ಲೇಖಕ: admin

ಮಡಿಕೇರಿ ನ.7 NEWS DESK : ಹಲವು ಹಗರಣಗಳ ಆರೋಪ ಎದುರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪರ ದಲಿತ ಸಂಘರ್ಷ ಸಮಿತಿಯ ಹೆಸರಿನಲ್ಲಿ ಕೆಲವರು ನಡೆಸಿರುವ ಅರೆಬೆತ್ತಲೆ ಪ್ರತಿಭಟನೆ ಹಾಸ್ಯಾಸ್ಪದವಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದವರು ಕಾಂಗ್ರೆಸ್ ಪಕ್ಷದ ಅಂಗಸಂಸ್ಥೆಗೆ ಸೇರಿದವರಂತೆ ವರ್ತಿಸಿ ಪರಿಶಿಷ್ಟರ ಹಾದಿ ತಪ್ಪಿಸುವ ಯತ್ನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದಿಂದ ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಇತ್ತೀಚೆಗೆ ಬಯಲಿಗೆ ಬಂದಿರುವ ಹಗರಣಗಳೇ ಸಾಕ್ಷಿ ಹೇಳುತ್ತಿವೆ. ಪರಿಶಿಷ್ಟರ ಅಭ್ಯುದಯಕ್ಕಾಗಿ ಮೀಸಲಿಟ್ಟ ಸಾವಿರಾರು ಕೋಟಿ ರೂ. ಅನುದಾನ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿದ್ದ ಪರಿಶಿಷ್ಟರ ಅನುದಾನ ದುರುಪಯೋಗವಾಗಿದೆ, ಮೂಡ ಜಾಗ ನಿಯಮ ಬಾಹಿರವಾಗಿ ಮಂಜೂರಾಗಿದೆ. ಪರಿಶಿಷ್ಟರ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಇದೆಲ್ಲವನ್ನು ಮುಂದಿಟ್ಟುಕೊಂಡು ಪರಿಶಿಷ್ಟರ ಪರವಾಗಿ ಬಿಜೆಪಿ ನಿರಂತರವಾಗಿ…

Read More

ಪುತ್ತೂರು ನ.7 NEWS DESK : ಯಾವುದೇ ಅಪರಾಧವನ್ನು ಮಾಡಿ ಪೊಲೀಸ್ ಕೇಸುಗಳಾದರೆ ಅದರಿಂದ ಬಿಡಿಸಿಕೊಳ್ಳುವುದು ತುಂಬಾ ಕಷ್ಟ, ಇದರಿಂದ ವಿದ್ಯಾರ್ಥಿಯೊಬ್ಬನ ಜೀವನವೇ ಹಾಳಾಗಬಹುದು ಹೀಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಅವಶ್ಯಕ ಎಂದು ಪುತ್ತೂರಿನ ಮಹಿಳಾ ಠಾಣೆಯ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಭವಾನಿ ಗೌಡ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆ್ಯಂಟಿ ರ್ಯಾಗಿಂಗ್ ಕಮಿಟಿ, ಆ್ಯಂಟಿ ರ್ಯಾಗಿಂಗ್ ಸ್ಕ್ವಾಡ್ ಮತ್ತು ಕಾಲೇಜು ಆಂತರಿಕ ದೂರು ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಕಠಿಣ ಕಾನೂನುಗಳಿದ್ದು ಇದರ ಸದ್ಭಳಕೆಯನ್ನು ಮಾಡಿಕೊಳ್ಳಬೇಕು. ಸುಳ್ಳು ದೂರುಗಳನ್ನು ನೀಡುವುದು ಕೂಡಾ ಅಪರಾಧವಾಗುತ್ತದೆ ಎಂದರು. ವಿವಿಧ ದೂರುಗಳನ್ನು ಆಧರಿಸಿ ತಮ್ಮ ಅನುಭವಗಳನ್ನು ಎಳೆ ಎಳೆಯಾಗಿ ಹಂಚಿಕೊಂಡ ಅವರು ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಪೋಕ್ಸೋ ಕಾಯ್ದೆ, ಬಾಲಕಾರ್ಮಿಕರು, ಬಾಲ್ಯವಿವಾಹ ಸೈಬರ್ ಕ್ರೈಂ ಗಳ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಜಾಲತಾಣಗಳನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿದರೆ…

Read More

ಕುಶಾಲನಗರ ನ.7 NEWS DESK :  ಕಾಡಾನೆಗಳಿಂದ ನಿರಂತರವಾಗಿ ಬೆಳೆ ಹಾಗೂ ಸ್ವತ್ತು ನಷ್ಟವಾಗುತ್ತಿದ್ದರೂ ಕೂಡ ಅರಣ್ಯ ಇಲಾಖೆ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಗೆ ತಾಕೀತು ಮಾಡಿ ಬೆಳೆ ನಷ್ಟ ಪರಿಹಾರ ಕೊಡಿಸಬೇಕೆಂದು ಗ್ರಾಮಸಭೆಯಲ್ಲಿ ಏಳನೇ ಹೊಸಕೋಟೆ ಗ್ರಾ.ಪಂ ವ್ಯಾಪ್ತಿಯ ಕೃಷಿಕರು ಒತ್ತಾಯಿಸಿದರು. ಏಳನೇ ಹೊಸಕೋಟೆ ಗ್ರಾ.ಪಂ ಸಭಾಂಗಣದಲ್ಲಿ ಅಧ್ಯಕ್ಷ ಇ.ಬಿ.ಜೋಸೆಫ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ತೊಂಡೂರು, ಕಂಬಿಬಾಣೆ ಹಾಗೂ ಏಳನೇ ಹೊಸಕೋಟೆಯ ರೈತರು ಹಾಗೂ ಸಾರ್ವಜನಿಕರು ಆಗ್ರಹಿಸಿದರು. ಕಾಡಾನೆಗಳ ಹಾವಳಿ ನಿರಂತರವಾಗಿದ್ದರೂ ಕೂಡ ಅರಣ್ಯ ಇಲಾಖೆ ಆನೆಗಳ ತಡೆಗೆ ಯೋಜನೆ ರೂಪಿಸುತ್ತಿಲ್ಲ. ತೊಂಡೂರು ವ್ಯಾಪ್ತಿಯ ಅರಣ್ಯದಂಚಿನಲ್ಲಿ ರೈಲ್ವೆ ಕಂಬಿ ತಡೆಗೋಡೆ ಕಾಮಗಾರಿ ಅಪೂರ್ಣಗೊಂಡಿದೆ. ಕಾಡಾನೆಗಳಿಂದ ಆಗುತ್ತಿರುವ ಬೆಳೆ ನಷ್ಟ ಪರಿಹಾರಕ್ಕಾಗಿ ಕಚೇರಿಗೆ ಅಲೆದು ಚಪ್ಪಲಿ ಸವೆದರೂ ಕೂಡ ಪರಿಹಾರ ಮಾತ್ರ ನಯಾಪೈಸೆ ಬರಲಿಲ್ಲ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದರು. ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಂಚಿನಲ್ಲಿ ಯೋಜಿಸಿರುವ ಹೊಸ ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ನೀಡುವ…

Read More

ವಿರಾಜಪೇಟೆ ನ.7 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಈ ಸಾಲಿನಲ್ಲಿ ನೀಡಲಾದ ಕೆ.ಎಂ.ಎ. ಪ್ರತಿಭಾ ಪುರಸ್ಕಾರವನ್ನು ಒಟ್ಟು 29 ವಿದ್ಯಾರ್ಥಿಗಳು ಪಡೆದುಕೊಂಡರು. ವಿರಾಜಪೇಟೆಯ ಸೇಂಟ್ ಆನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2024 ವಿತರಣಾ ಸಮಾರಂಭದಲ್ಲಿ ಸಂಸ್ಥೆಯ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಸಂಶನಾ ಪತ್ರವನ್ನು ನೀಡಿ ಗೌರವಿಸಲಾಯಿತು. ಕೆ.ಎಂ.ಎ. ಪ್ರತಿಭಾ ಪುರಸ್ಕಾರ- 2024ರ ಮದರಸ 5ನೇ ತರಗತಿ ವಿಭಾಗದಲ್ಲಿ ಪುದಿಯಾಣೆರ ಎನ್. ತಮ್ಮನ್ನ, ಪ್ರಥಮ (ತಂಝಿದುಲ್ ಇಸ್ಲಾಂ ಮದರಸ, ಚಾಮಿಯಾಲ), 7ನೇ ತರಗತಿ ವಿಭಾಗದಲ್ಲಿ ದುದ್ದಿಯಂಡ ಎಂ. ಹರ್ಷಾನ (ಬುಸ್ತಾನುಲ್ ಉಲೂಮ್ ಮದರಸ, ನಲ್ವತ್ತೋಕ್ಲು) ಪ್ರಥಮ, ಕುಪ್ಪೋಡಂಡ ಎ.ಶಾಕಿರಲಿ (ನಜ್ಮುಲ್ ಹುದ ಮದರಸ, ಎಡಪಾಲ) ದ್ವಿತೀಯ, ಕೋಳುಮಂಡ ಎ. ಮೊಹಮ್ಮದ್ ಸಿನಾನ್ (ನುಶ್ರತುಲ್ ಇಸ್ಲಾಂ ಮದರಸ, ಕೊಮ್ಮತೋಡು) ತೃತೀಯ ಸ್ಥಾನ ಪಡೆದರೆ, 10ನೇ ತರಗತಿ ವಿಭಾಗದಲ್ಲಿ ಕಿಕ್ಕರೆ ಯು. ಮೊಹಮ್ಮದ್ ಇಲ್ಯಾಸ್…

Read More

ವಿರಾಜಪೇಟೆ ನ.7 NEWS DESK : ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರ ಮೇಲಿದೆ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಕೆ.ಬಸವರಾಜು ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಎನ್.ಎಸ್.ಎಸ್ ಘಟಕವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಕನ್ನಡ ನಾಡು, ನುಡಿ, ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರ ಮೇಲಿದೆ. ಕನ್ನಡದ ಮೇಲಿನ ಅಭಿಮಾನ  ಒಂದು ದಿನಕ್ಕೆ ಮಾತ್ರ ಸೀಮಿತವಾಗಿರುವಂತದ್ದಲ್ಲ ಕನ್ನಡ ನಮ್ಮ ಉಸಿರಾಗಬೇಕು. ಕನ್ನಡವೆನ್ನುವಂಥದ್ದು ಹಲವು ಭಾಷೆಗಳೊಂದಿಗೆ ಒಡಮೂಡಿ ಬಂದಂತಹ ಸುಂದರ ಭಾಷೆಯಾಗಿದೆ. ಜಗತ್ತಿನಲ್ಲಿ ಮಾತನಾಡಿದಂತೆ ಬರೆಯುವ, ಬರೆದಂತೆ ಓದುವ , ಓದಿದಂತೆ ಮಾತನಾಡುವ ಭಾಷೆ ಎಂದರೆ ಕನ್ನಡ ಮಾತ್ರ. ಪ್ರಸ್ತುತ ಸಮಾಜವನ್ನು ತೆಗೆದುಕೊಂಡಾಗ ಇತರೆ ಪ್ರಾದೇಶಿಕ ಭಾಷೆಗಳು ಹಾಗೂ ಹೊರ ರಾಜ್ಯದ ಭಾಷೆಗಳಿಂದಾಗಿ ಕನ್ನಡ ತುಳಿತಕ್ಕೆ ಒಳಗಾಗುತ್ತಿದೆ. ಇದು ಸರಿಯಲ್ಲ ಎಂಟು ಜ್ಞಾನಪೀಠ ಪ್ರಶಸ್ತಿ, ಒಂದು ಸರಸ್ವತಿ ಸಮ್ಮಾನ್, ಮೂರು ರಾಷ್ಟ್ರಕವಿಗಳನ್ನು ಹೊಂದಿದ…

Read More

ಗೋಣಿಕೊಪ್ಪಲು ನ.7 NEWS DESK : ಪೊನ್ನಂಪೇಟೆ ತಾಲ್ಲೂಕಿಗೆ ಆಗಮಿಸುತ್ತಿರುವ ಕನ್ನಡ ಜ್ಯೋತಿ ರಥವನ್ನು ಅದ್ದೂರಿಯಾಗಿ ಸ್ವಾಗತಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಗೌರವಿಸಿ ಬೀಳ್ಕೊಡಬೇಕೆಂದು ಎಂದು ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರು ಮತ್ತು ತಾಲ್ಲೂಕು ದಂಡಾಧಿಕಾರಿ ಕೆ.ಎನ್.ಮೋಹನ್ ಕುಮಾರ್ ನುಡಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ಜಿಲ್ಲೆಯಲ್ಲಿ ಡಿ. 20,21,22 ರಂದು ನಡೆಯಲಿದ್ದು ಸಮ್ಮೇಳನದ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥವನ್ನು ಸ್ವಾಗತಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.  ಸಭೆಯಲ್ಲಿ ಉಪಸಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡುತ್ತಾ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿರುವ ಭುವನೇಶ್ವರಿ ದೇವಾಲಯದಿಂದ ಹೊರಟ ಕನ್ನಡ ಜ್ಯೋತಿ ಹೊತ್ತ ರಥವು ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸಾಹಿತ್ಯ ಸಮ್ಮೇಳನದ ಕುರಿತು ಜನರಿಗೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ. ಆ ರಥವು ಡಿ.10 ಮತ್ತು 11ರಂದು ಕೊಡಗು ಜಿಲ್ಲೆಯಲ್ಲಿ ಸಂಚರಿಸಲಿದ್ದು ಸಂಪಾಜೆ…

Read More

ನಾಪೋಕ್ಲು ನ.7 NEWS DESK : ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತಾವು ದೇವಾಲಯದಲ್ಲಿ ನಾಡಿನ ಸುಭಿಕ್ಷೆಗಾಗಿ ಏಕಾದಶ ರುದ್ರ ವಿಶೇಷ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮುಂಜಾನೆಯಿಂದಲೇ ವಿಶೇಷ ಪೂಜಾ ವಿಧಿ ವಿಧಾನಗಳ ಜರುಗಿತು. ಮಧ್ಯಾಹ್ನ ಮಹಾಪೂಜೆ ಬಳಿಕ ತೀರ್ಥ ಪ್ರಸಾದ ವಿತರಣೆ, ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಅರ್ಚಕರಾದ ಗುತ್ತಿಗಾರಿನ ಶಿವಸುಬ್ರಹ್ಮಣ್ಯ ಜೋಯಿಸ, ಪೈಚಾರಿನ ಸುಬ್ರಮಣ್ಯ ಭಟ್, ಕಲ್ಮಡ್ಕದ ಅರುಣ್ ಶಂಕರ್ ಭಟ್, ದೇವಾಲಯದ ಮುಖ್ಯ ಅರ್ಚಕ ದಿವಾಕರ ಏಕಾದಶ ರುದ್ರ ಪೂಜೆಯನ್ನು ನೆವೇರಿಸಿದರು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು, ದೇವಾಲಯದ, ಆಡಳಿತ ಮಂಡಳಿ ಪದಾಧಿಕಾರಿಗಳು, ಹಾಗೂ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More

ಸೋಮವಾರಪೇಟೆ ನ.7 NEWS DESK : ಕಿರಗಂದೂರು ಗ್ರಾಮದ ಜನತಾಕಾಲನಿಯ ಶ್ರೀ ಮಂಜುನಾಥ ಸ್ವಸಹಾಯ ಸಂಘದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ವಿಷನ್‍ಸ್ಪ್ರಿಂಗ್ ಫೌಂಡೇಶನ್ ಸಂಸ್ಥೆ ತಜ್ಞರು ನೇತ್ರಪರೀಕ್ಷೆ ನಡೆಸಿದರು. 114 ಮಂದಿ ಪರೀಕ್ಷೆ ಮಾಡಿಸಿಕೊಂಡರು. 80 ಮಂದಿಗೆ ಸ್ಥಳದಲ್ಲೇ ಕನ್ನಡಕ ವಿತರಿಸಲಾಯಿತು. ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಅದರಲ್ಲೂ ಕೂಲಿ ಕಾರ್ಮಿಕರು ಕಣ್ಣಿನ ಅರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ದೃಷ್ಟಿ ಮಂಕಾದ ಸಂದರ್ಭ ಪರೀಕ್ಷೆ ಮಾಡಿಸಿಕೊಂಡು ಕನ್ನಡಕ ಹಾಕಿಕೊಂಡರು ಸಮಸ್ಯೆ ಬಗೆಹರಿಯುತ್ತದೆ. ಎಲ್ಲಾ ಕಾಲನಿಗಳಲ್ಲಿ ವರ್ಷಗೊಮ್ಮೆಯಾದರೂ ಉಚಿತ ಶಿಬಿರಗಳು ನಡೆದರೆ ಬಡವರಿಗೆ, ವೃದ್ಧರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು. ಫೌಂಡೇಶನ್‍ನ ಸಿಬ್ಬಂದಿಗಳಾದ ಆಶಿಶ್ ಚೌದರಿ, ಅಮಿತ್ ಕುಮಾರ್, ಪುಷ್ಪೇಂದ್ರಯಾದವ್ ಸಂಘದ ಕಾರ್ಯದರ್ಶಿ ಟಿ.ಜೆ.ಗೋಪಾಲ್, ನಾವು ಪ್ರತಿಷ್ಠಾನದ ಪಿ.ಬಿ.ಪೊನ್ನಪ್ಪ ಇದ್ದರು.  

Read More

ಮಡಿಕೇರಿ ನ.7 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಮಾಡುವ ಮೂಲಕ ಕನ್ನಡ ಸಾಹಿತ್ಯದ ಪರಿಚಯವನ್ನು ವಿದ್ಯಾರ್ಥಿ ಗಳಿಗೆ ಮಾಡಿಕೊಡುತ್ತಿರುವುದು ಶ್ಲಾಘನೀಯ ಎಂದು  ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಬೋಡಂಗಡ ಅಯ್ಯಪ್ಪ ನುಡಿದರು.  ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಮಂಗಲ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದಕನ್ನಡ ರಾಜ್ಯೋತ್ಸವ, ದತ್ತಿನಿಧಿ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದರು.ಮುಂದುವರೆದ ಅವರು ಕೊಡಗಿನ ಗಡಿಭಾಗವಾದ ಶ್ರೀಮಂಗಲ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳ ಅವಶ್ಯಕತೆ ತುಂಬಾ ಇದ್ದು, ಗಡಿ ಪ್ರದೇಶದ ಎಲ್ಲಾ ಶಾಲೆಗಳಲ್ಲೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ, ಸಾಹಿತ್ಯ ಪರಿಷತ್ತು ದತ್ತಿನಿಧಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ…

Read More

ವಿರಾಜಪೇಟೆ ನ.7 NEWS DESK : ಮಡಿಕೇರಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗುಂಪು ನೃತ್ಯ ಪ್ರದರ್ಶಿಸಿ, ಏಡ್ಸ್ ಭಾದಿತ ವ್ಯಕ್ತಿಗೆ ಬಳಸಿದ ಸೂಜಿಯನ್ನು ಇತರರು ಬಳಸುವುದರಿಂದ ಹೇಗೆ ಏಡ್ಸ್ ಹರಡುತ್ತದೆ, ಏಡ್ಸ್ ಹರಡದಂತೆ ವಹಿಸ ಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಹಾಗೂ ಏಡ್ಸ್ ಭಾದಿತರನ್ನು ಸಮಾಜದಲ್ಲಿ ಕೀಳಾಗಿ ನೋಡಬಾರದು, ನಮ್ಮಂತೆ ಮನುಷ್ಯರು ಸಮಾಜದಲ್ಲಿ ಅವರಿಗೂ ಸಮಾನವಾಗಿ ಬದುಕುವ ಹಕ್ಕನ್ನು ನೀಡಬೇಕೆಂಬುದನ್ನು ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಪ್ರದರ್ಶಿಸಿ ಏಡ್ಸ್ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ ಐಸಿಟಿಸಿ ಕೇಂದ್ರದ ಆಪ್ತ ಸಮಾಲೋಚಕರಾದ ಚಿಟ್ಟಿಯಪ್ಪ, ವಿರಾಜಪೇಟೆ ಖಾಸಗಿ ಬಸ್ ಚಾಲಕರ ಸಂಘದ ಅಧ್ಯಕ್ಷ ಕುಂಬೆಯಂಡ ಸುರೇಶ್, ಸದಸ್ಯರಾದ ಜ್ಯೂಡಿವ್ಯಾಜ್, ಮಂಜುನಾಥ್, ಕಾಲೇಜಿನ ಉಪನ್ಯಾಸಕರಾದ ಸೋಮಣ್ಣ ನಾಗರಾಜು, ಆಡಳಿತ ಸಿಬ್ಬಂದಿ ಹರೀಶ್ ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿ…

Read More