ಮಡಿಕೇರಿ ಡಿ.6 NEWS DESK : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸೃಜನಶೀಲತೆ ಮತ್ತು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಮೈಕಲರ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಆಟೋಟವು ಸಹ ಇರಬೇಕು. ಆದರೆ ಮೊಬೈಲ್ ನೋಡುವ ಗೀಳು ಇರಬಾರದು ಎಂದು ಸಲಹೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಸಂಗೀತ, ಕಲೆ, ನಾಟಕ, ನೃತ್ಯ ಹೀಗೆ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು ಹೊಸತನ ಕಲಿಯಲು ಪ್ರಯತ್ನಿಸಬೇಕು, ಇದರಿಂದ ಪ್ರತಿಭೆ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು. ಪ್ರತಿಯೊಬ್ಬರ ಬದುಕಿನಲ್ಲಿ ಸಂತಸ,…
ಲೇಖಕ: admin
ಮಡಿಕೇರಿ ಡಿ.6 NEWS DESK : ಕೊಡಗಿನಲ್ಲಿ ಕೆಲವು ದುಷ್ಟಶಕ್ತಿಗಳು ಗೌಡ ಜನಾಂಗವನ್ನು ಗುರಿಯಾಗಿಸಿಕೊಂಡು ಆಗಿಂದಾಗ್ಗೆ ಅವಹೇಳನ ಮಾಡುವುದು, ಗೌಡ ಸಮಾಜಗಳು ಹಾಗೂ ಗೌಡ ಸಮುದಾಯದ ಜನರಿಗೆ ತೊಂದರೆಯಾಗುವಂತೆ ವರ್ತಿಸುವ ಕೃತ್ಯವನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ವರ್ಷಗಳ ಹಿಂದೆ ಮಡಿಕೇರಿ ನಗರದ ಕೊಡಗು ಗೌಡ ವಿದ್ಯಾಸಂಘ ಹಾಗೂ ಕೊಡಗು ಗೌಡ ಸಮಾಜವನ್ನು ಗುರಿ ಮಾಡಿ ಇಲ್ಲಿನ ಕಟ್ಟಡಗಳು ಅನಧಿಕೃತವೆಂದು ವ್ಯಕ್ತಿಯೊಬ್ಬರು ತಕರಾರು ತೆಗೆದಿದ್ದರು. ಕೊಡಗಿನ ಇತಿಹಾಸ ಪ್ರಸಿದ್ಧ ಮಡಿಕೇರಿ ರಾಜರ ಕೋಟೆ ಒಳಭಾಗದಲ್ಲಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆ ಸ್ಥಾಪಿಸುವ ನಿರ್ಧಾರವನ್ನು ಇದೇ ವ್ಯಕ್ತಿ ವಿರೋಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಈ ವ್ಯಕ್ತಿಗೆ ದಂಡ ವಿಧಿಸಲ್ಪಟ್ಟಿದೆ. ಜನಾಂಗೀಯ ದ್ವೇಷವನ್ನು ಹುಟ್ಟು ಹಾಕುತ್ತಿರುವ ವ್ಯಕ್ತಿಯ ಹಿಂದೆ ಕೆಲವು ದುಷ್ಟಶಕ್ತಿಗಳ ಹುನ್ನಾರ ಅಡಗಿದೆ ಎಂದು ಆರೋಪಿಸಿದರು. ಜಿಲ್ಲಾಡಳಿತ…
ಮಡಿಕೇರಿ ಡಿ.6 NEWS DESK : ಕಾಫಿ ಬೆಳೆಗಾರರು ಸರ್ಫೇಸಿ ಕಾಯ್ದೆಯಿಂದ ಎದುರಿಸುತ್ತಿದ್ದ ಕಿರುಕುಳ ಮತ್ತು ಆರ್ಥಿಕ ಒತ್ತಡದ ಸಮಸ್ಯೆಯನ್ನು ಕೇಂದ್ರ ಸರಕಾರ ಬಗೆಹರಿಸಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೇಂದ್ರ ಕಾಫಿ ಮಂಡಳಿಯ ಸದಸ್ಯ ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಲೋಕಸಭೆಯಲ್ಲಿ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಸರ್ಫೇಸಿ ಕಾಯ್ದೆಯಿಂದ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಕೇಂದ್ರದ ಗಮನ ಸೆಳೆಯುವ ಪ್ರಶ್ನೆ ಕೇಳಿದ್ದರು. ಇದಕ್ಕೆ ಕೇಂದ್ರ ಸರಕಾರದ ವಾಣಿಜ್ಯ ಮತ್ತು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಕಾಫಿ ಕೃಷಿ ಸರ್ಫೇಸಿ ಕಾಯ್ದೆಯಡಿ ಬರುವುದಿಲ್ಲ ಎಂದು ಉತ್ತರ ನೀಡುವ ಮೂಲಕ ಕಾಫಿ ಬೆಳೆಗಾರರಿಗೆ ನೆರವಾಗಿದ್ದಾರೆ. ಇದು ಬೆಳೆಗಾರರಿಗೆ ಹರ್ಷವನ್ನು ತಂದಿದೆ ಎಂದು ತಿಳಿಸಿದ್ದಾರೆ. ಹವಾಮಾನ ವೈಪರೀತ್ಯ ಸೇರಿದಂತೆ ಇನ್ನೂ ಕೆಲವು ಸಮಸ್ಯೆಗಳಿಂದ ಕಾಫಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಸರ್ಫೇಸಿ ಕಾಯ್ದೆಯಿಂದ ಮತ್ತಷ್ಟು ಒತ್ತಡ ಎದುರಿಸುತ್ತಿರುವ ಸಂದರ್ಭದಲ್ಲೇ ಕೇಂದ್ರ ಪ್ರಕಟಿಸಿರುವ ನಿರ್ಧಾರ ಬೆಳೆಗಾರರಿಗೆ ಹೆಚ್ಚು…
ಬೆಂಗಳೂರಿ ಡಿ.6 NEWS DESK : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಈ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದರು. ಅಂಬೇಡ್ಕರ್ ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ…
ಚೆಟ್ಟಳ್ಳಿ ಡಿ.6 NEWS DESK : ಚೆಟ್ಟಳ್ಳಿಯ ಪುತ್ತರಿರ ಕುಟುಂಬದ ನಾಗರ ನೆಲೆಯಲ್ಲಿ ನಾಗರ ಪಂಚಮಿಯ ವಾರ್ಷಿಕ ಪೂಜೆ ಶ್ರದ್ದಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ನಂತರ ಅರ್ಚಕರು ನಾಗರ ಕಲ್ಲಿಗೆ ಕ್ಷೀರಾಭಿಶೇಕ, ಪಾಯಸ, ಮಹಾಪೂಜೆ ಮಾಡಿದರು. ಕುಟುಂಬದ ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯ ಮಾತನಾಡಿ, ಪ್ರತೀ ವರ್ಷದಂತೆ ಷ್ರಷ್ಠಿ ಆಚರಣೆಗೆ ಮುಂಚಿತವಾಗಿ ನಾಗರ ಪಂಚಮಿಯನ್ನು ಆಚರಿಸಲಾಗುತ್ತಿದ್ದು, ಎಲ್ಲರಿಗೂ ಒಳಿತನ್ನು ಮಾಡಲೆಂದು ಪ್ರಾರ್ಥಿಸಿದರು. ಇದೇ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ವಿರಾಜಪೇಟೆ ಡಿ.6 NEWS DESK : ಬೆಂಗಳೂರಿನ ಪ್ರೆಸಿಡೆನ್ಸಿ ಯೂನಿವರ್ಸಿಟಿಯಲ್ಲಿ ಜರುಗಿದ ಘಟಿಕೋತ್ಸವದಲ್ಲಿ ವಿರಾಜಪೇಟೆಯ ಬಿ.ಆರ್.ಪ್ರಿಯಾಂಕಗೆ ಗಣಿತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಲಾಯಿತು. ಇವರು ವಿರಾಜಪೇಟೆ ತಾಲೂಕಿನ ಕಡಂಗಮೂರೂರಿನ ಬಿ.ಎಲ್.ರಾಮಚಂದ್ರ(ನಿವೃತ್ತ ಸೈನಿಕ) ಹಾಗೂ ಪದ್ಮಾವತಿ(ಶಿಕ್ಷಕಿ) ದಂಪತಿಯ ಪುತ್ರಿ.
ಮಡಿಕೇರಿ ಡಿ.6 NEWS DESK : ಮಡಿಕೇರಿ ದಸರಾ ಆಚರಣೆಗೆ ಸರಕಾರ ಮಂಜೂರು ಮಾಡಿರುವ ರೂ.1.50 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಜಿಲ್ಲೆಯ ಶಾಸಕರು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮಡಿಕೇರಿ ದಸರಾ ಸಮಿತಿಯ ಉಪಾಧ್ಯಕ್ಷ ಬಿ.ಎಂ.ರಾಜೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಸರಾ ಜನೋತ್ಸವ ಮುಗಿದು ಎರಡು ತಿಂಗಳಾಗಿದ್ದರು ಇನ್ನೂ ಕೂಡ ಸರಕಾರ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಹಣ ಬಾರದೆ ಇರುವುದರಿಂದ ದಶಮಂಟಪ ಸಮಿತಿಗಳು ಸಾಲದ ಸಂಕಷ್ಟಕ್ಕೆ ಸಿಲುಕಿದ್ದು, ಶಾಸಕರು ತಕ್ಷಣ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ. ದಸರಾ ಜನೋತ್ಸವದ ಆಕರ್ಷಣೆಯಾದ ನಗರದ ದಶ ದೇವಾಲಯಗಳ ಮಂಟಪಕ್ಕಾಗಿ ಪ್ರತಿಯೊಂದು ಮಂಟಪ ಸಮಿತಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿದೆ. ವಿಜೃಂಭಣೆಯ ದಶ ಮಂಟಪಗಳ ಶೋಭಾಯಾತ್ರೆಗಾಗಿ ಸಾಲ ಮಾಡಿ ಹಗಲಿರುಳೆನ್ನದೆ ಶ್ರಮಿಸಲಾಗಿದೆ. ದಸರಾಕ್ಕೆ ವರ್ಣರಂಜಿತ ಆಕರ್ಷಣೆ ನೀಡಿದ ದಶಮಂಟಪ ಸಮಿತಿಗಳು ಇಂದು ಸಂಕಷ್ಟಕ್ಕೆ ಸಿಲುಕಿವೆ. ದೊಡ್ಡ ಮೊತ್ತದ ಅನುದಾನ ಮಂಜೂರು ಮಾಡಿಸಿರುವುದಾಗಿ ಹೆಮ್ಮೆ ವ್ಯಕ್ತಪಡಿಸಿದ್ದ ಶಾಸಕರು ಇಂದು ಸಮಿತಿಗಳ ನೆರವಿಗೆ…
ಸುಂಟಿಕೊಪ್ಪ ಡಿ.6 NEWS DESK : ಮಕ್ಕಳ ಪ್ರತಿಭೆಗಳನ್ನು ಹೊರ ತರುವಲ್ಲಿ ಶಾಲಾ ವಾರ್ಷಿಕೋತ್ಸವ ಸೂಕ್ತ ವೇದಿಕೆಯಾಗಿದೆ ಎಂದು ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಮಾರ್ ಲಾರೆನ್ಸ್ ಮುಕ್ಕಾಜಿ ಹೇಳಿದರು. 7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಆರ್ಶಿವಚನ ನೀಡಿದರು. ಮಕ್ಕಳು ಇಡೀ ವರ್ಷ 4 ಗೋಡೆಗಳ ನಡುವೆ ಕಲಿಯುತ್ತಾರೆ. ಪೊಷಕರು ಮತ್ತು ಶಿಕ್ಷಕರ ನಡುವೆ ಅಂತರವಿರುತ್ತದೆ. ಆದರೆ ವಾರ್ಷಿಕೋತ್ಸವ ಸಂದರ್ಭ ಶಿಕ್ಷಕರು, ಪೋಷಕರು, ಮಕ್ಕಳು ಒಟ್ಟಾಗಿ ಬೆರೆಯುವುದರಿಂದ ಪರಸ್ಪರ ಸ್ನೇಹ ವಿಶ್ವಾಸ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ಕುಮಾರ್ ಮಾತನಾಡಿ, ಶಾಲೆಯು ಶಿಸ್ತು ಮತ್ತು ಪ್ರೇಮಮಯ ವಾತವಾರಣದಲ್ಲಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಅತ್ಯಂತ ಸಂತಸದಿಂದ ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ತರುವಲ್ಲಿ ಶಾಲಾ ವಾರ್ಷಿಕೋತ್ಸವ ಒಂದು ಪ್ರೇರಣೆ ಮತ್ತು ವೇದಿಕೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾದ್ಯಾಯನಿ ಟೆಸಿಮ್ಯಾನುವೇಲ್ ವಹಿಸಿದ್ದರು.ವೇದಿಕೆಯಲ್ಲಿ…
ಮಡಿಕೇರಿ ಡಿ.6 NEWS DESK : ಪಾಲಿಬೆಟ್ಟ-ಗೋಣಿಕೊಪ್ಪ ಮಾರ್ಗವಾಗಿ ನಡೆಯುತ್ತಿರುವ ರಸ್ತೆ ಕಾಮಗಾರಿಯ ಗುಣಮಟ್ಟವನ್ನುಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ನಂತರ ಗುತ್ತಿಗೆಗಾರರೊಂದಿಗೆ ಚರ್ಚಿಸಿ, ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.
ಮಡಿಕೇರಿ ಡಿ.6 NEWS DESK : ಸಾಮಾಜಿಕ ಜಾಲತಾಣದಲ್ಲಿ ವೀರ ಸೇನಾನಿಗಳಿಗೆ ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕದಿಂದ ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಿತು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕದ ಅಧ್ಯಕ್ಷ ಕೊಟ್ಟುಕತ್ತಿರ ಪಿ.ಸೋಮಣ್ಣ ನೇತೃತ್ವದಲ್ಲಿ ಮಾಜಿ ಸೈನಿಕರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿ, ನಂತರ ಮೆರವಣಿಗೆ ಮೂಲಕ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದರು. ಫೀ.ಮಾ.ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಇಬ್ಬರು ಮಹಾನ್ ಸೇನಾಧಿಕಾರಿಗಳನ್ನು ಅಪಮಾನಿಸಿದವರ ಬಗ್ಗೆ ಸವಿಸ್ತಾರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಸಂಘದ ಕಾರ್ಯದರ್ಶಿ ಸಿ.ಜಿ.ತಿಮ್ಮಯ್ಯ, ಸಹ ಕಾರ್ಯದರ್ಶಿ ಎಂ.ಕೆ.ನಾಚಪ್ಪ, ಸಂಚಾಲಕ ನಾಟೋಳಂಡ ಸೋಮಯ್ಯ ಹಾಗೂ ಸಹ…






