ಮಡಿಕೇರಿ ನ.8 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಕೊಡಗಿನ ವಿವಿಧ ಶಾಲೆಗಳು ಗೆಲುವು ಸಾಧಿಸಿ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿವೆ. ಜಿಲ್ಲಾ ಮಟ್ಟದ ವಿಜೇತರು :: ಜಿಲ್ಲಾ ಮಟ್ಟದ ಸ್ಪರ್ಧೆಯ ಸ್ಕೌಟ್ಸ್ ವಿಭಾಗದಲ್ಲಿ ಕುಶಾಲನಗರದ ಅತ್ತೂರು ಜ್ಞಾನ ಗಂಗಾ ವಸತಿ ಶಾಲೆ ಪ್ರಥಮ, ವಿರಾಜಪೇಟೆ ಅರಮೇರಿ ಎಸ್.ಎಂ.ಎಸ್ ಶಾಲೆ ದ್ವಿತೀಯ, ನಾಪೋಕ್ಲು ಅಂಕುರ್ ಪಬ್ಲಿಕ್ ಸ್ಕೂಲ್ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಗೈಡ್ಸ್ ವಿಭಾಗದಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಪ್ರಥಮ, ಕುಶಾಲನಗರ ಫಾತಿಮಾ ಪ್ರೌಢ ಶಾಲೆ ದ್ವಿತೀಯ, ಚೆನ್ನನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದೆ. ಬುಲ್ ಬುಲ್ಸ್ ವಿಭಾಗದಲ್ಲಿ ಕೊಟ್ಟಮುಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ, ಮಡಿಕೇರಿಯ ಸಂತ ಜೋಸೆಫರ ಶಾಲೆ ದ್ವಿತೀಯ, ಗೋಣಿಕೊಪ್ಪ ಲಯನ್ಸ್ ಪ್ರಾಥಮಿಕ ಶಾಲೆ ತೃತೀಯ ಸ್ಥಾನವನ್ನು ಗಳಿಸಿದೆ. ಕಬ್ಸ್ ವಿಭಾಗದಲ್ಲಿ ಸುಂಟಿಕೊಪ್ಪ ಸಂತ…
ಲೇಖಕ: admin
ಮಡಿಕೇರಿ ನ.8 NEWS DESK : ಉಡುಪಿ ಜಿಲ್ಲಾ ಕಿವುಡರ ಕ್ಷೇಮಾಭಿವೃದ್ಧಿ ಸಂಘದ 10ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಉಡುಪಿ ಅಜ್ಜರಕಾಡು ಶ್ರೀ ಲಕ್ಷ್ಮೀ ನಾರಾಯಣ ರಾವ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಉದ್ಘಾಟಿಸಿದರು. ಉಡುಪಿ ವಿಕಲಚೇತನರ ಸಬಲೀಕರಣ ಹಿರಿಯ ನಾಗರೀಕರ ಇಲಾಖೆಯ ಕಲ್ಯಾಣಾಧಿಕಾರಿ ರತ್ನ ಸುವರ್ಣ ಮಾತನಾಡಿ ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ, ಉಪಾಧ್ಯಕ್ಷ ಶಂಕರ ನಾರಾಯಣ ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಸ್ಥೆಗಳ ಒಕ್ಕೂಟ, 25 ಜಿಲ್ಲಾ ಕಿವುಡರ ಸಂಸ್ಥೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ನಂತರ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ನ.17 ರಂದು ರಾಮನಗರ, ಡಿಸೆಂಬರ್ ತಿಂಗಳಿನಲ್ಲಿ ಹಾಸನ, ಮೈಸೂರು ಹಾಗೂ ಕೋಲಾರದಲ್ಲಿ 10ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.
ಕುಶಾಲನಗರ ಅ.8 NEWS DESK : ರಕ್ತದಾನದ ಮಹತ್ವ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳ ಕುರಿತು ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಜಿಲ್ಲಾ ರಕ್ತ ನಿಧಿ ಘಟಕದ ಮುಖ್ಯಸ್ಥರಾದ ಡಾ.ಕರುಂಬಯ್ಯ ಹೇಳಿದರು. ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಸಹಕಾರ ಭವನದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್, ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಘಟಕ, ಕೂಡಿಗೆ ವಿಎಸ್ಸೆನ್, ಕೂಡಿಗೆ ಗ್ರಾ.ಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಒಬ್ಬರು ನೀಡುವ ರಕ್ತ ಮೂವರ ಜೀವವನ್ನು ಉಳಿಸುತ್ತದೆ. ರಕ್ತದಾನದ ಬಗ್ಗೆ ಗ್ರಾಮೀಣ ಜನರಲ್ಲಿ ಇರುವ ಮೌಢ್ಯವನ್ನು ಹೋಗಲಾಡಿಸಿ ಅವರಲ್ಲಿ ಜಾಗೃತಿ ಮೂಡಿಸಬೇಕು. ಪ್ರತೀ ಸಂಘ ಸಂಸ್ಥೆಗಳು ವರ್ಷಕ್ಕೊಮ್ಮೆ ಇಂತಹ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ರಕ್ತದಾನಿಗಳು ಯಾವುದೇ ಫಲಾಪೇಕ್ಷೆಗಳಿಲ್ಲದೇ ಸ್ವಯಂ ಪ್ರೇರಿತರಾಗಿ ರಕ್ತ ನೀಡುವಂತಾಗಬೇಕು ಎಂದರು. 18 ರಿಂದ 60 ರ ವಯೋಮಿತಿಯವರು ವರ್ಷಕ್ಕೆ 4 ಬಾರಿ ರಕ್ತದಾನ ನೀಡಬಹುದು. ರಕ್ತ ನೀಡಿದಲ್ಲಿ…
ಮಡಿಕೇರಿ ನ.8 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ 40ನೇ ಹುಟ್ಟುಹಬ್ಬದ ಪ್ರಯುಕ್ತ ಮಡಿಕೇರಿ ನಗರ ಕಾಂಗ್ರೆಸ್ ನ ಪದಾಧಿಕಾರಿಗಳು ನಗರದ ಶ್ರೀ ಶಕ್ತಿ ವೃದ್ಧಾಶ್ರಮ ಹಾಗೂ ತನಲ್ ಆಶ್ರಮಗಳಿಗೆ ಭೇಟಿ ನೀಡಿ ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿದರು. ನಂತರ ವೃದ್ಧರಿಗೆ ಸಿಹಿ ಹಂಚಿ ಊಟದ ವ್ಯವಸ್ಥೆಯನ್ನು ಏರ್ಪಡಿಸಿದರು. ಈ ಸಂದರ್ಭ ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಕೆಪಿಸಿಸಿ ಸದಸ್ಯರಾದ ನಂದಕುಮಾರ್, ಪ್ರಕಾಶ್ ಆಚಾರ್ಯ, ಆರ್.ಪಿ.ಚಂದ್ರಶೇಖರ್, ಜೆ.ಸಿ.ಜಗದೀಶ್, ಸದಾಮುದ್ದಪ್ಪ, ಅಂಬೆಕಲ್ ನವೀನ್, ಮಿನಾಜ್ ಪ್ರವೀಣ್, ಮುದ್ದುರಾಜ್, ಕವನ್ ಕೋತೋಳಿ, ಸುಬ್ರಮಣಿ , ಲೀಲಾ ಶೇಷಮ್ಮ, ಶಶಿ, ಉದಯ ಚಂದ್ರಿಕಾ, ವಸಂತ ಭಟ್, ಹಬೀಬ್, ಗಿರೀಶ್, ವಿಶಾಲ್ ಹಾಜರಿದ್ದರು.
ಸೋಮವಾರಪೇಟೆ NEWS DESK ನ.8 : ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಸುಂಟಿಕೊಪ್ಪ ಸಮೀಪದ ಕಾಫಿ ತೋಟವೊಂದರಲ್ಲಿ ಮೃತದೇಹ ಸುಟ್ಟ ಪ್ರಕರಣಕ್ಕೆ ಸಂಬ0ಧಿಸಿದ0ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಮುದ್ದು ಮಾದೇವ ಹಾಗೂ ಸಿಬ್ಬಂದಿ ಸುಧೀಶ್ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಶಂಸಾನ ಪತ್ರ ನೀಡಿ ಗೌರವಿಸಿದರು. ನಿಷ್ಠೆ, ಶ್ರದ್ಧೆ, ದಕ್ಷತೆ, ಪ್ರಾಮಾಣಿಕತೆ, ಧೈರ್ಯ ಮೆರೆದ ಪೊಲೀಸರ ಕಾರ್ಯವೈಖರಿಯ ಬಗ್ಗೆ ಎಸ್ಪಿ ಪ್ರಶಂಸೆ ವ್ಯಕ್ತಪಡಿಸಿದರು.
ಮಡಿಕೇರಿ ನ.8 NEWS DESK : ಅಂತರಾಷ್ಟ್ರೀಯ ಶಾಲಿನ್ ಕುಂಪು ವತಿಯಿಂದ ಚೇರಂಬಾಣೆಯ ಕೊಟ್ಟೂರು ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕರಾಟೆ ಪರೀಕ್ಷೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಬಿ.ಎ.ಅಂಕಿತ್ ಉತ್ತೀರ್ಣನಾಗಿ ಬ್ಲಾಕ್ ಬೆಲ್ಟ್ ಪಡೆದಿದ್ದಾನೆ. ಅಂಕಿತ್ ಚೆಟ್ಟಿಮಾನಿಯ ಅಶೋಕ್ ಮತ್ತು ರೇಖಾ ದಂಪತಿಯ ದ್ವಿತೀಯ ಪುತ್ರ. ಒಟ್ಟು 36 ವಿದ್ಯಾರ್ಥಿಗಳು ಈ ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿ ಉತ್ತಿರ್ಣರಾಗಿರುತ್ತಾರೆ. ಪರೀಕ್ಷಾ ಪರಿವೀಕ್ಷಕರಾಗಿ ಭಾರತ ಮುಖ್ಯ ತರಬೇತುದಾರರಾದ ಇಂದ್ರಜಿತ್, ದೇವರಾಜ, ಶಾಲಾ ತರಬೇತುದಾರರಾದ ನಾಟೋಳಂಡ ನಂಜುಂಡ ಕರ್ತವ್ಯ ನಿರ್ವಹಿಸಿದರು. ಉತ್ತಿರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಕುದುಪಜೆ ಕವನ್ ಕುಮಾರ್, ಶಾಲಾ ವ್ಯವಸ್ಥಾಪಕರಾದ ನಾಟೋಳಂಡ ಸರೋಜಿನಿ ಬಹುಮಾನ ವಿತರಿಸಿದರು.
ಮಡಿಕೇರಿ ನ.8 NEWS DESK : ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ-50 ಪ್ರಯುಕ್ತ ಕಾರ್ಯಕ್ರಮಗಳಲ್ಲಿ ಕೊನೆಯ ಹಾಗೂ ನಾಲ್ಕನೆಯ ಕಾರ್ಯಕ್ರಮವು ಇದೇ ನ.20 ಮತ್ತು 21 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಅರೆಭಾಷೆ, ಕೊಡವ, ತುಳು, ಕೊಂಕಣಿ, ಬ್ಯಾರಿ ಹಾಗೂ ಯಕ್ಷಗಾನ ಅಕಾಡೆಮಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಲಿದೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಹಾಗೂ ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರು, ಮೂರು ಜಿಲ್ಲೆಯ ಜಿಲ್ಲಾಧಿಕಾರಿಗಳು, ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಈಗಾಗಲೇ ಮೈಸೂರು, ಕರ್ನಾಟಕದ ಗಡಿ ಪ್ರದೇಶವಾಗಿರುವ ಮಹಾರಾಷ್ಟ್ರದ ಜತ್ತ ತಾಲೂಕಿನ ಗುಡ್ಡಾಪುರ, ಹಾಗೂ…
ಮಡಿಕೇರಿ ನ.8 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಅಜ್ಜಿ-ತಾತಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಸಮಾಜ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಂಡುವಂಡ. ಪಿ.ಮುತ್ತಪ್ಪ ಮಕ್ಕಳ ಪ್ರತಿಭೆಗೆ ನಾವು ಪ್ರೋತ್ಸಾಹ ನೀಡಬೇಕು. ಪ್ರಸ್ತುತ ಸಮಾಜದಲ್ಲಿ ಮಕ್ಕಳು ಮುಂದೆ ಬರಬೇಕಾದರೆ ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು. ಶಾಲಾ ಪ್ರಾಂಶುಪಾಲರಾದ ಎಂ.ಜಿ.ಸವಿತಾ ಮಾತನಾಡಿ, ಮನೆಯಲ್ಲಿ ಅಜ್ಜಿ-ತಾತಂದಿರು ಇದ್ದರೆ ಮಕ್ಕಳು ಸಂಸ್ಕೃತಿಯ ಬಗ್ಗೆ ತಿಳುವಳಿಕೆಯನ್ನು ನೀಡಿ ಮಕ್ಕಳು ಸುಸಂಸ್ಕೃತರಾಗಿ ಬೆಳೆಯುವಲ್ಲಿ ಸಂಶಯವಿಲ್ಲ ಎಂದರು. ನಂತರ ಪುಟಾಣಿಗಳಿಗೆ ದಿನದ ಮಹತ್ವದ ಕುರಿತು ವಿವರಿಸಿದರು. ಕಾರ್ಯಕ್ರಮದ ಕುರಿತು ಅಜ್ಜಿ ತಾತಂದಿರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಅಧಿಕಾರಿ ಎನ್.ಎ.ಪೊನ್ನಮ್ಮ ಹಾಜರಿದ್ದರು. ಶಿಕ್ಷಕಿ ಬಿ.ಎಸ್.ಚಂದ್ರಾವತಿ ಪ್ರಾರ್ಥಿಸಿದರು. ಶಾಹಿರ. ಎಂ.ಹೆಚ್.ಶಾಹಿರ ಸ್ವಾಗತಿಸಿದರು. ವಿನ್ಯಾ ಉತ್ತಪ್ಪ ಮತ್ತು ಎಸ್.ಕೆ.ಕುಸುಮ ಕಾರ್ಯಕ್ರಮ ನಿರೂಪಿಸಿದರು. ಸಿ.ಮಿಥಿಲಾ ಪೊನ್ನಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿಗಳಿಗೆ ನೃತ್ಯ ಹಾಗೂ…
ಮಡಿಕೇರಿ ನ.8 NEWS DESK : 2023-24ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಕೊಡಗಿನ ಬಡ ವಿದ್ಯಾರ್ಥಿಗಳಿಂದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೂರ್ಗ್ ಓಲ್ಡ್ ಸ್ಟುಡೆಂಟ್ಸ್ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿ ವೇತನ – 2024ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು 00971567012123 ವಾಟ್ಸಾಪ್ ಸಂಖ್ಯೆಗೆ ಕೆಳಗೆ ನಮೂದಿಸಿದ ಮಾಹಿತಿ ಮತ್ತು ಸೂಕ್ತ ದಾಖಲಾತಿಗಳನ್ನು ಕಳುಹಿಸಲು ಸಂಘದ ಆಡಳಿತ ಮಂಡಳಿ ಕೋರಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11.11.2024 :: ಅಗತ್ಯವಿರುವ ದಾಖಲೆಗಳು :: ಶಾಲೆ/ಕಾಲೇಜು ಮುದ್ರೆಯೊಂದಿಗೆ ಮಾರ್ಕ್ಸ್ ಕಾರ್ಡ್, ಪಡಿತರ ಚೀಟಿ ಪ್ರತಿ, ವಿಳಾಸದೊಂದಿಗೆ ವಿದ್ಯಾರ್ಥಿ ಸಂಪರ್ಕ ಸಂಖ್ಯೆ, ವಿದ್ಯಾರ್ಥಿ ಇತ್ತೀಚಿನ ಫೋಟೋ, ಆದಾಯ ಪ್ರಮಾಣಪತ್ರ, 2023-24 ಪಿಯುಸಿ ಅಥವಾ ಇತರೆ ಶೈಕ್ಷಣಿಕ ಕೋರ್ಸ್ನ ಪ್ರವೇಶ ರಶೀದಿ :: ಮಂಡಳಿಯ ಕಾರ್ಯನಿರ್ವಾಹಕರು :: ಅಬ್ದುಲ್ಲಾ ಕೊಂಡಂಗೇರಿ (ಅಧ್ಯಕ್ಷರು), ಸೌರಭ್ ಗೋಣಿಕೊಪ್ಪ (ಉಪಾಧ್ಯಕ್ಷರು), ರಫೀಕ್ ಅಲಿ ಕುಂಜಿಲ (ಜಿ. ಕಾರ್ಯದರ್ಶಿ), ಶಾಫಿ ಕೊಟ್ಟಮುಡಿ…
ಮಡಿಕೇರಿ ನ.8 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜ ದಿನಾಚರಣೆ ಹಾಗೂ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕು ಕಾರ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜ ದಿನಾಚರಣೆಯ ಧ್ವಜ ಚೀಟಿಯನ್ನು ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ ಬಿಡುಗಡೆ ಮಾಡಿದರು. ಧ್ವಜ ಚೀಟಿಯನ್ನು ಬಿಡುಗಡೆಗೊಳಿಸಿದ ತಹಶೀಲ್ದಾರ್ ಕಿರಣ್ ಗೌರಯ್ಯ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹಾಗೂ ದೇಶದ ಕುರಿತಾದ ಕರ್ತವ್ಯಗಳನ್ನು ತಿಳಿಹೇಳುವ ಮತ್ತು ಶಿಸ್ತು ಮೂಡಿಸಿ ಸೇವಾ ಮನೋಭಾವನೆ ಬೆಳೆಸುವ ಸಂಸ್ಥೆಯ ಕಾರ್ಯ ಮಾದರಿಯಾಗಿದೆ’ ಎಂದು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಮ್ಮ 74 ನೇ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹ ಮತ್ತು ಉತ್ಸಾಹದಿಂದ ಆಚರಿಸಿದಾಗ ಸೌಹಾರ್ದತೆಯ ಮನೋಭಾವ ಮತ್ತು ಶ್ರೇಷ್ಠತೆಯ ಅನ್ವೇಷಣೆ ಸಾಧ್ಯ.ಇಂತಹ ಚಟುವಟಿಕೆಗಳು ಮತ್ತಷ್ಟು ವಿಸ್ತರಣೆಗೊಳ್ಳುವ ಮೂಲಕ ಸಮಾಜದಲ್ಲಿ ಸಾಮಾಜಿಕ ಕ್ರಾಂತಿ ಸಾಧ್ಯ ಎಂದರು. ಧ್ವಜ ದಿನಾಚರಣೆಯ…






