ಮಡಿಕೇರಿ ಡಿ.6 NEWS DESK : ಸಿದ್ದಾಪುರದಲ್ಲಿ ನಡೆದ ಕೊಡಗು ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ಇಸ್ಲಾಮಿಕ್ ಕಲೋತ್ಸವದ ತ್ವಲಬಾ ವಿಭಾಗದಲ್ಲಿ ನಾಲ್ಕು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಆಸಿಫ್ ಅಂಧತ್ವವನ್ನು ಮೆಟ್ಟಿ ನಿಂತು ಗೆಲುವು ಸಾಧಿಸಿದ್ದಾನೆ. ನಾಪೋಕ್ಲು ಮೂಲದ ದೃಷ್ಟಿ ಕಳೆದುಕೊಂಡಿರುವ ಆಸೀಫ್ ಉಸ್ಮಾನ್ ಮುಸ್ಲಿಯಾರ್ ನೇತೃತ್ವದ ಸುಂಟ್ಟಿಕೊಪ್ಪ ತಸ್ಕಿಯಾತು ತ್ವಲಬಾ ದರ್ಸ್ ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದು, ಉರ್ದು ಗೀತೆ, ಅಝಾನ್, ಕನ್ನಡ ಹಾಡು, ಮುಂತಾದ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗಗಳಲ್ಲಿ ಬಹುಮಾನ ಪಡೆದುಕೊಂಡಿದ್ದಾನೆ. ನಾಪೋಕ್ಲುವಿನ ಹಮ್ಜಾ-ಆಯಿಷಾ ದಂಪತಿಯ ಹಿರಿಯ ಪುತ್ರನಾಗಿರುವ ಆಸಿಫ್ ಕೊಡಗು ಜಿಲ್ಲಾ ಜಮ್ಯಿಯತುಲ್ ಮುಅಲ್ಲಿಮೀನ್ ನ ಸ್ಪರ್ಧಾ ಕಾರ್ಯಕ್ರಮದ ಎಲ್ಲಾ ವಿಭಾಗಗಳಲ್ಲಿ ಆಸಿಫ್ ಭಾಗವಹಿಸುತ್ತಾನೆ ಎಂದು ಶಿಕ್ಷಕರು ಹೇಳುತ್ತಾರೆ. ಎಸ್.ಕೆ.ಎಸ್.ಎಸ್.ಎಫ್ ಜಿಲ್ಲಾ ಮಟ್ಟದ ಇಸ್ಲಾಮಿಕ್ ಕಲೋತ್ಸವದ ಸಮಾರೋಪ ಸಮಾರಂಭದಲ್ಲಿ ಆಸಿಫ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಲೇಖಕ: admin
ಬೆಂಗಳೂರು ಡಿ.6 NEWS DESK : ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಡಿ.ಉಮಾಪತಿ ಅವರ ಪರಿಚಯ: : ಮಾರ್ಚ್ 18,1959 ರಲ್ಲಿ ಚಿತ್ರದುರ್ಗ…
ಗೋಣಿಕೊಪ್ಪ ಡಿ.5 NEWS DESK : ಗೋಣಿಕೊಪ್ಪ ಕ್ರಿಕೆಟ್ ಪ್ರೀಮಿಯರ್ ಲೀಗ್ (ಜಿ.ಪಿ.ಎಲ್) ಎಂಟನೇ ಆವೃತ್ತಿಗೆ ಸಂಭ್ರಮದ ಚಾಲನೆ ದೊರೆಯಿತು. ಗೋಣಿಕೊಪ್ಪ ಪ್ರಾಥಮಿಕ ಶಾಲಾ ದಸರಾ ಮೈದಾನದಲ್ಲಿ ನಾಲ್ಕು ದಿನ ನಡೆಯುವ ಐ.ಪಿ.ಎಲ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಉದ್ಯಮಿ ಮಾಚ್ಚಮಾಡ ಅನೀಶ್ ಮಾದಪ್ಪ, ಜಿಪಿಲ್ ಅಸೋಶಿಯೇಷನ್ ಅಧ್ಯಕ್ಷ ಸಿಂಗಿ ಸತೀಶ್ ಕ್ರಿಕೆಟ್ ಉತ್ಸವಕ್ಕೆ ಚಾಲನೆ ನೀಡಿದರು. ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ “ಚೆನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವನ್ ಪಂಜಾಬ್, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಕಿಂಗ್ಸ್ ಇಲೆವನ್ ಪಂಜಾಬ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್, ಲಕ್ನೋ ಹೆಸರಿನ ತಂಡಗಳು ಟ್ರೋಫಿಗಾಗಿ ಸೆಣಸಾಟ ನಡೆಸಲಿವೆ. ತಂಡಗಳ ಹೆಸರನ್ನು ಜಿ.ಪಿ.ಎಲ್ನಲ್ಲಿ ಪಾಲ್ಗೊಳ್ಳುವ ತಂಡಗಳಿಗೂ ಇಡಲಾಗಿದೆ. ಪಂದ್ಯಾವಳಿಯಲ್ಲಿ ಪ್ರಥಮ ವಿಜೇತ ತಂಡಕ್ಕೆ ರೂ.1,1,111 ನಗದು, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. 50,555 ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ತೃತೀಯ…
ಮಡಿಕೇರಿ ಡಿ.5 NEWS DESK : ಕರಿಕೆ ಗ್ರಾಮದ ಎಳ್ಳುಕೊಚ್ಚಿ ಸರಕಾರಿ ಹಿರಿಯ ಪ್ರಾಥಾಮಿಕ ಶಾಲೆಯ ತರಗತಿಯೊಂದರಲ್ಲಿ ನಾಗರಹಾವು ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಬೆಳಿಗ್ಗೆ ವಿದ್ಯಾರ್ಥಿಗಳು ತರಗತಿಗೆ ಆಗಮಿಸಿದಾಗ ಹಾವು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳನ್ನು ಕರೆ ತರುವ ಜೀಪು ಚಾಲಕ ಬಾಲಚಂದ್ರ ಪಾಪು ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗಳು ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟರು. ವರದಿ : ಶಿವಗಿರಿ ರಾಜೇಶ್, ಕರಿಕೆ
ಮಡಿಕೇರಿ ಡಿ.5 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಡಿ.6 ಮತ್ತು 7 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ನಡೆಯಲಿದೆ. ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಎರಡು ದಿನಗಳ ಕಾಲ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಡಿ.6 ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, ಕಳಸ ಪೂಜೆ, ಸಂಜೆ 6.30 ಗಂಟೆಗೆ ಮಹಾ ಸುದರ್ಶನ ಹೋಮ ನಡೆಯಲಿದೆ. ಡಿ.7 ರಂದು ಬೆಳಿಗ್ಗೆ 6.30 ಗಂಟೆಯಿಂದ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷವಾಗಿ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯ ದೇವರ ಕ್ಷೇತ್ರ ಪ್ರದಕ್ಷಿಣೆ, 12.30 ಗಂಟೆಗೆ…
ಮಡಿಕೇರಿ ಡಿ.5 NEWS DESK : ನೆರೆಯ ಬಾಂಗ್ಲಾ ದೇಶದಲ್ಲಿರುವ ಮತಾಂಧ ಸರ್ಕಾರ, ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಹಿಂದು ಹಿತರಕ್ಷಣಾ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಸಿತು. ನಗರದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಹಿಂದು ಕಾರ್ಯಕರ್ತರು ಬಾಂಗ್ಲಾದಲ್ಲಿನ ಹಿಂದು ಸಮುದಾಯದ ಮೇಲಿನ ದೌರ್ಜನ್ಯಗಳ ತಡೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ವಿಶ್ವ ಸಂಸ್ಥೆ ಸಮಸ್ಯೆಯನ್ನು ಬಗೆಹರಿಸಲು ಪ್ರಮುಖ ಪಾತ್ರ ವಹಿಸಬೇಕೆಂದು ಆಗ್ರಹಿಸಿದರು. ಗಾಂಧಿ ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದ ಬಜರಂಗದಳದ ದಕ್ಷಿಣ ಪ್ರಾಂತದ ಮಾಜಿ ಸಹ ಸಂಚಾಲಕ ಹಾಗೂ ಸಮಾಜ ಕಾರ್ಯಕರ್ತ ಮುರಳೀಕೃಷ್ಣ ಹಸಂತಡ್ಕ, ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ತಡೆಯಬೇಕು. ಸಮಾಜದ ಕಟ್ಟಕಡೆಯ ಹಿಂದುವಿಗೆ ಅನ್ಯಾಯವಾದರು ಇಡೀ ಹಿಂದು ಸಮಾಜ ದಿಟ್ಟ…
ಮಡಿಕೇರಿ ಡಿ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕರ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಬಾಲನ್ಯಾಯ ಕಾಯ್ದೆ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ದತ್ತು ಅಧಿನಿಯಮ ಕುರಿತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮವು ಡಿಸೆಂಬರ್ 7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಿ ಬ್ಲಾಕ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಪೊಲೀಸ್ ಉಪ ಅಧೀಕ್ಷಕರಾದ ರವಿ, ಜಿಲ್ಲಾ ಮಕ್ಕಳ…
ಮಡಿಕೇರಿ ಡಿ.5 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರ ಸರ್ವತೋಮುಖ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಗೊಲ್ಲ, ಜೋಗಿ ಹಾಗೂ ಹಾವಾಡಿಗರ ಜಾತಿಗಳು ಪ್ರಮುಖವಾಗಿದ್ದು, ಈ ಸಮಾಜಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡುವುದು. ಕಳೆದ ವರ್ಷ 30 ವಿದ್ಯಾರ್ಥಿಗಳಿಗೆ 2.13 ಲಕ್ಷ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಅರಿವು ಕಾರ್ಯಕ್ರಮದಡಿ 2021-22 ನೇ ಸಾಲಿನಲ್ಲಿ ಮಡಿಕೇರಿ ತಾಲ್ಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ.…
ADVT ::: ಆತ್ಮೀಯ ಗ್ರಾಹಕರೇ ::: ನಿಮ್ಮ ವಾಹನ ವಿಮೆಯನ್ನು ನವೀಕರಣಗೊಳಿಸಲು ನಾವು ನಿಮಗೆ ಸಹಾಯ ಮಾಡಲು ಬಯಸುತ್ತೇವೆ. ನಿಮ್ಮ ಎಲ್ಲಾ ವಾಹನಗಳ ನೋಂದಣಿ ಸಂಖ್ಯೆಗಳನ್ನು ನಮಗೆ ಈ ಮೂಲಕ ಕಳುಹಿಸಿ ಕೊಡಬೇಕಾಗಿ ವಿನಂತಿ. ನಾವು ಅವುಗಳ ರಿನೀವಲ್ ದಿನಾಂಕವನ್ನು ನಿಮಗೆ ಜ್ಞಾಪಿಸುತ್ತೇವೆ. ಎಲ್ಲಾ ಕಂಪೆನಿಗಳ ವಾಹನ ವಿಮೆಯನ್ನು ಗರಿಷ್ಠ ರಿಯಾಯಿತಿಯೊಂದಿಗೆ ಮತ್ತು ಕ್ಯಾಶ್ ಬ್ಯಾಕ್ ಜೊತೆಗೆ ರಿನಿವಲ್ ಮಾಡಿಕೊಡಲಾಗುವುದು. (ಸಂಪರ್ಕಿಸಿ : ಶ್ರೀ ಸಾಯಿ ಇನ್ಶುರೆನ್ಸ್ ಪಾಯಿಂಟ್, ಕೊಡವ ಸಮಾಜ ಕಾಂಪ್ಲೆಕ್ಸ್, ಮುಖ್ಯ ರಸ್ತೆ, ಮಡಿಕೇರಿ. 97429 16784, 97429 16784, 90367 80367)
ಮಡಿಕೇರಿ ಜೂ.13 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆಯ ಅಧಿಕಾರಿ ಅವರು ಡಿ.11 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.






