ಲೇಖಕ: admin

ಮಡಿಕೇರಿ ನ.6 NEWS DESK : ಕೊಡಗು ಮುಸ್ಲಿಂ ಟ್ರಸ್ಟ್ ಹಾಗೂ ಚಿಲ್ ಬಾಯ್ಸ್ ತಂಡದ ವತಿಯಿಂದ 20ನೇ ವರ್ಷದ “ಮುಸ್ಲಿಂ ಕಪ್” ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ 2025ನೇ ಫೆ.8 ರಿಂದ 16ರ ವರೆಗೆ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಎ.ಅಬ್ದುಲ್ ಖಾದರ್ ಹಾಗೂ ಚಿಲ್ ಬಾಯ್ಸ್ ನ ಅಧ್ಯಕ್ಷ ಎಂ.ಎ.ಉನೈಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಗಳು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟದ ಉಸ್ತುವಾರಿಯನ್ನು “ಚಿಲ್ ಬಾಯ್ಸ್ ಮಡಿಕೇರಿ” ತಂಡ ವಹಿಸಿಕೊಂಡಿದ್ದು, ಪಂದ್ಯಾವಳಿಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕ್ರೀಡಾಕೂಟಕ್ಕೆ ಸುಮಾರು 25ಲಕ್ಷ ರೂ.ಗೂ ಅಧಿಕ ಹಣ ಖರ್ಚಾಗುತ್ತಿದ್ದು, ಇಷ್ಟು ವರ್ಷಗಳವರೆಗೆ ಸರ್ಕಾರದಿಂದ ಯಾವುದೇ ಅನುದಾನ ದೊರೆತ್ತಿಲ್ಲ. ಈ ಬಾರಿಯಾದರೂ ಜಿಲ್ಲೆಯ ಇಬ್ಬರು ಶಾಸಕರು ಆಸಕ್ತಿ ತೋರಿ ಸರ್ಕಾರದಿಂದ ಅನುದಾನ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು. ಕಳೆದ ವರ್ಷ ಸುಮಾರು 110 ತಂಡಗಳು ಕ್ರೀಡಾಕೂಟಕ್ಕೆ ಹೆಸರು ನೋಂದಾಯಿಸಿಕೊಂಡಿದ್ದವು. ಈ ಬಾರಿ…

Read More

ಮಡಿಕೇರಿ ನ.6 NEWS DESK : ಕೊಡವ ಜನಪದ ಕಲೆಗಳಿಗೆ ಒತ್ತು ನೀಡುವ ಸಲುವಾಗಿ ಮಡಿಕೇರಿಯ ಸುಬ್ರಮಣ್ಯ ಕೊಡವ ಕೇರಿಯ ನೇತೃತ್ವದಲ್ಲಿ ನ.9 ರಂದು 7ನೇ ಕೊಡವ ಅಂತರ್‍ಕೇರಿ ಜನಪದ ಸಾಂಸ್ಕೃತಿಕ ಮೇಳವನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡವ ಸಮಾಜದ ಆವರಣದಲ್ಲಿ ಮಡಿಕೇರಿಯ 12 ಕೇರಿಯ ಕೊಡವ ಜನಾಂಗ ಬಾಂಧವರು ಈ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದರು. ಅಂದು ಬೆಳಿಗ್ಗೆ 8.45 ಗಂಟೆಗೆ ಕೊಡವ ಸಮಾಜದಲ್ಲಿ ದೇವರಿಗೆ ಪ್ರಾರ್ಥನೆ ಮತ್ತು ಧ್ವಜಾರೋಹಣ ನೆರವೇರಲಿದೆ. ಸುಬ್ರಹ್ಮಣ್ಯ ಕೊಡವ ಕೇರಿಯ ಸದಸ್ಯ ಕಾಳಿಮಾಡ ನಾಚಪ್ಪ ಮೇಳವನ್ನು ಉದ್ಘಾಟಿಸಲಿದ್ದು, ಹಿರಿಯ ಸದಸ್ಯೆ ನಂದೇಟ್ಟಿರ ಗೌರಮ್ಮ ಮುತ್ತಪ್ಪ ಅಂತರ್ ಕೇರಿ ಜಾನಪದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ನಂತರ ಕೇರಿ ಕೇರಿಗಳ ನಡುವೆ ಬೊಳಕಾಟ್, ಕೋಲಾಟ್, ಮಹಿಳೆಯರ ಉಮ್ಮತಾಟ್, ಕಪ್ಪೆಯಾಟ್, ಬಾಳೋಪಾಟ್, ತಾಲಿಪಾಟ್, ಸಮ್ಮಂದ ಅಡ್‍ಕುವೊ, ವಾಲಗತಾಟ್, ಕೊಡವ ಹಾಡು…

Read More

ಪುತ್ತೂರು ಸೆ.6 NEWS DESK : ಇತಿಹಾಸದ ಪುಟಗಳತ್ತ ಇಣುಕಿ ನೋಡಿದಾಗ 1903 ರಲ್ಲಿ ಆರಂಭವಾದ ಕನ್ನಡ ಏಕೀಕರಣ ಚಳುವಳಿಯು ಮುಂದಿನ ದಿನಗಳಲ್ಲಿ ತೀವ್ರಗೊಂಡು 1956ರ ನವೆಂಬರ್ ಒಂದರಂದು ಮೈಸೂರು ರಾಜ್ಯ ಉದಯವಾಯಿತು. 1973 ನವೆಂಬರ್ ಒಂದರಂದು ಕರ್ನಾಟಕ ರಾಜ್ಯವಾಗಿ ನಾಮಕರಣಗೊಂಡಿತು. ಇಲ್ಲಿನ ಸುಂದರವಾದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಗುರುತರ ಜವಾಬ್ಧಾರಿ ನಮ್ಮ ಮೇಲಿದೆ ಎಂದು ಎಸ್.ಕೆ.ಎಫ್ ಇಂಡಿಯಾ ಲಿಮಿಟೆಡ್ ಇಲ್ಲಿನ ಅಧಿಕಾರಿ ಹಾಗೂ ಸಾಹಿತಿ ಹರಿನರಸಿಂಹ ಉಪಾಧ್ಯಾಯ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಯಾವುದೇ ಭಾಷೆಯನ್ನಾಗಲಿ ನಿರಂತರವಾಗಿ ಬಳಸಿದರೆ ಮಾತ್ರ ಅದರ ಉಳಿವು ಸಾಧ್ಯವಾಗುತ್ತದೆ. ಹಾಗಾಗಿ ಕನ್ನಡ ಭಾಷೆಯನ್ನು ಬಳಸುವಲ್ಲಿ ಮತ್ತು ಉಳಿಸುವಲ್ಲಿ ನಾವು ಶಕ್ತಿವಂತರಾಗಬೇಕು ಎಂದರು. ಕಾಲೇಜಿನ ಹಿರಿಯ…

Read More

ಮಡಿಕೇರಿ ನ.6 NEWS DESK : ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.  ತಾಳತ್ತಮನೆಯ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಧ್ವಜಾರೋಹಣವನ್ನು ಸಂಘದ ಸಂಘಟನ ಕಾರ್ಯದರ್ಶಿ ಎಂ.ಟಿ.ದೇವಪ್ಪ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಮರಾಠ-ಮರಾಟಿ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್, ಕನ್ನಡ ಭಾಷೆ ಸಂಸ್ಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕು. ಮನೆಯಲ್ಲಿ ಮಕ್ಕಳಿಗೂ ಕನ್ನಡ ಕಲಿಸುವ ಮೂಲಕ ಕನ್ನಡ ಭಾಷೆ ಬೆಳೆಸಬೇಕು. ಪ್ರತಿನಿತ್ಯ ಕನ್ನಡ ಬಳಕೆ ಮೂಲಕ ಕನ್ನಡ ಉಳಿಸಿ ಬೆಳೆಸಲು ಕನ್ನಡಿಗರು ಸದಾ ಬದ್ಧರಾಗಬೇಕು. ಕನ್ನಡ ಭಾಷೆಯು ಪ್ರತಿಯೊಬ್ಬ ಜನಸಾಮಾನ್ಯನು ಅರಿತು, ಬೆರೆತು, ಬಾಳುವ, ಆಡುವ ಸುಂದರ ಭಾಷೆಯಾಗಿದೆ. ಅದರಿಂದ ಕನ್ನಡ ಇಂದು ಶಾಶ್ವತವಾಗಿ ಉಳಿದಿದೆ ಎಂದರು.  ಪ್ರತಿಯೊಬ್ಬ ಸದಸ್ಯರು ಸಂಘದ ಅಭಿವೃದ್ಧಿಗೆ ಹೆಚ್ಚು ಶ್ರಮಿಸಬೇಕಿದೆ. ಸಂಘದ ಪ್ರತಿ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಮಾಜಿಕ ಕಾರ್ಯಕ್ಕೆ ಪದಾಧಿಕಾರಿಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.  ಇದೇ ಸಂದರ್ಭದಲ್ಲಿ ಕರಾವಳಿ…

Read More

ಮಡಿಕೇರಿ ನ.6 NEWS DESK  : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವಿನೂತನ ಕಾರ್ಯಕ್ರಮ ‘ನಾಡೋರ್ಮೆ’ಯು ಅರೆಕಾಡು-ಹೊಸ್ಕೇರಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮನೆಮಾತಾಗಿದೆ. ನಾಡೊರ್ಮೆಯ ವೈಭವವನ್ನು ಕಣ್ತುಂಬಿಕೊಳ್ಳಲು ನಾಡಿನ ಜನತೆ ಕಾತರರಾಗಿದ್ದಾರೆ. ನ.14 ರಂದು ಅರೆಕಾಡಿನ ರಿಯಾವರ್ ರೆಸಾರ್ಟ್‍ನಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭವಾಗುವ ನಾಡೊರ್ಮೆಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ‘ಕೊಡವ ವೆಲ್ಫೇರ್ ಅಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಕಟ್ಟಡಕ್ಕೆ ಅರೆಕಾಡುವಿನಲ್ಲಿ ಶಂಕು ಸ್ಥಾಪನೆ ನೆರವೇರುವುದು. ಈ ವೇಳೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಸರ್ಕಾರಿ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ತಕ್ಕರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಹಾಗೂ ‘ಕೊಡವ ವೆಲ್ಫೇರ್ ಅಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಅಧ್ಯಕ್ಷ ಕುಕ್ಕೆರ ಜಯಾ ಚಿಣ್ಣಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರು…

Read More

ನಾಪೋಕ್ಲು ನ.6 NEWS DESK : ಚೇರಂಬಾಣೆಯ ಕೊಳಗದಾಳು ಗ್ರಾಮದ ಶತಾಯುಷಿ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ನಿವೃತ್ತ ಯೋಧ ಅಜ್ಜಿನಂಡ ಮೊಣ್ಣಪ್ಪ ಅವರ ನೂರನೇ ಜನ್ಮದಿನಾಚರಣೆಯನ್ನು ಚೇರಂಬಾಣೆ ಕೊಡವ ಸಮಾಜದಲ್ಲಿ ಆಚರಿಸಲಾಯಿತು. ದಿವಂಗತ ಅಜ್ಜಿನಂಡ ಮೇದಪ್ಪ ಹಾಗೂ ಚಿಣ್ಣವ್ವ ದಂಪತಿಯ ಪುತ್ರ ಶತಾಯುಷಿ ಎಂ.ಮೊಣ್ಣಪ್ಪ ಅವರನ್ನು ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ದುಡಿ ಕೊಟ್ ಪಾಟ್ ಮೂಲಕ ಕರೆತರಲಾಯಿತು. ಆ ಬಳಿಕ ಕುಟುಂಬ ಬಂಧು ಮಿತ್ರರೊಂದಿಗೆ ಕಾರ್ಯಕ್ರಮದ ವೇದಿಕೆಯಲ್ಲಿ ಎಲ್ಲರ ಪರವಾಗಿ ಕೋಟೆರ ಪ್ರಭು ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭ ಅವರ ಸಹೋದರ ಅಪ್ಪಣ್ಣ (97) ಉಪಸ್ಥಿತರಿದ್ದು, ಆಗಮಿಸಿದ ಎಲ್ಲರೂ ಶತಾಯುಷಿಗೆ ತಮ್ಮ ನೆನಪಿನ ಕಾಣಿಕೆಗಳನ್ನು ನೀಡಿ ಇಬ್ಬರ ಆಶೀರ್ವಾದ ಪಡೆದುಕೊಂಡು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪೆÇ್ರ ಎಂ.ಬಿ.ನಂಜುಂಡ, ಬೇಂಗೂರು ನಾಡು ಕಡಪಾಲಪ್ಪ ದೇವಸ್ಥಾನದ ಅಧ್ಯಕ್ಷ ತೇಲಪಂಡ ಕೆ.ಮಂದಣ್ಣ, ನಿವೃತ್ತ ಪೆÇಲೀಸ್ ಅಧಿಕಾರಿ ಮಣವಟ್ಟಿರ ಸಿ.ಕುಶಾಲಪ್ಪ ಸನ್ಮಾನಿತರ ಗುಣಗಾನ ಮಾಡಿ ತಮ್ಮ…

Read More

ಮಡಿಕೇರಿ ನ.6 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸೋಮವರಪೇಟೆ ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಮಸಗೋಡು ಚನ್ನಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭ್ರಷ್ಟಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ನಡೆಯಿತು. ಕಾರ್ಯಕ್ರಮದಲ್ಲಿ ಸೋಮವಾರಪೇಟೆಯ ಸಿವಿಲ್ ನ್ಯಾಯಾಧೀಶರಾದ ನ್ಯಾ. ಗೋಪಾಲಕೃಷ್ಣ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

Read More

ಮಡಿಕೇರಿ ನ.6 NEWS DESK :  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ ಸೈಟ್  https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ…

Read More

ಮಡಿಕೇರಿ ನ.6 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತವಾಗಿ ನಡೆಸುವ 13 ದಿನಗಳ ಸಿಸಿ.ಟಿ.ವಿ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ ಕಾರ್ಯಕ್ರಮವು ನ.19 ರಿಂದ ಡಿ.2 ವರೆಗೂ ನಡೆಯಲಿದ್ದು, ಕರ್ನಾಟಕ ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಸಂಪೂರ್ಣವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ…

Read More

ಮಡಿಕೇರಿ ನ.5 NEWS DESK : ಜಿಲ್ಲೆಯಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳನ್ನು ನಿಷೇಧಿಸಲು ಮತ್ತು ಮಾರಾಟ ಮಾಡುವುದನ್ನು ತಡೆಯಗಟ್ಟಲು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ದೂರು ಮತ್ತು ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳೊಂದಿಗೆ ವಿಧಾನ ಸೌಧ ಕಚೇರಿಯಲ್ಲಿ ತುರ್ತುಸಭೆ ನಡೆಸಿದ ಶಾಸಕರು, ಅಧಿಕಾರಿಗಳೊಂದಿಗೆ ದೂರಿನ ಕುರಿತು ಮಾಹಿತಿ ಪಡೆದರು. ಈ ಸಂದರ್ಭ ಮಾಹಿತಿ ನೀಡಿದ ಅಧಿಕಾರಿಗಳು ಕೊಡಗು ಜಿಲ್ಲೆ ಹಾಗೂ ಕೇರಳ ಜಿಲ್ಲೆ ಗಡಿಭಾಗವಾದ ಕುಟ್ಟ, ಮಾಕುಟ್ಟ ಮತ್ತು ಪೆರುಂಬಾಡಿ ವ್ಯಾಪ್ತಿಯಲ್ಲಿ ಕೇರಳದ ಆಹಾರ ಪದಾರ್ಥಗಳು ಸರಬರಾಜು ಆಗುತ್ತಿದ್ದು. ಆಹಾರ ಪದಾರ್ಥಗಳಲ್ಲಿ ತಯಾರಿಕಾ ದಿನಾಂಕ ಹಾಗೂ ತಯಾರಿಕೆ ಮಾಡುವವರ ವಿವರ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಕೃತಕ ಬಣ್ಣಗಳನ್ನು ಸೇರಿಸಿರುವುದರ ಬಗ್ಗೆ 90 ಆಹಾರ ಪದಾರ್ಥಗಳನ್ನು ವಿಶ್ಲೇಷಣಿಗಾಗಿ (IADFAC) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲದ…

Read More