ಕುಶಾಲನಗರ ಅ.18 NEWS DESK : ಆದಿಕವಿ ಮಹರ್ಷಿ ವಾಲ್ಮೀಕಿಯವರು ಮಾನವೀಯತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮೊದಲಾದ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಚಿಕ್ಕ ಅಳುವಾರ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ನಡೆದ ವಾಲ್ಮೀಕಿ ಜಯಂತಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯದಲ್ಲಿ ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಇಂದಿನ ಯುವ ಸಮುದಾಯಕ್ಕೆ ತಿಳಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷವು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಗುರು ಹಿರಿಯರನ್ನು ಗೌರವಿಸುವ ಜೀವನದ ಮೌಲ್ಯಗಳು, ಮಾತೃತ್ವ, ತ್ಯಾಗ ಮನೋಭಾವ, ದೇಶಕ್ಕಾಗಿ ಸೇವೆ, ಪ್ರಕೃತಿ ಸೇವೆ ಮೊದಲಾದ ಸಾಮಾಜಿಕ ವಿಚಾರಗಳನ್ನು ಸಾರಿದ್ದಾರೆ. ಈ ನಿಟ್ಟಿನಲ್ಲಿ ಕೇವಲ ಆಚರಣೆಗೆ ಸೀಮಿತವಾಗಿರದೆ ಮಹರ್ಷಿ ವಾಲ್ಮೀಕಿಯವರ ಸಾಮಾಜಿಕ…
ಲೇಖಕ: admin
ವಿರಾಜಪೇಟೆ ಅ.17 NEWS DESK : ಹೃದಯಾಘಾತದ ಚಿಕಿತ್ಸಾ ವಿಧಾನಗಳಲ್ಲಿ ಒಂದಾದ ಸಿಪಿಆರ್ ಚಿಕಿತ್ಸಾ ವಿಧಾನದ ಅರಿವು ಪ್ರತಿಯೊಬ್ಬರಲ್ಲಿ ಇರಬೇಕು ಎಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಸಲಹೆ ನೀಡಿದರು. ಜೆಎಸ್ಎಸ್ ಆಸ್ಪತ್ರೆ ತುರ್ತು ವಿಭಾಗ ಮತ್ತು ಐಸಿಎಟಿಟಿ ಫೌಂಡೇಶನ್, ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಯುವ ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಹೃದಯ ಶ್ವಾಶಕೋಷದ ಪುನರುಜೀವನ ಚಿಕಿತ್ಸೆ (ಸಿಪಿಆರ್) ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತದ ಜೀವನ ಶೈಲಿಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅದರ ಚಿಕಿತ್ಸ ವಿಧಾನದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕ. ಸಿಪಿಆರ್ ಸಹಾಯದಿಂದ ಹೃದಯಾಘಾತ ತಡೆಗಟ್ಟಲು ಸಾಧ್ಯ. ಉತ್ತಮ ದೈಹಿಕ ವ್ಯಾಯಾಮ ಪ್ರತಿಯೊಬ್ಬರಿಗೂ ಅತ್ಯಗತ್ಯವಾಗಿದೆ ಎಂದರು. ಮೈಸೂರು ಜೆಎಸ್ಎಸ್ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾದ್ಯಾಪಕರು ಹಾಗೂ ವೈದ್ಯರಾದ ಡಾ.ಆದರ್ಶ್ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ನಿಯಮಿತ ಆಹಾರ, ವ್ಯಾಯಾಮ, ಯೋಗ,…
ಮಡಿಕೇರಿ ಅ.17 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆ ನಡೆಸಿದರು. ಸತತ ಮೂರನೇ ವರ್ಷ ಸಾಂಪ್ರದಾಯಿಕ ಉಡುಪಿನಲ್ಲಿ 8ಕಿ.ಮೀ ಪಾದಯಾತ್ರೆಯ ಮೂಲಕ ತಲಕಾವೇರಿಗೆ ಪತ್ನಿ ಕಾಂಚನ್ ಪೊನ್ನಣ್ಣ ಸೇರಿದಂತೆ ಸಾವಿರಾರು ಭಕ್ತರೊಂದಿಗೆ ಆಗಮಿಸಿ ತಾಯಿ ಕಾವೇರಿ ಮಾತೆಗೆ ನಮಿಸಿದ್ದು ವಿಶೇಷವಾಗಿತ್ತು. ಪಾದಯಾತ್ರೆಯಲ್ಲಿ ತಳಿಯತಕ್ಕಿ ಬೊಳಕ್, ದುಡಿಕೊಟ್ಟ್ ಪಾಟ್ ನೊಂದಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು, ಪುರುಷರು, ಯುವಕರು, ಮಕ್ಕಳು ಪಾಲ್ಗೊಂಡಿದ್ದರು.
ಮಡಿಕೇರಿ ಅ.17 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಸಂಪ್ರದಾಯದಂತೆ ತಾಯಿ ಕಾವೇರಿ ಮಾತೆಗೆ ಪೂಜಾ ವಿಧಿವಿಧಾನಗಳು ನಡೆದವು. ಪವಿತ್ರ ತೀರ್ಥೋದ್ಭವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಸಾಂಪ್ರದಾಯಿಕ ಉಡುಪಿನೊಂದಿಗೆ ಆರತಿ ತಟ್ಟೆಯೊಂದಿಗೆ ತಾಯಿ ಕಾವೇರಿ ಮಾತೆಯನ್ನು ಭಕ್ತರು ನಮಿಸಿದರು. ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ,…
ಮಡಿಕೇರಿ ಅ.17 NEWS DESK : ರಾಷ್ಟ್ರದ ಆದಿಕವಿ, ರಾಮಾಯಣ ಮಹಾಕಾವ್ಯ ಬರೆದ ಶ್ರೇಷ್ಠ ಕವಿ ವಾಲ್ಮೀಕಿ ಅವರು ಹುಟ್ಟಿದ ದಿನವನ್ನು ನಾಡಿನ ಎಲ್ಲೆಡೆ ಆಚರಿಸುತ್ತಿರುವುದು ಶ್ಲಾಘನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಮಹರ್ಷಿ ವಾಲ್ಮೀಕಿ ಅವರು 24 ಸಾವಿರ ಸಂಸ್ಕೃತ ಶ್ಲೋಕಗಳ ಒಂದು ಬೃಹತ್ ಗ್ರಂಥವನ್ನು ರಚಿಸಿರುವುದು ವಿಶೇಷವಾಗಿದೆ ಎಂದು ಎನ್.ಎಸ್.ಭೋಸರಾಜು ತಿಳಿಸಿದರು. ಮಹರ್ಷಿ ವಾಲ್ಮೀಕಿಯವರು ರಾಮಾಯಣವನ್ನು ವಿದ್ವತ್ ಪೂರ್ಣವಾಗಿ ಬರೆದಿದ್ದಾರೆ. ರಾಮಾಯಣ ಬರೆಯುವಲ್ಲಿ ಸಾಕಷ್ಟು ಪರಿಶ್ರಮ ವಹಿಸಿದ್ದಾರೆ ಎಂದು ಸಚಿವರು ನುಡಿದರು. ವಾಲ್ಮೀಕಿಯ ಮಾತೃ ವಾತ್ಸಲ್ಯದ ಕುರಿತು ರಾಮಾಯಣದಲ್ಲಿಯೇ ಸಾಕಷ್ಟು ಮಾಹಿತಿ ಸಿಗುತ್ತದೆ. ಪುರಾಣ ಮತ್ತು ಐತಿಹ್ಯಗಳ ವಿಭಿನ್ನ ನಿರೂಪಣೆಗಳ ನಡುವೆ ವಾಲ್ಮೀಕಿ ಹೇಗೆ ಪ್ರಸ್ತುತರಾಗುತ್ತಾರೆ ಎಂಬುದನ್ನು ನಾವೆಲ್ಲಾ ಅರಿತುಕೊಳ್ಳಬೇಕು. ವಾಲ್ಮೀಕಿಯವರ ಚಿಂತನೆಗಳು,…
ಮಡಿಕೇರಿ ಅ.17 NEWS DESK : ಕಾವೇರಿ ತೀರ್ಥೋದ್ಭವ ಹಿನ್ನೆಲೆ ವಿರಾಜಪೇಟೆಯಿಂದ ತಲಕಾವೇರಿವರೆಗೆ ಆರು ಯುವಕರು 4ನೇ ವರ್ಷದ ಪಾದಯಾತ್ರೆ ಪಾದಯಾತ್ರೆ ಮಾಡಿದರು. ವಿರಾಜಪೇಟೆಯ ಚೆಟ್ಟೊಳಿರ ಶರತ್ ಸೋಮಣ್ಣ, ಮುರುವಂಡ ಸಾವನ್ ಸೋಮಣ್ಣ, ಕಾಳಮಂಡ ರಾಬಿನ್ ಅಚ್ಚಮ್ಮ, ಮುಕ್ಕಾಟಿರ ಉತ್ತಪ್ಪ, ಮುರುವಂಡ ಸ್ಪೂರ್ತಿ ಸೀತಮ್ಮ, ಪೊರುಕೊಂಡ ಶಾನ್ ನಾಣಯ್ಯ ಕಾವೇರಿ ತೀರ್ಥೋದ್ಭವದ ಹಿನ್ನೆಲೆ ವಿರಾಜಪೇಟೆಯಿಂದ ಸುಮಾರು 58 ಕಿಮೀ ಪಾದಯಾತ್ರೆ ಕೈಗೊಂಡಿದ್ದರು. ಬುಧವಾರ ಮುಂಜಾನೆಯಿಂದಲೇ ವಿರಾಜಪೇಟೆಯಿಂದ ಪಾದಯಾತ್ರೆ ಕೈಗೊಂಡು ಕದನೂರು, ಕಡಂಗ, ನಾಪೋಕ್ಲು, ಬಲ್ಲಮಾವಟಿ, ಅಯ್ಯಂಗೇರಿ ಮೂಲಕ ಭಾಗಮಂಡಲಕ್ಕೆ ಸಂಜೆ 6.30 ಗಂಟೆಗೆ ತಲುಪಿದ್ದು, ಗುರುವಾರ ಭಾಗಮಂಡಲದಿಂದ ಹಲವು ಸಂಘಟನೆಯೊಂದಿಗೆ ಕಾವೇರಿ ಭಜನೆಯ ಮೂಲಕ ಪಾದಯಾತ್ರೆ ಮುಂದುವರಿಸಿ ತೀರ್ಥೋದ್ಭವ ಮುನ್ನ ತಲಕಾವೇರಿಗೆ ತಲುಪಿದರು. ಕಾವೇರಿಯ ಪವಿತ್ರ ತೀರ್ಥವನ್ನು ಪಡೆದು, ಹಲವೆಡೆ ವಿತರಿಸಿದರು.
ಕುಶಾಲನಗರ ಅ.17 NEWS DESK : ಸಮಾಜದ ಪರಿವರ್ತನೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖದ್ದಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನಡೆದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮರಣೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ರಾಜ್ಯ ಹಾಗೂ ದೇಶದ ಹಲವು ಕ್ಷೇತ್ರಗಳಲ್ಲಿ ಮಹಿಳಾ ಶಕ್ತಿ ಮಂಚೂಣಿಯಲ್ಲಿದೆ ಎಂದ ಅವರು, ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕಾಗಿದೆ ಎಂದರು. ಇದೇ ಸಂದರ್ಭ ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ ಯಶಸ್ವಿ ಆಗುತ್ತಿರುವ ಬಗ್ಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೋಮವಾರಪೇಟೆ ಪೊಲೀಸ್ ಉಪ ಅಧೀಕ್ಷಕರಾದ ಆರ್.ವಿ.ಗಂಗಾಧರಪ್ಪ ದುಶ್ಚಟಗಳ ಮೂಲಕ ಕುಟುಂಬ ಕಲಹ ಏರ್ಪಡುವುದರ ನಡುವೆ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ. ಯಾವುದೇ ಸಂದರ್ಭ ಕುಡಿತದ ದಾಸರಾಗಬಾರದು. ದುಶ್ಚಟಗಳಿಗೆ…
ಮಡಿಕೇರಿ ಅ.17 NEWS DESK : ಜಿಲ್ಲಾ ಹಾಪ್ಕಾಮ್ಸ್ 4ನೇ ವಾರ್ಷಿಕೋತ್ಸವ ಅಂಗವಾಗಿ ನಗರದಲ್ಲಿ ನೂತನವಾಗಿ ಆರಂಭಿಸಿರುವ ಸಾವಯವ ಉತ್ಪನ್ನಗಳ ಮಾರಾಟ ಕೇಂದ್ರವನ್ನು ಹಾಪ್ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಉದ್ಘಾಟಿಸಿದರು. ನಗರದ ಅಂಚೆಕಚೇರಿ ಎದುರಿನ ಹಾಪ್ಕಾಮ್ಸ್ ಕಟ್ಟಡದಲ್ಲಿ ಜಿಲ್ಲೆಯ ಸಾವಯವ ಬೆಳೆಗಾರರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಮಳಿಗೆ ಆರಂಭಿಸಲಾಗಿದ್ದು, ಕೈಗೆಟಕುವ ದರದಲ್ಲಿ ಉತ್ಪನ್ನ ದೊರೆಯುವುದರೊಂದಿಗೆ ಸ್ಥಳೀಯ ರೈತರಿಗೆ ಮಾರುಕಟ್ಟೆಯೂ ತೆರೆದುಕೊಂಡಂತಾಗಿದೆ. ಸಾವಯವ ಕೃಷಿಗೆ ಪ್ರತ್ಯೇಕ ಮಾರುಕಟ್ಟೆ ರೂಪಿಸಿರುವುದರಿಂದ ಸಾವಯವ ಬೆಳೆಗಳು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ರಮೇಶ್ ಚಂಗಪ್ಪ ಹೇಳಿದರು. ಹಾಪ್ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ, ಮಡಿಕೇರಿ ತಾಲ್ಲೂಕು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೊಟ್ಟೋಳಂಡ ಉತ್ತಪ್ಪ ಮಾತನಾಡಿ, ಕೊಡಗಿನಲ್ಲಿ ಬೆಳೆಯುವ ತರಕಾರಿ, ಹಣ್ಣು-ಹಂಪಲು ಸೇರಿದಂತೆ ಕೆಲವೊಂದು ಸಾವಯವ ಆಹಾರ ಉತ್ಪನ್ನಗಳನ್ನು ಪ್ರಥಮ ಹಂತದಲ್ಲಿ ಮಾರಾಟಕ್ಕೆ ನೀಡಲಾಗಿದೆ ಎಂದರು. ಸಾವಯವ ಕೃಷಿಕ ಪೊನ್ನಪ್ಪ ಮಾತನಾಡಿ, ಕಳೆದ 3 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆ ಬೆಳೆಯುತ್ತಿದ್ದ, ಇದಕ್ಕೆ ಪೂರಕವಾಗಿ ಹಾಪ್ಕಾಮ್ಸ್ ಮಾರುಕಟ್ಟೆ…
ಬೆಂಗಳೂರು ಅ.17 NEWS DESK : ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು. ವಾಲ್ಮೀಕಿ ಸಮಾಜದ ರಾಜನಹಳ್ಳಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು, ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬಸವನಗೌಡ ದದ್ದಲ್, ಶಾಸಕರಾದ ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ನಂತರ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಶುಭ ಹಾರೈಸಿದರು. ರಾಜನಹಳ್ಳಿ ವಾಲ್ಮೀಕಿ ಸಮುದಾಯ ಮಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್,…
ನಾಪೋಕ್ಲು ಅ.17 NEWS DESK : ಮೈಸೂರು ಕೊಡಗು ಗೌಡ ಸಮಾಜದಲ್ಲಿ ಕಾವೇರಿ ಸಂಕ್ರಮಣದ ಅಂಗವಾಗಿ ಅ.18 ರಂದು ವಿವಿಧ ಪೂಜಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ವಿಜಯನಗರ ಗೌಡ ಸಮಾಜದ ಸಾಂಸ್ಕೃತಿಕ ಸಭಾಭವನದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ನಂತರ ಕಾವೇರಿ ತೀರ್ಥ ವಿತರಣೆ ನಡೆಯಲಿದೆ. ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸುವಂತೆ ಸಮಾಜದ ಕಾರ್ಯದರ್ಶಿ ಪೊನ್ನೇಟಿ ನಂದರ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ.






