ಲೇಖಕ: admin

ಸೋಮವಾರಪೇಟೆ ಅ.18 NEWS DESK : ಕೊಡಗು ಮಕ್ಕಳ ಗ್ರಂಥಾಲಯ, ಕೊಡಗು ಮಕ್ಕಳ ಹಕ್ಕುಗಳ ಕ್ಲಬ್, ನಾವು ಪ್ರತಿಷ್ಠಾನದ ವತಿಯಿಂದ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ‘ಬಾಲ್ಯ ಕಟ್ಟುವ ಮಕ್ಕಳ ಹಬ್ಬ’ ಮಕ್ಕಳ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಶಿಬಿರಾರ್ಥಿಗಳ ಪಾಲಕರು ಉಪಸ್ಥಿರಿದ್ದು, ತಮ್ಮ ಮಕ್ಕಳ ಕಲಿಕೆ, ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾತನಾಡಿದರು. ಶಿಬಿರದಲ್ಲಿ ಭಾಗವಹಿಸಿರುವುದರಿಂದ ಗ್ರಾಮೀಣ ಕಲೆಯ ಹಳೆಯ ಆಟಗಳನ್ನು ಕಲಿತ್ತಿದ್ದಾರೆ. ಪೊಲೀಸರು, ಪತ್ರಕರ್ತರೊಂದಿಗೆ ಸಂವಾದ ನಡೆಸಿ ಕೆಲವೊಂದು ವಿಷಯಗಳನ್ನು ಮನೆಯರೊಂದಿಗೆ ಹಂಚಿಕೊಂಡಿದ್ದಾರೆ ಎಂದು ತಿಳಿಸಿದರು. ಶಿಬಿರಾರ್ಥಿಗಳಾದ ತನಿಷಾ, ನಿಶ್ಮಿತ್, ಶಶಿ ಕುಮಾರ್, ಯಶ್ಮಿತಾ, ಬಾರ್ಗವಿ, ಕಲ್ಪನಾ, ಶ್ರೇಯಾ ಅವರು ತಾವೇ ಬರೆದ ಕವಿತೆ ವಾಚಿಸಿದರು. ಕತೆಗಳನ್ನು ಓದಿದರು. ದಿನಕ್ಕೊಂದು ಕಥೆ, ಅಜ್ಜಿಮನೆ ಹಳೆ ಆಟಗಳಾದ ಅಳಿ ಗುಳಿ ಮನೆ, ಪಗಡೆ, ಚೌಕಾಬಾರ, ಗೋಲಿ, ಚಿನ್ನಿ ದಾಂಡು, ಕುಂಟೆಬಿಲ್ಲೆ, ಕಡ್ಡಿ ಆಟ ಮತ್ತಿತರ ಹಳೆ ಆಟಗಳು, ಪರಿಸರ ಚಟುವಟಿಕೆಗಳಾದ ಬೀಜದುಂಡೆ ತಯಾರಿಕೆ, ಪ್ಲಾಸ್ಟಿಕ್ ಬ್ರಿಕ್ಸ್ ತಯಾರಿಕೆ, ಚಿತ್ರ ನೋಡಿ…

Read More

ವಿರಾಜಪೇಟೆ ಅ.18 NEWS DESK : ಹವಾಮಾನ ವೈಪರೀತ್ಯಗಳಿಂದ ಮತ್ತು ಬಾರಿ ಮಳೆಯ ಕಾರಣದಿಂದಾಗಿ ಗ್ರಾಮೀಣ ರಸ್ತೆಗಳು ಹಾನಿಯಾಗಿದ್ದು, ಮಳೆ ನಿಂತ ನಂತರದಲ್ಲಿ ಎಲ್ಲಾ ರಸ್ತೆಗಳು ಅಭಿವೃದ್ಧಿ ಹೊಂದಲಿದೆ ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ  ಹೇಳಿದರು. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸುಮಾರು 30ಲಕ್ಷ ರೂ.ವೆಚ್ಚದ ಒಟ್ಟು 6ಕಾಂಕ್ರೀಟ್ ರಸ್ತೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರ ನಿಧಿ ಯೋಜನೆ ಅಡಿಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಗಾಗಿ 17 ಕೋಟಿ ರೂಗಳು ಬಿಡುಗಡೆಗೊಳಿಸಿದ್ದು,  ಕಾರ್ಮಾಡು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಸುಮಾರು 30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಗೆ ಒತ್ತು ನೀಡಿ ಅಭಿವೃದ್ಧಿ ಪಥದಲ್ಲಿ ಕೊಂಡ್ಯೊಯಲು ಸಾರ್ವಜನಿಕರು ಕೈಜೋಡಿಸಿ ಎಂದು ಹೇಳಿದರು. ಕಾರ್ಮಾಡು ಗ್ರಾ.ಪಂ ಸದಸ್ಯ ಕೆ.ಎನ್.ಹಂಸ ಮಾತನಾಡಿ, ಹಲವು ವರ್ಷಗಳಿಂದ…

Read More

ಮಡಿಕೇರಿ ಅ.18 NEWS DESK : ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ ಕಾವೇರಿ ತೀರ್ಥೋದ್ಭವದ ಮರುದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ದುರಂತ ಸ್ಥಳದಲ್ಲಿ ದೋಸೆ ಮತ್ತು ಪುಟ್ಟ್ ಭಕ್ಷ್ಯಗಳನ್ನಿಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಬೊತ್ತ್ ಬಳ್ಳಿ ಎಂದು ಕರೆಯಲಾಗುವ ಗಿಡಮೂಲಿಕೆಗಳಿಂದ ಹೆಣೆದಿರುವ ಬೊತ್ತ್ ಕಂಬದಲ್ಲಿ ದೋಸೆ ಮತ್ತು ಪುಟ್ಟ್ ಶಾಸ್ತ್ರೋಕ್ತವಾಗಿ ಇರಿಸಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು, ಕಾವೇರಿ ತೀರ್ಥೋದ್ಭವದ ಮರುದಿನ ಹಿರಿಯರಿಗೆ ದೋಸೆ ಮತ್ತು ಪುಟ್ಟ್ ಇಡುವ ಕ್ರಮ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದ್ದು, ಇದೊಂದು ಜನಪದ ಪದ್ಧತಿ. ಪ್ರತಿ ವರ್ಷ ಕಾವೇರಿ ತೊಲೆಯಾರ್ ಚಂಗ್ರಾಂದಿ ಆಚರಣೆಗೆ ಸಂಬಂಧಿಸಿದಂತೆ ಕೊಡವರು ತಮ್ಮ ಜೌಗು ಪ್ರದೇಶಗಳು, ಭತ್ತದ ಗದ್ದೆಗಳು, ಭತ್ತದ ಖಣಜ (ಬೋಟಿ ಕಳ), ದನದ ಸಗಣಿ ಗುಂಡಿ, ದನದ ಕೊಟ್ಟಿಗೆ, ಕುಡಿಯುವ ನೀರಿನ ಬಾವಿ,…

Read More

ಮಡಿಕೇರಿ ಅ.18 NEWS DESK : ತೋಟಗಳಲ್ಲಿ ದುಡಿಯುವ ಕಾರ್ಮಿಕರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಬೇಕು ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅಭಿಪ್ರಾಯಪಟ್ಟಿದ್ದಾರೆ. ಬಿಳಿಗೇರಿಯ ಟಾಟಾ ಕಾಫಿ ಸಂಸ್ಥೆಯಲ್ಲಿ ಕಳೆದ 36 ವರ್ಷಗಳಿಂದ ಕಾರ್ಯನಿರ್ವಹಿಸಿ ನಿವೃತ್ತರಾದ ಕಾರ್ಮಿಕ ಮಹಿಳೆ ಎ.ಯಶೋಧ ಅವರನ್ನು ಎಐಟಿಯುಸಿ ಸಂಘಟನೆ ವತಿಯಿಂದ ಬೀಳ್ಕೊಡಲಾಯಿತು. ಬಿಳಿಗೇರಿಯ ಟಾಟಾ ಕಾಫಿ ತೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಎಂ.ಸೋಮಪ್ಪ ಅವರು ಕಾರ್ಮಿಕರನ್ನು ಕೇವಲ ದುಡಿಸಿಕೊಳ್ಳುವುದಕ್ಕೆ ಮಾತ್ರ ಸೀಮಿತಗೊಳಿಸಬಾರದು. ಅವರ ಎಲ್ಲಾ ಸಂಕಷ್ಟಗಳಿಗೆ ಸ್ಪಂದಿಸಿ ನಿವೃತ್ತಿ ಹೊಂದುವಾಗ ಗೌರವದಿಂದ ಕಳುಹಿಸಿಕೊಡಬೇಕು ಎಂದರು. ಇತರ ಕಾರ್ಮಿಕ ಸಂಘಟನೆಗಳಿಗೆ ಮಾದರಿಯಾಗುವ ರೀತಿಯಲ್ಲಿ ಎಐಟಿಯುಸಿ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ಯಶೋಧ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು. ಹಿರಿಯರಾದ ನಾರಾಯಣ, ಸಂಜೀವ, ಕಾರ್ಮಿಕ ಮುಖಂಡರಾದ ಗಣೇಶ್, ಲೋಕೇಶ್, ಸೂರ್ಯ, ವೇಲಮ್ಮ, ಗಿರಿಜಾ, ಮುತ್ತಜ್ಜಿ ಮತ್ತಿತರ ಕಾರ್ಮಿಕರು ಉಪಸ್ಥಿತರಿದ್ದರು.

Read More

ಮಡಿಕೇರಿ ಅ.18 NEWS DESK : ಜೀವನದಿ ಕಾವೇರಿಯ ತೀರ್ಥೋದ್ಭವದ ಹಿನ್ನೆಲೆಯಲ್ಲಿ ನಗರದ ಶ್ರೀ ಕಾವೇರಿ ಭಕ್ತ ಮಂಡಳಿಯಿಂದ ಇಂದು (ಅ.18) ನಗರ ವ್ಯಾಪ್ತಿಯಲ್ಲಿ 70ನೇ ವರ್ಷದ ಶ್ರೀ ಕಾವೇರಿಯ ಮಂಟಪದೊಂದಿಗೆ ಭಕ್ತಾದಿಗಳಿಗೆ ತೀರ್ಥ ವಿತರಣೆ ಮಾಡಲಾಯಿತು. ಶ್ರೀ ಕಾವೇರಿ ಭಕ್ತ ಮಂಡಳಿಯ ಪದಾಧಿಕಾರಿಗಳು ತೀರ್ಥೋದ್ಭವದ ದಿನವಾದ ಗುರುವಾರ ತಲಕಾವೇರಿಗೆ ತೆರಳಿ ಪವಿತ್ರ ಕಾವೇರಿ ತೀರ್ಥವನ್ನು ಸಂಗ್ರಹಿಸಿ, ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯಲ್ಲಿನ ಶ್ರೀ ಕಾವೇರಿ ಭಕ್ತ ಮಂಡಳಿಗೆ ಅದನ್ನು ತಂದರು, ಇಂದು ಬೆಳಗ್ಗೆ ವಿಧ್ಯುಕ್ತ್ತವಾಗಿ ತೀರ್ಥಪೂಜೆಯನ್ನು ನೆರವೇರಿಸಲಾಯಿತು. ಕಾವೇರಿ ತೀರ್ಥ ಪೂಜೆ ಹಿನ್ನೆಲೆ ಇಂದು ಬೆಳಗ್ಗೆ ಗಣಪತಿ ಹೋಮ, ಕಳಸ ಕಟ್ಟುವ ಧಾರ್ಮಿಕ ವಿಧಿ ವಿಧಾನಗಳು ನಡೆದವು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದವನ್ನು ವಿತರಿಸಿದ ಬಳಿಕ ಕಾವೇರಿ ಮಾತೆಯ ಮೂರ್ತಿಯನ್ನು ಹೊಂದಿದ ಆಕರ್ಷಕ ಮಂಟಪದಲ್ಲಿ ಮಂಗಳ ವಾದ್ಯಗಳ ಸಹಿತ ನಗರದ ವಿವಿಧ ಬಡಾವಣೆಗಳಿಗೆ ಮೆರವಣಿಗೆ ತೆರಳಿ ಭಕ್ತರಿಗೆ ಕಾವೇರಿ ತೀರ್ಥವನ್ನು ವಿತರಿಸಲಾಯಿತು. ಶ್ರೀ ಕಾವೇರಿ ತೀರ್ಥ ವಿತರಣಾ ಪುಣ್ಯ ಕಾರ್ಯವನ್ನು…

Read More

ಮಡಿಕೇರಿ ಅ.18 NEWS DESK : ಹೆಜ್ಜೇನು ದಾಳಿಯಿಂದ ಮೃತಪಟ್ಟ ನಿಟ್ಟೂರು ಕಾರ್ಮಾಡು ಗ್ರಾಮದ ಕೊಟ್ಟಂಗಡ ಪೂಣಚ್ಚ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ  ಸಾಂತ್ವನ ಹೇಳಿದರು. ಈ ಸಂದರ್ಭ ಪೊನ್ನoಪೇಟೆ ಬ್ಲಾಕ್ ಅಧ್ಯಕ್ಷ ಮಿದೆರೀರ ನವೀನ್, ಬಾಳಲೆ ವಲಯ ಅಧ್ಯಕ್ಷ ವಿನು ಉತ್ತಪ್ಪ ಹಾಗೂ ಬಾನಂಡ ಪೃಥ್ವಿ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

Read More

ಕುಶಾಲನಗರ ಅ.18 NEWS DESK :  ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ತಲಕಾವೇರಿ-ಪೂಂಪ್ ಹಾರ್ 14ನೇ ವರ್ಷದ ಕಾವೇರಿ ನದಿ ಜಾಗೃತಿ ಯಾತ್ರೆ  ಅ.20 ರಿಂದ ಒಂದು ತಿಂಗಳ ಕಾಲ ನಡೆಯಲಿದೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ಸ್ವಚ್ಛ ಕಾವೇರಿ ಹಾಗೂ ಜಲ ಮೂಲಗಳ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯಾತ್ರೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಸಾಧು ಸಂತರು ಪಾಲ್ಗೊಳ್ಳಲಿದ್ದು, ಅ.19 ರಂದು ತಂಡ ತಲಕಾವೇರಿಗೆ ಆಗಮಿಸಲಿದೆ.  ಅ.20 ರಂದು ಬೆಳಗ್ಗೆ ಯಾತ್ರ ತಂಡ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿ ಕಳಸಗಳಲ್ಲಿ ಪವಿತ್ರ ಕಾವೇರಿ ತೀರ್ಥ ಸಂಗ್ರಹಿಸಿ ಬೆಳಗ್ಗೆ 9 ಗಂಟೆಗೆ ವಿರಾಜಪೇಟೆ ಅರಮೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ಯಾತ್ರೆಗೆ ಚಾಲನೆ ನೀಡಲಿದ್ದಾರೆ.  ಈ ಸಂದರ್ಭದಲ್ಲಿ ಕಾವೇರಿ ಜಾಗೃತಿ ಯಾತ್ರೆಯ ಕರ್ನಾಟಕ ಮತ್ತು ತಮಿಳುನಾಡು ಪ್ರಾಂತದ ಸಂಚಾಲಕರು ಹಾಗೂ…

Read More

ನಾಪೋಕ್ಲು ಅ.18 : ಬಲ್ಲಮಾವಟಿಯ ನೇತಾಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಆಡಳಿತ ಮಂಡಳಿ ಅಧ್ಯಕ್ಷರಾಗಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಉಪಾಧ್ಯಕ್ಷರಾಗಿ ಚಂಗೇಟಿರ ಕುಮಾರ್ ಸೋಮಣ್ಣ, ಕರಾಸ್ಪಾಂಡೆಂಟಾಗಿ ತೋಲಂಡ ಅರುಣ್ ಕಾವೇರಪ್ಪ ಮತ್ತು ಗೌರವ ಕಾರ್ಯದರ್ಶಿಯಾಗಿ ಮುಕ್ಕಾಟಿರ ವಿನಯ್ ಆಯ್ಕೆಯಾದರು. ಸಭೆಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ಬೊಟ್ಟೋಳಂಡ ಗಿರೀಶ್ ಮಾದಪ್ಪ, ತಾಪಂಡ ವರುಣ್ ಸುಬ್ಬಯ್ಯ, ಬೈರುಡ ವಸಂತ, ಅಪ್ಪುಮಣಿಯಂಡ ಬನ್ಸಿ ಭೀಮಯ್ಯ, ನೆರವಂಡ ಅಪ್ಪಣ್ಣ, ಅಪ್ಪಚ್ಚೀರ ಗೌತಮ್ ಕಾರ್ಯಪ್ಪ, ನಿಕಟಪೂರ್ವ ಗೌರವ ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಚೆಟ್ಟಳ್ಳಿ ಅ.18 NEWS DESK : ಚೆಟ್ಟಳ್ಳಿಯ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 14ನೇ ವರ್ಷದ ಕಾವೇರಿ ಪ್ರತಿಮೆಗೆ ಪೂಜೆ ಹಾಗೂ ಕಾವೇರಿ ತೀರ್ಥ ವಿತರಣೆ ನೆರವೇರಿತು. ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವದ ನಂತರ ಚೆಟ್ಟಳ್ಳಿ ಸಹಕಾರ ಸಂಘದ ಮುಂದಿರುವ ಕಾವೇರಿ ಪ್ರತಿಮೆಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಣೆ ಹಾಗೂ ತೀರ್ಥವಿತರಿಸಲಾಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಕಳೆದ 14 ವರ್ಷಗಳ ಹಿಂದೆ ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಕಾವೇರಿ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು. ನಂತರದಲ್ಲಿ ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು ಕಾವೇರಿ ತೀರ್ಥವನ್ನು ವಿತರಿಸಲಾಗುತ್ತಿದೆ. ಇಂತಹ ದೈವೀಕಾರ್ಯವನ್ನು ಮಾಡುವ ಮೂಲಕ ಸಂಘವು ಅಭಿವೃದ್ಧಿಯತ್ತ ಸಾಗುತಿದೆಂದರು. ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

Read More

ಕುಶಾಲನಗರ ಅ.18 NEWS DESK :  ಆದಿಕವಿ ಮಹರ್ಷಿ ವಾಲ್ಮೀಕಿಯವರು ಮಾನವೀಯತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮೊದಲಾದ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಚಿಕ್ಕ ಅಳುವಾರ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ನಡೆದ ವಾಲ್ಮೀಕಿ ಜಯಂತಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯದಲ್ಲಿ ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಇಂದಿನ ಯುವ ಸಮುದಾಯಕ್ಕೆ ತಿಳಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷವು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಗುರು ಹಿರಿಯರನ್ನು ಗೌರವಿಸುವ ಜೀವನದ ಮೌಲ್ಯಗಳು, ಮಾತೃತ್ವ, ತ್ಯಾಗ ಮನೋಭಾವ, ದೇಶಕ್ಕಾಗಿ ಸೇವೆ, ಪ್ರಕೃತಿ ಸೇವೆ ಮೊದಲಾದ ಸಾಮಾಜಿಕ ವಿಚಾರಗಳನ್ನು ಸಾರಿದ್ದಾರೆ. ಈ ನಿಟ್ಟಿನಲ್ಲಿ ಕೇವಲ ಆಚರಣೆಗೆ ಸೀಮಿತವಾಗಿರದೆ ಮಹರ್ಷಿ ವಾಲ್ಮೀಕಿಯವರ ಸಾಮಾಜಿಕ…

Read More