ಕುಶಾಲನಗರ ಅ.16 NEWS DESK : ಕುಶಾಲನಗರದಲ್ಲಿ ಆಯುಷ್ ಇಲಾಖೆ ಆಸ್ಪತ್ರೆಗೆ ಸಂಬಂಧಿಸಿದಂತೆ ರು. 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಟ್ಟಡಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯತಿ ವತಿಯಿಂದ ನಡೆಯುವ ಕಾಮಗಾರಿಯಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು, ಆಯುರ್ವೇದ ಚಿಕಿತ್ಸೆಗೆ ಸಂಬಂಧಪಟ್ಟಂತೆ ರೋಗಿಗಳಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಯೋಜನೆ ಇದಾಗಿದೆ ಎಂದು ಶಾಸಕರು ಮಾಹಿತಿ ಒದಗಿಸಿದರು. ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಂದಿ ಮೈಸೂರು ಮಂಗಳೂರು ಆಸ್ಪತ್ರೆಗಳನ್ನು ಅವಲಂಬಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಶಾಲನಗರದಲ್ಲಿ ಎಲ್ಲಾ ಸೌಲಭ್ಯಗಳೊಂದಿಗೆ ಆಯುರ್ವೇದ ಚಿಕಿತ್ಸೆಗೆ ಅವಕಾಶ ಲಭಿಸಲಿದೆ ಎಂದು ಹೇಳಿದರು. ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವೈದ್ಯರು ಸಮರ್ಪಕ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದರಲ್ಲದೆ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸಂಬಂಧಿಸಿದ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಕಿವಿ ಮಾತು ಹೇಳಿದರು. ಇದೇ ಸಂದರ್ಭ ಆಸ್ಪತ್ರೆಯ ನಿರ್ವಹಣೆಗಾಗಿ ಹೆಚ್ಚುವರಿ 10 ಲಕ್ಷ ರೂಗಳ ಅನುದಾನ ಕಲ್ಪಿಸಲಾಗಿದೆ ಎಂದು ಶಾಸಕರು…
ಲೇಖಕ: admin
ಕುಶಾಲನಗರ ಅ.16 NEWS DESK : ನೂತನ ತಂತ್ರಜ್ಞಾನದ ಅರಿವಿನೊಂದಿಗೆ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆ ನೀಡುವ ಕಾಯಕವನ್ನು ಸೌಂದರ್ಯ ತಜ್ಞರು ಅಳವಡಿಸಿಕೊಳ್ಳಬೇಕು ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ಕುಶಾಲನಗರದಲ್ಲಿ ತಾಲ್ಲೂಕು ಸೌಂದರ್ಯ ವರ್ಧಕರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಸಂಘದ ಫಲಕ ಅನಾವರಣಗೊಳಿಸಿ ಮಾತನಾಡಿದರು. ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದಸ್ಯರುಗಳು ಸಂಘದ ಮೂಲಕ ಸಂಘಟಿತರಾಗಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು. ರಾಜ್ಯಮಟ್ಟದಲ್ಲಿ ಸಂಘಟನೆಯ ಮೂಲಕ ಬೇಡಿಕೆಗಳ ಬಗ್ಗೆ ಸರಕಾರದ ಗಮನ ಸೆಳೆದು ವಿಶೇಷ ಅನುದಾನಗಳನ್ನು ಕಲ್ಪಿಸಿಕೊಳ್ಳುವಂತಾಗಬೇಕು. ಈ ಸಂಬಂಧ ತಾನು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಮಂತರ್ ಗೌಡ ಭರವಸೆ ನೀಡಿದರು. ಜಿಲ್ಲಾ ಮಟ್ಟದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರದ ಅಧಿಕಾರಿಗಳಿಂದ ಬ್ಯೂಟಿ ಪಾರ್ಲರ್ ಕೇಂದ್ರಗಳ ಮಾಲೀಕರುಗಳಿಗೆ ಉಂಟಾಗುತ್ತಿರುವ ಕಿರಿಕಿರಿಯನ್ನು ತಪ್ಪಿಸುವ ಸಲುವಾಗಿ ತಾನು ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಹೇಳಿದರು. ಬ್ಯೂಟಿ ಪಾರ್ಲರ್ ಕೇಂದ್ರಗಳಿಗೆ ಸಂಬಂಧಿಸಿದಂತೆ ಸರಕಾರದ ಯೋಜನೆ…
ಮಡಿಕೇರಿ ಅ.15 NEWS DESK : ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಭಾಗಮಂಡಲದಲ್ಲಿ ನಡೆದಿದೆ. ಚೇರಂಗಾಲ ನಿವಾಸಿ ಮತ್ತಾರಿಮನೆ ಕರುಣಾಕರ(34) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕರುಣಾಕರ ಹಾಗೂ ಮತ್ತಿಬ್ಬರು ಚೇರಂಗಾಲದಿಂದ ಸುಮಾರು 1.5 ಕಿ.ಮೀ ದೂರದ ಪ್ರದೇಶದಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಇಬ್ಬರು ಕಾಡಾನೆಯಿಂದ ತಪ್ಪಿಸಿಕೊಂಡಿದ್ದಾರೆ, ಆದರೆ ಕರುಣಾಕರ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಅರಣ್ಯಾಧಿಕಾರಿಗಳು ಹಾಗೂ ಭಾಗಮಂಡಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆಟ್ಟಳ್ಳಿ ಅ.15 NEWS DESK : ಚೆಟ್ಟಳ್ಳಿಯ ಪುರಾತನ ಶ್ರೀಮಂಗಲ ಶ್ರೀ ಭಗವತಿ ದೇವಾಲಯದಲ್ಲಿ ಕಾವೇರಿ ಸಂಕ್ರಮಣದ ಹಿನ್ನೆಲೆ ಕಾವೇರಿ ಸಂಕ್ರಮಣ ಧಾರೆ ಪೂಜೆ ನೆರವೇರಿತು. ವಿಘ್ನೇಶ್ವರ, ಕ್ಷೇತ್ರಪಾಲಕ, ನಾಗನೆಲೆಯಲ್ಲಿ ಪೂಜೆ ಸಲ್ಲಿಸಿದ ನಂತರ ಶ್ರೀ ಭಗವತಿ ನೆಲೆಯಲ್ಲಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಹಿರಿಯ ಅರ್ಚಕರಾದ ರಾಧಾಕೃಷ್ಣ ಭಗವತಿ ದೇವರಿಗೆ ವಿಶೇಷ ಪೂಜೆಸಲ್ಲಿಸಿ ಪ್ರಸಾದ ವಿತರಿಸಿದರು. ನಂತರ ಅನ್ನಸಂತರ್ಪಣೆ ನಡೆಯಿತು. ತಲಕಾವೇರಿಯಲ್ಲಿ ತೀರ್ಥೋದ್ಬವದ ನಂತರ ಊರಿನ ಹಿರಿಯರಾದ ಬಟ್ಟೀರ ಕಟ್ಟಿ ಕಾವೇರಿರಪ್ಪ ದೇವರ ನೆಲೆಯಲ್ಲಿ ಕಣಿಪೂಜೆ ನೆರವೇರಲಿದೆ.
ಸೋಮವಾರಪೇಟೆ ಅ.15 NEWS DESK : ಪಟ್ಟಣದ ಸಿಎಸ್ಐ ಸಂತ ಜಾನ್ ದೇವಾಲಯದಲ್ಲಿ ಫಲೋತ್ಸವ ಹಬ್ಬ ನಡೆಯಿತು. ಫಲೋತ್ಸವ ಆರಾಧನೆಯಲ್ಲಿ ತಾವು ಬೆಳೆದಂತಹ ಪ್ರಥಮ ಫಲಗಳನ್ನು ದೇವಾಲಯದೊಳಗೆ ಮೆರವಣಿಗೆ ಮೂಲಕ ತರಲಾಯಿತು. ಆರಾಧನೆಯನ್ನು ಸಭಾ ಪಾಲಕರಾದ ಸ್ಯಾಮುವೆಲ್ ಮನೋಜ್ ಕುಮಾರ್, ಸಹಾಯಕ ಸಭಾ ಪಾಲಕರಾದ ಪ್ರಿಯದರ್ಶಿನಿ ನಡೆಸಿಕೊಟ್ಟರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಫಾದರ್ ಸುಜೇಂದ್ರ ಡಗ್ಲಾಸ್ ಅವರು ಹಬ್ಬದ ಮಹತ್ವವನ್ನು ತಿಳಿಸಿದರು. ಪ್ರಥಮ ಫಲಗಳನ್ನು ದೇವಾಲಯದಲ್ಲಿ ಹರಾಜು ಮಾಡಲಾಯಿತು. ನಂತರ ಆಟೋಟ ಸ್ಪರ್ಧೆಗಳು ನಡೆದವು. ಸಭೆಯಲ್ಲಿ ಹಿರಿಯರಾದ ಪುಷ್ಪ ಜಾಯ್ ಅವರನ್ನು ಸನ್ಮಾನಿಸಲಾಯಿತು. ದೇವಾಲಯ ಆಡಳಿತ ಮಂಡಳಿ ಕಾರ್ಯದರ್ಶಿ ಚಾರ್ಲಿ, ಖಜಾಂಚಿ ಪುಷ್ಪ ಜಾಯ್, ಸಮಿತಿ ಸದಸ್ಯರಾದ ಅನಿಲ್ ಕೆ, ಡಯಾಸಿಸ್ ಕೌನ್ಸಿಲ್ ಸದಸ್ಯ ಸಾಲೋಮನ್ ಡೇವಿಡ್ ಇದ್ದರು.
ಮಡಿಕೇರಿ ಅ.15 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅ.17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ. ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತುಲಾ ಸಂಕ್ರಮಣ ಜಾತ್ರೆ ಸಂಬಂಧ ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆ ಬದಿಯಲ್ಲಿ ಕಾಡನ್ನು ಕಡಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆ ಮಾರ್ಗದ ರಸ್ತೆ ಗುಂಡಿಯನ್ನು ಮುಚ್ಚುವ ಕಾರ್ಯವಾಗಿದೆ. ಪೊಲೀಸ್ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಗೆಯೇ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗಿದೆ. ‘ತಲಕಾವೇರಿ ಜಾತ್ರೆ ಹಿನ್ನೆಲೆ ಭಾಗಮಂಡಲ ದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15…
ಬೆಂಗಳೂರು ಅ.15 NEWS DESK : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಗೆ ಅನುಗುಣವಾಗಿ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ (SWR) ನಿರ್ಧರಿಸಿದೆ. ಬೆಂಗಳೂರು-ಕಲಬುರಗಿ ಎಕ್ಸ್ಪ್ರೆಸ್ ವಿಶೇಷ ರೈಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ನಿಂದ ಅ.30 ಮತ್ತು ನವೆಂಬರ್ 2, 2024 ರಂದು ರಾತ್ರಿ 9.15 ಕ್ಕೆ ಹೊರಟು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಅಡೋಣಿ, ಮಂತ್ರಾಲಯ ರಸ್ತೆ, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಿಗ್ಗೆ 7.40 ಕ್ಕೆ ಕಲಬುರಗಿ ತಲುಪಲಿದೆ ಎಂದು ಎಸ್ಡಬ್ಲ್ಯೂಆರ್ ತಿಳಿಸಿದೆ. ಕಲಬುರಗಿ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಬೆಳಿಗ್ಗೆ 9.35 ಕ್ಕೆ ಕಲಬುರಗಿಯಿಂದ ಹೊರಟು ಅದೇ ಮಾರ್ಗದಲ್ಲಿ ಅದೇ ದಿನ ರಾತ್ರಿ 8 ಗಂಟೆಗೆ ಎಸ್ಎಂವಿಟಿ, ಬೆಂಗಳೂರು ತಲುಪುತ್ತದೆ. ಈ ರೈಲು 12 ಜನರಲ್ ಸೆಕೆಂಡ್ ಕ್ಲಾಸ್…
:: NEWS DESK :: ಡೆಂಗ್ಯೂ (DENG-gey) ಜ್ವರವು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಇದು ಪ್ರಪಂಚದ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಸೌಮ್ಯವಾದ ಡೆಂಗ್ಯೂ ಜ್ವರವು ಹೆಚ್ಚಿನ ಜ್ವರ ಮತ್ತು ಜ್ವರ ತರಹದ ಲಕ್ಷಣಗಳನ್ನು ಉಂಟುಮಾಡುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವನ್ನು ಡೆಂಗ್ಯೂ ಹೆಮರಾಜಿಕ್ ಜ್ವರ ಎಂದೂ ಕರೆಯುತ್ತಾರೆ, ಇದು ಗಂಭೀರ ರಕ್ತಸ್ರಾವ, ರಕ್ತದೊತ್ತಡದಲ್ಲಿ ಹಠಾತ್ ಕುಸಿತ (ಆಘಾತ) ಮತ್ತು ಸಾವಿಗೆ ಕಾರಣವಾಗಬಹುದು. ಪ್ರತಿ ವರ್ಷ ಪ್ರಪಂಚದಾದ್ಯಂತ ಲಕ್ಷಾಂತರ ಡೆಂಗ್ಯೂ ಸೋಂಕಿನ ಪ್ರಕರಣಗಳು ಸಂಭವಿಸುತ್ತವೆ. ಡೆಂಗ್ಯೂ ಜ್ವರವು ಆಗ್ನೇಯ ಏಷ್ಯಾ, ಪಶ್ಚಿಮ ಪೆಸಿಫಿಕ್ ದ್ವೀಪಗಳು, ಲ್ಯಾಟಿನ್ ಅಮೇರಿಕಾ ಮತ್ತು ಆಫ್ರಿಕಾದಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಆದರೆ ಈ ರೋಗವು ಯುರೋಪ್ ಮತ್ತು ಯುನೈಟೆಡ್ ಸ್ಟೇಟ್ಸ್ನ ದಕ್ಷಿಣ ಭಾಗಗಳಲ್ಲಿ ಸ್ಥಳೀಯ ಏಕಾಏಕಿ ಸೇರಿದಂತೆ ಹೊಸ ಪ್ರದೇಶಗಳಿಗೆ ಹರಡುತ್ತಿದೆ. ಸಂಶೋಧಕರು ಡೆಂಗ್ಯೂ ಜ್ವರ ಲಸಿಕೆಗಳ ಮೇಲೆ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ, ಡೆಂಗ್ಯೂ ಜ್ವರ ಸಾಮಾನ್ಯವಾಗಿರುವ ಪ್ರದೇಶಗಳಲ್ಲಿ, ಸೊಳ್ಳೆಗಳಿಂದ ಕಚ್ಚುವುದನ್ನು ತಪ್ಪಿಸುವುದು ಮತ್ತು ಸೊಳ್ಳೆಗಳ ಸಂಖ್ಯೆಯನ್ನು…
ಬೆಂಗಳೂರು ಅ.15 NEWS DESK : ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ “ತಂಬಾಕು ಮುಕ್ತ ಯುವ ಅಭಿಯಾನ 2.0” ಕಾರ್ಯಕ್ರಮವನ್ನು ಉದ್ಘಾಟಿಸಿ, ಜಾಗೃತಿ ಜಾಥಾಗೆ ಚಾಲನೆ ನೀಡಿ, ನಂತರ ಪ್ರಮಾಣ ವಚನ ಬೋಧಿಸಿ ಅವರು ಮಾತನಾಡಿದರು. ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸಬೇಕು ಎಂದರು. ವಿಶ್ವ ಆರೋಗ್ಯ ಸಂಸ್ಥೆ (WHO) ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ…
ಮಡಿಕೇರಿ ಅ.15 NEWS DESK : ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ (ಭಾ.ಕೃ.ಅ.ತೋ.ಸಂ.ಸಂ.)ದ ವತಿಯಿಂದ ‘ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆಯ ಜಾಗೃತಿ ಕಾರ್ಯಕ್ರಮ, ಹಣ್ಣುಗಳ ವೈವಿದ್ಯತಾ ಮೇಳ ಹಾಗೂ ಮ್ಯಾಂಗೋಸ್ಟೀನ್ ಮತ್ತು ರಾಂಬುಟಾನ್ ಹಣ್ಣಿನ ಕ್ಷೇತ್ರೋತ್ಸವವು ‘ಅಧಿಕ ಮೌಲ್ಯದ ವಿದೇಶಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿ ಸಂಘ, ಭಾ.ಕೃ.ಅ.ಪ. ಭಾ.ತೋ.ಸಂ.ಸಂ. ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ಚೆಟ್ಟಳ್ಳಿ, ಕೊಡಗು ಹಾಗೂ ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಸಹಯೋಗದೊಂದಿಗೆ ಅಕ್ಟೋಬರ್, 19 ರಂದು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ನವದೆಹಲಿಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರೈತರ ಹಕ್ಕುಗಳ ಕಾಯ್ದೆಯ ಅಧ್ಯಕ್ಷರಾದ ಡಾ.ಟ್ರಿಲೋಚನ್ ಮೊಹಪತ್ರ, ಬೆಂಗಳೂರು ಭಾ.ಕೃ.ಅ.ಪ.-ಭಾ.ತೋ.ಸಂ.ಸಂ. ನಿರ್ದೇಶಕರಾದ ಪ್ರೊ.ಟಿ.ಕೆ.ಬೆಹೆರ, ಗೌರವ ಅತಿಥಿಗಳಾಗಿ ನವ ದೆಹಲಿಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರೈತರ ಹಕ್ಕುಗಳ ಕಾಯ್ದೆಯ ಜಂಟಿ ಕುಲಸಚಿವರಾದ…






