋಂದಾಯಿತ ಹೋಂ-ಸ್ಟೇಗಳಿಗೆ ತಾಂತ್ರಿಕ ಮಾರ್ಗದರ್ಶನ ಹಾಗೂ ಜಿಲ್ಲೆಯ ಉತ್ಪನ್ನಗಳಾದ ಕಾಫಿ, ವೈನ್, ಚಾಕೋಲೇಟ್, ಜೇನು, ಮಸಾಲೆ ಪದಾರ್ಥಗಳಿಗೆ ಮೌಲ್ಯ ವರ್ಧನೆ ಮಾಡುವ ಬಗ್ಗೆ ಹಾಗೂ ಮಾರ್ಕೆಟಿಂಗ್ ಮಾಡುವ ಬಗ್ಗೆ ಹಾಗೂ ಸ್ವಾಸ್ಥ್ಯ ಕೇಂದ್ರ ಭಾರತ ಸರ್ಕಾರದ ಎಂಎಸ್ಎಂಇ ನೋಂದಾಣಿ ಬಗ್ಗೆ ತಿಳಿಸಿದರು.…
ಮಡಿಕೇರಿ ನ.12 NEWS DESK : ಹೋರಾಟ ಮನೋಭಾವದ ಸಮಯ ಪ್ರಜ್ಞೆ ಮತ್ತು ಸ್ವಯಂ ರಕ್ಷಣೆಯಲ್ಲಿ ತಮ್ಮದೇ ಆದ ಪಾತ್ರ ವಹಿಸಿರುವ ವೀರರಾಣಿ ಒನಕೆ ಓಬವ್ವ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಕನ್ನಡ ನಾಡಿನ ವೀರನಾರಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ಹೋರಾಡಿದ ವೀರರಾಣಿ ಒನಕೆ ಓಬವ್ವ ಅವರ ಹೋರಾಟದ ಜೀವನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಸಾಮಾನ್ಯ ಮಹಿಳೆಯಾಗಿ ಬದುಕುತ್ತಿದ್ದ ಒನಕೆ ಓಬವ್ವ ಶತ್ರುಗಳ ವಿರುದ್ಧ ಹೋರಾಡಿ ಜಯಗಳಿಸುತ್ತಾರೆ. ರಕ್ಷಣೆಗಾಗಿ ಒನಕೆ ಬಳಸುವ ಮೂಲಕ ಜಯ ಪಡೆಯುತ್ತಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು. ವೀರ ವನಿತೆ ಒನಕೆ ಓಬವ್ವ ಅವರು ನಾಡಿಗೆ ನೀಡಿರುವ ಕೊಡುಗೆಯಿಂದ ಇಂದಿಗೂ ಸಹ ಪ್ರಸ್ತುತರಾಗಿದ್ದಾರೆ. ಕಿತ್ತೂರು…
ಮಡಿಕೇರಿ ನ.11 NEWS DESK : ಅಕ್ರಮವಾಗಿ ಬೀಟೆ ಮರ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಗ್ಗೋಡ್ಲು ಬಳಿ ಸುಮಾರು 8 ಲಕ್ಷ ರೂ. ಮೌಲ್ಯದ 27 ಬೀಟೆ ಮರ ನಾಟಾ ಸಹಿತ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾತ್ರಿ ವಾಹನ ಒಂದರಲ್ಲಿ ಬೀಟೆ ಮರವನ್ನು ಸಾಗಿಸುತ್ತಿರುವ ಕುರಿತು ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ವಿರಾಜಪೇಟೆ-ಕಗ್ಗೋಡ್ಲು ಮಾರ್ಗವಾಗಿ ಬರುತ್ತಿದ್ದ ಶುಂಠಿ ತುಂಬಿದ ಪಿಕ್ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ಸಂದರ್ಭ ಮೇಲ್ಭಾಗದಲ್ಲಿ 38 ಚೀಲಗಳಲ್ಲಿ ಶುಂಠಿ ತುಂಬಿರುವುದು ಕಂಡು ಬಂದಿದೆ. ಸಂಶಯದಿಂದ ವಾಹನವನ್ನು ಪರಿಶೀಲಿಸಿದಾಗ ಕೆಳಭಾಗದಲ್ಲಿ ಒಟ್ಟು 27 ಬೀಟೆ ಮರದ ನಾಟಾಗಳನ್ನು ಜೋಡಿಸಿರುವುದು ಪತ್ತೆಯಾಗಿದೆ. ಸ್ಥಳದಲ್ಲೇ ವಾಹನದ ಚಾಲಕ ಹೆಚ್.ಡಿ.ಕೋಟೆ ನಿವಾಸಿ ಆದಿತ್ಯ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ವಿಚಾರಣೆ ನಡೆಸಿದ ಸಂದರ್ಭ ವಿರಾಜಪೇಟೆಯಿಂದ ಹೊಳೆ ನರಸೀಪುರದ ಕಡೆಗೆ ಬೀಟೆ ಮರದ ನಾಟಾಗಳನ್ನು ಸಾಗಿಸುತ್ತಿರುವುದಾಗಿ…






