ಲೇಖಕ: admin

ನಾಪೋಕ್ಲು ನ.9 NEWS DESK : ಹೊದ್ದೂರು ಗ್ರಾಮದ ಪೆಗ್ಗೋಳಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿನ ಅಕ್ರಮ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಭೂಮಿ ಮತ್ತ ವಸತಿ ಹಕ್ಕು ವಂಚಿತರ ಕುಟುಂಬ ಹಾಗೂ ಹೋರಾಟ ಸಮಿತಿಯ ಪದಾಧಿಕಾರಿಗಳು ನಡೆಸುತ್ತಿರುವ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ. ಹೊದ್ದೂರು ಗ್ರಾಮದಲ್ಲಿ 800ಕ್ಕೂ ಅಧಿಕ ನಿರಾಶ್ರಿತ ಬಡ ಕುಟುಂಬಗಳಿಗೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಇನ್ನಿತರ ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಸರ್ಕಾರಿ ಕಂದಾಯ ಭೂಮಿಯನ್ನು ಭೂ ಮಾಲೀಕರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು ಇದುವರೆಗೂ ಬಡವರಿಗೆ ನಿವೇಶನ ಸರ್ಕಾರ ನೀಡಲು ಮುಂದಾಗಿರುವುದಿಲ್ಲ. ನಿವೇಶನ ಕಲ್ಪಿಸಿ ಕೊಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾ ಕಾರ್ಯದರ್ಶಿ, ಹೊದ್ದೂರು ಪಂಚಾಯಿತಿ ಸದಸ್ಯ ಕೆ.ಮೊಣ್ಣಪ್ಪ ಹೋರಾಟದ ಮುಂದಾಳತ್ವ ವಹಿಸಿ ಒತ್ತಾಯಿಸಿದರು. ಈ ಸಂದರ್ಭ ಹೊದ್ದುರು ಗ್ರಾ.ಪಂ ಮಾಜಿ ಅಧ್ಯಕ್ಷರಾದ ಕುಸುಮವತಿ, ಹೆಚ್.ಎಸ್.ಭೋಜ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಕಿರಣ್, ಜಗದೀಶ್, ಮಹಮ್ಮದ್,…

Read More

ಸೋಮವಾರಪೇಟೆ NEWS DESK : ಶಾಸಕ ಡಾ.ಮಂತರ್ ಗೌಡ ಅವರ ಜನ್ಮ ದಿನದ ಅಂಗವಾಗಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿವಿಧ ಸೇವಾ ಕಾರ್ಯಗಳನ್ನು ನಡೆಸಲಾಯಿತು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸರ್ಕಾರಿ ಆಸ್ಪತ್ರೆಯ ದಿನಗೂಲಿ ನೌಕರರು ಹಾಗೂ ಸಜ್ಜಳ್ಳಿ ಹಾಡಿ ನಿವಾಸಿಗಳಿಗೆ ಮೂಲಭೂತ ಅವಶ್ಯಕತೆಗಳ ವಸ್ತುಗಳನ್ನು ನೀಡಲಾಯಿತು. ಇದೇ ಸಂದರ್ಭ ಪಕ್ಷದ ಕಾರ್ಯಕರ್ತರು ದೃಷ್ಟಿ ದೋಷವುಳ್ಳ ವಿಶೇಷ ಚೇತನ ಅಂಕಿತ್ ಎಂಬ ಬಾಲಕನ ಚಿಕಿತ್ಸೆಗೆ ಧನ ಸಹಾಯ ನೀಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ಅಲ್ಪಸಂಖ್ಯಾತ ಘಟಕದ ಕೆ.ಎ.ಯಾಕುಬ್, ನಗರ ಅಧ್ಯಕ್ಷ ಮಂಜುನಾಥ್, ಮುಖಂಡರುಗಳಾದ ಹೆಚ್.ಸಿ.ನಾಗೇಶ್, ಜನಾರ್ಧನ್, ಶೀಲಾ ಡಿಸೋಜ, ಬಿ.ಸಿ.ವೆಂಕಟೇಶ್ ಮತ್ತಿತತರು ಇದ್ದರು.

Read More

ಮಡಿಕೇರಿ ನ.9 NEWS DESK : 25ನೇ ಕೊಡವ ಕೌಟುಂಬಿಕ ಹಾಕಿ ಉತ್ಸವದ ಉಸ್ತುವಾರಿ ವಹಿಸಿಕೊಂಡಿರುವ ಮುದ್ದಂಡ ಕಪ್ ಹಾಕಿ ಉತ್ಸವದ ವೆಬ್‍ಸೈಟ್ ಬಿಡುಗಡೆಗೊಳಿಸಲಾಯಿತು. ತಾಳತ್ತಮನೆಯ ಆಕ್ಸಿರಿಚ್ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ವೆಬ್‍ಸೈಟ್‍ಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಕೊಡಗು ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂ ಬೋಪಣ್ಣ, ಕಳೆದ ಬಾರಿ ಹಾಕಿ ಉತ್ಸವ ಆಯೋಜನೆ ಮಾಡಿ ಕುಂಡ್ಯೋಳಂಡ ತಂಡ 360 ತಂಡಗಳನ್ನು ಆಡಿಸುವ ಮೂಲಕ ಗಿನ್ನಿಸ್ ದಾಖಲೆ ಮಾಡಿದೆ. ಮುದ್ದಂಡ ದೊಡ್ಡ ಕುಟುಂಬವಾಗಿದೆ. ಇನ್ನೂ ಚೆನ್ನಾಗಿ ಆಯೋಜನೆ ಮಾಡಲಿದ್ದಾರೆ. ಹೆಚ್ಚಿನ ತಂಡಗಳನ್ನು ಸೇರಿಸಲಿದ್ದಾರೆ. ಮುಂದಕ್ಕೆ ಹಾಕಿ ಉತ್ಸವದ ಉಸ್ತುವಾರಿ ವಹಿಸಿಕೊಳ್ಳಲು 8 ಕುಟುಂಬಗಳು ಮುಂದೆ ಬಂದಿದೆ ಎಂದರು. ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಮಾತನಾಡಿ, 25ನೇ ವರ್ಷದ ಉತ್ಸವ ಯಶಸ್ವಿಯಾಗುವ ಭರವಸೆ ಇದೆ. ವಿಶ್ವವ್ಯಾಪಿ ಪ್ರಸಿದ್ಧಿ ಪಡೆದಿರುವ ಗಿನ್ನಿಸ್ ದಾಖಲೆ ನಿರ್ಮಿಸಿದ್ದರೂ ಅಂತರಾಷ್ಟ್ರೀಯ ಹಾಕಿ ತಂಡದಲ್ಲಿ ಕೊಡಗಿನ ಆಟಗಾರರಿಗೆ ಅವಕಾಶ ಸಿಗದೇ ಇರುವುದು ಬೇಸರ ತರಿಸಿದೆ…

Read More

ಮಡಿಕೇರಿ ನ.9 NEWS DESK : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಕೊಡಗು ಘಟಕ ವತಿಯಿಂದ ಕೊಡಗಿನ ಎಲ್ಲಾ ಮಾಜಿ ಸೈನಿಕರು ಮತ್ತು ಅರೆ ಸೇನಾಪಡೆಯ ಮಾಜಿ ಯೋಧರಿಗೆ, ವೀರ ನಾರಿಯರು ಹಾಗೂ ಅವರ ಕುಟುಂಬದವರಿಗೆ ಆಟೋಟ ಸ್ಪರ್ಧೆ ಮತ್ತು ವೈದ್ಯಕೀಯ ತಪಾಸಣೆಯು ನ.24 ರಂದು ಬೆಳಗ್ಗೆ 9 ಗಂಟೆಗೆ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಜಿಲ್ಲಾ ಎಲ್ಲಾ ಸಂಘಗಳ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಕುಟುಂಬದ ಅವಲಂಬಿತರು ಮತ್ತು ಅರೆ ಸೇನಾ ಪಡೆಯ ಯೋಧರೂ ಸಹ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

Read More

ಮಡಿಕೇರಿ ನ.9 NEWS DESK :  ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಟೈಲರಿಂಗ್, ಪ್ಲಂಬರ್ ಮತ್ತು ಸ್ಯಾನಿಟರಿ, ಟೈಲ್ಸ್ ಫಿಟ್ಟರ್ ಮತ್ತು ಗಾರೆ ಕಸುಬಿನ ಪವರ್ ಉಪಕರಣಗಳನ್ನು ಉಚಿತವಾಗಿ ಪಡೆಯಲು ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಂದ ಆನ್‍ಲೈನ್ (ವೆಬ್ ಸೈಟ್ https://kodagu.nic.in/en/application-for-free-toolkits-for-rural-artisans-during-the-year-2024-25) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ಪಾಸ್ ಪೋರ್ಟ್ ಗ್ರಾತದ ಭಾವಚಿತ್ರ. ಜಾತಿ ಪ್ರಮಾಣ ಪತ್ರ (ಎಸ್‍ಸಿ, ಎಸ್‍ಟಿ, ಮೈನಾರಿಟಿ), ಪಡಿತರ ಚೀಟಿ (ರೇಷನ್ ಕಾರ್ಡ್ ಪ್ರತಿ). ಮತದಾರರ ಗುರುತಿನ ಪ್ರತಿ. ವಿಕಲಚೇತನರಾಗಿದ್ದಲ್ಲಿ ದೃಢೀಕರಣ ಪತ್ರ ಸಲ್ಲಿಸುವುದು. ಆಯಾಯ ಗ್ರಾಮ ಪಂಚಾಯತಿಯ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವರಿಂದ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ. (ಟೈಲರಿಂಗ್, ಪ್ಲಂಬರ್–ಸ್ಯಾನಿಟರಿ, ಸಿರಾಮಿಕ್ ಟೈಲ್ಸ್ ಫಿಟ್ಟರ್ ಮತ್ತು ಗಾರೆ ಕಸುಬು -ನಿಗಧಿತ ನಮೂನೆಯಲ್ಲಿ) ವಿದ್ಯುತ್ ಚಾಲಿತ ಹೊಲಿಗೆಯಂತ್ರ(ಟೈಲರಿಂಗ್) ಪ್ಲಂಬರ್ ಮತ್ತು ಸ್ಯಾನಿಟರಿ, ಸಿರಾಮಿಕ್ ಟೈಲ್ಸ್ ಫಿಟ್ಟರ್ ಮತ್ತು ಗಾರೆಕಸುಬಿನ ಉಪಕರಣ…

Read More

ಮಡಿಕೇರಿ ನ.9 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 12 ಗ್ರಾಮ ಪಂಚಾಯತ್‍ಗಳಲ್ಲಿ “ಸಮಗ್ರ ನಾಗರಿಕ ಸೇವಾ ಕೇಂದ್ರ”/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ವಿರಾಜಪೇಟೆ ತಾಲ್ಲೂಕಿನ ಬೇಟೋಳಿ, ಹೊಸೂರು, ಶ್ರೀಮಂಗಲ, ಆರ್ಜಿ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯತ್‍ಗಳು. ಆಸಕ್ತ ಪ್ರಾಂಚೈಸಿಗಳು ಲಿಂಕ್: https://kal-mys.gramaone.karnataka.gov.in/ ಈ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 91487 12473 ಮೊಬೈಲ್ ಸಂಖ್ಯೆಯನ್ನು ಹಾಗೂ ಇ-ಮೇಲ್ ಐಡಿ: care@blsinternational.net   ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.

Read More

ಮಡಿಕೇರಿ ನ.9 NEWS DESK : ಕೊಡಗು ಜಿಲ್ಲೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಹದೇವಪೇಟೆ, ಮಡಿಕೇರಿ ಇಲ್ಲಿ ಆಯುಷ್ಮತಿ ಕ್ಲಿನಿಕ್ ಅನ್ನು ತೆರೆಯಲು ಸರ್ಕಾರದ ಮಾರ್ಗಸೂಚಿಯಂತೆ ಅನುಮೋದನೆ ದೊರೆತಿದ್ದು, ಅದರಂತೆ ಆಸಕ್ತಿ ಇರುವ ಖಾಸಗಿ ತಜ್ಞ ವೈದ್ಯರಿಂದ ಫಿಜಿಷಿಯನ್, ಮೂಳೆ ಮತ್ತು ಕೀಲು ತಜ್ಞರು, ಶಸ್ತ್ರ ಚಿಕಿತ್ಸಾ ತಜ್ಞರು, ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಇತರ ತಜ್ಞರು(ಕಿವಿ, ಮೂಗು, ಗಂಟಲು ತಜ್ಞರು, ನೇತ್ರ ತಜ್ಞರು, ಚರ್ಮರೋಗ ತಜ್ಞರು, ಮಾನಸಿಕ ರೋಗ ತಜ್ಞರು, ದಂತ ತಜ್ಞರು ಹಾಗೂ ಇತರೆ ಯಾವುದೇ) ತಜ್ಞತೆಯ ಸೇವೆಯನ್ನು ಎಕ್ಸ್‍ಪ್ರೆಸನ್ ಆಫ್ ಇಂಟ್ರೆಸ್ಟ್ ಮೂಲಕ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸೇವೆ ನೀಡಲು ಇಚ್ಚಿಸುವ ಒಬ್ಬ ತಜ್ಞ ವೈದ್ಯರು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ 3 ಗಂಟೆಯ ಅವಧಿಯ ಸೇವೆ ಕರ್ತವ್ಯ ನಿರ್ವಹಿಸಬೇಕು. ಸಂಬಂಧಪಟ್ಟ ಆಡಳಿತ ವೈದ್ಯಾಧಿಕಾರಿಗಳೊಂದಿಗೆ ಸೇವೆ ನೀಡುವ ಸಮಯವನ್ನು ನಿಗದಿಪಡಿಸಿಕೊಳ್ಳಬೇಕು. ಪ್ರತೀ ರೋಗಿಯ ತಪಾಸಣೆಗೆ ರೂ.150 ಗಳ ಗೌರವಧನವನ್ನು ಪಾವತಿಸಲಾಗುವುದು. ತಜ್ಞರು ಲಭ್ಯವಿರುವ ಸಮಯವನ್ನು…

Read More

ಮಡಿಕೇರಿ ನ.8 NEWS DESK : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಧ್ವಜ ದಿನಾಚರಣೆಯ ಜಾಥವನ್ನು ಪೊಲೀಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಹಸಿರು ನಿಶಾನೆ ಹಾರಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಧ್ವಜ ದಿನಾಚರಣೆಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿಯ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಿತು. ಜಾಥವು ಖಾಸಗಿ ಹಳೇ ಬಸ್ ನಿಲ್ದಾಣ ದವರೆಗೆ ಘೋಷಣೆಗಳೊಂದಿಗೆ ಸಾಗಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಯಿತು. ಜಾಥದಲ್ಲಿ 180 ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಸಂಸ್ಥೆಯ ಆಯುಕ್ತರು, ಪದಾಧಿಕಾರಿಗಳು ಭಾಗವಹಿಸಿದ್ದರು. ನಂತರ ಸಂಸ್ಥೆಯಲ್ಲಿ 75 ನೇ ವರ್ಷದ ಧ್ವಜ ದಿನಾಚರಣೆಯನ್ನು ಮಡಿಕೇರಿ ತಹಶೀಲ್ದಾರ್ ಪ್ರವೀಣ್ ಅವರು ಧ್ವಜ ಬಿಡುಗಡೆ ಮಾಡಿ ಮಾತನಾಡಿದರು. ವಿದ್ಯಾರ್ಥಿಗಳ ಗೀತಗಾಯನಕ್ಕೆ ಶುಭ ಕೋರಿದರು. ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆ ನಡೆಸಲಾಯಿತು. ಇದರಲ್ಲಿ ಜಿಲ್ಲೆಯ 6 ಸ್ಥಳೀಯ ಸಂಸ್ಥೆಯ ಕಬ್, ಬುಲ್ ಬುಲ್, ಸ್ಕೌಟ್ಸ್…

Read More

ಮಡಿಕೇರಿ ನ.8 NEWS DESK : ಪತ್ರಿಕಾ ಕ್ಷೇತ್ರದಲ್ಲಿನ ಸೇವೆ ಎನ್ನುವುದು ಸಾಮಾಜಿಕ ಜವಾಬ್ದಾರಿಯ ಕೆಲಸವೇ ಆಗಿದೆಯೆಂದು ಮೈಸೂರು ವಿಶ್ವ ವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರೊ.ಸಪ್ನಾ ಎಂ.ಎಸ್. ಅಭಿಪ್ರಾಯಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ‘ಕೊಡಗು ಪತ್ರಿಕಾ ಭವನದ 23ನೇ ವಾರ್ಷಿಕೋತ್ಸವ’ವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ, ಮುಖ್ಯ ಭಾಷಣ ಮಾಡಿದ ಅವರು, ವಕೀಲ, ವೈದ್ಯ ಸಮೂಹದ ಸೇವೆಯಂತೆಯೆ ಪತ್ರಿಕಾ ಕ್ಷೇತ್ರದಲ್ಲಿ ದುಡಿಯುವವರು ಸಾಮಾಜಿಕ ಬದ್ಧತೆ ಮತ್ತು ಜವಾಬ್ದಾರಿಗಳನ್ನು ಹೊಂದಿರುತ್ತಾರೆಂದು ದೃಢವಾಗಿ ನುಡಿದರು. ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಗಳೊಂದಿಗೆ ತಾಂತ್ರಿಕವಾಗಿಯೂ ಸಾಕಷ್ಟು ಬದಲಾವಣೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಈ ಬದಲಾವಣೆಗಳಿಗೆ ಪತ್ರಿಕಾ ಕ್ಷೇತ್ರದಲ್ಲಿರುವವರು ಹೊಂದಿಕೊಳ್ಳುವ ಪ್ರಯತ್ನಗಳಿಗೆ ಮುಂದಾಗುವುದು ಅತ್ಯವಶ್ಯವೆಂದು ತಿಳಿಸಿದ ಅವರು, ತಾಂತ್ರಿಕ ಬದಲಾವಣೆಯ ಸೂಕ್ಷ್ಮ ಹಂತದಲ್ಲಿರುವ ಪತ್ರಿಕಾ ಕ್ಷೇತ್ರವಿಂದು ಕವಲು ದಾರಿಯಲ್ಲಿದೆಯೆಂದು ಅಬಿಪ್ರಾಯಿಸಿದರು. ಪತ್ರಿಕಾ ಕ್ಷೇತ್ರದಲ್ಲಿರುವ ಪತ್ರಕರ್ತನಾದವನು ವಿವಿಧ ವಿಚಾರ ವಿಷಯಗಳತ್ತ ತಮ್ಮ ಅರಿವಿನ ಪರಿಧಿಯನ್ನು ಯಾವತ್ತೂ ವಿಸ್ತರಿಸಿಕೊಂಡಿರಬೇಕು ಮತ್ತು ತಮ್ಮ ಕ್ಷೇತ್ರಕ್ಕೆ ಪೂರಕವಾದ ತಾಂತ್ರಿಕವಾದ ವಿವಿಧ ತಾಂತ್ರಿಕ ಕೌಶಲ್ಯತೆಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು…

Read More