ಲೇಖಕ: admin

ಸೋಮವಾರಪೇಟೆ ನ.8 NEWS DESK : ನಾವು ಪ್ರತಿಷ್ಠಾನ ಮತ್ತು ಸಿ.ಎಂ.ಸಿ.ಎ ಸಂಸ್ಥೆಯ ಸಹಯೋಗದಲ್ಲಿ ಪಂಚಾಯತ್ ರಾಜ್ ಇಲಾಖೆ ನಡೆಸುವ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಪರಿಣಾಮಾತ್ಮಕವಾಗಿ ನಡೆಸುವ ನಿಟ್ಟಿನಲ್ಲಿ ಪೂರ್ವ ತಯಾರಿಯ ಸಭೆ ಮಾಲಂಬಿ ವಾಲ್ಮೀಕಿ ಆಶ್ರಮಶಾಲೆಯಲ್ಲಿ ನಡೆಯಿತು. ಮಕ್ಕಳ ಹಕ್ಕುಗಳಲ್ಲಿ ಒಂದಾದ ಭಾಗವಹಿಸುವ ಹಕ್ಕಿನ ಮಹತ್ವ ಮತ್ತು ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ಧ್ವನಿಯ ಪ್ರಾಮುಖ್ಯತೆ, ಮಕ್ಕಳ ಕಾನೂನು ಕಾಯ್ದೆಗಳ ಅರಿವು ನಾವು ಪ್ರತಿಷ್ಠಾನದ ಸ್ವಯಂ ಸೇವಕರಾದ ಬಿ.ಕೆ.ಕುಮಾರಿ ಮಕ್ಕಳಿಗೆ ತಿಳಿಸಿಕೊಟ್ಟರು. ಶಾಲಾ ಶಿಕ್ಷಕರಾದ ವಿಜಯೇಂದ್ರ, ವೀಣಾ, ಮಂಜುಳಾ ಸುಮಾ, ಚೈತ್ರ, ಇಂದ್ರಾಣಿ ಇದ್ದರು.

Read More

ಮಡಿಕೇರಿ ನ.7 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾಲ್ಲೂಕಿನ ಚೆಯ್ಯಂಡಾಣೆ ಗ್ರಾಮದ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ’ವು ನವೆಂಬರ್ 10 ರಂದು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ. ನಗರದ ಅಕಾಡೆಮಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಅರೆಭಾಷೆಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನ.10 ರಂದು ಬೆಳಗ್ಗೆ 8.30 ಗಂಟೆಗೆ ಕಡಂಗ ಗಣಪತಿ ದೇವಸ್ಥಾನದ ಎದುರಿನಲ್ಲಿ ಮ್ಯಾರಥಾನ್‍ಗೆ ಚಾಲನೆ ನೀಡುವ ಮೂಲಕ ಉತ್ಸವ ಆರಂಭಗೊಳ್ಳಿದೆ ಎಂದರು. ನಂತರ ಬೆಳಗ್ಗೆ 9.30 ಗಂಟೆಗೆ ಧ್ವಜಾರೋಹಣ ಮತ್ತು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ನರಿಯಂದಡ ಗ್ರಾ.ಪಂ.ಅಧ್ಯಕ್ಷರಾದ ಪೆಮ್ಮಂಡ ಕೌಶಿ ಕಾವೇರಮ್ಮ, ನೌಕಾದಳದ ನಿವೃತ್ತ ಸೇನಾನಿ ಪುದಿಯಮನೆ ಕೃಷ್ಣ, ಯವಕಪಾಡಿ ನಿವೃತ್ತ ಶಿಕ್ಷಕರಾದ…

Read More

ಗೋಣಿಕೊಪ್ಪ ನ.7 NEWS DESK : ಅರುವತ್ತೊಕ್ಲು ಸರ್ವದೈವತಾ ವಿದ್ಯಾಸಂಸ್ಥೆಯಲ್ಲಿ ಗೋಣಿಕೊಪ್ಪ ಸಮೂಹ ಸಂಪನ್ಮೂಲ ಕೇಂದ್ರ, ಸರ್ವದೈವತಾ ವಿದ್ಯಾ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮಾನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಗೋಣಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಲೋತ್ಸವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರವಿ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದ್ದು, ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಆಮೂಲಕ ಉತ್ತಮ ಸಮಾಜವನ್ನು ನಿರ್ಮಿಸಲು ಮುಂದಾಗಬೇಕು ಎಂದರು. ವಿವಿಧ ಪ್ರಕಾರಗಳ ಕಲೆಗಳಲ್ಲಿ ಆಸಕ್ತಿ ತಾಳುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಾಧ್ಯವಿದೆ ಎಂದರು. ವಿವಿಧ ಕ್ಷೇತ್ರಗಳಲ್ಲಿ ವಿಭಿನ್ನವಾಗಿ ಪ್ರಯತ್ನಿಸುವ ಕಾರ್ಯ ನಡೆಯಬೇಕಾಗಿದೆ. ಸೃಜನಶೀಲಾ ಗುಣಗಳನ್ನ ಗುರುತಿಸಿ ಅದಕ್ಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ಕಾರ್ಯ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಿಂದ ನಡೆಯುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ವದೈವತಾ ವಿದ್ಯಾ ಸಂಸ್ಥೆ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ, ನಾವು…

Read More

ಬೆಂಗಳೂರು ನ.7 NEWS DESK : IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ  ಡಾ.ಹೆಚ್.ಸಿ ಮಹದೇವಪ್ಪ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ. ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. ಶಿಕ್ಷಣವೇ…

Read More

ಮಡಿಕೇರಿ ನ.7 NEWS DESK : ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗಿನ ಅಪ್ಪಚೆಟ್ಟೋಳಂಡ ಮಧು ಮೊಣ್ಣಪ್ಪ ಸುಬೇದಾರ್ ಮೇಜನ್ ಆಗಿ ಬಡ್ತಿ ಹೊಂದಿದ್ದಾರೆ. ಪ್ರಸ್ತುತ ಚಂಡೀಗಡ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 26 ವರ್ಷಗಳ ಸೇವೆಯನ್ನು ಪರಿಗಣಿಸಿ ನ.1 ರಂದು ಮಧು ಮೊಣ್ಣಪ್ಪ ಅವರನ್ನು ಸುಬೇದಾರ್ ಮೇಜರ್ ಆಗಿ ಬಡ್ತಿಗೊಳಿಸಲಾಗಿದೆ. ಇವರು ಮೂಲತಃ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ರಾಜ ಭೀಮಯ್ಯ ಹಾಗೂ ಶಾಂತಿ ದಂಪತಿಯ ಪುತ್ರ.

Read More

ವಿರಾಜಪೇಟೆ ನ.7 NEWS DESK :  ಕ್ರೀಡೆಯಲ್ಲಿ ಶಿಸ್ತು ಹಾಗೂ ಏಕತೆ  ಮುಖ್ಯವಾಗಿದೆ ಎಂದು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ  ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೈಂಟ್ ಆನ್ಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಐಕ್ಯೂಎಸಿ ಮತ್ತು ಬಿಬಿಎ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಉತ್ತಮವಾದ ಅವಕಾಶಗಳಿದ್ದು, ತಮಗೆ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಪೋಷಕರನ್ನು ಗೌರವಿಸಬೇಕು ಎಂದರು. ಮಾತ್ರವಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಉತ್ತಮವಾಗಿ ವರ್ತಿಸುದರ ಜೊತೆಗೆ ಮಾದರಿ ಸಮಾಜವನ್ನು ನಿರ್ಮಿಸಿ ಎಂದು ಕರೆ ನೀಡಿದರು. ಆಟಗಾರರು ಶಿಸ್ತು ಬದ್ದವಾದ ಆಟವನ್ನು ಪ್ರದರ್ಶಿಸುವುದರ ಮೂಲಕ ಕಾಲೇಜಿಗೆ ಕೀರ್ತಿಯನ್ನು ತರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದ ಸೈಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಮಾತನಾಡಿ, ಕ್ರೀಡೆಗಳನ್ನು ಆಯೋಜಿಸುವುದರಿಂದ…

Read More

ಸೋಮವಾರಪೇಟೆ ನ.7 NEWS DESK : 512ನೇ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 85ಲಕ್ಷ ರೂ. ವೆಚ್ಚದ ನೂತನ ಕಟ್ಟಡವನ್ನು ಸಂಘದ ಅಧ್ಯಕ್ಷ ಹೆಚ್.ಆರ್.ಸುರೇಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಂಘದ ಸರ್ವ ಸದಸ್ಯರ ಕನಸ್ಸಿನ ನೂತನ ಕಟ್ಟಡ ಉದ್ಘಾಟನೆಯಾಗಿದೆ. ಕಳೆದ ಸಾಲಿನಲ್ಲಿ ಎಲ್ಲಾ ಸದಸ್ಯರು ತಮ್ಮ ಲಾಭಂಶದ ಒಂದಷ್ಟು ಭಾಗವನ್ನು ಸಂಘದ ಕಟ್ಟಡ ನಿರ್ಮಾಣಕ್ಕೆ ನೀಡಿದ್ದರು. ರೈತರ ಶ್ರೇಯೊಭಿವೃದ್ಧಿಗೆ ಸಂಘ ಕೆಲಸ ಮಾಡುತ್ತಿದೆ. ಸದಸ್ಯರಿಗೆ ಸಂಘದಿಂದ ಸಾಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಸದಸ್ಯರು ಕೂಡ ನಿಗದಿತ ಸಮಯದಲ್ಲಿ ಸಾಲವನ್ನು ಮರುಪಾವತಿ ಮಾಡುತ್ತಿರುವುದರಿಂದ ಉತ್ತಮ ಲಾಭಂಶವೂ ಸಿಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮಮತ ಅಶೋಕ್, ಆಡಳಿತ ಮಂಡಳಿ ಸದಸ್ಯರಾದ ಎಸ್.ಬಿ.ಭರತ್ ಕುಮಾರ್, ಎನ್.ಎಸ್.ಪರಮೇಶ್, ಜಿ.ಪಿ.ಸುನೀಲ್, ವಿ.ಎನ್.ನಾಗರಾಜು, ಪುಷ್ಪಸುರೇಶ್, ಸುಮಿತ್ರ ಮಹೇಶ್, ವಾಣಿ ಶಿವಕುಮಾರ್, ಕೆ.ಜಿ.ದಿನೇಶ್, ಸಿ.ಇ.ವೆಂಕಟೇಶ್, ಜಿ.ಈ.ಸುರೇಶ್, ಸಿಇಒ ಎಂ.ಎಚ್.ಕಿರಣ್ ಮತ್ತು ಸಿಬ್ಬಂದಿ ವರ್ಗ ಇದ್ದರು.   

Read More

ಮಡಿಕೇರಿ ನ.7 NEWS DESK : ಕೊಡಗು- ಕೇರಳ ಗಡಿಭಾಗದಲ್ಲಿರುವ ಕರಿಕೆ ಗ್ರಾ.ಪಂ ವ್ಯಾಪ್ತಿಯಲ್ಲಿ ನೂತನ ಬಿಎಸ್‍ಎನ್‍ಎಲ್ ಟವರ್ ನಿರ್ಮಾಣಗೊಂಡು ಎರಡು ವರ್ಷ ಕಳೆದರೂ ಕಾರ್ಯಾರಂಭಗೊಂಡಿಲ್ಲ. ಇದರಿಂದ ನೆಟ್ ವರ್ಕ್ ಸಮಸ್ಯೆ ಎದುರಾಗಿದ್ದು, ಈ ಕುರಿತು ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಕರಿಕೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಸ್ಥರು, ವಿದ್ಯಾರ್ಥಿಗಳು, ಖಾಸಗಿ ಸಂಸ್ಥೆಗಳು, ಗ್ರಾಮ ಪಂಚಾಯ್ತಿ ಕಚೇರಿ ಹಾಗೂ ಸರ್ಕಾರಿ ಕಚೇರಿ ಸಿಬ್ಬಂದಿಗಳು ನೆಟ್ ವರ್ಕ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಕರೆ ಮಾಡುವುದಕ್ಕೂ ನೆಟ್ ವರ್ಕ್ ಸಿಗುತ್ತಿಲ್ಲ. ಗ್ರಾ.ಪಂ ಕೆಲಸ ಕಾರ್ಯಗಳು ಕುಂಟಿತಗೊಳ್ಳುತ್ತಿದೆ. ಎಲ್ಲಾ ಕಾರ್ಯಚಟುವಟಿಕೆಗಳು ಅಂತರ್ಜಾಲ ಮತ್ತು ನಿಸ್ತಂತು ವ್ಯವಸ್ಥೆಯ ಮೂಲಕವೇ ನಡೆಯುವ ಈ ಕಾಲಘಟ್ಟದಲ್ಲಿ ನೆಟ್ ವರ್ಕ್ ಸೌಲಭ್ಯವೇ ಇರದಿದ್ದರೆ ಹೇಗೆ ಕಾರ್ಯ ನಿರ್ವಹಿಸುವುದು ಎಂದು ಅವರು ಪ್ರಶ್ನಿಸಿದರು. ನೆಟ್ ವರ್ಕ್ ಸಮಸ್ಯೆ ತೀವ್ರ ಸ್ವರೂಪವನ್ನು ಪಡೆದುಕೊಂಡ ಸಂದರ್ಭ ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಕರಿಕೆ ಚೆತ್ತುಕಾಯದಲ್ಲಿ ನೂತನ ಬಿಎಸ್‍ಎನ್‍ಎಲ್ ಟವರ್ ನ್ನು…

Read More

ವಿರಾಜಪೇಟೆ ನ.7 NEWS DESK : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಉದ್ಯೋಗಕ್ಕಾಗಿ ನೆಟ್‍ವರ್ಕಿಂಗ್ ಮತ್ತು ಮಾರ್ಕೆಟಿಂಗ್‍ಗಾಗಿ ಸಾಮಾಜಿಕ ಮಾಧ್ಯಮದ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ಲೇಸ್‍ಮೆಂಟ್ ಸೆಲ್ ಅಧಿಕಾರಿ ಹಾಗೂ ಸಹಾಯಕ ಪ್ರಾಧ್ಯಾಪಕ ಕೆ.ಸಿ.ಶಿಲ್ಪ ಮಾತನಾಡಿ, ಸಾಮಾಜಿಕ ಮಾಧ್ಯಮದಿಂದ ವಿದ್ಯಾರ್ಥಿಗಳ ಮೇಲೆ ಆಗುವ ಪ್ರಭಾವ ಮತ್ತು ಅದರ ಅನುಕೂಲತೆ ಹಾಗೂ ಅನಾನುಕೂಲತೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಹಾಗೂ ಐಕ್ಯೂಎಸಿ ಸಂಚಾಲಕ ಡಾ. ಕೆ.ಬಸವರಾಜು, ಕಾರ್ಯಕ್ರಮದ ಸಂಚಾಲಕರು ಹಾಗೂ ಉಪನ್ಯಾಸಕರಾದ ಕೆ.ಎಸ್.ಕಾರ್ಯಪ್ಪ, ಕೆ.ಸಿ,ಧನ್ಯ, ಸುಮಯ್ಯ ತಬಸ್ಸುಂ ಸೇರಿದಂತೆ ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು.

Read More

ಮಡಿಕೇರಿ ನ.7 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ನುಡಿನೃತ್ಯ ಸಂಭ್ರಮ-2024 ನುಡಿಹಬ್ಬವನ್ನು ಆಚರಿಸಲಾಗುತ್ತಿದ್ದು, ಇದರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅಂತರ ಕಾಲೇಜು ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಸೈಂಟ್ ಆನ್ಸ್ ಕಾಲೇಜು, ಕನ್ನಡ ಭಾಷಾ ವಿಭಾಗ ಮತ್ತು ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ನ.19 ರಂದು ಕಾಲೇಜಿನಲ್ಲಿ ಕನ್ನಡ ಸಂಸ್ಕೃತಿ ಪರಂಪರೆ, ಸ್ಥಳೀಯ ಜಾನಪದ ಸ್ವರೂಪ ಬಿಂಬಿಸುವ ವಸ್ತು ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಕಾಲೇಜಿನ ಪ್ರತಿ ತರಗತಿಯ ವಿದ್ಯಾರ್ಥಿಗಳು ಜಾನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರ, ಹಳೆಯ ಸಾಮಗ್ರಿಗಳು ಸೇರಿದಂತೆ ವಿವಿಧ ವಸ್ತುಗಳನ್ನು ಪ್ರದರ್ಶಿಸಲಿದ್ದು, ಇದು ಸ್ಪರ್ಧೆಯ ರೂಪದಲ್ಲಿ ನಡೆಯಲಿದೆ. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಗುದೆಂದರು. ನ.20 ರಂದು ಕೊಡಗಿನ ಪದವಿ, ತತ್ಸಮಾನ ಹಾಗೂ ಸ್ನಾತಕೋತ್ತರ ಪದವಿ,…

Read More