ಲೇಖಕ: Lakshmish S K

ಮಡಿಕೇರಿ NEWS DESK ಮಾ.2 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರ ಪುತ್ತೂರಿನ ಅನಂತರಾಜ ಗೌಡ,  ಅರೆಬಾಷಿಕ ಸಂಘಟನಾ ಕ್ಷೇತ್ರ ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ, ಅರೆಭಾ಼ಷೆ ಸಾಹಿತ್ಯ ಕ್ಷೇತ್ರ ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನುಪ್ರದಾನ ಮಾಡಲಾಗುವುದು. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಅಂದು ನಡೆಯುವ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Read More

ಮಡಿಕೇರಿ NEWS DESK ಮಾ.2 : ನಾಪೋಕ್ಲುವಿನಲ್ಲಿ ನಡೆದ ಅಪ್ಪಚ್ಚಿರ ಗೌತಮ್ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಡಿಕೇರಿ ಕೊಡವ ಸಮಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರಿಗೆ ದೂರು ನೀಡಿದ್ದಾರೆ. ಎಸ್‌ಪಿ ಕಚೇರಿಗೆ ತೆರಳಿ ದೂರು ನೀಡಿದ ಕೊಡವ ಸಮಾಜದ ನಿಯೋಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ದುಷ್ಕರ್ಮಿಗಳಿಂದ ಅಮಾಯಕ ಯುವಕ ಗೌತಮ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಸಮಾಜದ ಶಾಂತಿ ಕದಡುವ ಮತ್ತು ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವ ಯಾವುದೇ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಗೌತಮ್ ಮೇಲೆ ಹಲ್ಲೆ ಮಾಡಿದವರು ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಕಠಿಣ ಕಾನೂನು ಕ್ರಮ ಕೈಗೊಂಡು ಶಿಕ್ಷಗೆ ಗುರಿ ಪಡಿಸಬೇಕು. ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರಮುಖರು ಒತ್ತಾಯಿಸಿದರು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಕನ್ನಂಡ…

Read More

ಮಡಿಕೇರಿ NEWS DESK ಮಾ.2 : ಕೊಡವ ಹಾಕಿ ಅಕಾಡೆಮಿ, ಹಾಕಿ ಕರ್ನಾಟಕ, ಹಾಕಿ ಕೂರ್ಗ್ ಹಾಗೂ ಈ ಬಾರಿಯ ಹಾಕಿ ಉತ್ಸವ ಆಯೋಜಕ ಚೇನಂಡ ಕುಟುಂಬ ಸಂಯುಕ್ತವಾಗಿ ಸಭೆ ನಡೆಸಿ ಪ್ರಮುಖ ನಿರ್ಣಯಗಳನ್ನು ಕೈಗೊಂಡಿವೆ. ವಿರಾಜಪೇಟೆ ಕೊಡವ ಸಮಾಜದ ಆವರಣದಲ್ಲಿ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಾಪೋಕ್ಲುವಿನಲ್ಲಿ ನಡೆಯುವ ಚೇನಂಡ ಕಪ್ ಕೊಡವ ಹಾಕಿ ಉತ್ಸವಕ್ಕೆ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ಘೋಷಿಸಲಾಯಿತು. ಹಾಕಿ ಕೂರ್ಗ್ ಸಂಸ್ಥೆ ತಾಂತ್ರಿಕ ಸಹಕಾರ ನೀಡಲು ಒಪ್ಪಿಗೆ ಸೂಚಿಸಿತು. ಹಾಕಿ ಅಂಪೈರ್ ಗಳಿಗೆ ನೀಡಲಾಗುವ ವೃತ್ತಿಪರ ಶುಲ್ಕಗಳು ಮತ್ತು ತಾಂತ್ರಿಕತೆಯ ಕುರಿತು ಚರ್ಚಿಸಲಾಯಿತು. ತಾಂತ್ರಿಕ ಸಿಬ್ಬಂದಿಯ ಪ್ರಯಾಣ ಭತ್ಯೆಯ ಬಗ್ಗೆ ನಿರ್ಧರಿಸಲಾಯಿತು. ಚೇನಂಡ ಕುಟುಂಬಸ್ಥರು ಹಾಕಿ ಉತ್ಸವದ ಸಿದ್ಧತೆಯನ್ನು ವಿವರಿಸಿದರು. ಕಳೆದ ಬಾರಿ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಪರಿಚಯಿಸಿದಂತೆ ಮಹಿಳಾ ಹಾಕಿ 5ಎ ತಂಡವನ್ನು ಮುಂದುವರಿಸಲಾಗುವುದು ಎಂದು…

Read More

ಮಡಿಕೇರಿ NEWS DESK ಮಾ.2 : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಬೆಂಗಳೂರು ಕೊಡವ ಸಮಾಜ ತಿಳಿಸಿದೆ. ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಹಾಗೂ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಮಂಡೇಟಿರ ಸುನಿಲ್ ಪೊನ್ನಣ್ಣ ಅವರುಗಳು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗೌತಮ್ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಡಿಪಾರು ಮಾಡಬೇಕು ಮತ್ತು ಘಟನೆ ಮರುಕಳಿಸದಂತೆ ಪೊಲೀಸ್ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Read More

ಕೋಲ್ಕತ್ತಾ, ಮಾರ್ಚ್ 2, 2026: ಕೆರಿಬಿಯನ್ ದೈತ್ಯರು ನೀಡಿದ 195 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ, ಸಂಜು ಸ್ಯಾಮ್ಸನ್ ಅವರ ಸ್ಮರಣೀಯ ಇನ್ನಿಂಗ್ಸ್ ನೆರವಿನಿಂದ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ. ಸೋಲಿನ ಸುಳಿಯಲ್ಲಿದ್ದ ಭಾರತವನ್ನು ಸಂಜು ಏಕಾಂಗಿಯಾಗಿ ದಡ ಸೇರಿಸುವ ಮೂಲಕ ಈಡನ್ ಗಾರ್ಡನ್ಸ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪಂದ್ಯದ ಮುಖ್ಯಾಂಶಗಳು: ವಿಂಡೀಸ್ ಬ್ಯಾಟಿಂಗ್ ಅಬ್ಬರ: ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್, ಆರಂಭಿಕ ಶಾಯ್ ಹೋಪ್ ಮತ್ತು ರೊಸ್ಟನ್ ಚೇಸ್ ಅವರ ಸ್ಫೋಟಕ ಆಟದಿಂದ ಭದ್ರ ಬುನಾದಿ ಹಾಕಿತು. ಭಾರತೀಯ ಫೀಲ್ಡರ್‌ಗಳ ಕ್ಯಾಚ್ ಕೈಚೆಲ್ಲುವಿಕೆ ಮತ್ತು ರನೌಟ್ ಮಿಸ್ ಮಾಡಿದ ಲಾಭ ಪಡೆದ ವಿಂಡೀಸ್, ಕೊನೆಯ 10 ಓವರ್‌ಗಳಲ್ಲಿ ಬರೋಬ್ಬರಿ 113 ರನ್ ಚಚ್ಚಿತು. ಪವೆಲ್ (34*) ಮತ್ತು ಜೇಸನ್ ಹೋಲ್ಡರ್ (37*) ಅವರ ಅಜೇಯ ಆಟದ ಫಲವಾಗಿ ವಿಂಡೀಸ್ 20 ಓವರ್‌ಗಳಲ್ಲಿ 195 ರನ್ ಗಳಿಸಿತು. ಭಾರತಕ್ಕೆ ಆರಂಭಿಕ ಆಘಾತ: ಬೃಹತ್ ಗುರಿ ಬೆನ್ನಟ್ಟಿದ ಭಾರತಕ್ಕೆ ಅಭಿಷೇಕ್…

Read More

ಮುಂಬೈ/ಬೆಂಗಳೂರು, ಮಾರ್ಚ್ 2, 2026: ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ತನ್ನ ಮುಂಬೈ ಮತ್ತು ಹೈದರಾಬಾದ್ ಶಾಖೆಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 116 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಆಯ್ಕೆ ನಡೆಯುವುದು ವಿಶೇಷ. ಹುದ್ದೆಗಳ ವಿವರ ಮತ್ತು ಸಂಖ್ಯೆ: ಸಹಾಯಕ ಉಪಾಧ್ಯಕ್ಷ (Assistant Vice President): 12 ಹುದ್ದೆಗಳು. ಉಪ ವ್ಯವಸ್ಥಾಪಕ (Deputy Manager – IS Audit): 104 ಹುದ್ದೆಗಳು. ಅರ್ಹತೆ ಮತ್ತು ವಯೋಮಿತಿ: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ BE/B.Tech ಅಥವಾ M.Sc ಪೂರ್ಣಗೊಳಿಸಿರಬೇಕು. ಜೊತೆಗೆ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಗತ್ಯ ಕೆಲಸದ ಅನುಭವ ಹೊಂದಿರಬೇಕು. ವಯೋಮಿತಿ (ಜನವರಿ 31, 2026 ಕ್ಕೆ ಅನ್ವಯ): ಸಹಾಯಕ ಉಪಾಧ್ಯಕ್ಷ ಹುದ್ದೆಗಳಿಗೆ: 21 ರಿಂದ 45 ವರ್ಷ. ಉಪ ವ್ಯವಸ್ಥಾಪಕ ಹುದ್ದೆಗಳಿಗೆ: 25 ರಿಂದ…

Read More

ವಾಷಿಂಗ್ಟನ್/ಟೆಹ್ರಾನ್, ಮಾರ್ಚ್ 2, 2026: ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯು ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಫಾಕ್ಸ್ ನ್ಯೂಸ್ (Fox News) ಜೊತೆ ಮಾತನಾಡಿದ ಅವರು, ಇರಾನ್‌ನ ಪ್ರಮುಖ 48 ರಾಜಕೀಯ ಮತ್ತು ಮಿಲಿಟರಿ ನಾಯಕರು ಒಂದೇ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಟ್ರಂಪ್ ಹೇಳಿಕೆಯ ಪ್ರಮುಖ ಮುಖ್ಯಾಂಶಗಳು: ದೊಡ್ಡ ಯಶಸ್ಸು: “ನಮ್ಮ ಯಶಸ್ಸನ್ನು ಯಾರೂ ನಂಬಲು ಸಾಧ್ಯವಿಲ್ಲ. ಒಂದೇ ಒಂದು ವ್ಯವಸ್ಥಿತ ದಾಳಿಯಲ್ಲಿ 48 ಇರಾನಿನ ಉನ್ನತ ನಾಯಕರನ್ನು ಅಂತ್ಯಗೊಳಿಸಲಾಗಿದೆ. ಈ ಕಾರ್ಯಾಚರಣೆಯು ನಾವು ನಿಗದಿಪಡಿಸಿದ ಸಮಯಕ್ಕಿಂತ ಬಹಳ ವೇಗವಾಗಿ ಸಾಗುತ್ತಿದೆ” ಎಂದು ಟ್ರಂಪ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಹೊಸ ನಾಯಕತ್ವದಿಂದ ಮಾತುಕತೆ ಪ್ರಸ್ತಾವನೆ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ ಅಧಿಕಾರಕ್ಕೆ ಬಂದಿರುವ ಹೊಸ ನಾಯಕತ್ವವು ಅಮೆರಿಕದೊಂದಿಗೆ ಮಾತುಕತೆಗೆ ಒಲವು ತೋರಿದೆ. “ಹೊಸ ಇರಾನಿನ ನಾಯಕರು ನನ್ನೊಂದಿಗೆ ಮಾತನಾಡಲು ಬಯಸುತ್ತಿದ್ದಾರೆ ಮತ್ತು ನಾನು ಅದಕ್ಕೆ ಒಪ್ಪಿಕೊಂಡಿದ್ದೇನೆ”…

Read More

ನವದೆಹಲಿ/ಟೆಹ್ರಾನ್, ಮಾರ್ಚ್ 2, 2026: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯು ಇರಾನ್‌ನಾದ್ಯಂತ ವ್ಯಾಪಕ ವಿನಾಶವನ್ನುಂಟು ಮಾಡಿದೆ. ಈ ಭೀಕರ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ 200ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಈ ರಕ್ತಪಾತದ ನಡುವೆಯೇ, ಇರಾನ್ ತನ್ನ ರಕ್ಷಣೆಗಾಗಿ ಚೀನಾದಿಂದ ಖರೀದಿಸಿದ್ದ HQ-9B ವಾಯು ರಕ್ಷಣಾ ವ್ಯವಸ್ಥೆಯ ಹೀನಾಯ ವೈಫಲ್ಯ ಈಗ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವೈಫಲ್ಯದ ಮುಖ್ಯಾಂಶಗಳು: ಗುರಿ ಪತ್ತೆಹಚ್ಚುವಲ್ಲಿ ಸೋಲು: ವಿಮಾನ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಹೊಡೆದುರುಳಿಸಲು ವಿನ್ಯಾಸಗೊಳಿಸಲಾದ HQ-9B, ಅಮೆರಿಕ ಮತ್ತು ಇಸ್ರೇಲ್‌ನ ಸಂಯೋಜಿತ ವಾಯುಶಕ್ತಿಯ ಮುಂದೆ ಮಣಿದಿದೆ. ಇರಾನ್‌ನ 31 ಪ್ರಾಂತ್ಯಗಳ ಪೈಕಿ 24 ಪ್ರಾಂತ್ಯಗಳ ಮೇಲೆ ದಾಳಿ ನಡೆದಿದ್ದರೂ, ಈ ವ್ಯವಸ್ಥೆಯು ಶತ್ರುಗಳನ್ನು ತಡೆಯುವಲ್ಲಿ ವಿಫಲವಾಗಿದೆ. ಆಪರೇಷನ್ ಸಿಂಧೂರ್ ಪುನರಾವರ್ತನೆ: ಈ ಹಿಂದೆ ಭಾರತವು ಪಾಕಿಸ್ತಾನದ ಮೇಲೆ ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದಾಗಲೂ, ಅಲ್ಲಿ ನಿಯೋಜಿಸಲಾಗಿದ್ದ ಇದೇ ಚೀನಾ ನಿರ್ಮಿತ ವ್ಯವಸ್ಥೆಯು…

Read More

ಮಡಿಕೇರಿ NEWS DESK ಮಾ.1 : ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಬಳಿ ಕಾಡಾನೆ ದಾಳಿಗೆ ತುತ್ತಾದ ವಿದ್ಯಾರ್ಥಿನಿ ಪೂಜಾ ಕುಟುಂಬದವರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಸಾಂತ್ವನ ಹೇಳಿದರು. ಬೆಟ್ಟತ್ತೂರಿನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು, ವಿದ್ಯಾರ್ಥಿನಿಯ ಸಾವು ನೋವು ತಂದಿದೆ, ಸರಕಾರದಿಂದ ಬರಬೇಕಾದ ಪರಿಹಾರವನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಒಂಟಿ ಸಲಗವನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜತೆ ಚರ್ಚಿಸಲಾಗಿದ್ದು, ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಲಾಗಿದೆ ಎಂದರು. ಆನೆಯ ಪತ್ತೆಗೆ ಆಧುನಿಕ ಡ್ರೋನ್ ವ್ಯವಸ್ಥೆಯನ್ನು ಮಾಡಲಾಗಿದ್ದು, ನೈಟ್ ವಿಷನ್ ಹಾಗೂ ಥರ್ಮಲ್ ಇಮೇಜಿಂಗ್ ಡ್ರೋನ್ ಇದಾಗಿದ್ದು ರಾತ್ರಿ ಕಾರ್ಯಾಚರಣೆ ಮುಂದುವರಿಯಲಿದೆ. ಸ್ಥಳದಲ್ಲಿ ಇದ್ದ ಶಾಸಕರು ದ್ರೋನ್ ಪತ್ತೆ ಕಾರ್ಯಾಚರಣೆ ಮಾಡುವುದನ್ನು ಸ್ವತ: ವೀಕ್ಷಿಸಿದರು. ನತದೃಷ್ಟ ವಿದ್ಯಾರ್ಥಿನಿಯ ಮನೆಯಲ್ಲಿ ಯಾರಾದರೂ ಒಬ್ಬರಿಗೆ ಸರಕಾರಿ ಉದ್ಯೋಗದ ಬೇಡಿಕೆ ಬಂದಿದ್ದು, ಇದನ್ನು ಸರ್ಕಾರ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ…

Read More