ಸೋಮವಾರಪೇಟೆ ಅ.15 NEWS DESK : ಸಮಾಜದಲ್ಲಿ ನಕಾರಾತ್ಮಕ ಭಾವನೆಗಳು ಮಿತಿಮೀರಿ ಬೆಳೆಯುತ್ತಿರುವುದರಿಂದ ಜೀವನದಲ್ಲಿ ಅನಾರೋಗ್ಯ ಹೆಚ್ಚುತ್ತಿದೆ ಎಂದು ಶಾಸಕ ಡಾ.ಮಂತರ್ಗೌಡ ಅಭಿಪ್ರಾಯಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ನವರಾತ್ರಿ ಪ್ರಯುಕ್ತ ಪಟ್ಟಣದ ಆಟಲ್ಜೀ ಸಭಾಂಗಣದಲ್ಲಿ ಆಯೋಜಿಸಿರುವ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಜ್ಞಾನ, ಮೂಡನಂಬಿಕೆಗಳು ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಯುವ ಜನಾಂಗ ವೈಜ್ಞಾನಿಕತೆಯತ್ತ ಮರಳಬೇಕು ಎಂದು ಕಿವಿಮಾತು ಹೇಳಿದರು. ಪ್ರವಚನಗಳು ಜೀವನ ಮೌಲ್ಯವನ್ನು ಪ್ರತಿಪಾದಿಸುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಒತ್ತಡಗಳಿಂದ ದೂರವಾಗಿ ಮಾನಸಿಕ ನೆಮ್ಮದಿ ಕಾಣಲು ಸಾಧ್ಯ ಎಂದು ಶಾಸಕರು ಹೇಳಿದರು. ಕಾರ್ಯಕ್ರಮದಲ್ಲಿ ನೀತಿ ಶಿಕ್ಷಣದ ಜೊತೆಗೆ ವ್ಯಸನಮುಕ್ತ ಆಂದೋಲನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು. ಸಂಸ್ಥೆಯ ಮುಖ್ಯಸ್ಥರಾದ ಪ್ರಾಣೇಶ್, ಪಟ್ಟಣ ಪಂಚಾಯಿತಿ ಸದಸ್ಯ ಡಿ.ಯು.ಕಿರಣ್ ಈಶ್ವರೀಯ ವಿಶ್ವವಿದ್ಯಾನಿಲಯದ ಭಕ್ತಾದಿಗಳು ಇದ್ದರು.
ಲೇಖಕ: admin
ಸೋಮವಾರಪೇಟೆ ಅ.15 NEWS DESK : ಕಿಬ್ಬೆಟ್ಟ ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ 9 ದಿನಗಳ ಕಾಲ ಪೂಜಿಸಿದ್ದ ಉತ್ಸವ ಮೂರ್ತಿಯನ್ನು ಹಾರಂಗಿ ನದಿಯಲ್ಲಿ ವಿಸರ್ಜಿಸಲಾಯಿತು. ಪ್ರಧಾನ ಅರ್ಚಕ ಮನೋಜ್ ಭಟ್ ಅವರ ಪೌರೋಹಿತ್ವದಲ್ಲಿ ನವದುರ್ಗಾ ಮಾತೆಗೆ 9 ದಿನಗಳ ಕಾಲ ಅಲಂಕಾರದೊಂದಿಗೆ, ವಿಶೇಷ ಪೂಜೆ, ಹೋಮ ನಡೆಯಿತು. ಈ ಸಂದರ್ಭ ಪ್ರಮುಖರಾದ ಮಧು, ಗಣಪತಿ, ರವಿ, ಕುಶಾಲಪ್ಪ, ಮುರುಳಿ ಸೇರಿದಂತೆ ಹಲವರು ಇದ್ದರು.
ಮಡಿಕೇರಿ ಅ.14 NEWS DESK : ಮೈಸೂರಿನ ಮಹಾರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಪಡೆದುಕೊಂಡರು. ಶಾಲೆಯ ವಿದ್ಯಾರ್ಥಿಗಳಾದ ಕೆ.ಎಚ್.ಭವಿಷ್, ಬಿ.ಎಂ.ಬಿಪಿನ್ ಚಿಣ್ಣಪ್ಪ, ಯು.ಎಸ್.ಅಲೈನಾ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ನ್ಯಾಷನಲ್ ರೆಫ್ರಿ ಸೆನ್ಸಾಯ್ ನಾಗೇಂದ್ರಪ್ಪ ಮತ್ತು ತರಬೇತುದಾರ ಪವನ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.
ಮಡಿಕೇರಿ ಅ.14 NEWS DESK : ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ್ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ, ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪೌಷ್ಟಿಕ ಆಹಾರ ಸೇವನೆಯ ಮಹತ್ವ, ರಕ್ತ ಹೀನತೆ ಮತ್ತು ನಿವಾರಣೆ, ಗರ್ಭಿಣಿ, ಬಾಣಂತಿ ಆರೈಕೆ, ಲಸಿಕಾ ಕಾರ್ಯಕ್ರಮ, ಮಾನಸಿಕ ಆರೋಗ್ಯದ ಕುರಿತು ಗ್ರಾಮಸ್ಥರಿಗೆ ಸಂಪೂರ್ಣ ಮಾಹಿತಿ ನೀಡಿದರು. ಶಿಬಿರದಲ್ಲಿ ಮಡಿಕೇರಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ, ಗಾಳಿಬೀಡು ಆಯುಷ್ಮಾನ್ ಆರೋಗ್ಯ ಮಂದಿರದ ಸಮುದಾಯ ಆರೋಗ್ಯ ಅಧಿಕಾರಿ ರಮ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ಹಾಗೂ ಆಶಾ ಕಾರ್ಯಕರ್ತೆ ಕವಿತ ಹಾಜರಿದ್ದರು. ಆರೋಗ್ಯ ತಪಸಣಾ ಶಿಬಿರಕ್ಕೆ ಹಾಜರಾದ ಗ್ರಾಮಸ್ಥರಿಗೆ ಬಿಪಿ, ಮಧುಮೇಹ, ಹಿಮೋಗ್ಲೋಬಿನ್ ತಪಾಸಣೆ ನಡೆಸಲಾಯಿತು. ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಗ್ರಾಮಸ್ಥರು…
ಮಡಿಕೇರಿ ಅ.14 NEWS DESK : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ರೂ.1.27 ಲಕ್ಷ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು; ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಮೂಲ ಜನನ ಪ್ರಮಾಣ ಪತ್ರ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು). ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಪೋಷಕರ ಸ್ವಯಂ…
ಮಡಿಕೇರಿ ಅ.14 NEWS DESK : ಮೂರ್ನಾಡು ಗ್ರಾಮದ 33/11 ಕೆ.ವಿ ವಿದ್ಯುತ್ ಉಪ ಕೇಂದ್ರ ಹೊರಹೊಮ್ಮುವ ನಾಪೋಕ್ಲು ಮತ್ತು ಎಫ್5 ಹೊದ್ದೂರು ಫೀಡರ್ನಲ್ಲಿ ಅ.15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ನಾಪೋಕ್ಲು, ಕುಂಜಿಲ, ಕಕ್ಕಬೆ, ನಾಲಡಿ, ಯವಕಪಾಡಿ, ಕೊಟ್ಟಮುಡಿ, ಬೇತು, ಪಾಲೂರು, ಹೊದ್ದೂರು, ಹಳೆತಾಲೂಕು, ಎಮ್ಮೆಮಾಡು. ಬಲ್ಲಮಾವಟಿ, ಕೊಳಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಅ.14 NEWS DESK : ನೆಲ್ಯಹುದಿಕೇರಿ ಗ್ರಾಮದ ಶ್ರೀ ಸತ್ಯನಾರಾಯಣ ದೇವಸ್ಥಾನಕ್ಕೆ ಒಳಪಟ್ಟ ಜಾಗದಲ್ಲೆ ‘ಹಿಂದೂ ರುದ್ರಭೂಮಿ’ ನಿರ್ಮಾಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ವಿರೋಧಿಸಿ ಅ.15 ರಂದು ಮೌನ ಪಾದಯಾತ್ರೆ ಮತ್ತು ಗ್ರಾಮ ಪಂಚಾಯ್ತಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಸತ್ಯನಾರಾಯಣ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಟಿ.ಜಿ, ಅತ್ಯಂತ ಪುರಾತನವಾದ ಶ್ರೀಸತ್ಯನಾರಾಯಣ ದೇಗುಲದ ಸ್ವಾಧೀನದಲ್ಲಿರುವ ಜಾಗದಲ್ಲೆ ‘ಮಸಣಿಕಮ್ಮ’ನ ಸ್ಥಾನವಿದ್ದು, ಶತಮಾನಗಳಿಂದ ಈ ಸ್ಥಾನದಲ್ಲಿ ಆರಾಧನೆಯನ್ನು ಮಾಡಿಕೊಂಡು ಬರಲಾಗುತ್ತಿದೆ. ಇದರ ಸಮೀಪವೇ ರುದ್ರಭೂಮಿ ನಿರ್ಮಾಣಕ್ಕೆ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಿಸಿದರು. ದೇವರ ಉತ್ಸವದ ಸಂದರ್ಭ ದೇವರ ಭಂಡಾರ ತರುವ, ದೇವರು ಜಳಕಕ್ಕೆ ತೆರಳುವ ಹಾದಿಯ ಬಳಿಯಲ್ಲೆ ರುದ್ರ ಭೂಮಿ ನಿರ್ಮಿಸಬೇಕೆಂದು ಎಡಪಕ್ಷವೊಂದು ಪ್ರತಿಭಟನೆ ನಡೆಸಿರುವುದಲ್ಲದೆ, ಪಂಚಾಯ್ತಿಗೆ, ಜಿಲ್ಲಾಡಳಿತಕ್ಕೆ ಮನವಿಗಳನ್ನು ನೀಡಿದೆ. ರುದ್ರಭೂಮಿಯನ್ನು ದೇವಸ್ಥಾನದ ಬಳಿಯಲ್ಲಿ ನಿರ್ಮಿಸುವ ಪ್ರಯತ್ನಗಳು ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುತ್ತಿದೆ. ಯಾವುದೇ ಕಾರಣಕ್ಕೂ ದೇವಸ್ಥಾನದ ಬಳಿಯಲ್ಲಿ ರುದ್ರಭೂಮಿಯನ್ನು ನಿರ್ಮಿಸಬಾರದು…
ಮಡಿಕೇರಿ ಅ.14 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಸಂಭ್ರಮದಿಂದ ಸಮಾರೋಪಗೊಂಡಿದ್ದು, ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ವಿಶೇಷ ವೇತನ ಪಾವತಿಸಬೇಕೆಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಯೂನಿಯನ್ ನ ಅಧ್ಯಕ್ಷ ಷರೀಫಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್ ಅವರು, ಕಾಯಕವೇ ಕೈಲಾಸ ಎಂಬಂತೆ ರಾತ್ರಿ ಹಗಲೆನ್ನದೆ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ನವರಾತ್ರಿಯ ಅಂಗವಾಗಿ ವಿಶೇಷ ವೇತನ ಪಾವತಿ ಮಾಡುವ ಮೂಲಕ ನಗರಸಭೆ ದುಡಿಮೆಗೆ ತಕ್ಕ ಫಲ ನೀಡಬೇಕೆಂದು ಒತ್ತಾಯಿಸಿದ್ದಾರೆ. ನಗರದ ತುಂಬಾ ರಾಶಿ ರಾಶಿ ಕಸ ಬಿದ್ದಿದೆ, ಮಳೆಯಿಂದಾಗಿ ತ್ಯಾಜ್ಯ ಕೆಸರುಮಯವಾಗಿದೆ, ಚರಂಡಿಗಳು ತುಂಬಿ ಹೋಗಿವೆ. ಕಸ ವಿಲೇವಾರಿ ಮಾಡಿ ಸ್ವಚ್ಛತೆಯನ್ನು ಕಾಪಾಡಲು ಶ್ರಮಿಸುತ್ತಿರುವ ಪೌರ ಕಾರ್ಮಿಕರನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಪರಿಗಣಿಸಿ ಗೌರವಿಸಬೇಕು ಮತ್ತು ಹೆಚ್ಚು ವೇತನವನ್ನು ನೀಡಬೇಕು. ಈ ಬಗ್ಗೆ ನಗರಸಭೆಯ ಆಡಳಿತಾಧಿಕಾರಿ ಹಾಗೂ ದಸರಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಗಮನ…
ಮಡಿಕೇರಿ ಅ.14 NEWS DESK : ಕರ್ನಾಟಕ ಮತ್ತು ಬಾಗಲಕೋಟೆ ಜಿಲ್ಲಾ ಕಿವುಡರ ಸಂಘದಿಂದ ಬಾಗಲಕೋಟೆಯಲ್ಲಿ ನಡೆದ 14ನೇ ಕರ್ನಾಟಕ ರಾಜ್ಯ ಕಿವುಡರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡ ತೃತೀಯ ಬಹುಮಾನ ಪಡೆದುಕೊಂಡಿತು. ಬಾಗಲಕೋಟೆಯ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ ಕೊಡಗು ಸೇರಿದಂತೆ ಸುಮಾರು 20 ಜಿಲ್ಲೆಗಳಿಂದ ಸ್ಪರ್ಧಿಗಳು ಪಾಲ್ಗೊಂಡು ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿದರು. ಪ್ರಥಮ ಬಹುಮಾನ ಮಂಗಳೂರು, ದ್ವಿತೀಯ ಬಹುಮಾನ ಮಂಡ್ಯ, ತೃತೀಯ ಕೊಡಗು ಹಾಗೂ ನಾಲ್ಕನೇ ಬಹುಮಾನವನ್ನು ಮೈಸೂರು ತಂಡ ತಮ್ಮದಾಗಿಸಿಕೊಂಡಿತು. ಸಂಜ್ಞೆ ಭಾಷೆ ಹಾಗೂ ಧ್ವಜದ ಚಿಹ್ನೆಗಳನ್ನು ನೋಡುವ ಮೂಲಕ ಕ್ರೀಡೆಗಳಲ್ಲಿ ಸೆಣಸಾಟ ಆರಂಭಿಸಿದ ಕ್ರೀಡಾಪಟುಗಳು ಕೊನೆಯ ಕ್ಷಣದವರೆಗೂ ರೋಚಕವಾಗಿ ಹೋರಾಟ ನಡೆಸಿ ಗಮನ ಸೆಳೆದರು. 2025ರ ಅಕ್ಟೋಬರ್ ತಿಂಗಳಿನಲ್ಲಿ 15ನೇ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟವು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆಯಲಿದೆ.
ಮಡಿಕೇರಿ ಅ.14 NEWS DESK : ಇತರರಿಗೆ ಮಾದರಿಯಾಗಿರುವ “ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗ” ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಶ್ರಮದಲ್ಲಿರುವ ನೊಂದ ಹಿರಿಯರಿಗೆ ಅನ್ನದಾನ ಹಾಗೂ ರಸಮಂಜರಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. “ಎಲ್ಲರೂ ನಮ್ಮವರು” ಎಂಬ ಘೋಷವಾಕ್ಯದೊಂದಿಗೆ ಮಡಿಕೇರಿಯ ತ್ಯಾಗರಾಜ ಕಾಲೋನಿಯ ತನಲ್ ಆಶ್ರಮದಲ್ಲಿ ಹಿರಿಯರಿಗಾಗಿ ವಿವಿಧ ಸ್ಪರ್ಧೆಯನ್ನು ನಡೆಸಲಾಯಿತು. ನಂತರ ಆಶಾಕಿರಣದ ಫೈವ್ ಸ್ಟಾರ್ ಸಿಂಗರ್ಸ್ ನ ಭಾಷಾ ಹಾಗೂ ಶಿವಣ್ಣ ಅವರ ನೇತೃತ್ವದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಿ ಆಶ್ರಮವಾಸಿಗಳಿಗೆ ಮನರಂಜನೆ ನೀಡಲಾಯಿತು ಮತ್ತು ಅನ್ನದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗದ ಅಧ್ಯಕ್ಷ ಮೊಹಮ್ಮದ್ ಆಲಿ, ಉಪಾಧ್ಯಕ್ಷ ಸುಲೇಮಾನ್, ಖಜಾಂಚಿ ಶಿವು, ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್, ಗಾಯಕಿ ಮಮತಾ, ದೀಕ್ಷಿತ್, ನಗರಸಭಾ ಸದಸ್ಯರಾದ ಅಮಿನ್ ಮೊಹಿಸಿನ್, ಬಶೀರ್, ಅಹ್ಮದ್, ಮೇರಿ ವೇಗಸ್, ಲತೀಫ್, ಸಾಮಾಜಿಕ ಕಾರ್ಯಕರ್ತರಾದ ರಜಾಕ್, ಅಬ್ಸೀನಾ, ಸೆಲಿಕತ್ ಹಾಗೂ ಬಡಾವಣೆಯ ನಿವಾಸಿಗಳು ಹಾಜರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.






