ಲೇಖಕ: admin

ಮಡಿಕೇರಿ ಅ.19 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅ.21 ರಂದು ಬೆಳಗ್ಗೆ 8.30 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್‍ರಾಜ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಅ.19 NEWS DESK : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2025 ರ ಜನವರಿ ಯಿಂದ ಡಿ.31 ರ ವರೆಗೆ (12 ತಿಂಗಳು) ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಷ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ನ.4 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಅ.19 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಇದೇ ಅ.21 ರಿಂದ ನ.20 ರವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜು ದೊಡ್ಡಮನಿ ತಿಳಿಸಿದ್ದಾರೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿಯಂತ್ರಣದ 6ನೇ ಸುತ್ತಿನ ಲಸಿಕಾ ಅಭಿಯಾನ ನಡೆಯಲಿದ್ದು, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದನ ಮತ್ತು ಎಮ್ಮೆಗೆ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದೆ. ಆದ್ದರಿಂದ ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಲಿಂಗರಾಜ ದೊಡ್ಡಮನಿ ಕೋರಿದರು. ಕಾಲುಬಾಯಿ ರೋಗ ನಿಯಂತ್ರಿಸಲು ಜಾನುವಾರುಗಳಿಗೆ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಈ ರೋಗದ ವಿರುದ್ಧ ಪ್ರತೀ 6 ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಕೊಡಿಸಿ ರೋಗ ಬರದಂತೆ ತಡೆಯಬೇಕಿದೆ. ರಾಷ್ಟ್ರೀಯ ಕಾಲುಬಾಯಿ ಜ್ವರ ನಿಯಂತ್ರಣ ಕಾರ್ಯಕ್ರಮದ ಅಭಿಯಾನದಲ್ಲಿ…

Read More

ಕುಶಾಲನಗರ ಅ.19 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ-50 ಹಾಗೂ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.11 ರಂದು ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕಂಠ ಗಾಯನ ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ಸಹಭಾಗಿತ್ವದಲ್ಲಿ ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ವಿನೂತನವಾಗಿ ನ.11 ರಂದು ಕುಶಾಲನಗರ ಪಟ್ಟಣದ ರಥಬೀದಿ ಹಾಗೂ ಪ್ರವಾಸಿ ಮಂದಿರ (ಐ.ಬಿ.) ರಸ್ತೆಯಲ್ಲಿ ಎಲ್ಲರೂ ಜತೆಗೂಡಿ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸುವ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲಿನಿಂದ ನಿರ್ಧಾರ ಕೈಗೊಂಡು ಕಂಠ ಗಾಯನವನ್ನು ಯಶಸ್ವಿಗೊಳಿಸುವಂತೆ ತೀರ್ಮಾನ…

Read More

ಮಡಿಕೇರಿ ಅ.19 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಪೊನ್ನಂಪೇಟೆ ಜೇಸಿ ಸಂಸ್ಥೆ ಹಾಗೂ ಮಾಯಮುಡಿ ಶ್ರೀ ಕಾವೇರಿ ಅಸೋಸಿಯೇಷನ್‍ನ ಸಹಭಾಗಿತ್ವದಲ್ಲಿ ನ.24 ರಂದು ಮಾಯಮುಡಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ‘ತೋಕ್‍ನಮ್ಮೆ’ಯನ್ನು ಆಯೋಜಿಸುವ ಕುರಿತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಮಾಯಮುಡಿ ಶ್ರೀ ಕಾವೇರಿ ಅಸೋಸಿಯೇಷನ್ ಕಟ್ಟಡದಲ್ಲಿ ಸಂಸ್ಥೆಯ ಅಧ್ಯಕ್ಷ ಕಾಳಪಂಡ ಟಿಪ್ಪು ಬಿದ್ದಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಮಾತನಾಡಿ, ಕೊಡವ ಸಂಸ್ಕøತಿಯ ಪ್ರತೀಕವಾಗಿರುವ ತೋಕ್ ಜನಾಂಗ ಭಾಂದವರ ಆಧ್ಯಾತ್ಮಿಕ ಸಂಕೇತವಾಗಿದ್ದು ಪೂಜ್ಯನೀಯವಾಗಿರುತ್ತದೆ. ಕೊಡವ ಸಾಹಿತ್ಯ-ಸಂಸ್ಕøತಿಯಲ್ಲಿ ‘ತೋಕ್’ಗೆ ಉನ್ನತ ಸ್ಥಾನ-ಮಾನವಿದ್ದು ಅಕಾಡೆಮಿ ವತಿಯಿಂದ ತೋಕ್‍ನಮ್ಮೆ ನಡೆಸುವುದು ಜನಾಂಗ ಭಾಂದವರ ಒಗ್ಗೂಡುವಿಕೆ ಹಾಗೂ ತೋಕ್‍ನ ಮಹತ್ವದ ಬಗ್ಗೆ ಅರಿಯಲು ಸೂಕ್ತ ವೇದಿಕೆಯಾಗಿರುತ್ತದೆ. ತೋಕ್ ನಮ್ಮೆಯು ಕೇವಲ ಗುಂಡು ಹೊಡೆಯುವ ಸ್ಪರ್ಧೆ ಆಗಿರದೆ, ಇದನ್ನು ಕೊಡವ ಸಾಂಸ್ಕøತಿಕ ಮೆರುಗಿನೊಂದಿಗೆ ಧೈವೀ ಭಾವದೊಂದಿಗೆ ಬೆರೆಯುವ ಕೆಲಸವನ್ನು ಅಕಾಡೆಮಿಯಿಂದ ಮಾಡಲಾಗುವುದೆಂದರು.…

Read More

ಮಡಿಕೇರಿ ಅ.19 : NEWS DESK : ತಾಳತ್ತಮನೆ-ಮೇಕೇರಿಯ ಕೃಷ್ಣಪ್ಪ ಎಂಬವರ ಮನೆಯ ಪಕ್ಕದಲ್ಲಿದ್ದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Read More

ನಾಪೋಕ್ಲು ಅ.19 NEWS DESK : ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವದ ಎರಡನೇ ದಿನ ಇತಿಹಾಸ ಪ್ರಸಿದ್ಧ ಬಲಮುರಿಯ ಶ್ರೀ ಅಗಸ್ತ್ಯೇಶ್ವರ ದೇವಾಲಯದಲ್ಲಿ ಸಂಕ್ರಮಣದ ಪ್ರಯುಕ್ತ ಕಾವೇರಿ ನದಿಗೆ ಮಹಾ ಮಂಗಳಾರತಿ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು. ನಂತರ ಕೇಶ ಮುಂಡನ, ಪಿಂಡಪ್ರಧಾನ, ಕಾವೇರಿ ತೀರ್ಥಸ್ನಾನ, ಕಾವೇರಿಯ ಬಾಳೋಪಾಟ್ ಮತ್ತಿತರ ಕಾರ್ಯಗಳು ನಡೆಯಿತು. ಮಧ್ಯಾಹ್ನ ಕಾವೇರಿ ನದಿಗೆ ಮಹಾ ಮಂಗಳಾರತಿಯನ್ನು ಅರ್ಚಕ ಮಹಾಬಲೇಶ್ವರ ಭಟ್ ಸಹವರ್ತಿಗಳು ನೆರವೇರಿಸಿದರು. ಬಳಿಕ ನದಿಯಿಂದ ಪವಿತ್ರ ನೀರನ್ನು ದೇವಾಲಯಕ್ಕೆ ತಂದು ದೇವರ ಪ್ರತಿಬಿಂಬಕ್ಕೆ ಅಭಿಷೇಕ ಮಾಡಲಾಯಿತು. ವಿಶೇಷ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಈ ಸಂದರ್ಭ ದೇವಾಲಯದ ತಕ್ಕರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಕೊಂಗೀರಂಡ ಸಾಧು ತಮ್ಮಯ್ಯ, ಕಾರ್ಯದರ್ಶಿ ನ್ನಚ್ಚನ ಜಯ, ಅನ್ನದಾನ ಸಮಿತಿಯ ಅಧ್ಯಕ್ಷ ಬೊಳ್ಳಚೆಟ್ಟಿರ ಚೆಟ್ಟಿಚ್ಚ, ಕಾರ್ಯದರ್ಶಿ ಪಾಲಂದಿರ ಚಂಗಪ್ಪ, ನಿರ್ದೇಶಕರುಗಳಾದ…

Read More

ನಾಪೋಕ್ಲು ಅ.19 NEWS DESK  : ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವದ ಎರಡನೇ ದಿನ ಇತಿಹಾಸ ಪ್ರಸಿದ್ಧ ಬಲಮುರಿ ಅಗಸ್ತ್ಯೇಶ್ವರ ಹಾಗೂ ಶ್ರೀ ಕಣ್ವ ಮುನೀಶ್ವರ ದೇವಾಲಗಳಲ್ಲಿ ತುಲ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ತಲಕಾವೇರಿಯಂತೆ ಬಲಮುರಿಯೂ ಸಹ ಬಲು ಪಾವಿತ್ರ್ಯದ ಸ್ಥಳವಾಗಿದ್ದು ಶುಕ್ರವಾರ ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಅರ್ಚಕವೃಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನೆರವೇರಿಸಿದರು. ಕಣ್ವ ಮುನೇಶ್ವರ ದೇವಾಲಯದಲ್ಲಿ ಅರ್ಚಕ ರವಿ ಕಲ್ಲುರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಉತ್ತಪ್ಪ, ಕಾರ್ಯದರ್ಶಿ ಚೈಯಂಡ ತಿಮ್ಮಯ್ಯ, ಆಡಳಿತ ಮಂಡಳಿ ಸದಸ್ಯರು, ಊರಿನ ತಕ್ಕ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಚುನಾಯಿತ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅರ್ಚಕ ರವಿ ಕಲ್ಲುರಾಯ ಮಾತನಾಡಿ, ದೇವಾಲಯದಲ್ಲಿ ಕಾವೇರಿ ತೀರ್ಥವನ್ನು ತಂದು ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಮಧ್ಯಾಹ್ನ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಅನ್ನ ಸಂತರ್ಪಣೆ ಕೈಗೊಳ್ಳಲಾಯಿತು ಎಂದರು.…

Read More

ಸೋಮವಾರಪೇಟೆ ಅ.19 NEWS DESK : ಸೋಮವಾರಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಟ್ಟಣದ ಮಡಿಕೇರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ವಾರ್ಷಿಕ ಪೂಜೆ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಪೂಜಾ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಯೋಜನಾಧಿಕಾರಿ ರೋಹಿತ್, ಎಸ್.ಮಹೇಶ್, ಭಗವಾನ್, ಸುರೇಶ್, ಯೋಜನಾ ಘಟಕದ ಸಿಬ್ಬಂದಿಗಳು ಇದ್ದರು.

Read More

ಸೋಮವಾರಪೇಟೆ ಅ.19 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವನ್ನು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯ ಎಂ.ವಿ.ಜೀವನ್ ಪುಷ್ಪಾ ನಮನ ಸಲ್ಲಿಸಿದರು. ಈ ಸಂದರ್ಭ ಸಿಬ್ಬಂದಿಗಳಾದ ಆದಿಲ್, ಹನುಮ ಸೇರಿದಂತೆ ಪೌರಕಾರ್ಮಿಕರು ಇದ್ದರು.

Read More