ಲೇಖಕ: admin

ಮಡಿಕೇರಿ NEWS DESK ಅ.19 : ಪವರ್ ಟಿವಿಯ 7ನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕೊಡಗಿನ ಸಿದ್ದಲಿಂಗಪುರದ ಉದ್ಯಮಿ, ಸಮಾಜ ಸೇವಕ ಹಾಗೂ ದಾನಿಗಳೂ ಆದ ನಾಪಂಡ ಮುತ್ತಪ್ಪ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಪವರ್ ಟಿವಿಯ ಮುಖ್ಯಸ್ಥರು ನಾಪಂಡ ಮುತ್ತಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಕಾರ್ಮಿಕ ಮುಖಂಡರಾಗಿ ದುಡಿಯುವ ವರ್ಗಕ್ಕೆ ಹೋರಾಟದ ಮೂಲಕ ನ್ಯಾಯ ದೊರಕಿಸಿಕೊಡುತ್ತಿರುವ ನಾಪಂಡ ಮುತ್ತಪ್ಪ ಅವರು, ರಾಜ್ಯವ್ಯಾಪಿ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಯಾವುದೇ ಪ್ರಚಾರವನ್ನು ಬಯಸದೆ ಕೊಡುಗೈ ದಾನಿಯಾಗಿ ನೊಂದವರ ನೋವಿಗೆ ಸ್ಪಂದಿಸುತ್ತಿರುವ ಮುತ್ತಪ್ಪ ಅವರ ಸೇವೆಯನ್ನು ಗುರುತಿಸಿ ಪವರ್ ಟಿವಿ ಪ್ರಶಸ್ತಿ ನೀಡಿ ಗೌರವಿಸಿದೆ.

Read More

ಸೋಮವಾರಪೇಟೆ ಅ.19 NEWS  DESK : ಸೋಮವಾರಪೇಟೆ ಕೊಡವ ಸಮಾಜದ ವತಿಯಿಂದ ಕಾವೇರಿ ತೀರ್ಥವನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಸಮಾಜದಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ತೀರ್ಥ ವಿತರಿಸಲಾಯಿತು. ಈ ಸಂದರ್ಭ ಹಿರಿಯರಾದ ಕಲ್ಲೇಂಗಡ ಅಪ್ಪಚ್ಚು, ಸಮಾಜದ ಉಪಾಧ್ಯಕ್ಷ ಬೊಳಂದಂಡ ಕುಟ್ಟಪ್ಪ, ಖಚಾಂಚಿ ಪಾಡೆಯಂಡ ಮುತ್ತಣ್ಣ, ಮೈನಾ ಸುಬ್ರಮಣಿ ಸೇರಿದಂತೆ ಸಮಾಜದ ನಿರ್ದೆಶಕರುಗಳು ಇದ್ದರು.

Read More

ಮಡಿಕೇರಿ ಅ.19 NEWS DESK : ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ (ಎರಡು ವರ್ಷ) 2024-25ನೇ ಸಾಲಿನಲ್ಲಿ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಅಕ್ಟೋಬರ್, 25 ರಂದು ಮುಕ್ತ ಕೌನ್ಸಿಲಿಂಗ್ ನಡೆಯಲಿದೆ.  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜು ಬ್ರಹ್ಮಾವರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಭರ್ತಿಯಾಗದೆ ಖಾಲಿ ಉಳಿದಿರುವ ಸೀಟುಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾμÉಯಾಗಿ ಅಭ್ಯಸಿಸಿ ಕನಿಷ್ಟ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಟ ಶೇ.40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಸೀಟುಗಳನ್ನು…

Read More

ಮಡಿಕೇರಿ ಅ.19 NEWS DESK : ಮಡಿಕೇರಿ ದಸರಾ ಯಶಸ್ಸಿಗೆ ಸಹಕರಿಸಿದ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ ಪೌರ ಕಾರ್ಮಿಕರನ್ನು ಆತ್ಮೀಯವಾಗಿ ಕೃತಜ್ಞತೆ ಸಲ್ಲಿಸಲಾಯಿತು. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ವೆಂಕಟ್ ರಾಜಾ ಮಡಿಕೇರಿ ದಸರಾ ಯಶಸ್ಸಿಗೆ ಪೌರ ಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶ್ಲಾಘಿಸಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆ ಸ್ವಚ್ಚತೆಗೆ ಹೆಚ್ಚು ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಪರಿಸರ ಶುಚಿತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯ ನಡುವೆಯೂ ಪರಿಸರ ಶುಚಿತ್ವಕ್ಕೆ ಒತ್ತು ನೀಡಿರುವುದು ಮೆಚ್ಚುವಂತದ್ದು, ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲೆ ಸ್ವಚ್ಚತೆಯಲ್ಲಿ ಇಡೀ ವಿಶ್ವದಲ್ಲಿಯೇ…

Read More

ಮಡಿಕೇರಿ ಅ.19 NEWS DESK : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಬೇಟಿ ಬಚಾವೋ-ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ಸೋಮವಾರಪೇಟೆಯಲ್ಲಿ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ನಡೆಯಿತು. ಸೋಮವಾರಪೇಟೆ ತಾಲ್ಲೂಕಿನ ಸ್ರ್ತೀಶಕ್ತಿ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನಡೆದ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ದಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಮಾತನಾಡಿ, ನಾವು ತಳಮಟ್ಟದಿಂದ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡಬೇಕಾಗಿದೆ. ಕೇಂದ್ರ ಸರ್ಕಾರದ ಪೋಷಣಾ ಅಭಿಯಾನ ಯೋಜನೆಯ ಸುಪೋಷಿತ ಕಿಶೋರಿ, ಸಶಕ್ತ ನಾರಿ ಘೋಷವಾಕ್ಯದಂತೆ ಹೆಣ್ಣು ಮಗು ಜನಿಸಿ ಮನೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ತೆರಳಿ ಒಂದು ಗುಲಾಬಿ ಹೂ ನೀಡುವುದರ ಮುಖಾಂತರ ಆ ಮಗುವನ್ನು ಸ್ವಾಗತಿಸಬೇಕು ಮತ್ತು ಕುಟುಂಬದವರಿಗೆ ಹೆಣ್ಣು ಮಗುವಿನ ಮಹತ್ವವನ್ನು ತಿಳಿ ಹೇಳಿಬೇಕು. ಇದರಿಂದ ಮುಂದಿನ ದಿನಗಳಲ್ಲಿ ಧನಾತ್ಮಕ ಬದಲಾವಣೆಯನ್ನು ಕಾಣಬಹುದು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಂಡರ್ ಸ್ಪೆಷಲಿಸ್ಟ್ ಎಸ್.ಆರ್.ಕೇಶಿನಿ ಮಾತನಾಡಿ, ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಬೇಟಿ ಬಚಾವೋ-…

Read More

ಮಡಿಕೇರಿ ಅ.19 NEWS DESK : ಎರಡು ಆರ್‌ಇ ಗೋಡೆಗಳು ಇಂಡುವಾಳ ಮತ್ತು ಬೂದನೂರು ಗ್ರಾಮದ ಮೈಸೂರ -ಬೆಂಗಳೂರು ಹೆದ್ದಾರಿಯಲ್ಲಿ  ನಿರ್ಮಿಸಲಾದ ಎರಡು RE ವಾಲ್ ಸ್ಪಾಟ್‌ಗಳಿಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯದುವೀರ್ ಒಡೆಯರ್ ಈ ಭಾಗದ ಜನರಿಗೆ ಉಡುಗೊರೆಯಾಗಿರುವ ಮೋದಿ-ಸರ್ಕಾರದ ಅಡಿಯಲ್ಲಿ ಮೈಸೂರು-ಬೆಂಗಳೂರು ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಈ ರಸ್ತೆಯ ಸುರಕ್ಷತೆಯ ಕಾಳಜಿಯನ್ನು ಖಾತ್ರಿಪಡಿಸುವುದು ಅತ್ಯಂತ ಆದ್ಯತೆಯಾಗಿದೆ. NHAI ಮತ್ತು ಮಾಧ್ಯಮದ ವರದಿಗಳ ಆಧಾರದ ಮೇಲೆ ನಾನೇ ಖುದ್ದು ಭೇಟಿ ನೀಡಿ ಸಮಸ್ಯೆಯ ಮೊದಲ ಮಾಹಿತಿ ಪಡೆಯಲು ನಿರ್ಧರಿಸಿದ್ದೇನೆ. ದುರಸ್ತಿ ಮತ್ತು ನಿರ್ವಹಣೆ ಕಾರ್ಯವನ್ನು ನಡೆಸಲಾಗಿದೆ ಮತ್ತು ರಸ್ತೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ನಾನು ಯಾವಾಗಲೂ ನನ್ನ ಕ್ಷೇತ್ರದ ಜನರೊಂದಿಗೆ ನಿಲ್ಲುತ್ತೇನೆ ಮತ್ತು ಯಾವುದೇ ರೀತಿಯ ಪ್ರಮುಖ ಅಥವಾ ಸಣ್ಣ ಕಾಳಜಿಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಆರ್‌ಇ ವಾಲ್‌ನ…

Read More

ಮಡಿಕೇರಿ ಅ.19 NEWS DESK : ಮಡಿಕೇರಿ ದಸರಾ ಯಶಸ್ಸಿಗೆ ಸಹಕರಿಸಿದ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ ಪೌರ ಕಾರ್ಮಿಕರನ್ನು ಆತ್ಮೀಯವಾಗಿ ಕೃತಜ್ಞತೆ ಸಲ್ಲಿಸಲಾಯಿತು. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ವೆಂಕಟ್ ರಾಜಾ ಮಡಿಕೇರಿ ದಸರಾ ಯಶಸ್ಸಿಗೆ ಪೌರ ಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶ್ಲಾಘಿಸಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆ ಸ್ವಚ್ಚತೆಗೆ ಹೆಚ್ಚು ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಪರಿಸರ ಶುಚಿತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯ ನಡುವೆಯೂ ಪರಿಸರ ಶುಚಿತ್ವಕ್ಕೆ ಒತ್ತು ನೀಡಿರುವುದು ಮೆಚ್ಚುವಂತದ್ದು, ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲೆ ಸ್ವಚ್ಚತೆಯಲ್ಲಿ ಇಡೀ ವಿಶ್ವದಲ್ಲಿಯೇ…

Read More

ಮಡಿಕೇರಿ NEWS DESK ಅ.18 : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿ ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಹಾಗೂ ತುಲಾ ಸಂಕ್ರಮಣ ಜಾತ್ರೆ ಮರುದಿನ ಹಾರಂಗಿಯ ಕಾವೇರಿ ಪ್ರತಿಮೆಗೆ ಶಾಸಕರಾದ ಡಾ.ಮಂತರ್‌ಗೌಡ, ಅರಕಲಗೋಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು, ವಿಧಾನಪರಿಷತ್ ಸದಸ್ಯರಾದ ಎಂ.ಪಿ.ಸುಜಾಕುಶಾಲಪ್ಪ ಇತರರು ಹಾರಂಗಿ ಜಲಾಶಯ ಬಳಿಯ ಕಾವೇರಿ ಪ್ರತಿಮೆಗೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಹಾರಂಗಿ ನೀರು ಬಳಕೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಚೌಡೇಗೌಡ, ಅಧೀಕ್ಷಕ ಎಂಜಿನಿಯರ್ ರಘುಪತಿ, ಹಾರಂಗಿ ಜಲಾಶಯದ ಇಇ ಐ.ಕೆ.ಪುಟ್ಟಸ್ವಾಮಿ, ತಹಶೀಲ್ದಾರ್ ಕಿರಣ್ ಗೌರಯ್ಯ, ಸಹಾಯಕ ಎಂಜಿನಿಯರ್ ಕಿರಣ್ ದೇವಯ್ಯ, ಸಿದ್ದರಾಜು, ಸೌಮ್ಯ, ಸಂಧ್ಯಾ, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ತಾಲ್ಲೂಕು ಘಟಕದ ಅಧ್ಯಕ್ಷರಾದ ವಿ.ಪಿ.ಶಶಿಧರ, ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷರಾದ ಭಾಸ್ಕರ ನಾಯ್ಕ್, ಹಾರಂಗಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಂಜಿನಿಯರ್‌ಗಳು ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ‘ಬಳಿಕ ಮಾತನಾಡಿದ ಡಾ.ಮಂತರ್‌ಗೌಡ ಅವರು ಹಾರಂಗಿ ಎಡದಂಡೆ ಮುಖ್ಯ…

Read More

ಮಡಿಕೇರಿ NEWS DESK  ಅ.18 : ಕೊಡಗಿನ ಗಡಿ ಗ್ರಾಮ ಕರಿಕೆ ವ್ಯಾಪ್ತಿಯಲ್ಲಿ ಕಾಡಾನೆ ಮತ್ತು ಕಾಡುಹಂದಿಗಳ ಉಪಟಳ ಮಿತಿ ಮೀರಿದ್ದು, ಅಪಾರ ಬೆಳೆ ನಷ್ಟವಾಗಿದೆ. ಗ್ರಾಮದ ಆಲತ್ತಿಕಡವ್ ನಿವಾಸಿ ರಾಜನ್ ಎಂಬುವವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು ಅಡಿಕೆ ಮತ್ತು ತೆಂಗಿನ ಮರಗಳನ್ನು ನಾಶಪಡಿಸಿವೆ. ಅಕ್ಕಪಕ್ಕದ ನಿವಾಸಿಗಳ ಕುಡಿಯುವ ನೀರಿನ ಪೈಪ್ ಗಳನ್ನು ಜಖಂಗೊಳಿಸಿವೆ. ಇತರ ತೋಟಗಳಿಗೂ ಲಗ್ಗೆ ಇಟ್ಟಿರುವ ಕಾಡಾನೆಗಳು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿವೆ. ಈ ಭಾಗದ ಅನೇಕರು ಪೈಸಾರಿ ಭೂಮಿಯಲ್ಲೇ ಕಳೆದ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಕಳೆದ ಎರಡು ವರ್ಷಗಳಿಂದ ಕೈಗೆ ಬಂದ ತುತ್ತು ಬಾಯಿಗೆ ಪರಿಸ್ಥಿತಿ ಎದುರಾಗಿದೆ. ಕಳೆದ ವರ್ಷವೂ ಕಾಡಾನೆ ದಾಳಿಯಾಗಿದ್ದು, ಅರಣ್ಯ ಇಲಾಖೆ ಯಾವುದೇ ಪರಿಹಾರ ನೀಡಿಲ್ಲವೆಂದು ಕೃಷಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಶಾಸಕರು ಖುದ್ದು ಕರಿಕೆ ಗ್ರಾಮದ ಕೃಷಿಕರ ಸಮಸ್ಯೆಗಳನ್ನು ಅರಿತು ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ::: ಕಾಡುಹಂದಿಗಳ ಉಪಟಳ ::: ಒಂದೆಡೆ ಕಾಡಾನೆಗಳು ಕೃಷಿ ನಾಶ…

Read More

ಮಡಿಕೇರಿ NEWS DESK  ಅ.18 : ಇದೇ ನ.1 ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು, ಜೊತೆಗೆ ಹೆಚ್ಚಿನ ಮಳೆ ಆಗಿರುವುದರಿಂದ ಮರಳು ಅಳವಡಿಸಿ ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು. ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‌ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂಬಂಧ ಹಾಡುಗಳನ್ನು…

Read More