ಮಡಿಕೇರಿ ನ.11 NEWS DESK : ಮುಂದೆ ಕೊಡಗಿನಲ್ಲು ಒಂದು ಗ್ರಾಮದಿಂದ ಇನ್ನೂಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಧಾನ ಮಂತ್ರಿ ಗ್ರಾಮ ಸಡಕ್ ರಸ್ತೆಗಳನ್ನು ಯೋಜನೆಗೆ ಸೇರಿಸಿ ಗ್ರಾಮದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದು ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಭಾರತೀಯ ಜನತಾ ಪಾರ್ಟಿ ಬಿಜೆಪಿ ಮಂಡಲದ ವತಿಯಿಂದ ಪೊನ್ನಂಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಡಿಸೆಂಬರ್ ನಿಂದ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮಿಷನ್ ಗ್ರಾಮಮಟ್ಟದಲ್ಲಿ ಆರಂಭಗೊಳ್ಳಲಿದೆ ಎಂದರು. ಈಗಾಗಲೇ ಶುರುವಾಗಿರುವ ರಾಷ್ಟ್ರೀಯ ಹೆದ್ದಾರಿ ಕುಶಾಲನಗರ – ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ತ್ವರಿತವಾಗಿ ಮುಗಿಸಿ ಕೊಡಗಿನ ಭಾಗದ ಸಾರ್ವಜನಿಕರಿಗೆ ಮುಕ್ತವಾಗಿ ಓಡಾಡಲು ಅನುಕೂಲ ಮಾಡಲಾಗುವುದು ಎಂದು ಭರವಸೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಶುರುವಾದ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಎಲ್ಲ ಭೂತ್ ಮಟ್ಟದಲ್ಲಿ ತ್ವರಿತವಾಗಿ ಪೂರ್ಣಗೊಳಿಸಲು ಕಾರ್ಯಕರಿಗೆ ಕರೆ ನೀಡಿದರು.
ಲೇಖಕ: admin
ಪೊನ್ನಂಪೇಟೆ, ನ.11 NEWS DESK : ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುವ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಶೂಗಳನ್ನು ಕೊಡುಗೆಯಾಗಿ ನೀಡಲಾಯಿತು. ಕೋಲಾರದಲ್ಲಿ ಜರುಗಲಿರುವ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯನ್ನು ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರತಿನಿಧಿಸಲಿರುವ ತಂಡದಲ್ಲಿ ಸ್ಥಾನ ಪಡೆದಿರುವ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ವತಿಯಿಂದ ಕ್ರೀಡಾ ಶೂಗಳನ್ನು ವಿತರಿಸಲಾಯಿತು. ತಿತಿಮತಿ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಸಿ.ಎಂ.ರಾಮಕೃಷ್ಣ ಅವರ ನಿರ್ದೇಶನದಂತೆ ಶಾಲೆಗೆ ತೆರಳಿದ ಸಂಘದ ನಿರ್ದೇಶಕ ಎಂ.ಎ.ಮಂಜುಳಾ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್. ಚಂದ್ರಕಲಾ ಮತ್ತು ಸಿಬ್ಬಂದಿ ನೇತ್ರ ವಿದ್ಯಾರ್ಥಿಗಳಿಗೆ ಖುದ್ದಾಗಿ ಸಂಘದ ಕೊಡುಗೆಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ಪಿ.ಮಂಗಳ, ಶಿಕ್ಷಕ ಸಿ.ಎಂ. ರಾಘವೇಂದ್ರ ಸೋಮಶೇಖರ್ ಪ್ರಸಾದ್, ಚೆನ್ನಯ್ಯ, ನವೀನ್ ಬಾಸಿತ್ ಹಾಗೂ ಶರತ್ ಕುಮಾರ್ ಹಾಜರಿದ್ದರು.
ಗೋಣಿಕೊಪ್ಪಲು ನ.11 NEWS DESK : ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸ್ವಚ್ಚತಾ ಹೈ ಸೇವಾ ಕಾರ್ಯಕ್ರಮ ಅಡಿಯಲ್ಲಿ ಸ್ವಚ್ಚತಾ ಶ್ರಮದಾನ ನಡೆಯಿತು. ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 150 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಕಾಲೇಜಿನ ಕ್ಯಾಂಟೀನ್ ಹಾಗೂ ಮಹಿಳಾ ವಸತಿ ಗೃಹದ ಸುತ್ತ ಮುತ್ತ ಬೆಳೆದಿದ್ದ ಕಾಡು ಗಿಡಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಕಾವೇರಿ ಕಾಲೇಜು ಎನ್.ಎಸ್.ಎಸ್ ಯೋಜನಾಧಿಕಾರಿ ಎಂ.ಎನ್. ವನಿತ್ ಕುಮಾರ್ ಮಾತನಾಡಿ, ನಮ್ಮ ಮನೆ ಸುತ್ತಮುತ್ತಲೂ ನಾವು ಸ್ವಚ್ಛ ಮಾಡಿಕೊಳ್ಳಬೇಕು ಆಗ ಮಾತ್ರ ನಮ್ಮ ಪರಿಸರ ಸ್ವಚ್ಛವಾಗಿರುತ್ತದೆ. ಸ್ವಚ್ಚತೆ ಇದ್ದರೆ ಮನಸ್ಸು ಹಗುರವಾಗುತ್ತದೆ ಇದರಿಂದ ಜ್ಞಾನ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಎನ್.ಎಸ್.ಎಸ್ ಯೋಜನಾಧಿಕಾರಿ ಎನ್.ಪಿ.ರೀತಾ ಮಾತನಾಡಿ, ಶ್ರಮದಾನ ಮಾಡುವ ಮೂಲಕ ನಮ್ಮ ದೇಹವನ್ನು ಸದೃಢವಾಗಿಸಲು ಸಾಧ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿಯೇ ದೇಹವನ್ನು ಮಣಿಸಬೇಕು ಎಂದು ತಿಳಿಸಿದರು. ಎನ್.ಎಸ್.ಎಸ್ ಹಿರಿಯ ನಾಯಕರಾದ ಸೃಜನ್, ರೀಶು ಕಾವೇರಪ್ಪ, ಸಿಂಚನ್…
ಮಡಿಕೇರಿ NEWS DESK ನ.10 : ಅಖಿಲ ಭಾರತ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಭಾನುವಾರ ಬರಮಾಡಿಕೊಂಡರು. ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ನೆರವೇರಿಸಿ ರಥವನ್ನು ಸ್ವಾಗತಿಸಿದರು. ಹಾಸನ ಜಿಲ್ಲೆಯ ಕಲಾತಂಡಗಳು ರಣಕಹಳೆ ಊದುವ ಮೂಲಕ ಹಾಗೂ ಚೆಟ್ಟಿಮೇಳ ವಾದ್ಯ ನುಡಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀಶಕ್ತಿ ಗುಂಪಿನವರು ಪೂರ್ಣಕುಂಭ ಸ್ವಾಗತದೊಂದಿಗೆ ತಾಯಿ ಭುವನೇಶ್ವರಿ ಹೊತ್ತ ರಥವನ್ನು ಸ್ವಾಗತಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಹಶೀಲ್ದಾರರ ಕಚೇರಿ, ತಾಲ್ಲೂಕು ಪಂಚಾಯತ್ ಕಚೇರಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲ್ಲೂಕು ಘಟಕ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲರೂ ತಾಯಿ ಭುವನೇಶ್ವರಿ ರಥವನ್ನು ಬರ ಮಾಡಿಕೊಂಡರು. ಬಳಿಕ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗೇರಿರ ಮುತ್ತಣ್ಣ ವೃತ್ತದ…
ಸುಂಟಿಕೊಪ್ಪ NEWS DESK ನ.10 : ಅತ್ತೂರು ನಲ್ಲೂರು ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಮಧ್ಯ ರಾತ್ರಿ ಕಳ್ಳತನ ನಡೆದಿರುವ ಬಗ್ಗೆ ವರದಿಯಾಗಿದೆ. ಕಂಬಿಬಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ಕೊಠಡಿಯಿಂದ ರೂ.2 ಸಾವಿರ ನಗದು ಕಳ್ಳತನವಾಗಿದೆ. ಕೊಠಡಿಯಿಂದ ಟೇಬಲ್ ಕ್ಲಾತ್ ನ್ನು ಹೊರತಂದಿರುವ ಚೋರರು ಮಲಗಿ ಹೋಗಿರುವ ಕುರುಹುಗಳು ಕಂಡು ಬಂದಿದೆ. ಶಾಲೆಯ ಅಕ್ಷರದಾಸೋಹ ಅಡುಗೆ ಕೋಣೆಯ ಬೀಗ ಮುರಿಯಲು ಪ್ರಯತ್ನಿಸಿದ್ದಾರೆ. ಕಂಬಿಬಾಣೆ ಶಾಲಾ ಮುಖ್ಯೋಪಾಧ್ಯಾಯಿನಿ ನೀಡಿದ ದೂರಿನನ್ವಯ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್, ಅಪರಾಧ ವಿಭಾಗದ ಭಾರತಿ, ಶ್ವಾನದಳ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುಂಟಿಕೊಪ್ಪ NEWS DESK ನ.10 : ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 17ನೇ ವರ್ಷದ ಓಣಂ ಆಚರಣೆಯ ಪ್ರಯುಕ್ತ ಸ್ಥಳೀಯ ಜಿಯಂಪಿ ಶಾಲಾ ಮೈದಾನದಲ್ಲಿ ಭಾನುವಾರ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಾಡಿಸಲಾಗಿತ್ತು. ಗ್ರಾಮೀಣಾ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಬೆಲೂನ್ ಹೊಡೆಯುವುದು, ಬೆಲೂನ್ ಕಾಲಿನಲ್ಲಿ ಕಟ್ಟಿ ಓಟದ ಸ್ಪರ್ಧೆ, ಕಾಳು ಹೆಕ್ಕುವುದು, ಓಟದ ಸ್ಪರ್ದೆಗಳು, ಪುರುಷರ ಮತ್ತು ಮಹಿಳೆಯರಿಗಾಗಿ ಹಗ್ಗಾಜಗ್ಗಾಟ ಸ್ಪರ್ದೆಗಳು ನಡೆದವು. ಮದ್ಯಾಹ್ನದ ನಂತರ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ದೆಗಳನ್ನು ಏರ್ಪಾಡಿಸಲಾಗಿತ್ತು. ಮಹಿಳೆಯರಿಗೆ ವಿವಿಧ ರೀತಿಯ ಮನೋರಂಜನ ಆಟೋಟ ಸ್ಪರ್ದೆಗಳು ನಡೆದವು. ವಿಜೇತರಿಗೆ ನ.18 ರಂದು ನಡೆಯುವ ಓಣಂ ಆಚರಣೆಯ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಅಧ್ಯಕ್ಷ ಶಶಿಕುಮಾರ್ ತಿಳಿಸಿದರು. ಸಂಘದ ಅಧ್ಯಕ್ಷ ಶಶಿಕುಮಾರ್, ಪದಾಧಿಕಾರಿಗಳಾದ ವಾಸುದೇವ, ಕನೀಸ್, ಶಿವಮಣಿ, ಅನಿಲ್ ಕುಮಾರ್ ಸೇರಿದಂತೆ ಪದಾಧಿಕಾರಿಗಳು ಇದ್ದರು.
ಸೋಮವಾರಪೇಟೆ NEWS DESK ನ.10 : ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಮತ್ತು ಜಿಲ್ಲಾ ಶಿಕ್ಷಣ ಇಲಾಖೆ ವತಿಯಿಂದ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ಕುಶಾಲ್ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರತೀಕ್ಷಾ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಡಿಕೇರಿ ನ.9 NEWS DESK : ಹಾಸನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹಾಸನಾಂಬ ನೃತ್ಯ ವೈಭವ ಸ್ಪರ್ಧೆಯಲ್ಲಿ ಮಡಿಕೇರಿಯ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸೋಮವಾರಪೇಟೆಯಲ್ಲಿ ನಡೆದ 17ನೇ ವರ್ಷದ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭದ ರಾಜ್ಯಮಟ್ಟದ ಡ್ಯಾನ್ಸ್ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಪ್ರಥಮ, ರೆಬೆಲ್ ಡ್ಯಾನ್ಸ್ ಗ್ರೂಪ್ ವತಿಯಿಂದ ನಡೆದ ರೆಬೆಲ್ ಕಪ್ ಮಂಡ್ಯ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಸೀನಿಯರ್ಸ್ ವಿಭಾಗದಲ್ಲಿ ಹಾಗೂ ಜೂನಿಯರ್ಸ್ ವಿಭಾಗದಲ್ಲಿ ದ್ವಿತೀಯ ಬಹುಮಾನ ಗೆದ್ದುಕೊಂಡಿದೆ ಎಂದು ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋದ ಸಾಧನೆಯ ಬಗ್ಗೆ ನೃತ್ಯ ಸಂಯೋಜಕರಾದ ಅಭಿಷೇಕ್ ಹಾಗೂ ಅಜಿತ್ ಹರ್ಷ ವ್ಯಕ್ತಪಡಿಸಿದ್ದಾರೆ. ಆಯುಧ ಪೂಜೆಯ ಪ್ರಯುಕ್ತ ಸೋಮವಾರಪೇಟೆ ವಾಹನ ಚಾಲಕರು ಹಾಗೂ ಮೋಟಾರು ಕೆಲಸಗಾರರ ಸಂಘದ ವತಿಯಿಂದ ನಡೆದ ರಾಜ್ಯಟ್ಟದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಮಡಿಕೇರಿ ನಗರ ದಸರಾ ಸಮಿತಿಯ ಯುವ ದಸರಾದಲ್ಲಿ ದ್ವಿತೀಯ ಬಹುಮಾನ ಹಾಗೂ ಶ್ರೀ ಕಾವೇರಿ ದಸರಾ ಸಮಿತಿಯಿಂದ ನಡೆದ ಯುವ ದಸರಾ ರಾಜ್ಯಮಟ್ಟದ…
ಮೇಷ : ಈ ವಾರ ನಿಮಗೆ ಉತ್ತಮವಾದ ಗುರುಬಲವಿದ್ದು, ಮನಶಾಂತಿ ದೊರಕುತ್ತದೆ. ಹೊಸ ವಸ್ತುವನ್ನು ಖರೀದಿಸುವಿರಿ. ದೂರದ ನೆಂಟರು ನಿಮ್ಮ ಮನೆಗೆ ಬರಲಿದ್ದಾರೆ. ಹಣ-ಕಾಸನ್ನು ತುಂಬಾ ಚಲಾವಣೆ ಮಾಡಲಿದ್ದೀರಿ. ವೃಷಭ ರಾಶಿ : ಈ ವಾರದಲ್ಲಿ ಉತ್ತಮ ಅದೃಷ್ಟದಲ್ಲಿ ಕೂಡಿದ್ದೀರಿ. ಹಳೆಯ ಸಾಲವನ್ನು ತೀರಿಸಲಿದ್ದೀರಿ. ವೈರಿಗಳು ಸ್ನೇಹಿತರಾಗುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತದೆ. ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುವಿರಿ. ಕಲಾವಿದರು ಹಾಗೂ ವ್ಯಾಪಾರಸ್ಥರಿಗೆ ಉತ್ತಮ ಯೋಗ ಕಂಡುಬರುತ್ತದೆ. ಆದರೂ ಸ್ಪಲ್ಪ ಮಟ್ಟಿಗೆ ಅನಾರೋಗ್ಯ ಕಾಡಲಿದೆ. :: ಪರಿಹಾರ :: ಶಿವ ದೇವಾಲಯದಲ್ಲಿ ರುದ್ರಾಭಿಶೇಕ ಮಾಡಿರಿ. ಮಿಥುನ ರಾಶಿ : ಹೋದಲ್ಲಿ ಬೇರನ್ನು ಊರಿ ಚಿಗುರೊಡೆಯುವ ನೀವು ವಿವಿಧ ಕ್ಷೇತ್ರಗಳಲ್ಲಿ ವಿಜ್ರಂಭಿಸಲಿದ್ದೀರಿ. ಆದರೆ ನಿಮ್ಮ ದೃಢ ಸಂಕಲ್ಪದಿಂದ ಹೊಸ ವ್ಯವಹಾರಕ್ಕೆ ಪ್ರಯತ್ನ ಪಡಲಿದ್ದೀರಿ. :: ಪರಿಹಾರ :: ಶುಕ್ರವಾರ ಶಕ್ತಿ ದೇವತೆ ಆರಾಧನೆ ಮಾಡಿ. ಕರ್ಕಾಟಕ ರಾಶಿ : ಸದಾ ಬೇರೆಯವರ ನಿಂಧನೆಗೆ ಒಳಗಾಗುವ ನೀವು ಮಾನಸಿಕ ಕಿರಿಕಿರಿ ಅನುಭವಿಸುವಿರಿ. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸವನ್ನು…
ಮಡಿಕೇರಿ ನ.9 NEWS DESK : ಕೊಡವ ಜನಪದ ಕಲೆಗಳಿಗೆ ಒತ್ತು ನೀಡುವ ಸಲುವಾಗಿ ಮಡಿಕೇರಿಯ ಸುಬ್ರಹ್ಮಣ್ಯ ಕೊಡವ ಕೇರಿಯ ನೇತೃತ್ವದಲ್ಲಿ ನಗರದ ಕೊಡವ ಸಮಾಜದಲ್ಲಿ ಕೊಡವ ಅಂತರ್ ಕೇರಿ ಜನಪದ ಸಾಂಸ್ಕೃತಿಕ ಮೇಳ ಗಮನ ಸೆಳೆಯಿತು. ಕೊಡವ ಸಮಾಜದ ಆವರಣದಲ್ಲಿ ಮಡಿಕೇರಿಯ 12 ಕೇರಿಗಳ ಕೊಡವ ಜನಾಂಗ ಬಾಂಧವರು ಭಾಗವಹಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅಂತರ್ ಕೇರಿಗಳ ನಡುವೆ ಬೊಳಕಾಟ್, ಕೋಲಾಟ್, ಮಹಿಳೆಯರ ಉಮ್ಮತಾಟ್, ಕಪ್ಪೆಯಾಟ್, ಬಾಳೋಪಾಟ್, ತಾಲಿಪಾಟ್, ಸಮ್ಮಂದ ಅಡ್ಕುವೋ, ವಾಲಗತಾಟ್, ಕೊಡವ ಹಾಡು ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಿದವು. ಕೊಡವ ಮಹಿಳೆಯರು, ಪುರುಷರ ಸಹಿತ ಮಕ್ಕಳು ಕೂಡ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಅತ್ಯುತ್ತಮ ಪ್ರದರ್ಶನ ನೀಡಿದ ಕೊಡವ ಕೇರಿಗೆ ಗಣ್ಯರು ಬಹುಮಾನ ನೀಡಿ ಗೌರವಿಸಿದರು. ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಎಂ.ಪಿ ಮುತ್ತಪ್ಪ, ಅಂತರ್ ಕೇರಿ ಮೇಳದ ಅಧ್ಯಕ್ಷ ನಾಳಿಯಂಡ ಎಂ.ನಾಣಯ್ಯ, ಸುಬ್ರಮಣ್ಯ ಕೊಡವ ಕೇರಿ ಅಧ್ಯಕ್ಷ ಅರೆಯಡ ರಮೇಶ್, ಉಪಾಧ್ಯಕ್ಷ…






