ಮಡಿಕೇರಿ ನ.7 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ನವೆಂಬರ್, 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ನ.6 : ಕೊಡಗಿನ ಕ್ರೀಡಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕೊಡಗು ಪೊಲೀಸ್ ಇಲಾಖೆ ವತಿಯಿಂದ ಕೊಡಗು ಪೊಲೀಸ್ ಕ್ರಿಕೆಟ್ ಲೀಗ್ ಪಂದ್ಯಾವಳಿ ನ.9 ರಂದು ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಡಿವೈಎಸ್ಪಿ ಮಹೇಶ್ ಕುಮಾರ್ ಅವರ ಉಸ್ತುವಾರಿಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮಾಸ್ಟರ್ ಕಾಪ್ಸ್, ಸೂಪರ್ ಕಾಪ್ಸ್, ಡೈನಾಮಿಕ್ ಕಾಪ್ಸ್, ವಿಕ್ಟರಿ ಕಾಪ್ಸ್ ಮತ್ತು ಡೇರಿಂಗ್ ಕಾಪ್ಸ್ ತಂಡಗಳ ನಡುವೆ ಪ್ರಶಸ್ತಿಗಾಗಿ ಸೆಣಸಾಟ ನಡೆಯಲಿದೆ. ಶನಿವಾರ ಬೆಳಿಗ್ಗೆ 7.30 ಗಂಟೆಗೆ ಕೊಡಗು ಪೊಲೀಸ್ 11 ಮತ್ತು ಕೊಡಗು ಮೀಡಿಯಾ ವಾರಿಯರ್ಸ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಡಿಕೇರಿ NEWS DESK ನ.6 : ಕೊಡವ ಲ್ಯಾಂಡ್ ನಲ್ಲಿ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಡೆಯದಿದ್ದಲ್ಲಿ ಅತ್ಯಂತ ಸೂಕ್ಷ್ಮಾತಿ ಸೂಕ್ಷ್ಮ ಆದಿಮಸಂಜಾತ ಕೊಡವ ಕುಲದ ಅಸ್ತಿತ್ವಕ್ಕೆ ದಕ್ಕೆ ಬರಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಸಿಎನ್ಸಿ ವತಿಯಿಂದ ಬುಟ್ಟಂಗಾಲ ಜಂಕ್ಷನ್ ನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವ್ಯಾಪಕವಾಗಿ ದುರ್ಬಳಕೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದಾಪುರದ ಸಾವಿರಾರು ಎಕರೆ ಕಾಫಿ ತೋಟ ಸೇರಿದಂತೆ ಕೊಡಗಿನ ವಿವಿಧೆಡೆ ಕೃಷಿಭೂಮಿಯಲ್ಲಿ ಬೃಹತ್ ನಗರ ನಿರ್ಮಿಸುವ ಹುನ್ನಾರ ನಡೆಯುತ್ತಿದೆ. ಬರಪೊಳೆ, ಕೊಂಗಣಪೊಳೆ, ಕಾವೇರಿ ನದಿಯ ಉಪ ನದಿಗಳಿಗೆ ಜೀವ ಸೆಲೆಯಾಗಿರುವ ಕೊಡವ ಲ್ಯಾಂಡ್ನ ಆಯಕಟ್ಟಿನ ಸ್ಥಳವಾದ ಪೆರುಂಬಾಡಿ, ಬಾಳುಗೋಡು, ನಾಂಗಾಲ, ಬುಟ್ಟಂಗಾಲದಲ್ಲ್ಲಿ 2020-21ರ ಭೂಸುಧಾರಣಾ ತಿದ್ದುಪಡಿ ಕಾಯ್ದೆ ದುರ್ಬಳಕೆಯಾಗುತ್ತಿದೆ. ಬಂಡವಾಳಶಾಹಿ, ರೆಸಾರ್ಟ್ ಮಾಫಿಯಾ ಹಾಗೂ ಟೌನ್ಶಿಪ್ ಧಣಿಗಳು,…
ವಿರಾಜಪೇಟೆ ನ.6 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಮರ್ಥ ಕನ್ನಡಿಗರು ಸಂಸ್ಥೆ ವತಿಯಿಂದ ಮಡಿಕೇರಿ ನಗರ ಓಂಕಾರ ಸದನದಲ್ಲಿ ನಡೆದ “ನಿಮ್ಮ ಪ್ರತಿಭೆ-ನಮ್ಮ ವೇದಿಕೆ ನೃತ್ಯ ಸ್ಪರ್ಧೆಯಲ್ಲಿ, ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಭರತನಾಟ್ಯ, ಕನ್ನಡ ಹಾಡಿಗೆ ನೃತ್ಯ, ಹಾಗೂ ಜಾನಪದ ನೃತ್ಯ ಎಲ್ಲಾ ವಿಭಾಗ ದಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡು ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಸಂಸ್ಥೆಯ ವ್ಯವಸ್ಥಾಪಕರುಗಳಾದ ಗುರು ಹೇಮಾವತಿ ಕಾಂತ್ ರಾಜ್ ಹಾಗೂ ಗುರು ಕಾವ್ಯಶ್ರೀ ಕಾಂತ್ ರಾಜ್ ಹಾಗೂ ಪೋಷಕರು ಹಾಜರಿದ್ದರು.
ಪೊನ್ನಂಪೇಟೆ ನ.6 NEWS DESK : ಉನ್ನತ ಶಿಕ್ಷಣದಿಂದ ಸಾಮಾಜಿಕ ಸ್ಥಾನಮಾನ, ಸ್ವಾಭಿಮಾನದ ಬದುಕು ಗಳಿಸಲು ಸಾಧ್ಯ. ಜೊತೆಗೆ ಆರೋಗ್ಯಕರ ಮತ್ತು ಸಂಸ್ಕಾರಕ್ಕೆ ಸಮನಾಗಿರುವ ಉನ್ನತ ಶಿಕ್ಷಣದಿಂದ ಸಮಾಜದ ಸ್ವಾಸ್ಥ್ಯವೂ ಕಾಪಾಡಿಕೊಳ್ಳಬಹುದಾಗಿದೆ. ಆದ್ದರಿಂದ ಇದುವರೆಗೂ ಶಿಕ್ಷಣದಿಂದ ವಂಚಿತರಾಗಿದ್ದ ಹಿಂದುಳಿದ ಸಮುದಾಯದ ಪ್ರತಿಭಾವಂತರು ಹೆಚ್ಚು ಹೆಚ್ಚು ಸಿವಿಲ್ ಸರ್ವಿಸ್ ಪರೀಕ್ಷೆಗಳಿಗೆ ತಯಾರಾಗಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿವೃತ್ತ ಐ.ಪಿ.ಎಸ್. ಅಧಿಕಾರಿ ಯು.ನಿಸಾರ್ ಅಹಮದ್ ಹೇಳಿದರು. ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ) ಆಶ್ರಯದಲ್ಲಿ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2024 ವಿತರಣೆ ಮತ್ತು ಸನ್ಮಾನ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಆಧುನಿಕತೆ ಹಾಗೂ ತಂತ್ರಜ್ಞಾನದ ವೇಗದ ಜೊತೆಗೆ ಈಗ ಸ್ಪರ್ಧಾತ್ಮಕತೆಯೂ ಹೆಚ್ಚಿದೆ. ಹಾಗಾಗಿ ಈಗ ಒಬ್ಬ ವ್ಯಕ್ತಿ ಸದಾ ಹೊಸ ಹೊಸ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇಂದಿದೆ. ಅದಕ್ಕಾಗಿ ತನ್ನ ಜೀವನದ ಯಾವುದೇ ಸಮಯದಲ್ಲೂ…
ಮಡಿಕೇರಿ ನ.6 NEWS DESK : ಕೊಡಗು ಜಿಲ್ಲೆಯ ಸುಂಟಿಕೊಪ್ಪ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ದೊರೆತ ಅರೆಸುಟ್ಟ ಮೃತದೇಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪದಡಿ ತನಿಖೆ ಎದುರಿಸಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಹರಿಯಾಣ ರಾಜ್ಯದ ಕಾರ್ನಲ್ ಗರುಂದ ನಿವಾಸಿ ಅಂಕೂರ್ ರಾಣ(30) ಎಂಬಾತನನ್ನು ಕೊಡಗು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೆಲಾಂಗಣ ರಾಜ್ಯದಲ್ಲಿ ಸ್ಥಳ ಮಹಜರು ಮಾಡಲು ತೆರಳಿದ ಸಂದರ್ಭ ಮೂವರು ಆರೋಪಿಗಳಲ್ಲಿ ಅಂಕೂರ್ ರಾಣ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಸತತ 6 ದಿನಗಳಿಂದ ಕಾರ್ಯಾಚರಣೆ ನಡೆಸಿ ರಾಜಸ್ಥಾನದ ಕೋಟಾ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಪತಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ ತೆಲಂಗಾಣ ರಾಜ್ಯದ ಯಾದಾದ್ರಿ ಜಿಲ್ಲೆಯ ಮೋಂಗಿರ್ ನಗರದ ನಿಹಾರಿಕಾ ತನ್ನ ಸ್ನೇಹಿತ ಹರಿಯಾಣ ಮೂಲದ ಅಂಕೂರ್ ರಾಣನ ಸಹಾಯ ಪಡೆದಿದ್ದಾಳೆ. ಡ್ರಾಪ್ ಮಾಡುವ ನೆಪದಲ್ಲಿ ಪತಿ ರಮೇಶ್ ಕುಮಾರ್ ನ ಕಾರಿನಲ್ಲಿ ಬಂದ ಇಬ್ಬರು ಉಪ್ಪಳ್-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ…
ಮಡಿಕೇರಿ ನ.6 NEWS DESK : ವಿಧಾನಸಭೆಯ ಉಪಚುನಾವಣೆಯನ್ನು ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ “ವಕ್ಫ್” ವಿಚಾರವನ್ನು ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಮುಸ್ಲಿಂ, ಕ್ರಿಶ್ಚಿಯನ್ ಹೆಸರೆತ್ತದೆ ಯಾವುದೇ ಚುನಾವಣೆಗೆ ಹೋಗಿಲ್ಲ, ಇದೀಗ ವಕ್ಫ್ ವಿಚಾರದಲ್ಲಿ ಸುಳ್ಳು ಆರೋಪಗಳನ್ನು ಮಾಡಿ ಕೋಮು ಭಾವನೆಯನ್ನು ಮೂಡಿಸುತ್ತಿದೆ ಎಂದು ಟೀಕಿಸಿದರು. ವಕ್ಫ್ ಆಸ್ತಿ ಎನ್ನುವುದು ಅಲ್ಲಾಹನ ಹೆಸರಿನಲ್ಲಿ ಧಾರ್ಮಿಕ ಭಾವನೆಗಳ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ದಾನ ಮಾಡಿರುವ ಜಾಗವಾಗಿದೆ. ಇದು ಸರ್ಕಾರದ ಸ್ವತ್ತಲ್ಲ, ರಾಜ್ಯ ವ್ಯಾಪಿ 1.25 ಲಕ್ಷ ಏಕರೆ ವಕ್ಫ್ ಆಸ್ತಿ ಇದೆ. ಇದರಲ್ಲಿ 1.02 ಲಕ್ಷ ಏಕರೆ ಒತ್ತುವರಿಯಾಗಿದ್ದು, ಇದೀಗ 23 ಸಾವಿರ ಏಕರೆಯಷ್ಟೆ ಬಾಕಿ ಉಳಿದಿದೆ. ಒತ್ತುವರಿ ಮಾಡಿಕೊಂಡಿರುವವರಿಗೆ ನೋಟಿಸ್ ನೀಡಿರುವ ಬಗ್ಗೆ ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ. ವಕ್ಫ್ ಗೆ ಸಂಬಂಧಿಸಿದ ಆಸ್ತಿಯನ್ನು ಒತ್ತುವರಿಮಾಡಿಕೊಂಡು ಎಷ್ಟೇ ವರ್ಷಗಳಾಗಿದ್ದರು, ಅದನ್ನು…
ಮಡಿಕೇರಿ ನ.6 NEWS DESK : ಬಹುಮತ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿದ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದರು. ದಲಿತರು, ಹಿಂದುಳಿದ ವರ್ಗ, ಕಡು ಬಡವರು, ದುರ್ಬಲರು ಹಾಗೂ ಅಲ್ಪಸಂಖ್ಯಾತರ ಏಳಿಗೆಗಾಗಿ ಶ್ರಮಿಸುತ್ತಿರುವ ಸಿದ್ದರಾಮಯ್ಯ ಅವರ ದಕ್ಷ ಆಡಳಿತವನ್ನು ಸಹಿಸದೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಬೇಕೆನ್ನುವ ಏಕೈಕ ಉದ್ದೇಶದಿಂದ ಆಧಾರ ರಹಿತ ಹಗರಣಗಳನ್ನು ಬೀದಿಗೆ ತರುತ್ತಿದ್ದು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಆ ಮೂಲಕ ಜನರ ಹಾದಿ ತಪ್ಪಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಸಮಿತಿಯ ಪ್ರಮುಖರು…
ಮಡಿಕೇರಿ ನ.6 NEWS DESK : ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭ ಅಡ್ಡ ಮತದಾನ ಮಾಡಿದ ದೂರಿನ ಹಿನ್ನೆಲೆ ಬಿಜೆಪಿ ಬೆಂಬಲಿತ ನಾಲ್ವರು ಗ್ರಾ.ಪಂ ಸದಸ್ಯರುಗಳ ವಿರುದ್ಧ ಶಿಸ್ತು ಕ್ರಮಕ್ಕಾಗಿ ಪಕ್ಷದ ರಾಜ್ಯ ಅಮಿತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಜ.30 ರಂದು ನಡೆದ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಡ್ಡಂಡ ನಿಲನ್ ಮಂದಣ್ಣ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿ.ಎಂ.ವಿಜಯ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರ ವಿರುದ್ದ ಪಕ್ಷದ ಸದಸ್ಯರು ಮತ್ತು ಪಕ್ಷದ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಿಮಲಾ ಎಂ.ಬಿ,. ಆರತಿ ಸುರೇಶ್ ಎ. ಹಾಗೂ ರಮೇಶ್ ಪಿ.ಟಿ. ಇವರುಗಳು ಅಡ್ಡ ಮತದಾನ ಮಾಡಿದ್ದಾರೆ ಎಂದು ಶಕ್ತಿ ಕೇಂದ್ರದ ಪ್ರಮುಖರು ಮತ್ತು ಮಂಡಲ ಅಧ್ಯಕ್ಷರಗಳು ಸೂಚಿಸಿದ ಮೇರೆಗೆ ಮುಂದಿನ ಶಿಸ್ತು ಕ್ರಮಕ್ಕಾಗಿ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ. ಆ.28…
ಮಡಿಕೇರಿ, ನ.6 NEWS DESK : ಕನ್ನಡ ಪುಸ್ತಕ ಸಂಸ್ಕೃತಿ ಇಮ್ಮಡಿಗೊಳಿಸುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವರ್ಷದ “ವೀರಲೋಕ ಪುಸ್ತಕ ಸಂತೆ”ಗೆ ಭಾರೀ ತಯಾರಿ ನಡೆದಿದೆ ಎಂದು ವೀರಲೋಕ ಪ್ರಕಾಶನದ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಒಂದೇ ಸೂರಿನಡಿ ನೂರಕ್ಕೂ ಅಧಿಕ ಲೇಖಕರು, ಪ್ರಕಾಶಕರು, ನ.15,16,17 ರಂದು ಜಯನಗರದ ಅಲಂಕೃತ ಶಾಲಿನಿ ಮೈದಾನದಲ್ಲಿ ಭೇಟಿಗೆ ಲಭ್ಯವಾಗಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಲೇಖಕರು, ಪ್ರಕಾಶಕರನ್ನು ಗುರುತಿಸಿ, ಆಹ್ವಾನಿಸಲಾಗಿದ್ದು ಪ್ರತಿಯೊಬ್ಬರೂ ಪ್ರತ್ಯೇಕ ಮಳಿಗೆಗಳಲ್ಲಿ ಪುಸ್ತಕಗಳೊಂದಿಗೆ ಓದುಗರನ್ನು ಭೇಟಿ ಮಾಡಲಿದ್ದಾರೆ. ಲಕ್ಷ ಸಂಖ್ಯೆಯಲ್ಲಿ ಕನ್ನಡ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ. ಲೇಖಕರು ಮಾರಾಟವಾಗುವ ತಮ್ಮ ಪುಸ್ತಕಗಳಿಗೆ ಖುದ್ದಾಗಿ ಸಹಿ ಮಾಡಲಿದ್ದಾರೆ. ಪುಸ್ತಕ ಮಳಿಗೆಗಳನ್ನು ಹೊರತು ಪಡಿಸಿ ಇತರ ಆಕರ್ಷಣೆಗಳೂ ಇದ್ದು, ಮಕ್ಕಳಿಗಾಗಿಯೇ ವಿಶೇಷ ಆಟ ಮತ್ತು ಮನೋರಂಜನಾ ವಿಭಾಗಗಳಿವೆ. ನೂರಕ್ಕೂ ಅಧಿಕ, ಆಹಾರ, ಆರೋಗ್ಯ, ವಸ್ತ್ರ, ಚಿತ್ರಕಲೆ, ಸಣ್ಣ ಕೈಗಾರಿಕಾ ಮಳೆಗೆಗಳು ಕನ್ನಡಿಗರನ್ನು ಆಕರ್ಷಿಸಲಿವೆ. ಅಥsರ್Àಪೂರ್ಣ ಉದ್ಘಾಟನೆಯ ಬಳಿಕ ನಿತ್ಯ ಜಾನಪದ ಸಂಜೆ, ಭಾವಗೀತೆ ಸಂಜೆ,…






