Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *’ಜಲ ಜೀವನ್ ಮಿಷನ್’ ಯೋಜನೆ ಯಶಸ್ವಿ ಅನುಷ್ಠಾನ : ಮೂರು ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸ*
ಇತ್ತೀಚಿನ ಸುದ್ದಿಗಳು

*’ಜಲ ಜೀವನ್ ಮಿಷನ್’ ಯೋಜನೆ ಯಶಸ್ವಿ ಅನುಷ್ಠಾನ : ಮೂರು ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸ*

November 7, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.8 NEWS DESK : ಸರ್ವರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕೆನ್ನುವ ಕೇಂದ್ರ ಸರ್ಕಾರದ ಪರಿಕಲ್ಪನೆಯ ‘ಜಲ ಜೀವನ್ ಮಿಷನ್’ ಯೋಜನೆಯಡಿ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯ್ತಿಯ ‘ಕಾಂತೂರು’ ಮತ್ತು ‘ಕಿಗ್ಗಾಲು’ ಗ್ರಾಮಗಳಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಇನ್ನು ಮೂರು ತಿಂಗಳಿನ ಅವಧಿಯ ಒಳಗಾಗಿ ಇಡೀ ಪಂಚಾಯ್ತಿಯಲ್ಲಿ ಯೋಜನೆ ಪೂರ್ಣವಾಗಿ ಜಾರಿಗೆ ಬರುವ ವಿಶ್ವಾಸವನ್ನು ಪಂಚಾಯ್ತಿ ಅಧ್ಯಕ್ಷ ಕುಶನ್ ರೈ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಯನ್ನು ಕಾಂತೂರು ಮತ್ತು ಕಿಗ್ಗಾಲು ಗ್ರಾಮಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವುದಕ್ಕೆ ಪ್ರಮುಖವಾಗಿ ಅಲ್ಲಿನ ಸಾರ್ವಜನಿಕರ ಸಂಪೂರ್ಣ ಸಹಕಾರ, ಪಂಚಾಯ್ತಿ ಜನಪ್ರತಿನಿಧಿಗಳು, ಇಂಜಿನಿಯರ್‍ಗಳ ಪರಿಶ್ರಮವೆ ಕಾರಣವೆಂದು ಸ್ಪಷ್ಟಪಡಿಸಿದರು. ಕಿಗ್ಗಾಲು ಮತ್ತು ಕಾಂತೂರು ಗ್ರಾಮಗಳಲ್ಲಿ ಯೋಜನೆಯಡಿ ಕುಡಿಯುವ ನೀರನ್ನು ಕಾವೇರಿ ನದಿಯಿಂದ ಒದಗಿಸಲಾಗುತ್ತಿದೆ. ಕಿಗ್ಗಾಲು ಗ್ರಾಮದಲ್ಲಿ ಯೋಜನೆಯಡಿ 249 ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗಿದ್ದರೆ, ಕಾಂತೂರು ಗ್ರಾಮದಲ್ಲಿ 726 ಮನೆಗಳಿಗೆ ನೀರನ್ನು ಒದಗಿಸುವ ಕಾರ್ಯ ಮಾಡಲಾಗಿದೆಯೆಂದು ಮಾಹಿತಿಯನ್ನಿತ್ತರು. ಕಾಂತೂರು ಗ್ರಾಮದಲ್ಲಿ 89.29 ಲಕ್ಷ ರೂ. ವೆಚ್ಚದಲ್ಲಿ ಹಾಗೆಯೇ ಕಿಗ್ಗಾಲು ಗ್ರಾಮದಲ್ಲಿ 1.89 ಕೊಟಿ ರೂ.ವೆಚ್ಚದಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗಿದೆ. ಕಿಗ್ಗಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಜಾರಿಗೆ 30 ಸಾವಿರ ಲೀಟರ್ ಸಾಮಥ್ರ್ಯದ ಎರಡು ನೀರಿನ ಟ್ಯಾಂಕ್, 20 ಸಾವಿರ ಲೀಟರ್ ಸಾಮಥ್ರ್ಯದ ಒಂದು ಟ್ಯಾಂಕ್, ನೀರು ಶುದ್ಧೀಕರಣ ಮತ್ತು ಸಂಗ್ರಹಕ್ಕಾಗಿ 50 ಸಾವಿರ ಲೀಟರ್ ಸಾಮಥ್ರ್ಯದ ಎರಡು ಟ್ಯಾಂಕ್‍ಗಳನ್ನು ನಿರ್ಮಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. :: ದೂರದ ಮನೆಗಳಿಗೆ ನೀರೊದಗಿಸುವುದು ಕಷ್ಟ :: ಜಲ ಜೀವನ್ ಯೋಜನೆಯಡಿ ಯಾವುದೇ ಪ್ರದೇಶದ ಗುಂಪು ಮನೆಗಳಿಗೆ ಶುದ್ಧ ನೀರನ್ನು ಸಮರ್ಪಕವಾಗಿ ಒದಗಿಸಬಹುದಾಗಿದೆ. ಆದರೆ, ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮನೆಗಳು ದೂರ ದೂರದಲ್ಲಿರುವುದರಿಂದ ಪ್ರಾಯೋಗಿಕವಾಗಿ ಒಂದು ಮನೆಗೆ ನೀರೊದಗಿಸಲು ಕಿಲೋಮೀಟರ್ ದೂರ ಪೈಪ್ ಲೈನ್ ಮಾಡುವುದು ಕಷ್ಟದ ವಿಚಾರ. ಹೀಗೆ ಮಾಡಿದರು ಅಗತ್ಯ ಒತ್ತಡದ ಕೊರತೆಯಿಂದ ನೀರು ಆ ಮನೆಗೆ ತಲುಪುವುದು ಕಷ್ಟ. ಇಂತಹ ತಾತ್ರಿಕವಾದ ಕೆಲ ಸಮಸ್ಯೆಗ¼ನ್ನು ಹೊರತು ಪಡಿಸಿದರೆ, ಕಾಂತೂರು ಮೂರ್ನಾಡು ಪಂಚಾಯ್ತಿಯಿಂದ ಎರಡು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್‍ನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. :: ಇನ್ನು ಮೂರು ತಿಂಗಳಲ್ಲಿ ಪೂರ್ಣ ವಿಶ್ವಾಸ :: ಕಾಂತೂರು ಮೂರ್ನಾಡು ಪಂಚಾಯ್ತಿಗೆ ಒಳಪಟ್ಟ ಮುತಾರ್ಮುಡಿ, ಬಾಡಗ, ಐಕೊಳ ಮತ್ತು ಕೋಡಂಬೂರು ಗ್ರಾಮಗಳಲ್ಲಿ ಮುಂದಿನ ಮೂರು ತಿಂಗಳ ಒಳಗಾಗಿ ಜಲಜೀವನ್ ಮಿಷನ್ ಅನುಷ್ಠಾನ ಗೊಳ್ಳುವ ವಿಶ್ವಾಸವನ್ನು ಕುಶನ್ ರೈ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಉಪಾಧ್ಯಕ್ಷರಾದ ನಿ.ಎಸ್.ರೇಖಾ, ಸದಸ್ಯರಾದ ಸುಮಾ ಸುಂದರಿ, ವಿಜು ತಿಮ್ಮಯ್ಯ, ಯಶ್ವಿನ್ ಪೊನ್ನಪ್ಪ, ರೀತಾ ಸುದರ್ಶನ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*‘ಪ್ರಜಾ ಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಚಾಲನೆ : ಮೂಲ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಒತ್ತು ನೀಡಿದೆ : ಸಚಿವ ಕೃಷ್ಣ ಬೈರೇಗೌಡ*
Next Article *ಕೊಡವ ಲ್ಯಾಂಡ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.