ಮಡಿಕೇರಿ ನ.9 NEWS DESK : ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾ ಸಮಿತಿ ವತಿಯಿಂದ ಡಿ.19 ರಿಂದ 25ರವರೆಗೆ ಶಾಲಾ ಮೈದಾನದಲ್ಲಿ ಮೂರು ನಾಡಿಗೆ ಸೀಮಿತವಾಗಿ ಐನ್ ಮನೆ ಇರುವ ಕೊಡವ ಕುಟುಂಬಗಳ ನಡುವೆ ಹಾಕಿ ಮತ್ತು ಹಗ್ಗಜಗ್ಗಾಟ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಮುಲ್ಲೇಂಗಡ ಸುರೇಶ್ ತಿಮ್ಮಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಬೊಟ್ಟತ್ನಾಡ್, ಕುತ್ತ್ನಾಡ್ ಮತ್ತು ಬೇರಳಿನಾಡ್ಗೆ ಸಂಬಂಧಿಸಿದ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯ್ತಿ ಹಾಗೂ ಬಿಟ್ಟಂಗಾಲ ಹಾತೂರು ಮತ್ತು ಪೊನ್ನಂಪೇಟೆ ಗ್ರಾಮ ಪಂಚಾಯ್ತಿಯ ಭಾಗಶಃ ಭಾಗಗಳಲ್ಲಿನ ಕೊಡವ ಐನ್ ಮನೆಗಳನ್ನು ಹೊಂದಿದ ಕೊಡವ ಕುಟುಂಬಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಬಹುದು ಎಂದರು. ಕಳೆದ ಸಾಲಿನ ಹಾಕಿ ಪಂದ್ಯಾವಳಿಯಲ್ಲಿ 21 ತಂಡಗಳು ಪಾಲ್ಗೊಂಡಿದ್ದು, ಈ ಬಾರಿ 30 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪ್ರತಿ ತಂಡದಲ್ಲಿ ಕೊಡವೇತರ ಯಾವುದೇ ಸಮುದಾಯಕ್ಕೆ ಸೇರಿದ ಐವರು ಅತಿಥಿ ಆಟಗಾರರನ್ನು ಆಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಕಳೆದ ಸಾಲಿನ ಪಂದ್ಯಾವಳಿಯಲ್ಲಿ ರಾಜ್ಯ…
ಲೇಖಕ: admin
ವಿರಾಜಪೇಟೆ ನ.9 NEWS DESK : ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷಗಳು ಸಂದಿರುವ ಹಿನ್ನಲೆಯಲ್ಲಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು. ಸುವರ್ಣ ಕರ್ನಾಟಕ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಒಂದು ವರ್ಷಗಳ ಕಾಲ ಆಚರಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶದ ಹಿನ್ನಲೆಯಲ್ಲಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರ ಅನುಪಸ್ಥಿತಿಯಲ್ಲಿ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ ನಗರದ ಚಿಕ್ಕಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು. ನಂತರ ಮಾತನಾಡಿ ಅವರು, ಕನ್ನಡ ನಾಡು, ನುಡಿ, ಜಲ ಸಂರಕ್ಷರಣೆ ನಮ್ಮೆಲ್ಲರ ಕರ್ತವ್ಯವಾಗಬೇಕು. ರಾಜರ ಆಳ್ವಿಕೆಯಿಂದ ಕೊನೆಯಾಗಿ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಸಂದಿವೆ. ಕರ್ನಾಟಕ ರಾಜ್ಯವು ಮೆನೆಯಂತಾದರೆ ಕನ್ನಡ ಭಾಷೆ ಮನಸ್ಸಿನಂತಾಗಬೇಕು. ಮಾತೃ ಭಾಷೆಗೆ ಮಹತ್ವ ನೀಡಿ ಪರಭಾಷೆಯನ್ನು ಗೌರವಿಸುವಂತಹ ಗುಣ ನಮ್ಮದಾಗಬೇಕು ಎಂದು ವಿದ್ಯಾರ್ಥಿಗಳಿಗೆ…
ಮಡಿಕೇರಿ ನ.9 NEWS DESK : ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ವರ್ತಕರು ಹಾಗೂ ವಾಣಿಜ್ಯೋದ್ಯಮಿಗಳು ತಮ್ಮ ತಮ್ಮ ಅಂಗಡಿ, ವಾಣಿಜ್ಯ ಕಟ್ಟಡಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಸುವಂತೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಹಿಂದೆಯೇ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಸುವಂತೆ ಜಿಲ್ಲಾಡಳಿತ ಆದೇಶಿಸಿತ್ತು. ವಾಣಿಜ್ಯೋದ್ಯಮಿಗಳು ಹಾಗೂ ವರ್ತಕರ ಹಿತದೃಷ್ಟಿಯಿಂದ 2024 ಮೇ 22ರಂದು ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮನವಿ ಸಲ್ಲಿಸಿ ಮೂರು ತಿಂಗಳ ಕಾಲಾವಕಾಶ ಕೋರಿತ್ತು. ಈಗಾಗಲೇ ಈ ಕಾಲಾವಕಾಶ ಮುಗಿದಿದ್ದು, ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಸುವ ಮೂಲಕ ಎಲ್ಲರೂ ಸರ್ಕಾರದ ಆದೇಶವನ್ನು ಪಾಲಿಸಬೇಕು. ಇತರ ಭಾಷೆಯ ಮೇಲ್ಭಾಗದಲ್ಲಿ ಕನ್ನಡವನ್ನು ದೊಡ್ಡಾಕ್ಷರಗಳಲ್ಲಿ ಬರೆಯಬೇಕು ಎಂದು ಕೋರಿದ್ದಾರೆ. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಇಂಗ್ಲೀಷ್ ಭಾಷೆಯಲ್ಲಿರುವ ನಾಮಫಲಕಗಳನ್ನು ನಗರಸಭೆ ತೆರವುಗೊಳಿಸುತ್ತಿದೆ. ಆದ್ದರಿಂದ ಎಲ್ಲಾ ವರ್ತಕರು…
ಮಡಿಕೇರಿ ನ.9 NEWS DESK : ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ 2024-25ನೇ ಸಾಲಿನ ವಾರ್ಡ್ ಸಭೆ ನ.11 ರಿಂದ ನಡೆಯಲಿದೆ. ಕರಡಿಗೋಡು ಒಂದನೇ ವಾರ್ಡ್ ಸಭೆ ನ.11 ರಂದು ಬೆಳಿಗ್ಗೆ 10.30ಕ್ಕೆ ಅವರೆಗುಂದ ಸಮುದಾಯ ಭವನದಲ್ಲಿ ನಡೆಯಲಿದ್ದು, ಅದೇ ದಿವಸ ಗುಹ್ಯ 1 ಮತ್ತು 2ನೇ ವಾರ್ಡ್ ಸಭೆಯು ಬಿ.ಜಿ.ಎಸ್.ಶಾಲಾ ಆವರಣದಲ್ಲಿ ಸಂಜೆ 4 ಮತ್ತು 5 ಗಂಟೆಗೆ ನಡೆಯಲಿದೆ. ಸಿದ್ದಾಪುರ 1ನೇ ವಾರ್ಡ್ ಕರಡಿಗೋಡು, 2 ಮತ್ತು 3ನೇ ವಾರ್ಡ್ ಸಭೆಯು ನ.13 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. 11, 12ರ ಸಭೆ ಮಧ್ಯಾಹ್ನ 2.30ಕ್ಕೆ ನಿಗದಿ ಪಡಿಸಲಾಗಿದೆ. ಅದೇ ದಿನ ಸಂಜೆ 4 ಗಂಟೆಗೆ ಕರಡಿಗೋಡು ಶಾಲೆ ಆವರಣದಲ್ಲಿ 4ನೇ ವಾರ್ಡ್ ಸಭೆ ನಡೆಯಲಿದೆ. ಗ್ರಾಮಸ್ಥರು ಪಾಲ್ಗೊಂಡು ತಮ್ಮ ವಾರ್ಡ್ಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಪಿಡಿಒ ಶಫೀಕ್ ಮಾಹಿತಿ ನೀಡಿದ್ದಾರೆ.
ಮಡಿಕೇರಿ ನ.9 NEWS DESK : ಮಕ್ಕಳ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಮಹದೇವಪೇಟೆಯ ಎಸ್ಎಸ್ ಆಸ್ಪತ್ರೆ ವತಿಯಿಂದ ನ.17 ರಂದು ಎಲ್ಕೆಜಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸ್ಪತ್ರೆಯ ಸಮೀಪದಲ್ಲಿರುವ ಕ್ರೆಸೆಂಟ್ ಸ್ಕೂಲ್ ಆವರಣದಲ್ಲಿ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಸ್ಪರ್ಧೆ ನಡೆಯಲಿದ್ದು, 8.30 ಗಂಟೆಯೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಶಿಲ್ಪ ಸತೀಶ್ ಮನವಿ ಮಾಡಿದ್ದಾರೆ. ಸ್ಪರ್ಧೆ ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಮೂರೂ ವಿಭಾಗಗಳಲ್ಲಿಯೂ ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಆಕರ್ಷಕ ನಗದು ಬಹುಮಾನ, ಪದಕ, ಪ್ರಶಸ್ತಿ ಪತ್ರ ಮತ್ತು ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು. ಮೊದಲನೇ ವಿಭಾಗದ (ಎಲ್ಕೆಜಿಯಿಂದ 1ನೇ ತರಗತಿ)ವಿದ್ಯಾರ್ಥಿಗಳು “ವರ್ಣರಂಜಿತ ಉದ್ಯಾನವನ”, ಎರಡನೇ ವಿಭಾಗದ (2 ರಿಂದ 6ನೇ ತರಗತಿ) ವಿದ್ಯಾರ್ಥಿಗಳು “ಗ್ರಾಮ ಜೀವನ, ಹಳ್ಳಿಯ ಸೊಬಗು” ಹಾಗೂ ಮೂರನೇ ವಿಭಾಗದ (7 ರಿಂದ 10ನೇ ತರಗತಿ) ವಿದ್ಯಾರ್ಥಿಗಳು ಭಾರತೀಯ…
ಕುಶಾಲನಗರ ನ.9 NEWS DESK : ಕುಶಾಲನಗರ ಮಹಾತ್ಮಾ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆದ ಕ್ಯಾಂಪಸ್ ಚಾಲೆಂಜ್ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು. ಮೂರು ದಿನಗಳ ಕಾಲ ಕಾಲೇಜು ಆವರಣದ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪದವಿ ಕಾಲೇಜಿನ ವಿವಿಧ ವಿಭಾಗಗಳ ತಂಡಗಳು ಪಾಲ್ಗೊಂಡಿದ್ದವು. ವಾಲಿಬಾಲ್, ತ್ರೋಬಾಲ್, ಫುಟ್ಬಾಲ್ ಹ್ಯಾಂಡ್ ಬಾಲ್, ಹಗ್ಗ ಜಗ್ಗಾಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ಜರಗಿದವು. ವಿವಿಧ ಆಟೋ ಸ್ಪರ್ಧೆಗಳಲ್ಲಿ ಚಾಂಪಿಯನ್ ಟ್ರೋಫಿಯನ್ನು ಅಂತಿಮ ಬಿಕಾಂ ವಿದ್ಯಾರ್ಥಿಗಳ ತಂಡ ಗಳಿಸಿದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಪತ್ರಕರ್ತೆ ವನಿತಾ ಚಂದ್ರಮೋಹನ್, ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಗಳಿಕೆ ಸಾಧ್ಯ. ಹೆಣ್ಣು ಮಕ್ಕಳು ತಮ್ಮ ದೇಹದ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಆಹಾರ ಪದ್ಧತಿ ಬದಲಾವಣೆಯಿಂದ ರೋಗ ರುಜಿನಗಳ ಬಾಧೆಗೆ ಒಳಗಾಗಬೇಕಾಗುತ್ತದೆ ಎಂದು ಕಿವಿ ಮಾತು ಹೇಳಿದರು. ಶೈಕ್ಷಣಿಕ ಜೀವನದಲ್ಲಿ…
ಪುತ್ತೂರು ನ.9 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಆಶ್ರಯದಲ್ಲಿ ವಿವೇಕಾನಂದ ಪದವಿ ಕಾಲೇಜಿನ ಸಹಯೋಗದೊಂದಿಗೆ ಎಂಬಿಎ ಕಲಿಕೆಯ ಮೂಲಕ ತಮ್ಮ ವೃತ್ತಿಪರ ಬದುಕನ್ನು ಎತ್ತರಿಸಿಕೊಳ್ಳುವುದು ಹೇಗೆ ಎನ್ನುವ ವಿಷಯದ ಬಗ್ಗೆ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಮಾರ್ಗದರ್ಶನ ಶಿಬಿರ ನಡೆಯಿತು. ಒಟ್ಟು ನಾಲ್ಕು ಅವಧಿಯಲ್ಲಿ ನಡೆದ ಕಾರ್ಯಾಗಾರದಲ್ಲಿ ಎಂಬಿಎ ಕಲಿಕೆಯಿಂದ ಆಗುವ ಪ್ರಯೋಜನಗಳು, ಸಿಗಬಹುದಾದ ವಿವಿಧ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಲಾಯಿತು. ಮೊದಲ ಅವಧಿಯಲ್ಲಿ ಎಂಬಿಎ ಯಾಕೆ? ಎನ್ನುವ ಬಗ್ಗೆ ಕಾಲೇಜಿನ ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ತಿಳಿಸಿದರು. ಎರಡನೇ ಅವಧಿಯಲ್ಲಿ ಪ್ರೊ.ಆಶ್ಲೆ ಡಿಸೋಜ ಅವರು ಎಂಬಿಎ ವಿಶೇಷತೆಗಳು ಎನ್ನುವ ವಿಷಯದಲ್ಲಿ ಅದರ ವಿವಿಧ ಮಜಲುಗಳ ಬಗ್ಗೆ ಅವಲೋಕನ ಮಾಡಿದರು. ಮೂರನೇ ಅವಧಿಯಲ್ಲಿ ಎಂಬಿಎ ನಂತರದ ಉದ್ಯೋಗಾವಕಾಶಗಳು ಎನ್ನುವ ಬಗ್ಗೆ ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ತಿಳಿಸಿದರು. ಕೊನೆಯ ಅವಧಿಯಲ್ಲಿ…
ಮಡಿಕೇರಿ ನ.9 NEWS DESK : ಶಾಸಕ ಡಾ.ಮಂತರ್ ಗೌಡ ಅವರ 40ನೇ ಜನ್ಮ ದಿನಾಚರಣೆ ಪ್ರಯುಕ್ತ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಬಾಲಕರ ಬಾಲಮಂದಿರದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ಗಳನ್ನು ವಿತರಿಸಿ, ರಾತ್ರಿಯ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿಗಳು ಶಾಸಕರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಕಾಂಗ್ರೆಸ್ ಪ್ರಮುಖರಾದ ವಿ.ಜಿ.ಮೋಹನ್ ಗೌಡ, ಹಂಚೆಟ್ಟೀರ ಮನು ಮುದ್ದಪ್ಪ, ಕಾನೆಹಿತ್ಲು ಮೊಣ್ಣಪ್ಪ, ಉದಯ ಕುಮಾರ್, ಹರಿಪ್ರಸಾದ್ ಕೋಚನ, ಮಿನಾಜ್ ಪ್ರವೀಣ್, ಕವನ್ ಕೊತ್ತೋಳಿ, ಅರ್ಜುನ್, ಸುಬ್ರಮಣಿ, ಕೌಸರ್, ರಾಜು, ಉಳುವಾರನ ಪವಿತ್ರ, ಆದಿಲ್, ರಂಜಿತ್ ಸುಬ್ಬಯ್ಯ, ಬಾಲಕರ ಬಾಲಮಂದಿರದ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು.
ಮೂರ್ನಾಡು ನ.9 NEWS DESK : ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ರಚನೆ ಮಾಡಲಾಯಿತು. ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ತಾಯಿಬ್ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು. ಸಂಘದ ಉಪಾಧ್ಯಕ್ಷರಾಗಿ ವಂಶಿ, ಕಾರ್ಯದರ್ಶಿಯಾಗಿ ಬಿ.ಪಿ.ವಿಘ್ನೇಶ್, ಸಹ ಕಾರ್ಯದರ್ಶಿ ಸೂರಜ್, ಖಜಾಂಚಿಯಾಗಿ ಜಮುನ, ಈವೆಂಟ್ಸ್ ಯೋಜಕರಾಗಿ ಉತ್ತಪ್ಪ ಮತ್ತು ದಿವಿನ್ ಅವರನ್ನು ಆಯ್ಕೆಮಾಡಲಾಯಿತು. ಇದಲ್ಲದೆ ಸಂಘದ ನಿರ್ದೇಶಕರಾಗಿ ಪಿ.ಸಿ.ಅಯ್ಯಪ್ಪ, ಜರಾ, ಕಾವೇರಪ್ಪ, ಆರ್ಶನ್, ನಾಚಪ್ಪ, ಬೋಜಮ್ಮ, ಪೊನ್ನಪ್ಪ, ಕಾವೇರಮ್ಮ, ಬಿದ್ದಪ್ಪ, ವರ್ಷಿಣಿ ಮತ್ತು ಮಹೇಶ್ವರಿ ಆಯ್ಕೆಯಾದರು. ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರರ ವಿಚೀಯಣ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಜೆ.ಎ. ಕುಂಞಅಬ್ದುಲ್ಲಾ ಹಳೆ ವಿದ್ಯಾರ್ಥಿಗಳ ಸಂಘವು ಸಂಪೂರ್ಣವಾಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವ್ಯವಸ್ಥೆಯಡಿಯಲ್ಲಿದ್ದು, ಹಳೆಯ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ಒಡನಾಟದಲ್ಲಿರಲು ಸಂಘವನ್ನು ಸ್ಥಾಪನೆ ಮಾಡಲಾಗಿದೆ. ವಿದ್ಯಾಸಂಸ್ಥೆಯಲ್ಲಿ ಸಂಘದ ವತಿಯಿಂದ ಆಯೋಜಿಸಲಾಗುವ ಎಲಾ ಕಾರ್ಯಕ್ರಮಗಳಿಗೂ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದ ಅವರು ಸಂಘದ…
ಮಡಿಕೇರಿ ನ.9 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಹಮ್ಮಿಯಾಲ-ಮುಟ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಮಾತನಾಡಿ, ಇಲಾಖೆಯ ಯೋಜನೆಗಳಾದ ಮಾತೃವಂದನಾ, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಮಡಿಲು ಯೋಜನೆ, ಕಾನೂನು ರೀತಿಯಲ್ಲಿ ದತ್ತು ಪಡೆಯುವ ಬಗ್ಗೆ, ಕ್ಯಾನ್ಸರ್ ಕುರಿತು ಅರಿವು ಮೂಡಿಸಿದರು. ನಂತರ ಅಂಗನವಾಡಿ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು, ಛದ್ಮವೇಷ ಕಾರ್ಯಕ್ರಮ ನೆರವೇರಿತು. ಭಾಗವಹಿಸಿದ ಎಲ್ಲ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ತಾರಾಮಣಿ, ಮೀರಾ, ಸಹಾಯಕಿ ಮಲ್ಲಿಗೆ, ಸವಿತ ಹಾಜರಿದ್ದರು.






