ಲೇಖಕ: admin

*ನಾಡಿನ ಸಮಸ್ತ ಜನತೆಗೆ ಕಾವೇರಿ ತುಲಾ ಸಂಕ್ರಮಣದ ಶುಭಾಶಯಗಳು : ಮಾತೆ ಕಾವೇರಿ, ಶ್ರೀ ಇಗ್ಗುತ್ತಪ್ಪ ದೇವರು ಸರ್ವರಿಗೂ ಶಾಂತಿ, ಸಮೃದ್ಧಿ ತರಲಿ* (ಹಂಚೆಟ್ಟಿರ ಮನು ಮುದ್ದಪ್ಪ, ಅಧ್ಯಕ್ಷರು, ವ್ಯಾಲಿಡ್ಯೂ ಕೊಡವ ಕಲ್ಚರಲ್‌ ಅಸೋಸಿಯೇಷನ್)

Read More

*ನಾಡಿನ ಸಮಸ್ತ ಜನತೆಗೆ ಕಾವೇರಿ ತುಲಾ ಸಂಕ್ರಮಣದ ಶುಭಾಶಯಗಳು :  ಮಾತೆ ಕಾವೇರಿ ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ (ಕುಕ್ಕೇರ ಜಯ ಚಿಣ್ಣಪ್ಪ, ಮಾಲೀಕರು, ವೃಂದಾವನ್‌ ಕೂರ್ಗ್‌, ಸಂಪಿಗೆಕಟ್ಟೆ, ಮಡಿಕೇರಿ)* 

Read More

ಮಡಿಕೇರಿ ಅ.16 NEWS DESK : ಕೊಡವ ಮಕ್ಕಡ ಕೂಟದ 97ನೇ ಪುಸ್ತಕ, ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರು ರಚಿಸಿರುವ “ಶ್ರೀ ಕಾವೇರಿ ಸುಪ್ರಭಾತ” ಕೊಡವ, ಕನ್ನಡ ಕೃತಿ ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಕೊಡವ, ಕನ್ನಡ ಚಲನಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಸುಪ್ರಭಾತ ಎಂಬ ಶಬ್ಧವೇ ಮನಸ್ಸಿಗೆ ಧನಾತ್ಮಕ ಭಾವನೆಯನ್ನು ತುಂಬುತ್ತದೆ. ಕಾವೇರಿ ಕುರಿತು ಕೃತಿ ರಚನೆ ದೇವರ ಕೆಲಸವಾಗಿದ್ದು, ಹಾಡಿನ ರೂಪದಲ್ಲಿರುವುದನ್ನು ಅಕ್ಷರ ರೂಪದಲ್ಲಿ ಹೊರತಲಾಗಿದೆ. ಇದನ್ನು ಮಕ್ಕಳು ಸುಲಭವಾಗಿ ಕಲಿಯಬಹುದು ಮತ್ತು ಪ್ರತಿಯೊಬ್ಬರಿಗೂ ಕಾವೇರಿಮಾತೆಯ ಹಿನ್ನೆಲೆಯನ್ನು ತಿಳಿಯಲು ಸಹಕಾರಿಯಾಗಲಿದೆ ಎಂದರು. ಬರೆಯುವುದು ಸುಲಭ, ಅದನ್ನು ಪುಸ್ತಕ ರೂಪದಲ್ಲಿ ಹೊರತರುವುದು ಸುಲಭದ ಮಾತಲ್ಲ. ಆದರೆ ಕೊಡವ ಮಕ್ಕಡ ಕೂಟ ಬರೆಯುವವರಿಗೆ ಪ್ರೋತ್ಸಾಹ ನೀಡುವ ಮೂಲಕ ವಿವಿಧ ಭಾಷೆಗಳ ಹಲವು ಪುಸ್ತಕಗಳನ್ನು ಹೊರತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳನ್ನು ಹೊರತರಲಿ ಎಂದು ಹೇಳಿದರು. “ಶ್ರೀ ಕಾವೇರಿ ಸುಪ್ರಭಾತ” ಪುಸ್ತಕವನ್ನು…

Read More

ಮಡಿಕೇರಿ ಅ.16 NEWS DESK : ಮೂರ್ನಾಡು ಎಂ.ಬಾಡಗ-1 ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಕೈತೊಳೆಯುವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಮಾತನಾಡಿ, ಕೈಗಳ ಸ್ವಚ್ಛತೆ ಎಷ್ಟು ಮುಖ್ಯ ಮತ್ತು ಕೈ ತೊಳೆಯುವ ಆರು ವಿಧಾನಗಳನ್ನು ಅಳವಡಿಸಿಕೊಂಡು ಹೇಗೆ ಕೈಗಳ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು. ಪುಟಾಣಿ ಮಕ್ಕಳು, ಪೋಷಕರು, ಗ್ರಾ.ಪಂ ಸದಸ್ಯರಾದ ನಿಂಗಪ್ಪ, ಎಂ.ಬಾಡಗ ಅಂಗನವಾಡಿ ಕಾರ್ಯಕರ್ತೆ ಜಯಂತಿ ಮತ್ತು ಸಹಾಯಕಿ ಪ್ರೀತ  ಹಾಜರಿದ್ದರು.

Read More

ಮಡಿಕೇರಿ ಅ.16 NEWS DESK : ಹಾಕತ್ತೂರು-ಬಿಳಿಗೇರಿ ಮಖಾಂನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಫಕೀರ್ ಬಾವ ವಲಿಯುಲ್ಲಾಹಿ (ಖ.ಸಿ) ಉರೂಸ್ ಮುಬಾರಕ್ ಕಾರ್ಯಕ್ರಮವನ್ನು 2025ರ ಏ.27, 28 ಮತ್ತು 29 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಬದರ್ ಜಮಾಅತ್ ಸಮಿತಿ ಕಾರ್ಯದರ್ಶಿ ಎಸ್.ಎ.ಅಬ್ದುಲ್ ಖಾದರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 93538 34014 ನ್ನು ಸಂಪರ್ಕಿಸಬಹುದಾಗಿದೆ.

Read More

ನಾಪೋಕ್ಲು ಅ.16 NEWS DESK : ಗ್ರಾಮೀಣ ಜನರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ಸಾಮರಸ್ಯ ಮೂಡುತ್ತದೆ ಎಂದು ಮಾಜಿ ಸೈನಿಕ ಸಿ.ಸುರಿ ಮುತ್ತಪ್ಪ ಹೇಳಿದರು. ಮರಂದೋಡ ಗ್ರಾಮದಲ್ಲಿ ಮರಂದೋಡ ಕ್ರೀಡಾ ಸಮಿತಿ ವತಿಯಿಂದ ಮರಂದೋಡ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ 41ನೇ ವರ್ಷದ ವಾರ್ಷಿಕ ಕ್ರೀಡಾ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾ ಸಮಿತಿಯ ಅಧ್ಯಕ್ಷ ಚೋಯಮಾಡಂಡ ಹರೀಶ್ ಮೊಣ್ಣಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗಾಗಿ ವಿವಿಧ ಕ್ರೀಡಾಕೂಟಗಳು ನಡೆದವು. ಮಕ್ಕಳು, ಮಹಿಳೆಯರು, ಪುರುಷರು ವಿವಿಧ ವಯೋಮಾನದವರು ಪಾಲ್ಗೊಂಡು ಸಂಭ್ರಮಿಸಿದರು. 0.22 ಶೂಟಿಂಗ್ ಸ್ಪರ್ಧೆಯಲ್ಲಿ ಬಾರಿಕೆ ಜೀವಿತ ಪ್ರಥಮ, ಮುಕ್ಕಾಟಿರ ಅಜಿತ್ ದ್ವಿತೀಯ ಸ್ಥಾನವನ್ನು ಪಡೆದರು. 12 ಬೋರ್ ಶೂಟಿಂಗ್ ಸ್ಪರ್ಧೆಯಲ್ಲಿ ಮುಕ್ಕಾಟಿರ ಅಜಿತ್ ಪ್ರಥಮ, ಮಾರ್ಚಂಡ ಮಂದಣ್ಣ ದ್ವಿತೀಯ ಸ್ಥಾನವನ್ನು ಗಳಿಸಿದರು. ವಿಜೇತರಿಗೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಅಂಚೆ ಇಲಾಖೆಯ ನಿವೃತ್ತ ನೌಕರ ಬಾರಿಕೆರ ಜನಾರ್ಧನ್, ಹೆಚ್.ಎ.ಎಲ್ ನ ನಿವೃತ್ತ ಉದ್ಯೋಗಿ ಅನ್ನಾಡಿಯಂಡ ಪ್ರದೀಪ್…

Read More

ಮಡಿಕೇರಿ ಅ.16 NEWS DESK  : ನಗರದ ಐತಿಹಾಸಿಕ ಶ್ರೀಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿ ವತಿಯಿಂದ ಅ.26 ರಂದು ದೇವಾಲಯದ ಆವರಣದಲ್ಲಿ ಶಾಂತಿಪೂಜೆ ನಡೆಯಲಿದೆ. ಅ.16 ರಂದು ನಡೆಯಬೇಕಾಗಿದ್ದ ಲಕ್ಕಿಡಿಪ್ ಡ್ರಾವನ್ನು ಶಾಂತಿಪೂಜೆಯಂದೇ ಮಾಡಲಾಗುವುದು ಎಂದು ಸಮಿತಿಯ ಅಧ್ಯಕ್ಷ ಬಿ.ವಿ.ಅರವಿಂದ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 48ನೇ ವರ್ಷದ ಶ್ರೀಕೋಟೆ ಮಹಾಗಣಪತಿ ದಸರಾ ಉತ್ಸವದಲ್ಲಿ ಎಲ್ಲರ ಸಹಕಾರದಿಂದ ಮಂಟಪದ ಶೋಭಾಯಾತ್ರೆ ಯಶಸ್ವಿಯಾಗಿದ್ದು, ಪ್ರಥಮ ಬಹುಮಾನ ಬಂದಿದೆ. ಶನಿವಾರ ಸಂಜೆ 7ಗಂಟೆಗೆ ನಡೆಯುವ ಶಾಂತಿಪೂಜೆಯಲ್ಲಿ ಸರ್ವಭಕ್ತರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಶಾಂತಿಪೂಜೆಗೂ ಮೊದಲು ನಗರದ ಪತ್ರಿಕಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ದಸರಾ ಪ್ರಯುಕ್ತ ಆಯೋಜಿಸಿದ್ದ ಲಕ್ಕಿಡಿಪ್ಪಿ ಡ್ರಾ ನಡೆಯಲಿದೆ. ಅದೃಷ್ಟವಂತರಿಗೆ ಆಕರ್ಷಕ ಬಹುಮಾನಗಳನ್ನು ಶಾಂತಿಪೂಜೆಯ ನಂತರ ದೇವಾಲಯದಲ್ಲೇ ನೀಡಲಾಗುವುದು ಎಂದು ಬಿ.ವಿ.ಅರವಿಂದ್ ಮಾಹಿತಿ ನೀಡಿದ್ದಾರೆ.

Read More

ಹುಣಸೂರು NEWS DESK ಅ.16 : ಕ್ಷೇತ್ರದ ಬೆಳೆಗಾರರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭರವಸೆ ನೀಡಿದ್ದಾರೆ. ಹುಣುಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ಡಿ.ದೇವರಾಜ ಅರಸು ತಂಬಾಕು ಹರಾಜು ಮಾರುಕಟ್ಟೆಗೆ ಭೇಟಿ ನೀಡಿದ ಅವರು ಹೊಗೆಸೊಪ್ಪು ಬೆಳೆಗಾರರ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಸಂಸದರು ಮೂಲಭೂತ ಸೌಲಭ್ಯ ಒದಗಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಂತೆ ತಿಳಿಸಲಾಗುವುದು ಎಂದರು. ಬೆoಗಳೂರಿನಲ್ಲಿರುವ ನಿರ್ದೇಶಕರ ಕಚೇರಿಯನ್ನು ಮೈಸೂರಿಗೆ, ಮೈಸೂರಿನಲ್ಲಿರುವ ಆರ್.ಎಂ.ಒ ಕಚೇರಿಯನ್ನು ಹುಣಸೂರು ಉಪ ವಿಭಾಗಕ್ಕೆ ಸ್ಥಳಾಂತರಿಸುವ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಅಧಿಕಾರಿಗಳು ರೈತರ ನೆರವಿಗೆ ನಿಲ್ಲಬೇಕು, ಬೆಲೆ ಏರಳಿತವಾಗದಂತೆ ನೋಡಿಕೊಳ್ಳಬೇಕು. ರೈತರ ಹಿತ ಕಾಪಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಯದುವೀರ್ ಭರವಸೆ ನೀಡಿದರು. ಈ ಸಂದರ್ಭ ಮಾಜಿ ಶಾಸಕ ಬಸವರಾಜು, ತಂಬಾಕು ಮಂಡಳಿಯ ಸದಸ್ಯ ಹಬ್ಬನಕುಪ್ಪೆ ದಿನೇಶ್, ವಿಕ್ರಂರಾಜೇ…

Read More

ನಾಪೋಕ್ಲು ಅ.16 NEWS DESK : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 28ನೇ ವರ್ಷದ ಕಾವೇರಿ ರಥಯಾತ್ರೆ ಅ.16 ಮತ್ತು 17 ರಂದು ನಡೆಯಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣ್ಣಪ್ಪ ಹೇಳಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕಾಶಿ ಎಂದು ಪ್ರಖ್ಯಾತಿ ಪಡೆದಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಪ್ರತಿಮೆಯ ಭವ್ಯವಾದ ಪುಷ್ಪಾಲಂಕೃತ ಮೆರವಣಿಗೆಯು ನಾಪೋಕ್ಲುವಿನ ರಾಮಮಂದಿರದಿಂದ ಹೊರಡಲಿದ್ದು ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚೇರಂಬಾಣೆ, ಚೆಟ್ಟಿಮಾನಿ ಮಾರ್ಗವಾಗಿ ಭಾಗಮಂಡಲ-ತಲಕಾವೇರಿಗೆ ತೆರಳಲಿದೆ. ತಲಕಾವೇರಿಗೆ ತೆರಳಿ ತೀರ್ಥೋದ್ಭವದ ಬಳಿಕ ವಿವಿಧ ಸ್ಥಳಗಳಲ್ಲಿ ತೀರ್ಥ ವಿತರಿಸಿ ಪಾಲೂರಿನ ಸತ್ಯ ಹರಿಶ್ಚಂದ್ರ ದೇವಾಲಯದ ಕಾವೇರಿ ನದಿಯಲ್ಲಿ ತಾಯಿ ಕಾವೇರಿ ಮಾತೆಯ ಕಳಶ ವಿಸರ್ಜನೆಯೊಂದಿಗೆ ಅಂತ್ಯಗೊಳ್ಳಲಿದೆ ಎಂದರು. ಅ.17 ರಂದು ಬೆಳಿಗ್ಗೆ 9.30 ಗಂಟೆಗೆ ಭಾಗಮಂಡಲದಿಂದ ರಥಯಾತ್ರೆ ಆರಂಭಗೊಳ್ಳಲಿದ್ದು ಚೇರಂಗಾಲ, ಅಯ್ಯಂಗೇರಿ, ಪುಲಿಕೋಟು, ಪೇರೂರು, ಬಲ್ಲಮಾವಟಿ, ಚೋನಕೆರೆ ಮೂಲಕ ಭಕ್ತಾದಿಗಳಿಗೆ ಪುಣ್ಯ ತೀರ್ಥವನ್ನು ವಿತರಣೆ ಮಾಡುತ್ತಾ…

Read More

ಕುಶಾಲನಗರ ಅ.16 NEWS DESK : ಕುಶಾಲನಗರದಲ್ಲಿ ಆಯುಷ್ ಇಲಾಖೆ ಆಸ್ಪತ್ರೆಗೆ ಸಂಬಂಧಿಸಿದಂತೆ ರು. 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಟ್ಟಡಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯತಿ ವತಿಯಿಂದ ನಡೆಯುವ ಕಾಮಗಾರಿಯಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು, ಆಯುರ್ವೇದ ಚಿಕಿತ್ಸೆಗೆ ಸಂಬಂಧಪಟ್ಟಂತೆ ರೋಗಿಗಳಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಯೋಜನೆ ಇದಾಗಿದೆ ಎಂದು ಶಾಸಕರು ಮಾಹಿತಿ ಒದಗಿಸಿದರು. ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಂದಿ ಮೈಸೂರು ಮಂಗಳೂರು ಆಸ್ಪತ್ರೆಗಳನ್ನು ಅವಲಂಬಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಶಾಲನಗರದಲ್ಲಿ ಎಲ್ಲಾ ಸೌಲಭ್ಯಗಳೊಂದಿಗೆ ಆಯುರ್ವೇದ ಚಿಕಿತ್ಸೆಗೆ ಅವಕಾಶ ಲಭಿಸಲಿದೆ ಎಂದು ಹೇಳಿದರು. ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವೈದ್ಯರು ಸಮರ್ಪಕ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದರಲ್ಲದೆ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸಂಬಂಧಿಸಿದ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಕಿವಿ ಮಾತು ಹೇಳಿದರು. ಇದೇ ಸಂದರ್ಭ ಆಸ್ಪತ್ರೆಯ ನಿರ್ವಹಣೆಗಾಗಿ ಹೆಚ್ಚುವರಿ 10 ಲಕ್ಷ ರೂಗಳ ಅನುದಾನ ಕಲ್ಪಿಸಲಾಗಿದೆ ಎಂದು ಶಾಸಕರು…

Read More