ಲೇಖಕ: admin

ಮಡಿಕೇರಿ ಅ.16 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಅ.21 ರಿಂದ ನ.20 ರವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದ್ದು, ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿಯಂತ್ರಣದ 6ನೇ ಸುತ್ತಿನ ಲಸಿಕಾ ಅಭಿಯಾನದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ದನ ಮತ್ತು ಎಮ್ಮೆಗೆ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದೆ. ಆದ್ದರಿಂದ ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಕೊಡಗು ಜಿಲ್ಲೆ ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಅಲ್ಲಲ್ಲಿ ಮನೆಗಳು ಇರುವುದರಿಂದ ಲಸಿಕೆ ಹಾಕಲು ಯಾವುದೇ ಜಾನುವಾರು…

Read More

ಮಡಿಕೇರಿ ಅ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ `ಗಡಿನಾಡ ಅರೆಭಾಷೆ ಉತ್ಸವ’ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರೆಭಾಷೆ ಸಂಸ್ಕೃತಿ, ಸಂಪ್ರದಾಯಗಳ ಮಹತ್ವ ಸಾರುವ ನಿಟ್ಟಿನಲ್ಲಿ ದ.ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಪ್ರದೇಶಗಳಲ್ಲಿ `ಗಡಿ ಉತ್ಸವ’ ಏರ್ಪಡಿಸಲು ನಿರ್ಧರಿಸಲಾಗಿದೆ. ಅ.27ರಂದು ದ.ಕನ್ನಡ ಜಿಲ್ಲೆಯ ಬಂದಡ್ಕದಲ್ಲಿ ಪ್ರಥಮ ಗಡಿ ಉತ್ಸವ ನಡೆಯಲಿದೆ. ಎರಡನೇ ಕಾರ್ಯಕ್ರಮವು ನ.10ರಂದು ಕೊಡಗಿನ ಚೆಯ್ಯಂಡಾಣೆಯಲ್ಲಿ ಹಾಗೂ 3ನೇ ಕಾರ್ಯಕ್ರಮವು ಮಾಜಿ ಸಿಎಂ ಸದಾನಂದ ಗೌಡರ ತವರೂರಾದ ದ.ಕನ್ನಡ ಜಿಲ್ಲೆಯ ಮಂಡೆಕೋಲಿಯಲ್ಲಿ ಡಿ.1 ರಂದು ನಡೆಯಲಿದೆ. ಅಲ್ಲದೇ ಕೊಡಗಿನ ಭಾಗಮಂಡಲ, ಕುಶಾಲನಗರ ಹಾಗೂ ದ.ಕನ್ನಡದ ಕಲ್ಲಪಳ್ಳಿ ಭಾಗದಲ್ಲಿ ಗಡಿ ಉತ್ಸವ ನಡೆಸುವ ಬಗ್ಗೆ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದು ಹೇಳಿದರು. ಗಡಿನಾಡಿನಲ್ಲಿ ಅರೆಭಾಷಿಕರ ಹಾಗೂ ಅರೆಭಾಷೆಯ ಹುಮ್ಮಸ್ಸನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ಸವಕ್ಕೆ ಈಗಾಗಲೇ ತಯಾರಿ…

Read More

ವಿರಾಜಪೇಟೆ ಅ.16 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಡಾ. ಬಿದ್ದಂಡ ಚಂಗಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯಾವುದೇ ಕಾರ್ಯ ಯಶಸ್ವಿಯಾಗ ಬೇಕಾದರೆ ಅದರ ಹಿಂದೆ ನಿರಂತರವಾದ ಕಠಿಣ ಪರಿಶ್ರಮ ಇರಬೇಕು. ನಾವುಗಳಿಸುವ ಯಶಸ್ಸು ಇತರರಿಗೆ ಸದಾ ಮಾರ್ಗದರ್ಶಿ ಆಗಬೇಕೆ ಹೊರತು ಇತರರೊಂದಿಗೆ ಎಂದಿಗೂ ಹೋಲಿಕೆ ಮಾಡುವ ಕೆಲಸ ಮಾಡ ಬಾರದು.ಹೇಗೆ ಮಾಡಬೇಕು, ಏನು ಮಾಡಬೇಕು ಹಾಗೂ ಎಲ್ಲಿ ಮಾಡಬೇಕೆಂಬುದನ್ನು ತಿಳಿದರೆ ಜೀವನದಲ್ಲಿ ಎಲ್ಲಾ ವಿಚಾರಗಳನ್ನು ಕಲಿತು ಯಶಸ್ಸಿನ ಕಡೆಗೆ ಸಾಗಬಹುದು. ಜೀವನದಲ್ಲಿ ನಿರಂತರ ಕಲಿಕೆ ನಡೆಯುತ್ತಿರಬೇಕು ಕಲಿಕೆ ನಿಂತರೆ ಜೀವನ ನಿಂತಂತೆ ಎಂದರು. ವಿದ್ಯಾರ್ಥಿ ಜೀವನದಲ್ಲಿ ಸಮಯದ ನಿರ್ವಹಣೆಯು ಬಹಳ ಮುಖ್ಯವಾದದ್ದು. ಸಮಯದ ಸದ್ಬಳಕೆಯನ್ನು ಮಾಡಿಕೊಂಡು ಸಮಯದೊಂದಿಗೆ ಮುನ್ನಡೆಯುವುದನ್ನು ಕಲಿಯಬೇಕು. ಪ್ರತಿನಿತ್ಯ ಪತ್ರಿಕೆಗಳನ್ನು ಓದುವುದು, ದೂರದರ್ಶನಗಳಲ್ಲಿ ನ್ಯೂಸ್ ಗಳನ್ನು ನೋಡುವುದರ ಮೂಲಕ ಒಂದಷ್ಟು ಪ್ರಚಲಿತ ವಿದ್ಯಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಸಮಾಜದಲ್ಲಾಗಲಿ, ಕುಟುಂಬದಲ್ಲಾಗಲಿ ಜನರೊಂದಿಗೆ ಬೆರೆಯುವುದನ್ನು ಕಲಿಯಬೇಕು. ಪ್ರತಿಯೊಬ್ಬರನ್ನು ಪ್ರೀತಿ ಗೌರವದಿಂದ ಕಂಡಾಗ ನಾವು ಯಾವುದೇ…

Read More

ಮಡಿಕೇರಿ ಅ.16 NEWS DESK  : ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ಇದೇ ಅ.19 ಮತ್ತು 20 ರಂದು ನಗರದ ಜೂನಿಯರ್ ಕಾಲೇಜ್ ನಲ್ಲಿ ಆಯೋಜಿಸಲಾಗಿದ್ದ ಚೆಸ್ ತರಬೇತಿ ಹಾಗೂ “ಮುಕ್ತ ರ‍್ಯಾಪಿಡ್ ಚೆಸ್ ಪಂದ್ಯಾವಳಿ”ಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಂದ್ಯಾವಳಿ ನಡೆಯುವ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Read More

ಮಡಿಕೇರಿ, ಅ.16 NEWS DESK :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಕೊಡಗು ಜಿಲ್ಲಾ ವತಿಯಿಂದ ಮಡಿಕೇರಿ ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಸಭಾಂಗಣದಲ್ಲಿ “ಉತ್ತಮ ಜೀವನ ಮತ್ತು ಉತ್ತಮ ಭವಿಷ್ಯಕ್ಕಾಗಿ ಆಹಾರದ ಹಕ್ಕು”* ಎನ್ನುವ ಧ್ಯೇಯದೊಂದಿಗೆ  ವಿಶ್ವ ಆಹಾರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಆಹಾರದ ಕೊರತೆಯಿಂದ ಉಲ್ಬಣಿಸಿರುವ ಹಸಿವಿನ ಜಾಗತಿಕ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರತಿಯೊಬ್ಬರೂ ಸಂಕಲ್ಪ ತೊಡಬೇಕು ಎಂದರು. ಆಹಾರ ಪೋಲು – ರಾಷ್ಟ್ರೀಯ ನಷ್ಟ..ನಾವು ನಮ್ಮ ನೆಲೆಯಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯುವ ಪ್ರಯತ್ನ ಮತ್ತು ಸಮಾಜಮುಖಿ ಚಿಂತನೆ, ಆಹಾರ ಸಂರಕ್ಷಣೆ ಕುರಿತು ಹೆಚ್ಚಿನ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಆಹಾರ ಅಪವ್ಯಯವನ್ನು ತಡೆಗಟ್ಟಲು ಸಂಘಟಿತ ಪ್ರಯತ್ನ ನಡೆಸಬೇಕು ಎಂದರು.  ಒಮ್ಮೆ ಆಹಾರದ ಕೊರತೆ ಉಂಟಾದರೆ ಇಡೀ ದೇಶದಲ್ಲೇ ಹಾಹಾಕಾರ ಉಂಟಾಗುತ್ತದೆ. ಆದ್ದರಿಂದ ಕನಿಷ್ಠ ನಾವುಗಳು…

Read More

ನಾಡಿನ ಸಮಸ್ತ ಜನತೆಗೆ ಕಾವೇರಿ ತುಲಾ ಸಂಕ್ರಮಣದ ಶುಭಾಶಯಗಳು : ತೀರ್ಥ ಸ್ವರೂಪಿಣಿಯಾದ ಕೊಡಗಿನ ಮಾತೆ ಕಾವೇರಿಯ ಆಶೀರ್ವಾದದಿಂದ ನಾಡಿನೆಲ್ಲೆಡೆ ಸಮೃದ್ಧಿ ನೆಲೆಸಲಿ. (ನಾಪಂಡ ರವಿ ಕಾಳಪ್ಪ, ಅಧ್ಯಕ್ಷರು, ಕೊಡಗು ಜಿಲ್ಲಾ ಬಿಜೆಪಿ) 

Read More

ಬೆಂಗಳೂರು ಅ.16 NEWS DESK : ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಚಾಲನೆ ನೀಡಿದರು. ಶಾಸಕ ನರೇಂದ್ರಸ್ವಾಮಿ ಅವರ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್, ವಿಧಾನಸಭೆ, ವಿಧಾನಪರಿಷತ್ ಸದಸ್ಯರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

Read More

ನಾಡಿನ ಸಮಸ್ತ ಜನತೆಗೆ ಕಾವೇರಿ ತುಲಾ ಸಂಕ್ರಮಣದ ಶುಭಾಶಯಗಳು : ಕಾವೇರಿ ನಾಡು ಕೊಡಗು ಸಮೃದ್ಧಿಯಾಗಲಿ (ಧರ್ಮಜ ಉತ್ತಪ್ಪ, ಅಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ)

Read More

ನಾಡಿನ ಸಮಸ್ತ ಜನತೆಗೆ ಕಾವೇರಿ ತುಲಾ ಸಂಕ್ರಮಣದ ಶುಭಾಶಯಗಳು : ಶ್ರೀಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದಲ್ಲಿ ಅ.17 ರಂದು ಸಂಜೆ 4ಗಂಟೆಗೆ ತೀರ್ಥ ವಿತರಿಸಲಾಗುವುದು. (ಬಲ್ಲಾರಂಡ ಮಣಿ ಉತ್ತಪ್ಪ, ಅಧ್ಯಕ್ಷರು)

Read More

ನಾಡಿನ ಸಮಸ್ತ ಜನತೆಗೆ ಕಾವೇರಿ ತುಲಾ ಸಂಕ್ರಮಣದ ಶುಭಾಶಯಗಳು : ಶ್ರೀ ಕಾವೇರಿ ತೀರ್ಥೋದ್ಭವದ ಪುಣ್ಯಕಾಲ ಸರ್ವರಿಗೂ ಶುಭ ತರಲಿ (ನಾಪಂಡ ಮುತ್ತಪ್ಪ, ಸಮಾಜ ಸೇವಕರು ಹಾಗೂ ಕಾಂಗ್ರೆಸ್‌ ಮುಖಂಡರು) 

Read More